Homeಮುಖಪುಟಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ನೀವು ‘ಪೆಂಗ್ವಿನ್‌’ ಆಗಿರಬೇಕು!

ಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ನೀವು ‘ಪೆಂಗ್ವಿನ್‌’ ಆಗಿರಬೇಕು!

- Advertisement -
- Advertisement -

ಹೌದು, ಡಿಸೆಂಬರ್‌ 21ರಂದು ಸೂರ್ಯ ಅಸ್ತಮಿಸುವುದಿಲ್ಲ; ಆದರೆ ಇದು ನಿಮ್ಮ ಅನುಭವಕ್ಕೆ ಬರಬೇಕಾದರೆ ನೀವು ‘ಪೆಂಗ್ವಿನ್’ ಆಗಿರಬೇಕು! ಏನಿದು ವಿಚಿತ್ರ ಹೇಳಿಕೆ ಎಂದು ನಿಮಗನಿಸುತ್ತಿದೆಯೆ? ಮುಂದಕ್ಕೆ ಓದಿ.

ಡಿಸೆಂಬರ್ ಬಂತೆಂದರೆ ಜಗತ್ತಿನ ನಾಶ, ಪ್ರಳಯ, ಎಂಬ ಸುದ್ದಿಯೆಲ್ಲಾ ಓಡಾಡುತ್ತವೆ. ಆದರೆ ಈ ಸುದ್ದಿ ಆ ರೀತಿಯ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲದೆ ಕಟ್ಟಿದ ಕಟ್ಟುಕತೆಯಲ್ಲ. ಅಷ್ಟಕ್ಕೂ ಇದು ಜಗತ್ತು ನಾಶವಾಗುವ ಕತೆಯಲ್ಲ, ಜಗತ್ತು ಅಂದು ಕೊನೆಗೊಳ್ಳುವುದೂ ಇಲ್ಲ. ನಮ್ಮ ಭೂಮಿಯಲ್ಲಿ ಸಾಮಾನ್ಯವಾಗಿ ನಡೆಯುವ ಒಂದು ವಿದ್ಯಮಾನ ಮಾತ್ರವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಸೆಂಬರ್‌‌ 21ರಂದು ನಿಜಕ್ಕೂ ಸೂರ್ಯ ಅಸ್ತಮಿಸದ ದಿನವಾಗಿದೆ. ಆದರೆ ಇದನ್ನು ನೀವು ನೋಡಬೇಕಾದರೆ ಭೂಮಿಯ ದಕ್ಷಿಣ ಧ್ರುವಕ್ಕೆ ತೆರಳಬೇಕಾಗುತ್ತದೆ. ಅಥವಾ ಅಲ್ಲಿಯೇ ಬದುಕುತ್ತಿರುವ ಪೆಂಗ್ವಿನ್ ನೀವಾಗಿರಬೇಕಾಗುತ್ತದೆ. ಹಾಗೆಯೇ ಡಿಸೆಂಬರ್‌ 21ರಂದು ಸೂರ್ಯೋದಯ ಕೂಡಾ ಆಗದ ದಿನವಾಗಿದೆ. ಇದರ ಅನುಭವ ಬರಬೇಕಾದರೆ, ಕತೆಗಳಲ್ಲಿ ಬರುವ ಸಾಂಟಾಕ್ಲಾಸ್‌ನಂತೆ ನೀವು ಉತ್ತರ ಧ್ರವದಲ್ಲಿ ವಾಸಿಸುತ್ತಿರಬೇಕು!

ಇದನ್ನೂ ಓದಿ:ಕಾರವಾರ ಕಿಮ್ಸ್‌ ವಿಧಿ ವಿಜ್ಞಾನ ವಿಭಾಗದಲ್ಲಿ ಅಕ್ರಮ ನೇಮಕಾತಿ; ವೈದ್ಯಕೀಯ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದೇಕೆ?

ಇದು ಹೇಗೆ ಸಾಧ್ಯ? ವೈಜ್ಞಾನಿಕ ಕಾರಣಗಳೇನು?

ಭೂಮಿಯು ತನ್ನ ಅಕ್ಷದಲ್ಲಿ ಸುತ್ತುವುದರಿಂದ ಸೂರ್ಯ ಉದಯಿಸಿದ ಹಾಗೆ ಮತ್ತು ಸೂರ್ಯ ಮುಳುಗುವ ಹಾಗೆ ಕಾಣುತ್ತದೆ. ಭೂಮಿ ತನ್ನ ಅಕ್ಷದಲ್ಲಿ ವಾರೆಯಾಗಿ ಸುತ್ತುತ್ತದೆ (ಮೇಲಿನ ಚಿತ್ರ ನೋಡಿ). ಭೂಮಿ ತನ್ನ ಅಕ್ಷದಲ್ಲಿ ಓರೆಯಾಗಿ ಸುತ್ತುವ ಕಾರಣದಿಂದಲೇ, ಭೂಮಿಯ ಉತ್ತರ ಮತ್ತು ದಕ್ಷಿಣ ಗೋಲದಲ್ಲಿ ಇರುವವರಿಗೆ ಹಗಲು ಮತ್ತು ರಾತ್ರಿಗಳ ಸಮಯ ವ್ಯತ್ಯಾಸ ಆಗುತ್ತದೆ.

ಭೂಮಿಯ ದಕ್ಷಿಣ ಗೋಳವು ಸೂರ್ಯನೆಡೆಗೆ ಬಾಗಿದ್ದಾಗ ಆ ಪ್ರದೇಶದ ಜನರಿಗೆ ಹಗಲು ಹೆಚ್ಚು ದೀರ್ಘವಾಗಿ ಇರುತ್ತದೆ. ಉತ್ತರ ಧ್ರುವವು ಸೂರ್ಯನಿಂದ ದೂರವಾಗಿ ಇದ್ದರೆ ಈ ಪ್ರಕ್ರಿಯೆಯು ಹಿಂದುಮುಂದಾಗಿ ಇರುತ್ತದೆ. ಉದಾಹರಣೆಗೆ, ಭಾರತ ಉತ್ತರಾರ್ಧಗೋಳದಲ್ಲಿ ಇರುವುದರಿಂದ ನಮಗೆ ಡಿಸೆಂಬರ್‌ ತಿಂಗಳಲ್ಲಿ ರಾತ್ರಿ ಅತೀ ದೀರ್ಘವಾಗಿ ಹಗಲು ಚಿಕ್ಕದಾಗಿರುತ್ತದೆ.

ಆದ್ದರಿಂದಲೇ, ಡಿಸೆಂಬರ್‌ 21ರಂದು ಭೂಮಿಯ ಉತ್ತರ ಧ್ರವದಲ್ಲಿ ಸೂರ್ಯನ ಬೆಳಕೇ ಇರುವುದಿಲ್ಲ. ಇದಕ್ಕೆ ‘ಧ್ರುವ ರಾತ್ರಿ’ ಎಂದು ಕರೆಯುತ್ತಾರೆ. ಈ ದಿನ ಅಲ್ಲಿ ಸೂರ್ಯೋದಯ ಆಗುವುದಿಲ್ಲ. ಅದೇ ಸಮಯದಲ್ಲಿ ಭೂಮಿಯ ದಕ್ಷಿಣ ಧ್ರುವದಲ್ಲಿ ಸೂರ್ಯಾಸ್ತ ಆಗುವುದಿಲ್ಲ. ಮಧ್ಯ ರಾತ್ರಿಯ ಸಮಯವಾದರೂ ಅಲ್ಲಿ ಸೂರ್ಯ ಕಾಣುತ್ತಾ ಇರುತ್ತಾನೆ. ಈ ದಿನವನ್ನು ಧ್ರುವ ದಿನ ಅಥವಾ ಮಧ್ಯರಾತ್ರಿಯ ಸೂರ್ಯ ಎಂದು ಕರೆಯುತ್ತಾರೆ.

ಹೀಗಾಗಿ ಡಿಸೆಂಬರ್‌ 21 ರಂದು ಭೂಮಿಯ ಉತ್ತರ ಧ್ರವದಲ್ಲಿ ಸೂರ್ಯ ಹುಟ್ಟುವುದೇ ಇಲ್ಲ. ಹಾಗೂ ಅದೇ ದಿನ ಭೂಮಿಯ ದಕ್ಷಿಣ ಧ್ರುವದಲ್ಲಿ ಸೂರ್ಯ ಅಸ್ತಮಿಸುವುದೇ ಇಲ್ಲ.

ಹಾಗೆ ನೋಡಿದರೆ ಸೂರ್ಯ ‘ಹುಟ್ಟವುದುದು ಮತ್ತು ಮುಳುಗುವುದು’ ಎಂಬ ಪದಗಳು ಕೇವಲ ಆಡು ಮಾತುಗಳಾಗಿದ್ದು, ವೈಜ್ಞಾನಿಕವಾಗಿ ಇದು ಸರಿಯಲ್ಲ. ಸೂರ್ಯ ಪ್ರತಿ ದಿನ ಹುಟ್ಟುವುದು ಮತ್ತು ಮುಳುಗುವುದು ಕೂಡಾ ಇಲ್ಲ. ಸೂರ್ಯ ತನ್ನ ಕಕ್ಷೆಯಲ್ಲಿ ಸುತ್ತುತ್ತಾ ಇರುತ್ತದೆ. ಭೂಮಿ ತನ್ನ ಕಕ್ಷೆಯಲ್ಲಿ ಸುತ್ತುವುದರಿಂದ ಸೂರ್ಯ ಹುಟ್ಟಿದ ಹಾಗೆ ಮತ್ತು ಅಸ್ತಮಿಸಿದ ಹಾಗೆ ಕಾಣುತ್ತದೆ.

ಇದನ್ನೂ ಓದಿ:ವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...