Homeಮುಖಪುಟಪ್ರಶಾಂತ್ ಭೂಷಣ್ ಟ್ವೀಟ್‌ಗಳ ವಿರುದ್ಧದ ವಿಚಾರಣೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್

ಪ್ರಶಾಂತ್ ಭೂಷಣ್ ಟ್ವೀಟ್‌ಗಳ ವಿರುದ್ಧದ ವಿಚಾರಣೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್

ಟ್ವಿಟರ್ ಸಾಮಾಜಿಕ ಮಾಧ್ಯಮ ವೇದಿಕೆಯಾಗಿರುವುದರಿಂದ ಭೂಷಣ್ ಅವರ ಅವಹೇಳನಕಾರಿ ಕಾಮೆಂಟ್ಗಳನ್ನು ಪೋಸ್ಟ್ ಮಾಡಿದ್ದರಿಂದ ಟ್ವಿಟರ್ ಇಂಡಿಯಾ ವಿರುದ್ಧ ಸಹ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪ್ರಾರಂಭಿಸಿದೆ.

- Advertisement -
- Advertisement -

ನ್ಯಾಯಾಂಗಕ್ಕೆ ಅವಹೇಳನಕಾರಿ ಎಂದು ಪರಿಗಣಿಸಿ ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರ ಅನಿರ್ದಿಷ್ಟ ಟ್ವೀಟ್‌ಗಳಿಗಾಗಿ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪ್ರಾರಂಭಿಸಿದೆ.

ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಪ್ರಷಾಂತ್ ಭೂಷಣ್ ಅವಹೇಳನಕಾರಿ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದರಿಂದ ಟ್ವಿಟರ್ ಇಂಡಿಯಾ ವಿರುದ್ಧ ಸಹ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪ್ರಾರಂಭಿಸಿದೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ವಿಷಯವನ್ನು ಬುಧವಾರ ವಿಚಾರಣೆ ನಡೆಸಲಿದೆ.

ಪ್ರಶಾಂತ್ ಭೂಷಣ್ ನ್ಯಾಯಾಂಗಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಬಹಳ ಹಿಂದಿನಿಂದಲೂ ಧ್ವನಿ ಎತ್ತುತ್ತಿದ್ದಾರೆ. ಇತ್ತೀಚೆಗೆ ಕೊರೊನಾ ಸಾಂಕ್ರಾಮಿಕದ ಮಧ್ಯೆ ವಲಸೆ ಕಾರ್ಮಿಕರಿಗೆ ಸಂಬಂಧಿಸಿದ ವಿಷಯಗಳನ್ನು ಸರ್ವೋಚ್ಚ ನ್ಯಾಯಾಲಯವು ನಿಭಾಯಿಸಿದ ರೀತಿಯ ಬಗ್ಗೆ ವಿರೋಧ ವ್ಯಕ್ತಪಡಿಸಿ ಧ್ವನಿ ಎತ್ತಿದ್ದರು.

ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಗಳಾದ ವರವಾರ ರಾವ್ ಮತ್ತು ಸುಧಾ ಭಾರದ್ವಾಜ್ ಅವರಿಗೆ ಚಿಕಿತ್ಸೆ ನೀಡುವುದಕ್ಕೆ ಸಂಬಂಧಿಸಿದ ಹೇಳಿಕೆಗಳನ್ನು ಸಹ ಅವರು ನೀಡಿದ್ದರು.

ಕಳೆದ ಒಂದು ದಶಕದಲ್ಲಿ, 2 ಜಿ ಹಗರಣದಿಂದ ಹಿಡಿದು, ರಫೇಲ್, ವೈದ್ಯಕೀಯ ಕಾಲೇಜು ಹಗರಣ ಮತ್ತು ಬಿರ್ಲಾ-ಸಹಾರಾ ಡೈರಿಗಳವರೆಗೆ ಉನ್ನತ ವ್ಯಕ್ತಿಗಳ ಭ್ರಷ್ಟಾಚಾರದ ಕುರಿತು ಹಲವಾರು ಸಮಸ್ಯೆಗಳನ್ನು ಎತ್ತಿತೋರಿಸಿ ಪ್ರಶ್ನಿಸುವಲ್ಲಿ ಪ್ರಶಾಂತ್ ಭೂಷಣ್ ಪ್ರಮುಖ ಪಾತ್ರ ವಹಿಸಿದ್ದರು.

ಆದರೆ ಈಗ ಭೂಷಣ್ ಅವರ ಯಾವ ಟ್ವೀಟ್‌ಗಳ ಕುರಿತು ವಿಚಾರಣೆಯನ್ನು ಪ್ರಾರಂಭಿಸಿದೆ ಎಂಬುದು ಸ್ಪಷ್ಟವಾಗಿಲ್ಲ.

ಮುಖ್ಯ ನ್ಯಾಯಮೂರ್ತಿಗಳಾಗಿರುವ ಎಸ್. ಎ. ಬಾಬ್ಡೆ, ರಂಜನ್ ಗೊಗೊಯ್, ದೀಪಕ್ ಮಿಶ್ರಾ ಮತ್ತು ಜೆ. ಎಸ್. ಖೇಹರ್ ಸೇರಿ ದೇಶದಲ್ಲಿ ಅಘೋಷಿತ ತುರ್ತುಸ್ಥಿತಿ ಇದೆ ಪ್ರಜಾಪ್ರಭುತ್ವ ನಾಶದಲ್ಲಿದೆ ಎಂದು ಹೇಳಿದ್ದರ ಕುರಿತು, ಸುಪ್ರೀಂ ಕೋರ್ಟ್ ಪಾತ್ರವನ್ನು ಟೀಕಿಸಿ ಭೂಷಣ್ ಅವರು ಟ್ವೀಟ್ ಮಾಡಿದ್ದರು.

ಮುಖ್ಯನ್ಯಾಯಮೂರ್ತಿ ಹೆಲ್ಮೆಟ್ ಮತ್ತು ಮಾಸ್ಕ್ ಇಲ್ಲದೇ ಬಿಜೆಪಿ ನಾಯಕರೊಬ್ಬರ ಹಾಡ್ಲಿ ಡೇವಿಡ್ಸನ್ ಗಾಡಿಯಲ್ಲಿ ಕುಳಿತಿದ್ದಾರೆ ಎಂದು ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದರು.

ಆದಾಗ್ಯೂ, ಹೆಚ್ಚಿನ ಕಾನೂನು ತಜ್ಞರು ಈ ಟ್ವೀಟ್‌ಗಳು ಪದಗಳನ್ನು ಔಪಚಾರಿಕವಾಗಿ ಅರ್ಥೈಸಿಕೊಳ್ಳುವುದರಿಂದ ನ್ಯಾಯಾಲಯದ ನಿಂದನೆಗೆ ಕಾರಣವಾಗುವುದಿಲ್ಲ ಎಂದಿದ್ದಾರೆ.

ಗೌತಮ್ ಭಾಟಿಯಾ ಹೀಗೆ ಟ್ವೀಟ್ ಮಾಡಿದ್ದಾರೆ;


ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮುಗಿಸಿ ಹಾಕಿ ಫ್ಯಾಸಿಸಂ ತರಲಾಗಿದೆ : ಪ್ರಶಾಂತ್ ಭೂಷಣ್ ಭಾಷಣದ ಬರಹ ರೂಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...