Homeಮುಖಪುಟಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ನೀವು ‘ಪೆಂಗ್ವಿನ್‌’ ಆಗಿರಬೇಕು!

ಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ನೀವು ‘ಪೆಂಗ್ವಿನ್‌’ ಆಗಿರಬೇಕು!

- Advertisement -
- Advertisement -

ಹೌದು, ಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ಇದು ನಿಮ್ಮ ಅನುಭವಕ್ಕೆ ಬರಬೇಕಾದರೆ ನೀವು ‘ಪೆಂಗ್ವಿನ್’ ಆಗಿರಬೇಕು! ಏನಿದು ವಿಚಿತ್ರ ಹೇಳಿಕೆ ಎಂದು ನಿಮಗನಿಸುತ್ತಿದೆಯೆ? ಮುಂದಕ್ಕೆ ಓದಿ.

ಡಿಸೆಂಬರ್ ಬಂತೆಂದರೆ ಜಗತ್ತಿನ ನಾಶ, ಪ್ರಳಯ, ಎಂಬ ಸುದ್ದಿಯೆಲ್ಲಾ ಓಡಾಡುತ್ತವೆ. ಆದರೆ ಈ ಸುದ್ದಿ ಆ ರೀತಿಯ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲದೆ ಕಟ್ಟಿದ ಕಟ್ಟುಕತೆಯಲ್ಲ. ಅಷ್ಟಕ್ಕೂ ಇದು ಜಗತ್ತು ನಾಶವಾಗುವ ಕತೆಯಲ್ಲ, ಜಗತ್ತು ಅಂದು ಕೊನೆಗೊಳ್ಳುವುದೂ ಇಲ್ಲ. ನಮ್ಮ ಭೂಮಿಯಲ್ಲಿ ಸಾಮಾನ್ಯವಾಗಿ ನಡೆಯುವ ಒಂದು ವಿದ್ಯಮಾನ ಮಾತ್ರವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಸೆಂಬರ್‌‌ 21ರಂದು ನಿಜಕ್ಕೂ ಸೂರ್ಯ ಅಸ್ತಮಿಸದ ದಿನವಾಗಿದೆ. ಆದರೆ ಇದನ್ನು ನೀವು ನೋಡಬೇಕಾದರೆ ಭೂಮಿಯ ದಕ್ಷಿಣ ಧ್ರುವಕ್ಕೆ ತೆರಳಬೇಕಾಗುತ್ತದೆ. ಅಥವಾ ಅಲ್ಲಿಯೇ ಬದುಕುತ್ತಿರುವ ಪೆಂಗ್ವಿನ್ ನೀವಾಗಿರಬೇಕಾಗುತ್ತದೆ. ಹಾಗೆಯೇ ಡಿಸೆಂಬರ್‌ 21ರಂದು ಸೂರ್ಯೋದಯ ಕೂಡಾ ಆಗದ ದಿನವಾಗಿದೆ. ಇದರ ಅನುಭವ ಬರಬೇಕಾದರೆ, ಕತೆಗಳಲ್ಲಿ ಬರುವ ಸಾಂಟಾಕ್ಲಾಸ್‌ನಂತೆ ನೀವು ಉತ್ತರ ಧ್ರವದಲ್ಲಿ ವಾಸಿಸುತ್ತಿರಬೇಕು!

ಇದನ್ನೂ ಓದಿ:ಕಾರವಾರ ಕಿಮ್ಸ್‌ ವಿಧಿ ವಿಜ್ಞಾನ ವಿಭಾಗದಲ್ಲಿ ಅಕ್ರಮ ನೇಮಕಾತಿ; ವೈದ್ಯಕೀಯ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದೇಕೆ?

ಇದು ಹೇಗೆ ಸಾಧ್ಯ? ವೈಜ್ಞಾನಿಕ ಕಾರಣಗಳೇನು?

ಭೂಮಿಯು ತನ್ನ ಅಕ್ಷದಲ್ಲಿ ಸುತ್ತುವುದರಿಂದ ಸೂರ್ಯ ಉದಯಿಸಿದ ಹಾಗೆ ಮತ್ತು ಸೂರ್ಯ ಮುಳುಗುವ ಹಾಗೆ ಕಾಣುತ್ತದೆ. ಭೂಮಿ ತನ್ನ ಅಕ್ಷದಲ್ಲಿ ವಾರೆಯಾಗಿ ಸುತ್ತುತ್ತದೆ (ಮೇಲಿನ ಚಿತ್ರ ನೋಡಿ). ಭೂಮಿ ತನ್ನ ಅಕ್ಷದಲ್ಲಿ ಓರೆಯಾಗಿ ಸುತ್ತುವ ಕಾರಣದಿಂದಲೇ, ಭೂಮಿಯ ಉತ್ತರ ಮತ್ತು ದಕ್ಷಿಣ ಗೋಲದಲ್ಲಿ ಇರುವವರಿಗೆ ಹಗಲು ಮತ್ತು ರಾತ್ರಿಗಳ ಸಮಯ ವ್ಯತ್ಯಾಸ ಆಗುತ್ತದೆ.

ಭೂಮಿಯ ದಕ್ಷಿಣ ಗೋಳವು ಸೂರ್ಯನೆಡೆಗೆ ಬಾಗಿದ್ದಾಗ ಆ ಪ್ರದೇಶದ ಜನರಿಗೆ ಹಗಲು ಹೆಚ್ಚು ದೀರ್ಘವಾಗಿ ಇರುತ್ತದೆ. ಉತ್ತರ ಧ್ರುವವು ಸೂರ್ಯನಿಂದ ದೂರವಾಗಿ ಇದ್ದರೆ ಈ ಪ್ರಕ್ರಿಯೆಯು ಹಿಂದುಮುಂದಾಗಿ ಇರುತ್ತದೆ. ಉದಾಹರಣೆಗೆ, ಭಾರತ ಉತ್ತರಾರ್ಧಗೋಳದಲ್ಲಿ ಇರುವುದರಿಂದ ನಮಗೆ ಡಿಸೆಂಬರ್‌ ತಿಂಗಳಲ್ಲಿ ರಾತ್ರಿ ಅತೀ ದೀರ್ಘವಾಗಿ ಹಗಲು ಚಿಕ್ಕದಾಗಿರುತ್ತದೆ.

ಆದ್ದರಿಂದಲೇ, ಡಿಸೆಂಬರ್‌ 21ರಂದು ಭೂಮಿಯ ಉತ್ತರ ಧ್ರವದಲ್ಲಿ ಸೂರ್ಯನ ಬೆಳಕೇ ಇರುವುದಿಲ್ಲ. ಇದಕ್ಕೆ ‘ಧ್ರುವ ರಾತ್ರಿ’ ಎಂದು ಕರೆಯುತ್ತಾರೆ. ಈ ದಿನ ಅಲ್ಲಿ ಸೂರ್ಯೋದಯ ಆಗುವುದಿಲ್ಲ. ಅದೇ ಸಮಯದಲ್ಲಿ ಭೂಮಿಯ ದಕ್ಷಿಣ ಧ್ರುವದಲ್ಲಿ ಸೂರ್ಯಾಸ್ತ ಆಗುವುದಿಲ್ಲ. ಮಧ್ಯ ರಾತ್ರಿಯ ಸಮಯವಾದರೂ ಅಲ್ಲಿ ಸೂರ್ಯ ಕಾಣುತ್ತಾ ಇರುತ್ತಾನೆ. ಈ ದಿನವನ್ನು ಧ್ರುವ ದಿನ ಅಥವಾ ಮಧ್ಯರಾತ್ರಿಯ ಸೂರ್ಯ ಎಂದು ಕರೆಯುತ್ತಾರೆ.

ಹೀಗಾಗಿ ಡಿಸೆಂಬರ್‌ 21 ರಂದು ಭೂಮಿಯ ಉತ್ತರ ಧ್ರವದಲ್ಲಿ ಸೂರ್ಯ ಹುಟ್ಟುವುದೇ ಇಲ್ಲ. ಹಾಗೂ ಅದೇ ದಿನ ಭೂಮಿಯ ದಕ್ಷಿಣ ಧ್ರುವದಲ್ಲಿ ಸೂರ್ಯ ಅಸ್ತಮಿಸುವುದೇ ಇಲ್ಲ.

ಹಾಗೆ ನೋಡಿದರೆ ಸೂರ್ಯ ‘ಹುಟ್ಟವುದುದು ಮತ್ತು ಮುಳುಗುವುದು’ ಎಂಬ ಪದಗಳು ಕೇವಲ ಆಡು ಮಾತುಗಳಾಗಿದ್ದು, ವೈಜ್ಞಾನಿಕವಾಗಿ ಇದು ಸರಿಯಲ್ಲ. ಸೂರ್ಯ ಪ್ರತಿ ದಿನ ಹುಟ್ಟುವುದು ಮತ್ತು ಮುಳುಗುವುದು ಕೂಡಾ ಇಲ್ಲ. ಸೂರ್ಯ ತನ್ನ ಕಕ್ಷೆಯಲ್ಲಿ ಸುತ್ತುತ್ತಾ ಇರುತ್ತದೆ. ಭೂಮಿ ತನ್ನ ಕಕ್ಷೆಯಲ್ಲಿ ಸುತ್ತುವುದರಿಂದ ಸೂರ್ಯ ಹುಟ್ಟಿದ ಹಾಗೆ ಮತ್ತು ಅಸ್ತಮಿಸಿದ ಹಾಗೆ ಕಾಣುತ್ತದೆ.

ಇದನ್ನೂ ಓದಿ:ವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...