Homeಮುಖಪುಟಪ್ರಶಾಂತ್ ಭೂಷಣ್ ಟ್ವೀಟ್‌ಗಳ ವಿರುದ್ಧದ ವಿಚಾರಣೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್

ಪ್ರಶಾಂತ್ ಭೂಷಣ್ ಟ್ವೀಟ್‌ಗಳ ವಿರುದ್ಧದ ವಿಚಾರಣೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್

ಟ್ವಿಟರ್ ಸಾಮಾಜಿಕ ಮಾಧ್ಯಮ ವೇದಿಕೆಯಾಗಿರುವುದರಿಂದ ಭೂಷಣ್ ಅವರ ಅವಹೇಳನಕಾರಿ ಕಾಮೆಂಟ್ಗಳನ್ನು ಪೋಸ್ಟ್ ಮಾಡಿದ್ದರಿಂದ ಟ್ವಿಟರ್ ಇಂಡಿಯಾ ವಿರುದ್ಧ ಸಹ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪ್ರಾರಂಭಿಸಿದೆ.

- Advertisement -
- Advertisement -

ನ್ಯಾಯಾಂಗಕ್ಕೆ ಅವಹೇಳನಕಾರಿ ಎಂದು ಪರಿಗಣಿಸಿ ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರ ಅನಿರ್ದಿಷ್ಟ ಟ್ವೀಟ್‌ಗಳಿಗಾಗಿ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪ್ರಾರಂಭಿಸಿದೆ.

ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಪ್ರಷಾಂತ್ ಭೂಷಣ್ ಅವಹೇಳನಕಾರಿ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದರಿಂದ ಟ್ವಿಟರ್ ಇಂಡಿಯಾ ವಿರುದ್ಧ ಸಹ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪ್ರಾರಂಭಿಸಿದೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ವಿಷಯವನ್ನು ಬುಧವಾರ ವಿಚಾರಣೆ ನಡೆಸಲಿದೆ.

ಪ್ರಶಾಂತ್ ಭೂಷಣ್ ನ್ಯಾಯಾಂಗಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಬಹಳ ಹಿಂದಿನಿಂದಲೂ ಧ್ವನಿ ಎತ್ತುತ್ತಿದ್ದಾರೆ. ಇತ್ತೀಚೆಗೆ ಕೊರೊನಾ ಸಾಂಕ್ರಾಮಿಕದ ಮಧ್ಯೆ ವಲಸೆ ಕಾರ್ಮಿಕರಿಗೆ ಸಂಬಂಧಿಸಿದ ವಿಷಯಗಳನ್ನು ಸರ್ವೋಚ್ಚ ನ್ಯಾಯಾಲಯವು ನಿಭಾಯಿಸಿದ ರೀತಿಯ ಬಗ್ಗೆ ವಿರೋಧ ವ್ಯಕ್ತಪಡಿಸಿ ಧ್ವನಿ ಎತ್ತಿದ್ದರು.

ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಗಳಾದ ವರವಾರ ರಾವ್ ಮತ್ತು ಸುಧಾ ಭಾರದ್ವಾಜ್ ಅವರಿಗೆ ಚಿಕಿತ್ಸೆ ನೀಡುವುದಕ್ಕೆ ಸಂಬಂಧಿಸಿದ ಹೇಳಿಕೆಗಳನ್ನು ಸಹ ಅವರು ನೀಡಿದ್ದರು.

ಕಳೆದ ಒಂದು ದಶಕದಲ್ಲಿ, 2 ಜಿ ಹಗರಣದಿಂದ ಹಿಡಿದು, ರಫೇಲ್, ವೈದ್ಯಕೀಯ ಕಾಲೇಜು ಹಗರಣ ಮತ್ತು ಬಿರ್ಲಾ-ಸಹಾರಾ ಡೈರಿಗಳವರೆಗೆ ಉನ್ನತ ವ್ಯಕ್ತಿಗಳ ಭ್ರಷ್ಟಾಚಾರದ ಕುರಿತು ಹಲವಾರು ಸಮಸ್ಯೆಗಳನ್ನು ಎತ್ತಿತೋರಿಸಿ ಪ್ರಶ್ನಿಸುವಲ್ಲಿ ಪ್ರಶಾಂತ್ ಭೂಷಣ್ ಪ್ರಮುಖ ಪಾತ್ರ ವಹಿಸಿದ್ದರು.

ಆದರೆ ಈಗ ಭೂಷಣ್ ಅವರ ಯಾವ ಟ್ವೀಟ್‌ಗಳ ಕುರಿತು ವಿಚಾರಣೆಯನ್ನು ಪ್ರಾರಂಭಿಸಿದೆ ಎಂಬುದು ಸ್ಪಷ್ಟವಾಗಿಲ್ಲ.

ಮುಖ್ಯ ನ್ಯಾಯಮೂರ್ತಿಗಳಾಗಿರುವ ಎಸ್. ಎ. ಬಾಬ್ಡೆ, ರಂಜನ್ ಗೊಗೊಯ್, ದೀಪಕ್ ಮಿಶ್ರಾ ಮತ್ತು ಜೆ. ಎಸ್. ಖೇಹರ್ ಸೇರಿ ದೇಶದಲ್ಲಿ ಅಘೋಷಿತ ತುರ್ತುಸ್ಥಿತಿ ಇದೆ ಪ್ರಜಾಪ್ರಭುತ್ವ ನಾಶದಲ್ಲಿದೆ ಎಂದು ಹೇಳಿದ್ದರ ಕುರಿತು, ಸುಪ್ರೀಂ ಕೋರ್ಟ್ ಪಾತ್ರವನ್ನು ಟೀಕಿಸಿ ಭೂಷಣ್ ಅವರು ಟ್ವೀಟ್ ಮಾಡಿದ್ದರು.

ಮುಖ್ಯನ್ಯಾಯಮೂರ್ತಿ ಹೆಲ್ಮೆಟ್ ಮತ್ತು ಮಾಸ್ಕ್ ಇಲ್ಲದೇ ಬಿಜೆಪಿ ನಾಯಕರೊಬ್ಬರ ಹಾಡ್ಲಿ ಡೇವಿಡ್ಸನ್ ಗಾಡಿಯಲ್ಲಿ ಕುಳಿತಿದ್ದಾರೆ ಎಂದು ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದರು.

ಆದಾಗ್ಯೂ, ಹೆಚ್ಚಿನ ಕಾನೂನು ತಜ್ಞರು ಈ ಟ್ವೀಟ್‌ಗಳು ಪದಗಳನ್ನು ಔಪಚಾರಿಕವಾಗಿ ಅರ್ಥೈಸಿಕೊಳ್ಳುವುದರಿಂದ ನ್ಯಾಯಾಲಯದ ನಿಂದನೆಗೆ ಕಾರಣವಾಗುವುದಿಲ್ಲ ಎಂದಿದ್ದಾರೆ.

ಗೌತಮ್ ಭಾಟಿಯಾ ಹೀಗೆ ಟ್ವೀಟ್ ಮಾಡಿದ್ದಾರೆ;


ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮುಗಿಸಿ ಹಾಕಿ ಫ್ಯಾಸಿಸಂ ತರಲಾಗಿದೆ : ಪ್ರಶಾಂತ್ ಭೂಷಣ್ ಭಾಷಣದ ಬರಹ ರೂಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...