Homeಕರ್ನಾಟಕಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

- Advertisement -
- Advertisement -

ಕೃಷಿ ಚಟುವಟಿಕೆ ಕಡಿಮೆ ಆಗಿರುವುದು ಹಾಗೂ ಕೊರೋನಾ ಲಾಕ್‌ಡೌನ್‌ ತಂದಿಟ್ಟಿರುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಚಾಮರಾಜನಗರ ಜಿಲ್ಲೆಯ ಎಚ್. ಮೂಕನಹಳ್ಳಿಯಲ್ಲಿ ನಡೆದಿದೆ.

ಮಹದೇವಪ್ಪ (47), ಮಂಗಳಮ್ಮ (40), ಜ್ಯೋತಿ (14) ಹಾಗೂ ಶ್ರುತಿ (12) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೃತರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸರ್ಕಾರದ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿವೆ.

ಮೂಕನಹಳ್ಳಿಯಲ್ಲಿ ಒಂದೂವರೆ ಎಕರೆ ಮಳೆ ಆಶ್ರಿತ ಜಮೀನನ್ನು ಹೊಂದಿದ್ದ ಮಹದೇವಪ್ಪ ಅವರು ಕೃಷಿ ಕೂಲಿ ಕಾರ್ಮಿಕರಾಗಿ ಜೀವನ ನಡೆಸುತ್ತಿದ್ದರು. ಇತ್ತೀಚೆಗಷ್ಟೆ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದ ಅವರು ಆರ್ಥಿಕ ಸಂಕಷ್ಟವನ್ನು ಎದುರಿಸಲಾರದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಗ್ರಾಮಸ್ಥರಾದ ನಾಗರಾಜು, ‘ಕಳೆದ 20 ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಹದೇವಪ್ಪ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅವರು ಗುಣಮುಖರಾದ ನಂತರವು ಅವರ ಸುತ್ತಮುತ್ತಲ ಜನರು ಅವರೊಟ್ಟಿಗೆ ಮಾತನಾಡಲು ಅಂಜುತ್ತಿದ್ದರು. ಈ ಕಾರಣದಿಂದ ಡೈರಿಗೆ ಹಾಲು ಕೂಡ ಹಾಕಿರಲಿಲ್ಲ. ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದ ಅವರು ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.

ನೆನ್ನೆ ರಾತ್ರಿ 9 ಗಂಟೆ ಸಮಯದಲ್ಲಿ ಗ್ರಾಮದ ಕುಮಾರ್ ಎಂಬುವವರ ಜೊತೆ ಫೋನಿನಲ್ಲಿ ಮಾತನಾಡಿರುವ ಮಹದೇವಪ್ಪ ಅವರು ಯಾವುದೇ ಸಮಸ್ಯೆಯ ಬಗ್ಗೆ ತಿಳಿಸಿಲ್ಲ. ಕೋವಿಡ್ ಸಮಯದಲ್ಲಿ ನಾನೆ ಅವರ ಚಿಕಿತ್ಸೆಗೆ ಸಹಾಯ ಮಾಡಿದ್ದೆ ಎಂದು ನಾಗರಾಜ್ ತಿಳಿಸಿದ್ದಾರೆ.

`ಕೋವಿಡ್ ಲಾಕ್‌ಡೌನ್‌ನಿಂದಾಗಿ ಕೃಷಿ ಚಟುವಟಿಕೆಗಳಿಲ್ಲದೇ ಆರ್ಥಿಕ ಸಂಕಷ್ಟವನ್ನು ಮಹದೇವಪ್ಪ ಕುಟುಂಬ ಎದುರಿಸುತ್ತಿತ್ತು. ಕೋವಿಡ್ ಸೋಂಕಿಗೆ ಒಳಗಾದ ನಂತರ ಹಣಕಾಸಿನ ಸಮಸ್ಯೆಯಿಂದ ಬಳಲಿದ್ದರು’ ಎಂದು ಗ್ರಾಮಸ್ಥರೊಬ್ಬರು ಬೇಸರ ವ್ಯಕ್ತಪಡಿಸಿದರು.

ಕೃಷಿ ಹಾಗೂ ಕೃಷಿ ಪೂರಕ ಕೆಲಸಗಳನ್ನೇ ನಂಬಿ ಬದುಕುತ್ತಿರುವ ಕುಟುಂಬಗಳಿಗೆ ಕೋವಿಡ್ ಮೊದಲ ಅಲೆಯೇ ಆರ್ಥಿಕ ಸಂಕಷ್ಟ ತಂದೊಡ್ಡಿತ್ತು. ಪ್ರಸ್ತುತ ಎರಡನೇ ಅಲೆಯಿಂದ ಕೃಷಿ ಹಾಗೂ ಪೂರಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಬ್ಧಗೊಂಡಿರುವುದರಿಂದ ರೈತರು ಹಾಗೂ ಕೃಷಿ ಕೂಲಿಕಾರರು ಮೇಲೇಳಲಾರದ ಸ್ಥಿತಿ ತಲುಪಿದ್ದಾರೆ. ಸರ್ಕಾರ ಈಗಲಾದರೂ ರೈತ ಕೂಲಿಕಾರರ ಸಂಕಷ್ಟಕ್ಕೆ ಸ್ಫಂದಿಸಬೇಕು ಎಂದು ಗ್ರಾಮಸ್ಥರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ವಿಷಯ ತಿಳಿಯುತ್ತಲೇ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಎಲ್ಲರಿಗೂ ಉಚಿತ ಲಸಿಕೆ ಕೊಡಲಾಗದ ಈ ಸರ್ಕಾರ ಲಾಕ್‌ಡೌನ್‌ ಹೆಸರಲ್ಲಿ ಬಡವರು, ಕೂಲಿಕಾರರನ್ನು ಹಿಂಸಿಸುತ್ತಿದೆ ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗೆ ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋವಿಡ್ ನಿಯಂತ್ರಿಸಲು ಲಾಕ್ ಡೌನ್ ಒಂದೇ ಪರಿಹಾರವಲ್ಲ. ಸ್ವಾಭಿಮಾನಿ ಬಡವರು ಲಾಕ್ ಡೌನ್ ನಿಂದ ಕಂಗಾಲಾಗಿದ್ದಾರೆ. ಆದ್ದರಿಂದ ಸರ್ಕಾರ ಲಾಕ್ ಡೌನ್ ಅನ್ನು ಈ ಕೂಡಲೇ ಕೊನೆಗೊಳಿಸಬೇಕು.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...