Homeಮುಖಪುಟಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ನೀವು ‘ಪೆಂಗ್ವಿನ್‌’ ಆಗಿರಬೇಕು!

ಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ನೀವು ‘ಪೆಂಗ್ವಿನ್‌’ ಆಗಿರಬೇಕು!

- Advertisement -
- Advertisement -

ಹೌದು, ಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ಇದು ನಿಮ್ಮ ಅನುಭವಕ್ಕೆ ಬರಬೇಕಾದರೆ ನೀವು ‘ಪೆಂಗ್ವಿನ್’ ಆಗಿರಬೇಕು! ಏನಿದು ವಿಚಿತ್ರ ಹೇಳಿಕೆ ಎಂದು ನಿಮಗನಿಸುತ್ತಿದೆಯೆ? ಮುಂದಕ್ಕೆ ಓದಿ.

ಡಿಸೆಂಬರ್ ಬಂತೆಂದರೆ ಜಗತ್ತಿನ ನಾಶ, ಪ್ರಳಯ, ಎಂಬ ಸುದ್ದಿಯೆಲ್ಲಾ ಓಡಾಡುತ್ತವೆ. ಆದರೆ ಈ ಸುದ್ದಿ ಆ ರೀತಿಯ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲದೆ ಕಟ್ಟಿದ ಕಟ್ಟುಕತೆಯಲ್ಲ. ಅಷ್ಟಕ್ಕೂ ಇದು ಜಗತ್ತು ನಾಶವಾಗುವ ಕತೆಯಲ್ಲ, ಜಗತ್ತು ಅಂದು ಕೊನೆಗೊಳ್ಳುವುದೂ ಇಲ್ಲ. ನಮ್ಮ ಭೂಮಿಯಲ್ಲಿ ಸಾಮಾನ್ಯವಾಗಿ ನಡೆಯುವ ಒಂದು ವಿದ್ಯಮಾನ ಮಾತ್ರವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಸೆಂಬರ್‌‌ 21ರಂದು ನಿಜಕ್ಕೂ ಸೂರ್ಯ ಅಸ್ತಮಿಸದ ದಿನವಾಗಿದೆ. ಆದರೆ ಇದನ್ನು ನೀವು ನೋಡಬೇಕಾದರೆ ಭೂಮಿಯ ದಕ್ಷಿಣ ಧ್ರುವಕ್ಕೆ ತೆರಳಬೇಕಾಗುತ್ತದೆ. ಅಥವಾ ಅಲ್ಲಿಯೇ ಬದುಕುತ್ತಿರುವ ಪೆಂಗ್ವಿನ್ ನೀವಾಗಿರಬೇಕಾಗುತ್ತದೆ. ಹಾಗೆಯೇ ಡಿಸೆಂಬರ್‌ 21ರಂದು ಸೂರ್ಯೋದಯ ಕೂಡಾ ಆಗದ ದಿನವಾಗಿದೆ. ಇದರ ಅನುಭವ ಬರಬೇಕಾದರೆ, ಕತೆಗಳಲ್ಲಿ ಬರುವ ಸಾಂಟಾಕ್ಲಾಸ್‌ನಂತೆ ನೀವು ಉತ್ತರ ಧ್ರವದಲ್ಲಿ ವಾಸಿಸುತ್ತಿರಬೇಕು!

ಇದನ್ನೂ ಓದಿ:ಕಾರವಾರ ಕಿಮ್ಸ್‌ ವಿಧಿ ವಿಜ್ಞಾನ ವಿಭಾಗದಲ್ಲಿ ಅಕ್ರಮ ನೇಮಕಾತಿ; ವೈದ್ಯಕೀಯ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದೇಕೆ?

ಇದು ಹೇಗೆ ಸಾಧ್ಯ? ವೈಜ್ಞಾನಿಕ ಕಾರಣಗಳೇನು?

ಭೂಮಿಯು ತನ್ನ ಅಕ್ಷದಲ್ಲಿ ಸುತ್ತುವುದರಿಂದ ಸೂರ್ಯ ಉದಯಿಸಿದ ಹಾಗೆ ಮತ್ತು ಸೂರ್ಯ ಮುಳುಗುವ ಹಾಗೆ ಕಾಣುತ್ತದೆ. ಭೂಮಿ ತನ್ನ ಅಕ್ಷದಲ್ಲಿ ವಾರೆಯಾಗಿ ಸುತ್ತುತ್ತದೆ (ಮೇಲಿನ ಚಿತ್ರ ನೋಡಿ). ಭೂಮಿ ತನ್ನ ಅಕ್ಷದಲ್ಲಿ ಓರೆಯಾಗಿ ಸುತ್ತುವ ಕಾರಣದಿಂದಲೇ, ಭೂಮಿಯ ಉತ್ತರ ಮತ್ತು ದಕ್ಷಿಣ ಗೋಲದಲ್ಲಿ ಇರುವವರಿಗೆ ಹಗಲು ಮತ್ತು ರಾತ್ರಿಗಳ ಸಮಯ ವ್ಯತ್ಯಾಸ ಆಗುತ್ತದೆ.

ಭೂಮಿಯ ದಕ್ಷಿಣ ಗೋಳವು ಸೂರ್ಯನೆಡೆಗೆ ಬಾಗಿದ್ದಾಗ ಆ ಪ್ರದೇಶದ ಜನರಿಗೆ ಹಗಲು ಹೆಚ್ಚು ದೀರ್ಘವಾಗಿ ಇರುತ್ತದೆ. ಉತ್ತರ ಧ್ರುವವು ಸೂರ್ಯನಿಂದ ದೂರವಾಗಿ ಇದ್ದರೆ ಈ ಪ್ರಕ್ರಿಯೆಯು ಹಿಂದುಮುಂದಾಗಿ ಇರುತ್ತದೆ. ಉದಾಹರಣೆಗೆ, ಭಾರತ ಉತ್ತರಾರ್ಧಗೋಳದಲ್ಲಿ ಇರುವುದರಿಂದ ನಮಗೆ ಡಿಸೆಂಬರ್‌ ತಿಂಗಳಲ್ಲಿ ರಾತ್ರಿ ಅತೀ ದೀರ್ಘವಾಗಿ ಹಗಲು ಚಿಕ್ಕದಾಗಿರುತ್ತದೆ.

ಆದ್ದರಿಂದಲೇ, ಡಿಸೆಂಬರ್‌ 21ರಂದು ಭೂಮಿಯ ಉತ್ತರ ಧ್ರವದಲ್ಲಿ ಸೂರ್ಯನ ಬೆಳಕೇ ಇರುವುದಿಲ್ಲ. ಇದಕ್ಕೆ ‘ಧ್ರುವ ರಾತ್ರಿ’ ಎಂದು ಕರೆಯುತ್ತಾರೆ. ಈ ದಿನ ಅಲ್ಲಿ ಸೂರ್ಯೋದಯ ಆಗುವುದಿಲ್ಲ. ಅದೇ ಸಮಯದಲ್ಲಿ ಭೂಮಿಯ ದಕ್ಷಿಣ ಧ್ರುವದಲ್ಲಿ ಸೂರ್ಯಾಸ್ತ ಆಗುವುದಿಲ್ಲ. ಮಧ್ಯ ರಾತ್ರಿಯ ಸಮಯವಾದರೂ ಅಲ್ಲಿ ಸೂರ್ಯ ಕಾಣುತ್ತಾ ಇರುತ್ತಾನೆ. ಈ ದಿನವನ್ನು ಧ್ರುವ ದಿನ ಅಥವಾ ಮಧ್ಯರಾತ್ರಿಯ ಸೂರ್ಯ ಎಂದು ಕರೆಯುತ್ತಾರೆ.

ಹೀಗಾಗಿ ಡಿಸೆಂಬರ್‌ 21 ರಂದು ಭೂಮಿಯ ಉತ್ತರ ಧ್ರವದಲ್ಲಿ ಸೂರ್ಯ ಹುಟ್ಟುವುದೇ ಇಲ್ಲ. ಹಾಗೂ ಅದೇ ದಿನ ಭೂಮಿಯ ದಕ್ಷಿಣ ಧ್ರುವದಲ್ಲಿ ಸೂರ್ಯ ಅಸ್ತಮಿಸುವುದೇ ಇಲ್ಲ.

ಹಾಗೆ ನೋಡಿದರೆ ಸೂರ್ಯ ‘ಹುಟ್ಟವುದುದು ಮತ್ತು ಮುಳುಗುವುದು’ ಎಂಬ ಪದಗಳು ಕೇವಲ ಆಡು ಮಾತುಗಳಾಗಿದ್ದು, ವೈಜ್ಞಾನಿಕವಾಗಿ ಇದು ಸರಿಯಲ್ಲ. ಸೂರ್ಯ ಪ್ರತಿ ದಿನ ಹುಟ್ಟುವುದು ಮತ್ತು ಮುಳುಗುವುದು ಕೂಡಾ ಇಲ್ಲ. ಸೂರ್ಯ ತನ್ನ ಕಕ್ಷೆಯಲ್ಲಿ ಸುತ್ತುತ್ತಾ ಇರುತ್ತದೆ. ಭೂಮಿ ತನ್ನ ಕಕ್ಷೆಯಲ್ಲಿ ಸುತ್ತುವುದರಿಂದ ಸೂರ್ಯ ಹುಟ್ಟಿದ ಹಾಗೆ ಮತ್ತು ಅಸ್ತಮಿಸಿದ ಹಾಗೆ ಕಾಣುತ್ತದೆ.

ಇದನ್ನೂ ಓದಿ:ವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...