Homeಮುಖಪುಟಮೂವರು ಅತ್ಯಾಚಾರಿ, ಕೊಲೆಗಡುಕರನ್ನು ಬಿಡುಗಡೆ ಮಾಡಿದ ಸುಪ್ರೀಂಕೋರ್ಟ್

ಮೂವರು ಅತ್ಯಾಚಾರಿ, ಕೊಲೆಗಡುಕರನ್ನು ಬಿಡುಗಡೆ ಮಾಡಿದ ಸುಪ್ರೀಂಕೋರ್ಟ್

“ಬೇಟೆಗಾಗಿ ಬೀದಿಗಿಳಿಯುವ ಪರಭಕ್ಷಕರು” ಎಂದು ಈ ಅಪರಾಧಿಗಳನ್ನು ದೆಹಲಿ ಹೈಕೋರ್ಟ್ ಬಣ್ಣಿಸಿತ್ತು.

- Advertisement -
- Advertisement -

2012ರಲ್ಲಿ ನಿರ್ಭಯಾ ಪ್ರಕರಣ ಘಟಿಸುವ ಒಂದು ತಿಂಗಳ ಮೊದಲು ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಅಪರಾಧಿಗಳನ್ನು ಸುಪ್ರೀಂಕೋರ್ಟ್ ಬಿಡುಗಡೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿಯ 19 ವರ್ಷದ ಹೆಣ್ಣುಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕೊಂದ ಅಪರಾಧಿಗಳನ್ನು ಸುಪ್ರೀಂ ಕೋರ್ಟ್ ಬಿಡುಗಡೆಗೊಳಿಸುತ್ತಿದೆ. “ಬೇಟೆಗಾಗಿ ಬೀದಿಗಿಳಿಯುವ ಪರಭಕ್ಷಕರು” ಎಂದು ಈ ಅಪರಾಧಿಗಳನ್ನು ದೆಹಲಿ ಹೈಕೋರ್ಟ್ ಬಣ್ಣಿಸಿತ್ತು ಎಂದು ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿರೂಪಗೊಂಡ ಹಾಗೂ ಸುಟ್ಟ ಸ್ಥಿತಿಯಲ್ಲಿ ಯುವತಿಯ ದೇಹವು ಹರಿಯಾಣದ ರೇವಾರಿ ಜಿಲ್ಲೆಯ ಹೊಲವೊಂದರಲ್ಲಿ ಫೆಬ್ರವರಿ 2012ರಲ್ಲಿ ಪತ್ತೆಯಾಗಿತ್ತು. ಅಪಹರಿಸಿದ ದಿನಗಳ ಅನುಮಾನಾಸ್ಪದ ರೀತಿಯಲ್ಲಿ ಮೃತದೇಹ ಸಿಕ್ಕಿತ್ತು. ಕಾರಿನ ಉಪಕರಣಗಳು ಮತ್ತು ಮಣ್ಣಿನ ಮಡಕೆಗಳಿಂದ ಯುವತಿಗೆ ಹೊಡೆಯಲಾಗಿದೆ ಎಂಬುದನ್ನು ತೀವ್ರವಾದ ಗಾಯದ ಗುರುತುಗಳು ಸೂಚಿಸಿದ್ದವು.

ದೆಹಲಿಯ ನಜಾಫ್‌ಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ಯುವತಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಶವವನ್ನು ರೇವಾರಿ ಗದ್ದೆಯಲ್ಲಿ ಎಸೆಯಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಅಪಹರಣ, ಅತ್ಯಾಚಾರ ಮತ್ತು ಕೊಲೆ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ರವಿಕುಮಾರ್, ರಾಹುಲ್ ಮತ್ತು ವಿನೋದ್ ಎಂಬ ಅಪರಾಧಿಗಳಿಗೆ ದೆಹಲಿ ಹೈಕೋರ್ಟ್ ಫೆಬ್ರವರಿ 2014ರಲ್ಲಿ ಶಿಕ್ಷೆ ವಿಧಿಸಿತು. ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ನೀಡಲಾಗಿತ್ತು.

ಮರಣದಂಡನೆ ಶಿಕ್ಷೆಯನ್ನು ವಿಧಿಸಿದ ಕೋರ್ಟ್, “ಬೇಟೆಯನ್ನು ಹುಡುಕುತ್ತಾ ಬೀದಿಗಳಲ್ಲಿ ಚಲಿಸುವ ಪರಭಕ್ಷಕ ಅಪರಾಧಿಗಳಿವರು” ಎಂದು ಅಭಿಪ್ರಾಯಪಟ್ಟಿತ್ತು.

ಹೈಕೋರ್ಟ್ ತೀರ್ಪನ್ನು ಮೂವರು ಅಪರಾಧಿಗಳು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ತಮ್ಮ ಶಿಕ್ಷೆಯನ್ನು ಕಡಿಮೆ ಮಾಡಬೇಕೆಂದು ಕೋರಿದ್ದರು. ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್, ನ್ಯಾಯಮೂರ್ತಿಗಳಾದ ಎಸ್.ರವೀಂದ್ರ ಭಟ್ ಮತ್ತು ಬೇಲಾ ಎಂ.ತ್ರಿವೇದಿ ಅವರ ಪೀಠವು ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿತು. ಮೂವರನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ.

ಮರಣದಂಡನೆ ಶಿಕ್ಷೆಯನ್ನು ಕಡಿಮೆ ಮಾಡಬೇಕೆಂಬ ಕೋರಿಕೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ದೆಹಲಿ ಪೊಲೀಸರು ವಿರೋಧಿಸಿದ್ದರು. ಅಪರಾಧ ನಡೆದಿರುವುದು ಸಂತ್ರಸ್ತರ ವಿರುದ್ಧ ಮಾತ್ರವಲ್ಲ, ಸಮಾಜದ ವಿರುದ್ಧ ಎಂದು ಅವರು ಹೇಳಿದ್ದರು. ಅಪರಾಧದ ಹೇಯ ಸ್ವರೂಪವನ್ನು ಪೊಲೀಸರು ಉಲ್ಲೇಖಿಸಿದ್ದರು. ಅಪರಾಧಿಗಳಿಗೆ ಯಾವುದೇ ರಿಯಾಯಿತಿಯನ್ನು ನೀಡಬಾರದೆಂದು ಮನವಿ ಮಾಡಿದ್ದರು.

ಅಪರಾಧಿಗಳ ಪರವಾಗಿ ವಾದಿಸಿದ ವಕೀಲರು, “ಅಪರಾಧಿಗಳ ವಯಸ್ಸು, ಕುಟುಂಬದ ಹಿನ್ನೆಲೆ ಮತ್ತು ಹಿಂದಿನ ಕ್ರಿಮಿನಲ್ ದಾಖಲೆಯನ್ನು ಉಲ್ಲೇಖಿಸಿ ಶಿಕ್ಷೆಯನ್ನು ಕಡಿತಗೊಳಿಸಬೇಕು” ಎಂದು ಒತ್ತಾಯಿಸಿದ್ದರು.

ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಯುವತಿಯ ಪೋಷಕರು ಪ್ರತಿಕ್ರಿಯೆ ನೀಡಿದ್ದು, “ತೀರ್ಪಿನಿಂದಾಗಿ ಘಾಸಿಯಾಗಿದ್ದೇವೆ. ಆದರೆ ನಮ್ಮ ಕಾನೂನು ಹೋರಾಟವನ್ನು ಮುಂದುವರೆಸುತ್ತೇವೆ” ಎಂದು ತಿಳಿಸಿದ್ದಾರೆ. “ನಾವು ನ್ಯಾಯಕ್ಕಾಗಿ ಇಲ್ಲಿಗೆ ಬಂದಿದ್ದೇವೆ. ಇದು ಕುರುಡು ನ್ಯಾಯ ವ್ಯವಸ್ಥೆ” ಎಂದು ನೊಂದು ನುಡಿದಿದ್ದಾರೆ.

ನ್ಯಾಯಕ್ಕಾಗಿ ತಮ್ಮ 12 ವರ್ಷಗಳ ಹೋರಾಟವನ್ನು ಪ್ರಸ್ತಾಪಿಸಿದ ಅವರು, ಅಪರಾಧಿಗಳು ನ್ಯಾಯಾಲಯದ ಒಳಗೆಯೂ ಬೆದರಿಕೆ ಹಾಕುತ್ತಾರೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣ ನಡೆದ ನಂತರ ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣ ದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಚಲಿಸುವ ಬಸ್‌ನಲ್ಲಿ 23 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ದೇಶದ್ಯಾಂತ ಬೃಹತ್ ಪ್ರತಿಭಟನೆಗಳು ನಡೆದವು. ಲೈಂಗಿಕ ದೌರ್ಜನ್ಯದ ಮೇಲೆ ಕಠಿಣ ಕಾನೂನು ರೂಪಿಸಲು ಈ ಹೋರಾಟ ಕಾರಣವಾಗಿತ್ತು.

ಇದನ್ನೂ ಓದಿರಿ: 10% ಮೀಸಲಾತಿಗೆ ಒಪ್ಪಿದ ಸುಪ್ರಿಂಕೋರ್ಟ್‌: ಟ್ವಿಟರ್‌‌ನಲ್ಲಿ ‘ಬ್ಯಾನ್‌ ಇಡಬ್ಲ್ಯೂಎಸ್‌’ ಟ್ರೆಂಡ್

ಅತ್ಯಾಚಾರಿಗಳಿಗೆ ಬಿಡುಗಡೆ ನೀಡುತ್ತಿರುವ ಬೆಳವಣಿಗೆಗಳು ಇತ್ತೀಚಿನ ದಿನಗಳಲ್ಲಿ ತಲೆದೋರಿದ್ದು, ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿದ್ದು ಟೀಕೆಗೆ ಗುರಿಯಾಗಿದೆ.

ಗೋಧ್ರಾ ನಂತರದ ಗಲಭೆಗಳ ಸಂದರ್ಭದಲ್ಲಿ ದಹೋದ್ ಜಿಲ್ಲೆಯ ಲಿಮ್ಖೇಡಾ ತಾಲೂಕಿನಲ್ಲಿ ಮಾರ್ಚ್ 3, 2002 ರಂದು ಜನಸಮೂಹದಿಂದ ಹತ್ಯೆಗೀಡಾದ 14 ಮಂದಿಯಲ್ಲಿ ಬಿಲ್ಕಿಸ್ ಅವರ ಮೂರು ವರ್ಷದ ಮಗಳು ಸಲೇಹಳೂ ಸೇರಿದ್ದರು. ಆ ಸಮಯದಲ್ಲಿ ಬಿಲ್ಕಿಸ್ ಗರ್ಭಿಣಿಯಾಗಿದ್ದರು. ಬಿಲ್ಕಿಸ್ ಅವರ ಮೇಲೆ ಅತ್ಯಾಚಾರ ಎಸಗಲಾಗಿತ್ತು.

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಇತ್ತೀಚೆಗೆ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...