Homeಮುಖಪುಟತನ್ನ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಸಂಜೀವ್ ಭಟ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್

ತನ್ನ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಸಂಜೀವ್ ಭಟ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ತಮ್ಮ ವಿರುದ್ಧದ ದೂರುಗಳನ್ನು ರದ್ದುಗೊಳಿಸುವಂತೆ ಮಾಜಿ ಐಪಿಎಸ್ ಸಂಜೀವ್ ಭಟ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಪ್ರಕರಣಗಳನ್ನು ವಜಾಗೊಳಿಸಲು ಗುಜರಾತ್ ಹೈಕೋರ್ಟ್ ಈಗಾಗಲೇ ನಿರಾಕರಿಸಿದೆ ಮತ್ತು ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

2002ರ ಕೋಮುಗಲಭೆಗೆ ಸಂಬಂಧಿಸಿದಂತೆ ಅಮಾಯಕ ವ್ಯಕ್ತಿಗಳನ್ನು ಸಿಲುಕಿಸಲು ಸಂಚು ರೂಪಿಸಿದ ಆರೋಪ ಸಂಜೀವ್ ಭಟ್ ಮೇಲೆ ಹೊರಿಸಲಾಗಿದೆ. ಜೊತೆಗೆ ಅವರು ಮತ್ತು ಅವರ ಸಹೋದ್ಯೋಗಿಗಳು ಜನರನ್ನು ಅಕ್ರಮವಾಗಿ ಬಂಧಿಸಿ ಕಸ್ಟಡಿಯಲ್ಲಿಟ್ಟು ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಬಂಧಿತರಾಗಿ ಬಿಡುಗಡೆಯಾದ 133 ಜನರಲ್ಲಿ ಮೂವರು ಸಂಜೀವ್ ವಿರುದ್ಧ ದೂರು ದಾಖಲಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅರ್ಜಿದಾರರಾದ ಆರೋಪಿಗೆ ಸಮನ್ಸ್ ನೀಡಿದ ಮ್ಯಾಜಿಸ್ಟ್ರೇಟ್ ಆದೇಶ, ಹೈಕೋರ್ಟ್ ನೀಡಿದ ತೀರ್ಪು ಹಾಗೂ ಆದೇಶವನ್ನು ಪರಿಶೀಲಿಸಿದಾಗ, ಹೈಕೋರ್ಟ್‌ನ ತೀರ್ಪು ಮತ್ತು ಆದೇಶದಲ್ಲಿ ಮಧ್ಯಪ್ರವೇಶಿಸಲು ನಮಗೆ ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಇದನ್ನೂ ಓದಿ: ಮೋದಿ, ಅಮಿತ್ ಶಾ ಕುರಿತು ಕಟುಟೀಕೆಯೇ ಸಂಜೀವ್ ಭಟ್ ಜೀವಾವಧಿ ಶಿಕ್ಷೆಗೆ ಕಾರಣವೆ?

ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದರೆ ಅದು ಪೊಲೀಸ್ ಅಧಿಕಾರಿಗಳಿಗೆ ಕೆಟ್ಟ ನಿದರ್ಶನವನ್ನು ನೀಡುತ್ತದೆ ಎಂದು ಭಟ್ ಪರ ವಕೀಲರು ಹೇಳಿದ್ದಾರೆ.

ಸಂಜೀವ್‌ ಭಟ್ ವಿರುದ್ಧ ಗುಜರಾತ್ ಪೊಲೀಸರು ಸೆಕ್ಷನ್ 468 (ವಂಚನೆಯ ಉದ್ದೇಶಕ್ಕಾಗಿ ನಕಲಿ ಮಾಡುವುದು), 471 (ನಿಜವಾದ ದಾಖಲೆಗಳನ್ನು ದುರುಪಯೋಗಪಡಿಸುವುದು), 194 (ಮರಣದಂಡನೆ ಅಪರಾಧದ ಶಿಕ್ಷೆಯನ್ನು ನೀಡುವ ಉದ್ದೇಶದಿಂದ ಸುಳ್ಳು ಪುರಾವೆಗಳನ್ನು ಸೃಷ್ಟಿಸುವುದು) ಮತ್ತು 120 (ಬಿ) (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಾಜಿ ಐಪಿಎಸ್ ಆಗಿರುವ ಸಂಜೀವ್‌ ಭಟ್ ಅವರನ್ನು ಕಳೆದ ನಾಲ್ಕು ವರ್ಷಗಳಿಂದ ಬಂಧನದಲ್ಲಿ ಇಡಲಾಗಿದೆ. ಅವರ ವಿರುದ್ಧ ದಾಖಲಾಗಿದ್ದ ಮೂರು ದೂರುಗಳಲ್ಲಿ ಎರಡು ದೂರನ್ನು ಗುಜರಾತ್ ಹೈಕೋರ್ಟ್‌ ವಜಾಗೊಳಿಸಿತ್ತು.

ಇದನ್ನೂ ಓದಿ: ನಮ್ಮ ನಡುವೆ ರಾಜಿಯೆಲ್ಲಿ ಸಾಧ್ಯ? ಆರಂಭವಾಗಲಿ ಬಿಡಿ ಯುದ್ಧ…. – ಸಂಜೀವ್ ಭಟ್

ಆದರೆ, ಮೂರನೇ ದೂರನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿತ್ತು. ಪ್ರಕರಣವನ್ನು ಆಲಿಸಿದ ಸುಪ್ರೀಂಕೋರ್ಟ್‌ ಈ ವಿಷಯದಲ್ಲಿ ಮತ್ತು ಹೈಕೋರ್ಟ್‌ನ ಆದೇಶದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತ್ಯಾಚಾರ ಮತ್ತು ಕೊಲೆ ಮಾಡಿದವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ನಿರಪರಾದಿಗಳ ಸಹಾಯಕ್ಕೆ ಸುಪ್ರೀಂ ಕೋರ್ಟ್ ಸಹ ಬರುತ್ತಿಲ್ಲ, ಇದು ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...