Homeಕರ್ನಾಟಕಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

- Advertisement -
- Advertisement -

ಕೃಷಿ ಚಟುವಟಿಕೆ ಕಡಿಮೆ ಆಗಿರುವುದು ಹಾಗೂ ಕೊರೋನಾ ಲಾಕ್‌ಡೌನ್‌ ತಂದಿಟ್ಟಿರುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಚಾಮರಾಜನಗರ ಜಿಲ್ಲೆಯ ಎಚ್. ಮೂಕನಹಳ್ಳಿಯಲ್ಲಿ ನಡೆದಿದೆ.

ಮಹದೇವಪ್ಪ (47), ಮಂಗಳಮ್ಮ (40), ಜ್ಯೋತಿ (14) ಹಾಗೂ ಶ್ರುತಿ (12) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೃತರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸರ್ಕಾರದ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿವೆ.

ಮೂಕನಹಳ್ಳಿಯಲ್ಲಿ ಒಂದೂವರೆ ಎಕರೆ ಮಳೆ ಆಶ್ರಿತ ಜಮೀನನ್ನು ಹೊಂದಿದ್ದ ಮಹದೇವಪ್ಪ ಅವರು ಕೃಷಿ ಕೂಲಿ ಕಾರ್ಮಿಕರಾಗಿ ಜೀವನ ನಡೆಸುತ್ತಿದ್ದರು. ಇತ್ತೀಚೆಗಷ್ಟೆ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದ ಅವರು ಆರ್ಥಿಕ ಸಂಕಷ್ಟವನ್ನು ಎದುರಿಸಲಾರದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಗ್ರಾಮಸ್ಥರಾದ ನಾಗರಾಜು, ‘ಕಳೆದ 20 ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಹದೇವಪ್ಪ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅವರು ಗುಣಮುಖರಾದ ನಂತರವು ಅವರ ಸುತ್ತಮುತ್ತಲ ಜನರು ಅವರೊಟ್ಟಿಗೆ ಮಾತನಾಡಲು ಅಂಜುತ್ತಿದ್ದರು. ಈ ಕಾರಣದಿಂದ ಡೈರಿಗೆ ಹಾಲು ಕೂಡ ಹಾಕಿರಲಿಲ್ಲ. ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದ ಅವರು ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.

ನೆನ್ನೆ ರಾತ್ರಿ 9 ಗಂಟೆ ಸಮಯದಲ್ಲಿ ಗ್ರಾಮದ ಕುಮಾರ್ ಎಂಬುವವರ ಜೊತೆ ಫೋನಿನಲ್ಲಿ ಮಾತನಾಡಿರುವ ಮಹದೇವಪ್ಪ ಅವರು ಯಾವುದೇ ಸಮಸ್ಯೆಯ ಬಗ್ಗೆ ತಿಳಿಸಿಲ್ಲ. ಕೋವಿಡ್ ಸಮಯದಲ್ಲಿ ನಾನೆ ಅವರ ಚಿಕಿತ್ಸೆಗೆ ಸಹಾಯ ಮಾಡಿದ್ದೆ ಎಂದು ನಾಗರಾಜ್ ತಿಳಿಸಿದ್ದಾರೆ.

`ಕೋವಿಡ್ ಲಾಕ್‌ಡೌನ್‌ನಿಂದಾಗಿ ಕೃಷಿ ಚಟುವಟಿಕೆಗಳಿಲ್ಲದೇ ಆರ್ಥಿಕ ಸಂಕಷ್ಟವನ್ನು ಮಹದೇವಪ್ಪ ಕುಟುಂಬ ಎದುರಿಸುತ್ತಿತ್ತು. ಕೋವಿಡ್ ಸೋಂಕಿಗೆ ಒಳಗಾದ ನಂತರ ಹಣಕಾಸಿನ ಸಮಸ್ಯೆಯಿಂದ ಬಳಲಿದ್ದರು’ ಎಂದು ಗ್ರಾಮಸ್ಥರೊಬ್ಬರು ಬೇಸರ ವ್ಯಕ್ತಪಡಿಸಿದರು.

ಕೃಷಿ ಹಾಗೂ ಕೃಷಿ ಪೂರಕ ಕೆಲಸಗಳನ್ನೇ ನಂಬಿ ಬದುಕುತ್ತಿರುವ ಕುಟುಂಬಗಳಿಗೆ ಕೋವಿಡ್ ಮೊದಲ ಅಲೆಯೇ ಆರ್ಥಿಕ ಸಂಕಷ್ಟ ತಂದೊಡ್ಡಿತ್ತು. ಪ್ರಸ್ತುತ ಎರಡನೇ ಅಲೆಯಿಂದ ಕೃಷಿ ಹಾಗೂ ಪೂರಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಬ್ಧಗೊಂಡಿರುವುದರಿಂದ ರೈತರು ಹಾಗೂ ಕೃಷಿ ಕೂಲಿಕಾರರು ಮೇಲೇಳಲಾರದ ಸ್ಥಿತಿ ತಲುಪಿದ್ದಾರೆ. ಸರ್ಕಾರ ಈಗಲಾದರೂ ರೈತ ಕೂಲಿಕಾರರ ಸಂಕಷ್ಟಕ್ಕೆ ಸ್ಫಂದಿಸಬೇಕು ಎಂದು ಗ್ರಾಮಸ್ಥರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ವಿಷಯ ತಿಳಿಯುತ್ತಲೇ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಎಲ್ಲರಿಗೂ ಉಚಿತ ಲಸಿಕೆ ಕೊಡಲಾಗದ ಈ ಸರ್ಕಾರ ಲಾಕ್‌ಡೌನ್‌ ಹೆಸರಲ್ಲಿ ಬಡವರು, ಕೂಲಿಕಾರರನ್ನು ಹಿಂಸಿಸುತ್ತಿದೆ ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗೆ ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋವಿಡ್ ನಿಯಂತ್ರಿಸಲು ಲಾಕ್ ಡೌನ್ ಒಂದೇ ಪರಿಹಾರವಲ್ಲ. ಸ್ವಾಭಿಮಾನಿ ಬಡವರು ಲಾಕ್ ಡೌನ್ ನಿಂದ ಕಂಗಾಲಾಗಿದ್ದಾರೆ. ಆದ್ದರಿಂದ ಸರ್ಕಾರ ಲಾಕ್ ಡೌನ್ ಅನ್ನು ಈ ಕೂಡಲೇ ಕೊನೆಗೊಳಿಸಬೇಕು.

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...