Homeಮುಖಪುಟಮೂವರು ಅತ್ಯಾಚಾರಿ, ಕೊಲೆಗಡುಕರನ್ನು ಬಿಡುಗಡೆ ಮಾಡಿದ ಸುಪ್ರೀಂಕೋರ್ಟ್

ಮೂವರು ಅತ್ಯಾಚಾರಿ, ಕೊಲೆಗಡುಕರನ್ನು ಬಿಡುಗಡೆ ಮಾಡಿದ ಸುಪ್ರೀಂಕೋರ್ಟ್

“ಬೇಟೆಗಾಗಿ ಬೀದಿಗಿಳಿಯುವ ಪರಭಕ್ಷಕರು” ಎಂದು ಈ ಅಪರಾಧಿಗಳನ್ನು ದೆಹಲಿ ಹೈಕೋರ್ಟ್ ಬಣ್ಣಿಸಿತ್ತು.

- Advertisement -
- Advertisement -

2012ರಲ್ಲಿ ನಿರ್ಭಯಾ ಪ್ರಕರಣ ಘಟಿಸುವ ಒಂದು ತಿಂಗಳ ಮೊದಲು ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಅಪರಾಧಿಗಳನ್ನು ಸುಪ್ರೀಂಕೋರ್ಟ್ ಬಿಡುಗಡೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿಯ 19 ವರ್ಷದ ಹೆಣ್ಣುಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕೊಂದ ಅಪರಾಧಿಗಳನ್ನು ಸುಪ್ರೀಂ ಕೋರ್ಟ್ ಬಿಡುಗಡೆಗೊಳಿಸುತ್ತಿದೆ. “ಬೇಟೆಗಾಗಿ ಬೀದಿಗಿಳಿಯುವ ಪರಭಕ್ಷಕರು” ಎಂದು ಈ ಅಪರಾಧಿಗಳನ್ನು ದೆಹಲಿ ಹೈಕೋರ್ಟ್ ಬಣ್ಣಿಸಿತ್ತು ಎಂದು ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿರೂಪಗೊಂಡ ಹಾಗೂ ಸುಟ್ಟ ಸ್ಥಿತಿಯಲ್ಲಿ ಯುವತಿಯ ದೇಹವು ಹರಿಯಾಣದ ರೇವಾರಿ ಜಿಲ್ಲೆಯ ಹೊಲವೊಂದರಲ್ಲಿ ಫೆಬ್ರವರಿ 2012ರಲ್ಲಿ ಪತ್ತೆಯಾಗಿತ್ತು. ಅಪಹರಿಸಿದ ದಿನಗಳ ಅನುಮಾನಾಸ್ಪದ ರೀತಿಯಲ್ಲಿ ಮೃತದೇಹ ಸಿಕ್ಕಿತ್ತು. ಕಾರಿನ ಉಪಕರಣಗಳು ಮತ್ತು ಮಣ್ಣಿನ ಮಡಕೆಗಳಿಂದ ಯುವತಿಗೆ ಹೊಡೆಯಲಾಗಿದೆ ಎಂಬುದನ್ನು ತೀವ್ರವಾದ ಗಾಯದ ಗುರುತುಗಳು ಸೂಚಿಸಿದ್ದವು.

ದೆಹಲಿಯ ನಜಾಫ್‌ಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ಯುವತಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಶವವನ್ನು ರೇವಾರಿ ಗದ್ದೆಯಲ್ಲಿ ಎಸೆಯಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಅಪಹರಣ, ಅತ್ಯಾಚಾರ ಮತ್ತು ಕೊಲೆ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ರವಿಕುಮಾರ್, ರಾಹುಲ್ ಮತ್ತು ವಿನೋದ್ ಎಂಬ ಅಪರಾಧಿಗಳಿಗೆ ದೆಹಲಿ ಹೈಕೋರ್ಟ್ ಫೆಬ್ರವರಿ 2014ರಲ್ಲಿ ಶಿಕ್ಷೆ ವಿಧಿಸಿತು. ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ನೀಡಲಾಗಿತ್ತು.

ಮರಣದಂಡನೆ ಶಿಕ್ಷೆಯನ್ನು ವಿಧಿಸಿದ ಕೋರ್ಟ್, “ಬೇಟೆಯನ್ನು ಹುಡುಕುತ್ತಾ ಬೀದಿಗಳಲ್ಲಿ ಚಲಿಸುವ ಪರಭಕ್ಷಕ ಅಪರಾಧಿಗಳಿವರು” ಎಂದು ಅಭಿಪ್ರಾಯಪಟ್ಟಿತ್ತು.

ಹೈಕೋರ್ಟ್ ತೀರ್ಪನ್ನು ಮೂವರು ಅಪರಾಧಿಗಳು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ತಮ್ಮ ಶಿಕ್ಷೆಯನ್ನು ಕಡಿಮೆ ಮಾಡಬೇಕೆಂದು ಕೋರಿದ್ದರು. ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್, ನ್ಯಾಯಮೂರ್ತಿಗಳಾದ ಎಸ್.ರವೀಂದ್ರ ಭಟ್ ಮತ್ತು ಬೇಲಾ ಎಂ.ತ್ರಿವೇದಿ ಅವರ ಪೀಠವು ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿತು. ಮೂವರನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ.

ಮರಣದಂಡನೆ ಶಿಕ್ಷೆಯನ್ನು ಕಡಿಮೆ ಮಾಡಬೇಕೆಂಬ ಕೋರಿಕೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ದೆಹಲಿ ಪೊಲೀಸರು ವಿರೋಧಿಸಿದ್ದರು. ಅಪರಾಧ ನಡೆದಿರುವುದು ಸಂತ್ರಸ್ತರ ವಿರುದ್ಧ ಮಾತ್ರವಲ್ಲ, ಸಮಾಜದ ವಿರುದ್ಧ ಎಂದು ಅವರು ಹೇಳಿದ್ದರು. ಅಪರಾಧದ ಹೇಯ ಸ್ವರೂಪವನ್ನು ಪೊಲೀಸರು ಉಲ್ಲೇಖಿಸಿದ್ದರು. ಅಪರಾಧಿಗಳಿಗೆ ಯಾವುದೇ ರಿಯಾಯಿತಿಯನ್ನು ನೀಡಬಾರದೆಂದು ಮನವಿ ಮಾಡಿದ್ದರು.

ಅಪರಾಧಿಗಳ ಪರವಾಗಿ ವಾದಿಸಿದ ವಕೀಲರು, “ಅಪರಾಧಿಗಳ ವಯಸ್ಸು, ಕುಟುಂಬದ ಹಿನ್ನೆಲೆ ಮತ್ತು ಹಿಂದಿನ ಕ್ರಿಮಿನಲ್ ದಾಖಲೆಯನ್ನು ಉಲ್ಲೇಖಿಸಿ ಶಿಕ್ಷೆಯನ್ನು ಕಡಿತಗೊಳಿಸಬೇಕು” ಎಂದು ಒತ್ತಾಯಿಸಿದ್ದರು.

ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಯುವತಿಯ ಪೋಷಕರು ಪ್ರತಿಕ್ರಿಯೆ ನೀಡಿದ್ದು, “ತೀರ್ಪಿನಿಂದಾಗಿ ಘಾಸಿಯಾಗಿದ್ದೇವೆ. ಆದರೆ ನಮ್ಮ ಕಾನೂನು ಹೋರಾಟವನ್ನು ಮುಂದುವರೆಸುತ್ತೇವೆ” ಎಂದು ತಿಳಿಸಿದ್ದಾರೆ. “ನಾವು ನ್ಯಾಯಕ್ಕಾಗಿ ಇಲ್ಲಿಗೆ ಬಂದಿದ್ದೇವೆ. ಇದು ಕುರುಡು ನ್ಯಾಯ ವ್ಯವಸ್ಥೆ” ಎಂದು ನೊಂದು ನುಡಿದಿದ್ದಾರೆ.

ನ್ಯಾಯಕ್ಕಾಗಿ ತಮ್ಮ 12 ವರ್ಷಗಳ ಹೋರಾಟವನ್ನು ಪ್ರಸ್ತಾಪಿಸಿದ ಅವರು, ಅಪರಾಧಿಗಳು ನ್ಯಾಯಾಲಯದ ಒಳಗೆಯೂ ಬೆದರಿಕೆ ಹಾಕುತ್ತಾರೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣ ನಡೆದ ನಂತರ ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣ ದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಚಲಿಸುವ ಬಸ್‌ನಲ್ಲಿ 23 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ದೇಶದ್ಯಾಂತ ಬೃಹತ್ ಪ್ರತಿಭಟನೆಗಳು ನಡೆದವು. ಲೈಂಗಿಕ ದೌರ್ಜನ್ಯದ ಮೇಲೆ ಕಠಿಣ ಕಾನೂನು ರೂಪಿಸಲು ಈ ಹೋರಾಟ ಕಾರಣವಾಗಿತ್ತು.

ಇದನ್ನೂ ಓದಿರಿ: 10% ಮೀಸಲಾತಿಗೆ ಒಪ್ಪಿದ ಸುಪ್ರಿಂಕೋರ್ಟ್‌: ಟ್ವಿಟರ್‌‌ನಲ್ಲಿ ‘ಬ್ಯಾನ್‌ ಇಡಬ್ಲ್ಯೂಎಸ್‌’ ಟ್ರೆಂಡ್

ಅತ್ಯಾಚಾರಿಗಳಿಗೆ ಬಿಡುಗಡೆ ನೀಡುತ್ತಿರುವ ಬೆಳವಣಿಗೆಗಳು ಇತ್ತೀಚಿನ ದಿನಗಳಲ್ಲಿ ತಲೆದೋರಿದ್ದು, ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿದ್ದು ಟೀಕೆಗೆ ಗುರಿಯಾಗಿದೆ.

ಗೋಧ್ರಾ ನಂತರದ ಗಲಭೆಗಳ ಸಂದರ್ಭದಲ್ಲಿ ದಹೋದ್ ಜಿಲ್ಲೆಯ ಲಿಮ್ಖೇಡಾ ತಾಲೂಕಿನಲ್ಲಿ ಮಾರ್ಚ್ 3, 2002 ರಂದು ಜನಸಮೂಹದಿಂದ ಹತ್ಯೆಗೀಡಾದ 14 ಮಂದಿಯಲ್ಲಿ ಬಿಲ್ಕಿಸ್ ಅವರ ಮೂರು ವರ್ಷದ ಮಗಳು ಸಲೇಹಳೂ ಸೇರಿದ್ದರು. ಆ ಸಮಯದಲ್ಲಿ ಬಿಲ್ಕಿಸ್ ಗರ್ಭಿಣಿಯಾಗಿದ್ದರು. ಬಿಲ್ಕಿಸ್ ಅವರ ಮೇಲೆ ಅತ್ಯಾಚಾರ ಎಸಗಲಾಗಿತ್ತು.

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಇತ್ತೀಚೆಗೆ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...