Homeಮುಖಪುಟ'ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್..' ಎಂದು ಘೋಷಣೆ ಕೂಗಿದ ಅಶೋಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು

‘ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್..’ ಎಂದು ಘೋಷಣೆ ಕೂಗಿದ ಅಶೋಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು

- Advertisement -
- Advertisement -

ಹರಿಯಾಣದ ಅಶೋಕ ವಿಶ್ವವಿದ್ಯಾನಿಲಯದ ಪ್ರತಿಭಟನಾನಿತರ ವಿದ್ಯಾರ್ಥಿಗಳ ಗುಂಪೊಂದುಮ ಜಾತಿ ಗಣತಿಗೆ ಆಗ್ರಹಿಸಿದ್ದು, “ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್” ಎಂಬ ಘೋಷಣೆಗಳನ್ನು ಕುಗಿರುವ ವಿಡಿಯೋಗಳು ಜಾಳತಾಣದಲ್ಲಿ ವೈರಲ್ ಆಗಿವೆ.

ಅಶೋಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜಾತಿವಿರೋಧಿ ಘೋಷಣೆಗಳನ್ನು ಕೂಗಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ವಿಶ್ವವಿದ್ಯಾನಿಲಯವು ಅವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ. ಕ್ಯಾಂಪಸ್‌ನಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ. ಆದರೆ, ತಾರತಮ್ಯ ವಿರೋಧಿ ಸೆಲ್‌ ಸ್ಥಾಪನೆಗೆ ಒತ್ತಾಯಿಸಿ ವಿದ್ಯಾರ್ಥಿಗಳ ಒಂದು ಗುಂಪು ಒಂದು ವಾರದದಿಂದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸುತ್ತಿದೆ.

ವಿಶ್ವವಿದ್ಯಾನಿಲಯದ ಆವರಣದಲ್ಲಿ ಪ್ರತಿಭಟಿಸಿರುವ ವಿದ್ಯಾರ್ಥಿಗಳು, “ನಮಗೆ ಜಾತಿ ಗಣತಿ, ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಜನಾಂಗೀಯ ಮತ್ತು ಧಾರ್ಮಿಕ ಅಲ್ಪಸಂಖ್ಯಾತ ಹಿನ್ನೆಲೆಯ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಪ್ರತಿಪಾದಿಸುವ ಸ್ವತಂತ್ರ ವಿದ್ಯಾರ್ಥಿ ಸಂಘಟನೆಯಾದ ‘ಸಾಮಾಜಿಕ ನ್ಯಾಯ ವೇದಿಕೆ’ಯ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ವರದಿಯಾಗಿದೆ.

ವಿಶ್ವವಿದ್ಯಾನಿಲಯ ಆಡಳಿತ ಮಂಡಳಿಯು ಬುಧವಾರ ಪ್ರಕಟಣೆ ಹೊರಡಿಸಿದ್ದು, “ಅಶೋಕ ವಿಶ್ವವಿದ್ಯಾಲಯವು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಹುರುಪಿನ ಚರ್ಚೆಗೆ ಹೆಚ್ಚಿನ ಮೌಲ್ಯವನ್ನು ನೀಡುತ್ತದೆ. ಆದರೆ, ಇದು ಪರಸ್ಪರ ಗೌರವಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ವಿಶ್ವವಿದ್ಯಾನಿಲಯವು ಯಾವುದೇ ವ್ಯಕ್ತಿ ಅಥವಾ ಗುಂಪಿನ ವಿರುದ್ಧ ದ್ವೇಷದ ಅಭಿವ್ಯಕ್ತಿಗಳನ್ನು ಖಂಡಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಅಶೋಕ ವಿಶ್ವವಿದ್ಯಾನಿಲಯದ ಮಾರ್ಗಸೂಚಿಗಳು ಅಂತಹ ಅಭಿವ್ಯಕ್ತಿ ಸ್ವಾತಂತ್ರ್ಯವು ಅಪರಿಮಿತವಲ್ಲ. ಇತರರ ಹಕ್ಕುಗಳು ಮತ್ತು ಸಂವೇದನೆಗಳಿಗೆ ಗೌರವವನ್ನು ನೀಡುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಅಶೋಕದಲ್ಲಿ ಸಮುದಾಯದ ಮನೋಭಾವವನ್ನು ಕಾಪಾಡಲು ಇದು ಅತ್ಯಗತ್ಯ” ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ವಾತಾವರಣವನ್ನು ಪ್ರತಿಕೂಲಗೊಳಿಸುವ ಕ್ರಮಗಳು ಶಿಸ್ತು ಕ್ರಮಕ್ಕೆ ಒಳಪಡುತ್ತವೆ ಎಂದು ವಿಶ್ವವಿದ್ಯಾನಿಲಯವು ಎಚ್ಚರಿಸಿದೆ. “ಕ್ಯಾಂಪಸ್‌ನ ವಾತಾವರಣವನ್ನು ಬೆದರಿಸುವ,ವ್ಯಕ್ತಿಗಳು ಅಥವಾ ಗುಂಪುಗಳಿಗೆ ಪ್ರತಿಕೂಲವಾಗಿಸುವ ಕ್ರಮಗಳನ್ನು ಗಂಭೀರ ಅಪರಾಧಗಳೆಂದು ಪರಿಗಣಿಸಲಾಗುತ್ತದೆ. ವಿಶ್ವವಿದ್ಯಾಲಯದ ಶಿಸ್ತಿನ ಕಾರ್ಯವಿಧಾನಕ್ಕೆ ಒಳಪಟ್ಟಿರುತ್ತದೆ. ವಿಶ್ವವಿದ್ಯಾನಿಲಯವು ಕ್ಯಾಂಪಸ್‌ನಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆಯಾಗದಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದು ಅದು ಹೇಳಿದೆ.

ಕ್ಯಾಂಪಸ್‌ನಲ್ಲಿ ತಾರತಮ್ಯ ವಿರೋಧಿ ಕೋಶ ಮತ್ತು ಜಾತಿ ಗಣತಿಯನ್ನು ಸ್ಥಾಪಿಸಬೇಕೆಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಒತ್ತಾಯಿಸಿ ವಿದ್ಯಾರ್ಥಿಗಳ ಒಂದು ವಿಭಾಗವು ಇತ್ತೀಚೆಗೆ ಕ್ಯಾಂಪಸ್‌ನಲ್ಲಿ ಒಂದು ವಾರದಿಂದ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ನಂತರ, ವಿಶ್ವವಿದ್ಯಾನಿಲಯವು ಮಂಗಳವಾರ ಸೇರ್ಪಡೆ ಮತ್ತು ವೈವಿಧ್ಯತೆಯ ನೀತಿಗಳನ್ನು ಸುಧಾರಿಸಲು ‘ಸಮಾನ ಅವಕಾಶ’ ಕೋಶವನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಿಶ್ವವಿದ್ಯಾನಿಲಯವು ಮಂಗಳವಾರ ಪ್ರಕಟಣೆಯಲ್ಲಿ, “ಸಮಾನ ಅವಕಾಶ ಕೋಶವನ್ನು ರಚಿಸುವಲ್ಲಿ ನಾವು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇವೆ, ಅವರ ಪಾತ್ರವು ಸೇರ್ಪಡೆ, ವೈವಿಧ್ಯತೆ ಮತ್ತು ಸೂಕ್ಷ್ಮತೆಯ ಕುರಿತು ಚಾಲ್ತಿಯಲ್ಲಿರುವ ಅಭ್ಯಾಸಗಳು ಮತ್ತು ನೀತಿಗಳನ್ನು ಸುಧಾರಿಸಲು ವಿಶ್ವವಿದ್ಯಾಲಯಕ್ಕೆ ಶಿಫಾರಸುಗಳನ್ನು ಮಾಡುವುದನ್ನು ಒಳಗೊಂಡಿರುತ್ತದೆ. ಇದು ಅಧ್ಯಾಪಕರು, ಸಿಬ್ಬಂದಿ ಮತ್ತು ಚುನಾಯಿತ ವಿದ್ಯಾರ್ಥಿ ಪ್ರತಿನಿಧಿಗಳನ್ನು ಸದಸ್ಯರನ್ನಾಗಿ ಹೊಂದಿರುತ್ತದೆ ಮತ್ತು ಶೀಘ್ರದಲ್ಲೇ ಕಾರ್ಯನಿರ್ವಹಿಸಲಿದೆ” ಎಂದು ವಿವರಿಸಿದೆ.

“ಕ್ಯಾಂಪಸ್‌ನಲ್ಲಿ ತಾರತಮ್ಯ ವಿರೋಧಿ ಕೋಶ ಮತ್ತು ಜಾತಿ ಗಣತಿಯನ್ನು ಸ್ಥಾಪಿಸಲು ಮೂರು ತಿಂಗಳ ಹಿಂದೆ ಉಪಕುಲಪತಿಯೊಂದಿಗೆ ಒತ್ತಾಯಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಪ್ರತಿಭಟನಾನಿರತ ವಿದ್ಯಾರ್ಥಿಯೊಬ್ಬರು ಪ್ರಕಟಣೆಗೆ ತಿಳಿಸಿದರು.

“ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ನೌಕರರನ್ನು ಒಳಗೊಂಡ ಸಮಗ್ರ ಮತ್ತು ಅನಾಮಧೇಯ ವಾರ್ಷಿಕ ಜಾತಿ ಗಣತಿ ಸೇರಿದಂತೆ ಮೂರು ಬೇಡಿಕೆಗಳನ್ನು ಎತ್ತಿ ವಿದ್ಯಾರ್ಥಿಗಳು ಪ್ರತಿಭಟಿಸಿದರು ಎಂದು ವರದಿಯಾಗಿದೆ. ಅಂಬೇಡ್ಕರ್ ಸ್ಮಾರಕ ಉಪನ್ಯಾಸ ಎಂಬ ವಾರ್ಷಿಕ ಕಾರ್ಯಕ್ರಮವನ್ನು ವಿಶ್ವವಿದ್ಯಾನಿಲಯವು ಸಾಮಾಜಿಕ ನ್ಯಾಯದ ಕುರಿತು ಮಾತನಾಡಲು ಅಂಚಿನಲ್ಲಿರುವ ಸಮುದಾಯಗಳ ಸಂಪನ್ಮೂಲ ವ್ಯಕ್ತಿಗಳು ಮತ್ತು ಪ್ಯಾನಲಿಸ್ಟ್‌ಗಳನ್ನು ಆಹ್ವಾನಿಸುತ್ತದೆ; ಶುಲ್ಕ ಪಾವತಿ ನೀತಿಯಲ್ಲಿನ ಬದಲಾವಣೆಯು ಗುರುತಿನ ಚೀಟಿಗಳನ್ನು ನಿರ್ಬಂಧಿಸುತ್ತದೆ. ವಿದ್ಯಾರ್ಥಿಗಳು ಶುಲ್ಕವನ್ನು ತಡವಾಗಿ ಪಾವತಿಸಿದರೆ ಗೂಗಲ್ ಕ್ಲಾಸ್‌ರೂಮ್ ಮತ್ತು ಮೆಸ್ ಊಟದಂತಹ ಸೌಲಭ್ಯಗಳಿಂದ ಅವರಿಗೆ ನಿರ್ಬಂಧ ಹೇರಲಾಗುತ್ತದೆ. ಇದು ಅಂಚಿನಲ್ಲಿರುವ ಸಮುದಾಯಗಳ ಮೇಲೆ ಅಸಮಾನವಾಗಿ ಪರಿಣಾಮ ಬೀರುತ್ತದೆ ಎಂದು ವಿದ್ಯಾರ್ಥಿ ಗುಂಪಿನ ಪ್ರಕಟಣೆ ತಿಳಿಸಿದೆ.

2014 ರಲ್ಲಿ ಸ್ಥಾಪನೆಯಾದ ಅಶೋಕ ವಿಶ್ವವಿದ್ಯಾನಿಲಯವು ಅದರ ಅಧ್ಯಾಪಕರ ರಾಜಕೀಯ ದೃಷ್ಟಿಕೋನಗಳ ಬಗ್ಗೆ ಈ ಹಿಂದೆ ಸುದ್ದಿಯಾಗಿತ್ತು. ಮಾರ್ಚ್ 2021 ರಲ್ಲಿ ಪ್ರೊಫೆಸರ್‌ಗಳಾದ ಪ್ರತಾಪ್ ಭಾನು ಮೆಹ್ತಾ ಮತ್ತು ಅರವಿಂದ್ ಸುಬ್ರಮಣಿಯನ್ ಅವರ ನಿರ್ಗಮನ ಭಾರೀ ಸದ್ದು ಮಾಡಿತ್ತು.

ಇದನ್ನೂ ಓದಿ; ಮೋದಿ ಸರಕಾರವನ್ನು ಟೀಕಿಸಿ ಲೇಖನ ಬರೆದ ಬೆನ್ನಲ್ಲಿ ‘ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್‌ʼ ಮುಖ್ಯಸ್ಥೆ ಹುದ್ದೆಗೆ ಯಾಮಿನಿ ಅಯ್ಯರ್ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...