Homeಮುಖಪುಟತನ್ನ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಸಂಜೀವ್ ಭಟ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್

ತನ್ನ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಸಂಜೀವ್ ಭಟ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ತಮ್ಮ ವಿರುದ್ಧದ ದೂರುಗಳನ್ನು ರದ್ದುಗೊಳಿಸುವಂತೆ ಮಾಜಿ ಐಪಿಎಸ್ ಸಂಜೀವ್ ಭಟ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಪ್ರಕರಣಗಳನ್ನು ವಜಾಗೊಳಿಸಲು ಗುಜರಾತ್ ಹೈಕೋರ್ಟ್ ಈಗಾಗಲೇ ನಿರಾಕರಿಸಿದೆ ಮತ್ತು ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

2002ರ ಕೋಮುಗಲಭೆಗೆ ಸಂಬಂಧಿಸಿದಂತೆ ಅಮಾಯಕ ವ್ಯಕ್ತಿಗಳನ್ನು ಸಿಲುಕಿಸಲು ಸಂಚು ರೂಪಿಸಿದ ಆರೋಪ ಸಂಜೀವ್ ಭಟ್ ಮೇಲೆ ಹೊರಿಸಲಾಗಿದೆ. ಜೊತೆಗೆ ಅವರು ಮತ್ತು ಅವರ ಸಹೋದ್ಯೋಗಿಗಳು ಜನರನ್ನು ಅಕ್ರಮವಾಗಿ ಬಂಧಿಸಿ ಕಸ್ಟಡಿಯಲ್ಲಿಟ್ಟು ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಬಂಧಿತರಾಗಿ ಬಿಡುಗಡೆಯಾದ 133 ಜನರಲ್ಲಿ ಮೂವರು ಸಂಜೀವ್ ವಿರುದ್ಧ ದೂರು ದಾಖಲಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅರ್ಜಿದಾರರಾದ ಆರೋಪಿಗೆ ಸಮನ್ಸ್ ನೀಡಿದ ಮ್ಯಾಜಿಸ್ಟ್ರೇಟ್ ಆದೇಶ, ಹೈಕೋರ್ಟ್ ನೀಡಿದ ತೀರ್ಪು ಹಾಗೂ ಆದೇಶವನ್ನು ಪರಿಶೀಲಿಸಿದಾಗ, ಹೈಕೋರ್ಟ್‌ನ ತೀರ್ಪು ಮತ್ತು ಆದೇಶದಲ್ಲಿ ಮಧ್ಯಪ್ರವೇಶಿಸಲು ನಮಗೆ ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಇದನ್ನೂ ಓದಿ: ಮೋದಿ, ಅಮಿತ್ ಶಾ ಕುರಿತು ಕಟುಟೀಕೆಯೇ ಸಂಜೀವ್ ಭಟ್ ಜೀವಾವಧಿ ಶಿಕ್ಷೆಗೆ ಕಾರಣವೆ?

ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದರೆ ಅದು ಪೊಲೀಸ್ ಅಧಿಕಾರಿಗಳಿಗೆ ಕೆಟ್ಟ ನಿದರ್ಶನವನ್ನು ನೀಡುತ್ತದೆ ಎಂದು ಭಟ್ ಪರ ವಕೀಲರು ಹೇಳಿದ್ದಾರೆ.

ಸಂಜೀವ್‌ ಭಟ್ ವಿರುದ್ಧ ಗುಜರಾತ್ ಪೊಲೀಸರು ಸೆಕ್ಷನ್ 468 (ವಂಚನೆಯ ಉದ್ದೇಶಕ್ಕಾಗಿ ನಕಲಿ ಮಾಡುವುದು), 471 (ನಿಜವಾದ ದಾಖಲೆಗಳನ್ನು ದುರುಪಯೋಗಪಡಿಸುವುದು), 194 (ಮರಣದಂಡನೆ ಅಪರಾಧದ ಶಿಕ್ಷೆಯನ್ನು ನೀಡುವ ಉದ್ದೇಶದಿಂದ ಸುಳ್ಳು ಪುರಾವೆಗಳನ್ನು ಸೃಷ್ಟಿಸುವುದು) ಮತ್ತು 120 (ಬಿ) (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಾಜಿ ಐಪಿಎಸ್ ಆಗಿರುವ ಸಂಜೀವ್‌ ಭಟ್ ಅವರನ್ನು ಕಳೆದ ನಾಲ್ಕು ವರ್ಷಗಳಿಂದ ಬಂಧನದಲ್ಲಿ ಇಡಲಾಗಿದೆ. ಅವರ ವಿರುದ್ಧ ದಾಖಲಾಗಿದ್ದ ಮೂರು ದೂರುಗಳಲ್ಲಿ ಎರಡು ದೂರನ್ನು ಗುಜರಾತ್ ಹೈಕೋರ್ಟ್‌ ವಜಾಗೊಳಿಸಿತ್ತು.

ಇದನ್ನೂ ಓದಿ: ನಮ್ಮ ನಡುವೆ ರಾಜಿಯೆಲ್ಲಿ ಸಾಧ್ಯ? ಆರಂಭವಾಗಲಿ ಬಿಡಿ ಯುದ್ಧ…. – ಸಂಜೀವ್ ಭಟ್

ಆದರೆ, ಮೂರನೇ ದೂರನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿತ್ತು. ಪ್ರಕರಣವನ್ನು ಆಲಿಸಿದ ಸುಪ್ರೀಂಕೋರ್ಟ್‌ ಈ ವಿಷಯದಲ್ಲಿ ಮತ್ತು ಹೈಕೋರ್ಟ್‌ನ ಆದೇಶದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತ್ಯಾಚಾರ ಮತ್ತು ಕೊಲೆ ಮಾಡಿದವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ನಿರಪರಾದಿಗಳ ಸಹಾಯಕ್ಕೆ ಸುಪ್ರೀಂ ಕೋರ್ಟ್ ಸಹ ಬರುತ್ತಿಲ್ಲ, ಇದು ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...