Homeಮುಖಪುಟಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ನೀವು ‘ಪೆಂಗ್ವಿನ್‌’ ಆಗಿರಬೇಕು!

ಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ನೀವು ‘ಪೆಂಗ್ವಿನ್‌’ ಆಗಿರಬೇಕು!

- Advertisement -
- Advertisement -

ಹೌದು, ಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ಇದು ನಿಮ್ಮ ಅನುಭವಕ್ಕೆ ಬರಬೇಕಾದರೆ ನೀವು ‘ಪೆಂಗ್ವಿನ್’ ಆಗಿರಬೇಕು! ಏನಿದು ವಿಚಿತ್ರ ಹೇಳಿಕೆ ಎಂದು ನಿಮಗನಿಸುತ್ತಿದೆಯೆ? ಮುಂದಕ್ಕೆ ಓದಿ.

ಡಿಸೆಂಬರ್ ಬಂತೆಂದರೆ ಜಗತ್ತಿನ ನಾಶ, ಪ್ರಳಯ, ಎಂಬ ಸುದ್ದಿಯೆಲ್ಲಾ ಓಡಾಡುತ್ತವೆ. ಆದರೆ ಈ ಸುದ್ದಿ ಆ ರೀತಿಯ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲದೆ ಕಟ್ಟಿದ ಕಟ್ಟುಕತೆಯಲ್ಲ. ಅಷ್ಟಕ್ಕೂ ಇದು ಜಗತ್ತು ನಾಶವಾಗುವ ಕತೆಯಲ್ಲ, ಜಗತ್ತು ಅಂದು ಕೊನೆಗೊಳ್ಳುವುದೂ ಇಲ್ಲ. ನಮ್ಮ ಭೂಮಿಯಲ್ಲಿ ಸಾಮಾನ್ಯವಾಗಿ ನಡೆಯುವ ಒಂದು ವಿದ್ಯಮಾನ ಮಾತ್ರವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಸೆಂಬರ್‌‌ 21ರಂದು ನಿಜಕ್ಕೂ ಸೂರ್ಯ ಅಸ್ತಮಿಸದ ದಿನವಾಗಿದೆ. ಆದರೆ ಇದನ್ನು ನೀವು ನೋಡಬೇಕಾದರೆ ಭೂಮಿಯ ದಕ್ಷಿಣ ಧ್ರುವಕ್ಕೆ ತೆರಳಬೇಕಾಗುತ್ತದೆ. ಅಥವಾ ಅಲ್ಲಿಯೇ ಬದುಕುತ್ತಿರುವ ಪೆಂಗ್ವಿನ್ ನೀವಾಗಿರಬೇಕಾಗುತ್ತದೆ. ಹಾಗೆಯೇ ಡಿಸೆಂಬರ್‌ 21ರಂದು ಸೂರ್ಯೋದಯ ಕೂಡಾ ಆಗದ ದಿನವಾಗಿದೆ. ಇದರ ಅನುಭವ ಬರಬೇಕಾದರೆ, ಕತೆಗಳಲ್ಲಿ ಬರುವ ಸಾಂಟಾಕ್ಲಾಸ್‌ನಂತೆ ನೀವು ಉತ್ತರ ಧ್ರವದಲ್ಲಿ ವಾಸಿಸುತ್ತಿರಬೇಕು!

ಇದನ್ನೂ ಓದಿ:ಕಾರವಾರ ಕಿಮ್ಸ್‌ ವಿಧಿ ವಿಜ್ಞಾನ ವಿಭಾಗದಲ್ಲಿ ಅಕ್ರಮ ನೇಮಕಾತಿ; ವೈದ್ಯಕೀಯ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದೇಕೆ?

ಇದು ಹೇಗೆ ಸಾಧ್ಯ? ವೈಜ್ಞಾನಿಕ ಕಾರಣಗಳೇನು?

ಭೂಮಿಯು ತನ್ನ ಅಕ್ಷದಲ್ಲಿ ಸುತ್ತುವುದರಿಂದ ಸೂರ್ಯ ಉದಯಿಸಿದ ಹಾಗೆ ಮತ್ತು ಸೂರ್ಯ ಮುಳುಗುವ ಹಾಗೆ ಕಾಣುತ್ತದೆ. ಭೂಮಿ ತನ್ನ ಅಕ್ಷದಲ್ಲಿ ವಾರೆಯಾಗಿ ಸುತ್ತುತ್ತದೆ (ಮೇಲಿನ ಚಿತ್ರ ನೋಡಿ). ಭೂಮಿ ತನ್ನ ಅಕ್ಷದಲ್ಲಿ ಓರೆಯಾಗಿ ಸುತ್ತುವ ಕಾರಣದಿಂದಲೇ, ಭೂಮಿಯ ಉತ್ತರ ಮತ್ತು ದಕ್ಷಿಣ ಗೋಲದಲ್ಲಿ ಇರುವವರಿಗೆ ಹಗಲು ಮತ್ತು ರಾತ್ರಿಗಳ ಸಮಯ ವ್ಯತ್ಯಾಸ ಆಗುತ್ತದೆ.

ಭೂಮಿಯ ದಕ್ಷಿಣ ಗೋಳವು ಸೂರ್ಯನೆಡೆಗೆ ಬಾಗಿದ್ದಾಗ ಆ ಪ್ರದೇಶದ ಜನರಿಗೆ ಹಗಲು ಹೆಚ್ಚು ದೀರ್ಘವಾಗಿ ಇರುತ್ತದೆ. ಉತ್ತರ ಧ್ರುವವು ಸೂರ್ಯನಿಂದ ದೂರವಾಗಿ ಇದ್ದರೆ ಈ ಪ್ರಕ್ರಿಯೆಯು ಹಿಂದುಮುಂದಾಗಿ ಇರುತ್ತದೆ. ಉದಾಹರಣೆಗೆ, ಭಾರತ ಉತ್ತರಾರ್ಧಗೋಳದಲ್ಲಿ ಇರುವುದರಿಂದ ನಮಗೆ ಡಿಸೆಂಬರ್‌ ತಿಂಗಳಲ್ಲಿ ರಾತ್ರಿ ಅತೀ ದೀರ್ಘವಾಗಿ ಹಗಲು ಚಿಕ್ಕದಾಗಿರುತ್ತದೆ.

ಆದ್ದರಿಂದಲೇ, ಡಿಸೆಂಬರ್‌ 21ರಂದು ಭೂಮಿಯ ಉತ್ತರ ಧ್ರವದಲ್ಲಿ ಸೂರ್ಯನ ಬೆಳಕೇ ಇರುವುದಿಲ್ಲ. ಇದಕ್ಕೆ ‘ಧ್ರುವ ರಾತ್ರಿ’ ಎಂದು ಕರೆಯುತ್ತಾರೆ. ಈ ದಿನ ಅಲ್ಲಿ ಸೂರ್ಯೋದಯ ಆಗುವುದಿಲ್ಲ. ಅದೇ ಸಮಯದಲ್ಲಿ ಭೂಮಿಯ ದಕ್ಷಿಣ ಧ್ರುವದಲ್ಲಿ ಸೂರ್ಯಾಸ್ತ ಆಗುವುದಿಲ್ಲ. ಮಧ್ಯ ರಾತ್ರಿಯ ಸಮಯವಾದರೂ ಅಲ್ಲಿ ಸೂರ್ಯ ಕಾಣುತ್ತಾ ಇರುತ್ತಾನೆ. ಈ ದಿನವನ್ನು ಧ್ರುವ ದಿನ ಅಥವಾ ಮಧ್ಯರಾತ್ರಿಯ ಸೂರ್ಯ ಎಂದು ಕರೆಯುತ್ತಾರೆ.

ಹೀಗಾಗಿ ಡಿಸೆಂಬರ್‌ 21 ರಂದು ಭೂಮಿಯ ಉತ್ತರ ಧ್ರವದಲ್ಲಿ ಸೂರ್ಯ ಹುಟ್ಟುವುದೇ ಇಲ್ಲ. ಹಾಗೂ ಅದೇ ದಿನ ಭೂಮಿಯ ದಕ್ಷಿಣ ಧ್ರುವದಲ್ಲಿ ಸೂರ್ಯ ಅಸ್ತಮಿಸುವುದೇ ಇಲ್ಲ.

ಹಾಗೆ ನೋಡಿದರೆ ಸೂರ್ಯ ‘ಹುಟ್ಟವುದುದು ಮತ್ತು ಮುಳುಗುವುದು’ ಎಂಬ ಪದಗಳು ಕೇವಲ ಆಡು ಮಾತುಗಳಾಗಿದ್ದು, ವೈಜ್ಞಾನಿಕವಾಗಿ ಇದು ಸರಿಯಲ್ಲ. ಸೂರ್ಯ ಪ್ರತಿ ದಿನ ಹುಟ್ಟುವುದು ಮತ್ತು ಮುಳುಗುವುದು ಕೂಡಾ ಇಲ್ಲ. ಸೂರ್ಯ ತನ್ನ ಕಕ್ಷೆಯಲ್ಲಿ ಸುತ್ತುತ್ತಾ ಇರುತ್ತದೆ. ಭೂಮಿ ತನ್ನ ಕಕ್ಷೆಯಲ್ಲಿ ಸುತ್ತುವುದರಿಂದ ಸೂರ್ಯ ಹುಟ್ಟಿದ ಹಾಗೆ ಮತ್ತು ಅಸ್ತಮಿಸಿದ ಹಾಗೆ ಕಾಣುತ್ತದೆ.

ಇದನ್ನೂ ಓದಿ:ವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...