Homeಮುಖಪುಟಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ನೀವು ‘ಪೆಂಗ್ವಿನ್‌’ ಆಗಿರಬೇಕು!

ಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ನೀವು ‘ಪೆಂಗ್ವಿನ್‌’ ಆಗಿರಬೇಕು!

- Advertisement -
- Advertisement -

ಹೌದು, ಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ಇದು ನಿಮ್ಮ ಅನುಭವಕ್ಕೆ ಬರಬೇಕಾದರೆ ನೀವು ‘ಪೆಂಗ್ವಿನ್’ ಆಗಿರಬೇಕು! ಏನಿದು ವಿಚಿತ್ರ ಹೇಳಿಕೆ ಎಂದು ನಿಮಗನಿಸುತ್ತಿದೆಯೆ? ಮುಂದಕ್ಕೆ ಓದಿ.

ಡಿಸೆಂಬರ್ ಬಂತೆಂದರೆ ಜಗತ್ತಿನ ನಾಶ, ಪ್ರಳಯ, ಎಂಬ ಸುದ್ದಿಯೆಲ್ಲಾ ಓಡಾಡುತ್ತವೆ. ಆದರೆ ಈ ಸುದ್ದಿ ಆ ರೀತಿಯ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲದೆ ಕಟ್ಟಿದ ಕಟ್ಟುಕತೆಯಲ್ಲ. ಅಷ್ಟಕ್ಕೂ ಇದು ಜಗತ್ತು ನಾಶವಾಗುವ ಕತೆಯಲ್ಲ, ಜಗತ್ತು ಅಂದು ಕೊನೆಗೊಳ್ಳುವುದೂ ಇಲ್ಲ. ನಮ್ಮ ಭೂಮಿಯಲ್ಲಿ ಸಾಮಾನ್ಯವಾಗಿ ನಡೆಯುವ ಒಂದು ವಿದ್ಯಮಾನ ಮಾತ್ರವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಸೆಂಬರ್‌‌ 21ರಂದು ನಿಜಕ್ಕೂ ಸೂರ್ಯ ಅಸ್ತಮಿಸದ ದಿನವಾಗಿದೆ. ಆದರೆ ಇದನ್ನು ನೀವು ನೋಡಬೇಕಾದರೆ ಭೂಮಿಯ ದಕ್ಷಿಣ ಧ್ರುವಕ್ಕೆ ತೆರಳಬೇಕಾಗುತ್ತದೆ. ಅಥವಾ ಅಲ್ಲಿಯೇ ಬದುಕುತ್ತಿರುವ ಪೆಂಗ್ವಿನ್ ನೀವಾಗಿರಬೇಕಾಗುತ್ತದೆ. ಹಾಗೆಯೇ ಡಿಸೆಂಬರ್‌ 21ರಂದು ಸೂರ್ಯೋದಯ ಕೂಡಾ ಆಗದ ದಿನವಾಗಿದೆ. ಇದರ ಅನುಭವ ಬರಬೇಕಾದರೆ, ಕತೆಗಳಲ್ಲಿ ಬರುವ ಸಾಂಟಾಕ್ಲಾಸ್‌ನಂತೆ ನೀವು ಉತ್ತರ ಧ್ರವದಲ್ಲಿ ವಾಸಿಸುತ್ತಿರಬೇಕು!

ಇದನ್ನೂ ಓದಿ:ಕಾರವಾರ ಕಿಮ್ಸ್‌ ವಿಧಿ ವಿಜ್ಞಾನ ವಿಭಾಗದಲ್ಲಿ ಅಕ್ರಮ ನೇಮಕಾತಿ; ವೈದ್ಯಕೀಯ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದೇಕೆ?

ಇದು ಹೇಗೆ ಸಾಧ್ಯ? ವೈಜ್ಞಾನಿಕ ಕಾರಣಗಳೇನು?

ಭೂಮಿಯು ತನ್ನ ಅಕ್ಷದಲ್ಲಿ ಸುತ್ತುವುದರಿಂದ ಸೂರ್ಯ ಉದಯಿಸಿದ ಹಾಗೆ ಮತ್ತು ಸೂರ್ಯ ಮುಳುಗುವ ಹಾಗೆ ಕಾಣುತ್ತದೆ. ಭೂಮಿ ತನ್ನ ಅಕ್ಷದಲ್ಲಿ ವಾರೆಯಾಗಿ ಸುತ್ತುತ್ತದೆ (ಮೇಲಿನ ಚಿತ್ರ ನೋಡಿ). ಭೂಮಿ ತನ್ನ ಅಕ್ಷದಲ್ಲಿ ಓರೆಯಾಗಿ ಸುತ್ತುವ ಕಾರಣದಿಂದಲೇ, ಭೂಮಿಯ ಉತ್ತರ ಮತ್ತು ದಕ್ಷಿಣ ಗೋಲದಲ್ಲಿ ಇರುವವರಿಗೆ ಹಗಲು ಮತ್ತು ರಾತ್ರಿಗಳ ಸಮಯ ವ್ಯತ್ಯಾಸ ಆಗುತ್ತದೆ.

ಭೂಮಿಯ ದಕ್ಷಿಣ ಗೋಳವು ಸೂರ್ಯನೆಡೆಗೆ ಬಾಗಿದ್ದಾಗ ಆ ಪ್ರದೇಶದ ಜನರಿಗೆ ಹಗಲು ಹೆಚ್ಚು ದೀರ್ಘವಾಗಿ ಇರುತ್ತದೆ. ಉತ್ತರ ಧ್ರುವವು ಸೂರ್ಯನಿಂದ ದೂರವಾಗಿ ಇದ್ದರೆ ಈ ಪ್ರಕ್ರಿಯೆಯು ಹಿಂದುಮುಂದಾಗಿ ಇರುತ್ತದೆ. ಉದಾಹರಣೆಗೆ, ಭಾರತ ಉತ್ತರಾರ್ಧಗೋಳದಲ್ಲಿ ಇರುವುದರಿಂದ ನಮಗೆ ಡಿಸೆಂಬರ್‌ ತಿಂಗಳಲ್ಲಿ ರಾತ್ರಿ ಅತೀ ದೀರ್ಘವಾಗಿ ಹಗಲು ಚಿಕ್ಕದಾಗಿರುತ್ತದೆ.

ಆದ್ದರಿಂದಲೇ, ಡಿಸೆಂಬರ್‌ 21ರಂದು ಭೂಮಿಯ ಉತ್ತರ ಧ್ರವದಲ್ಲಿ ಸೂರ್ಯನ ಬೆಳಕೇ ಇರುವುದಿಲ್ಲ. ಇದಕ್ಕೆ ‘ಧ್ರುವ ರಾತ್ರಿ’ ಎಂದು ಕರೆಯುತ್ತಾರೆ. ಈ ದಿನ ಅಲ್ಲಿ ಸೂರ್ಯೋದಯ ಆಗುವುದಿಲ್ಲ. ಅದೇ ಸಮಯದಲ್ಲಿ ಭೂಮಿಯ ದಕ್ಷಿಣ ಧ್ರುವದಲ್ಲಿ ಸೂರ್ಯಾಸ್ತ ಆಗುವುದಿಲ್ಲ. ಮಧ್ಯ ರಾತ್ರಿಯ ಸಮಯವಾದರೂ ಅಲ್ಲಿ ಸೂರ್ಯ ಕಾಣುತ್ತಾ ಇರುತ್ತಾನೆ. ಈ ದಿನವನ್ನು ಧ್ರುವ ದಿನ ಅಥವಾ ಮಧ್ಯರಾತ್ರಿಯ ಸೂರ್ಯ ಎಂದು ಕರೆಯುತ್ತಾರೆ.

ಹೀಗಾಗಿ ಡಿಸೆಂಬರ್‌ 21 ರಂದು ಭೂಮಿಯ ಉತ್ತರ ಧ್ರವದಲ್ಲಿ ಸೂರ್ಯ ಹುಟ್ಟುವುದೇ ಇಲ್ಲ. ಹಾಗೂ ಅದೇ ದಿನ ಭೂಮಿಯ ದಕ್ಷಿಣ ಧ್ರುವದಲ್ಲಿ ಸೂರ್ಯ ಅಸ್ತಮಿಸುವುದೇ ಇಲ್ಲ.

ಹಾಗೆ ನೋಡಿದರೆ ಸೂರ್ಯ ‘ಹುಟ್ಟವುದುದು ಮತ್ತು ಮುಳುಗುವುದು’ ಎಂಬ ಪದಗಳು ಕೇವಲ ಆಡು ಮಾತುಗಳಾಗಿದ್ದು, ವೈಜ್ಞಾನಿಕವಾಗಿ ಇದು ಸರಿಯಲ್ಲ. ಸೂರ್ಯ ಪ್ರತಿ ದಿನ ಹುಟ್ಟುವುದು ಮತ್ತು ಮುಳುಗುವುದು ಕೂಡಾ ಇಲ್ಲ. ಸೂರ್ಯ ತನ್ನ ಕಕ್ಷೆಯಲ್ಲಿ ಸುತ್ತುತ್ತಾ ಇರುತ್ತದೆ. ಭೂಮಿ ತನ್ನ ಕಕ್ಷೆಯಲ್ಲಿ ಸುತ್ತುವುದರಿಂದ ಸೂರ್ಯ ಹುಟ್ಟಿದ ಹಾಗೆ ಮತ್ತು ಅಸ್ತಮಿಸಿದ ಹಾಗೆ ಕಾಣುತ್ತದೆ.

ಇದನ್ನೂ ಓದಿ:ವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...