Homeಮುಖಪುಟಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

ಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

MSP ಅಷ್ಟೊಂದು ಅಗತ್ಯವಾಗಿದ್ದರೆ, ನೀವು ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಅದನ್ನು ಕಾನೂನಿನ ಭಾಗವಾಗಿ ಏಕೆ ಸೇರಿಸಲಿಲ್ಲ? ಹಾಗಾಗಿ MSP ಮೇಲಿನ ವಿರೋಧ ಪಕ್ಷಗಳ ಬೇಡಿಕೆಯನ್ನು ಸರ್ಕಾರ ಒಪ್ಪುವುದಿಲ್ಲ..

- Advertisement -
- Advertisement -

ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ವಿವಾದಾತ್ಮಕ ಕೃಷಿ ಮಸೂದೆಗಳಲ್ಲಿ ಕನಿಷ್ಠ ಬೆಂಬಲ ಬೆಲೆಯನ್ನು (MSP) ಕಡ್ಡಾಯ ನಿಬಂಧನೆಯಾಗಿ ಸೇರಿಸಬೇಕೆಂಬ ವಿರೋಧ ಪಕ್ಷಗಳ ಬೇಡಿಕೆಯನ್ನು ತಿರಸ್ಕರಿಸಿದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್, “ಸರ್ಕಾರ MSPಗೆ ಬದ್ದವಾಗಿದ್ದರೂ, ಈ ಹಿಂದೆಯೂ ಇದು ಕಾನೂನಿನ ಭಾಗವಾಗಿರಲಿಲ್ಲ, ಹಾಗಾಗಿ ಈಗಲೂ ಇಲ್ಲ” ಎಂದು ಹೇಳಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ಆನ್‌ಲೈನ್ ಐಡಿಯಾ ಎಕ್ಸ್‌ಚೇಂಜ್ ಕಾರ್ಯಕ್ರಮದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ನರೇಂದ್ರ ಸಿಂಗ್ ತೋಮರ್, “MSP ಅಷ್ಟೊಂದು ಅಗತ್ಯವಾಗಿದ್ದರೆ, ನೀವು ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಅದನ್ನು ಕಾನೂನಿನ ಭಾಗವಾಗಿ ಏಕೆ ಸೇರಿಸಲಿಲ್ಲ? ಹಾಗಾಗಿ MSP ಮೇಲಿನ ವಿರೋಧ ಪಕ್ಷಗಳ ಬೇಡಿಕೆಯನ್ನು ಸರ್ಕಾರ ಒಪ್ಪುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ವಿರೋಧಿಸಿ ಗದ್ದಲ: ಅಧಿವೇಶನದಿಂದ 8 ಸಂಸದರ ಅಮಾನತು

ದೇಶದಾದ್ಯಂತ ರೈತರ ಪ್ರತಿಭಟನೆಯ ಹೊರತಾಗಿಯೂ ಕೇಂದ್ರ ಸರ್ಕಾರ ಮಾನ್ಸೂನ್ ಅಧಿವೇಶನದಲ್ಲಿ, 3 ಕೃಷಿ ಮಸೂದೆಗಳನ್ನು ಅಂಗೀಕರಿಸಿತು. ಎಪಿಎಂಸಿಯ ಮಂಡಿ ಪದ್ದತಿ ಕೊನೆಗೊಂಡರೆ ಬೆಂಬಲ ಬೆಲೆಯನ್ನು ರದ್ದುಗೊಳಿಸಿದಂತಾಗುತ್ತದೆ ಎಂದು ಪ್ರತಿಭಟನಾ ನಿರತ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ 2020 ಮತ್ತು ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದದ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಅನ್ನು ಲೋಕಸಭೆಯಲ್ಲಿ ಗುರುವಾರ (ಸೆ.17) ಅಂಗೀಕರಿಸಲಾಯಿತು. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆಯನ್ನು ಸೆಪ್ಟೆಂಬರ್ 13 ರಂದು ಅಂಗೀಕರಿಸಲಾಗಿದೆ.

ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

“ಮಸೂದೆಗಳ ಅಂಗೀಕಾರದ ನಂತರ, ಸರ್ಕಾರವು ಗೋಧಿ ಸೇರಿದಂತೆ ಆರು ರಬಿ ಬೆಳೆಗಳಿಗೆ ಬೆಂಬಲ ಬೆಲೆಯನ್ನು ಹೆಚ್ಚಿಸುವುದರೊಂದಿಗೆ, MSP ಆಧಾರಿತ ಖರೀದಿ ಮುಂದುವರಿಯುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ. ಆದ್ದರಿಂದ ಯಾರಾದರೂ ಏಕೆ ಚಿಂತಿಸಬೇಕು? ಈ ಮಸೂದೆಗಳಿಗೂ MSPಗೂ ಯಾವುದೇ ಸಂಬಂಧವಿಲ್ಲ. ಮಂಡಿಯ ಆವರಣದ ಹೊರಗಿನ ವ್ಯಾಪಾರದೊಂದಿಗೆ ಮಸೂದೆಗಳು ವ್ಯವಹರಿಸುತ್ತವೆ” ಎಂದು ತೋಮರ್ ಹೇಳಿದರು.

ಮಸೂದೆಗಳನ್ನು ಸಮರ್ಥಿಸಿಕೊಂಡ ತೋಮರ್, “ದೇಶದ ಹಿತದೃಷ್ಟಿಯಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಾದರೆ, ಮತಗಳನ್ನು ಲೆಕ್ಕಿಸದೆ ನಿರ್ಧಾರ ತೆಗೆದುಕೊಳ್ಳಲು ಮೋದಿ ಸರ್ಕಾರ ಬದ್ಧವಾಗಿದೆ. ಈ ಮಸೂದೆಗಳಿಂದ ಕೃಷಿ ಮತ್ತು ರೈತರಿಗೆ ಹೆಚ್ಚಿನ ಲಾಭ ಸಿಗಲಿದೆ ಎಂದು ನನಗೆ ಖಾತ್ರಿಯಿದೆ” ಎಂದು ಹೇಳಿದರು.


ಇದನ್ನೂ ಓದಿ: ರೈತ ವಿರೋಧಿ ಮಸೂದೆಗಳ ವಾಪಸಾತಿಗೆ ಆಗ್ರಹ: ಸೆ. 28 ರಂದು ’ಭಾರತ್ ಬಂದ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...