Homeಮುಖಪುಟಪ್ರಶಾಂತ್ ಭೂಷಣ್ ಟ್ವೀಟ್‌ಗಳ ವಿರುದ್ಧದ ವಿಚಾರಣೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್

ಪ್ರಶಾಂತ್ ಭೂಷಣ್ ಟ್ವೀಟ್‌ಗಳ ವಿರುದ್ಧದ ವಿಚಾರಣೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್

ಟ್ವಿಟರ್ ಸಾಮಾಜಿಕ ಮಾಧ್ಯಮ ವೇದಿಕೆಯಾಗಿರುವುದರಿಂದ ಭೂಷಣ್ ಅವರ ಅವಹೇಳನಕಾರಿ ಕಾಮೆಂಟ್ಗಳನ್ನು ಪೋಸ್ಟ್ ಮಾಡಿದ್ದರಿಂದ ಟ್ವಿಟರ್ ಇಂಡಿಯಾ ವಿರುದ್ಧ ಸಹ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪ್ರಾರಂಭಿಸಿದೆ.

- Advertisement -
- Advertisement -

ನ್ಯಾಯಾಂಗಕ್ಕೆ ಅವಹೇಳನಕಾರಿ ಎಂದು ಪರಿಗಣಿಸಿ ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರ ಅನಿರ್ದಿಷ್ಟ ಟ್ವೀಟ್‌ಗಳಿಗಾಗಿ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪ್ರಾರಂಭಿಸಿದೆ.

ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಪ್ರಷಾಂತ್ ಭೂಷಣ್ ಅವಹೇಳನಕಾರಿ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದರಿಂದ ಟ್ವಿಟರ್ ಇಂಡಿಯಾ ವಿರುದ್ಧ ಸಹ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪ್ರಾರಂಭಿಸಿದೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ವಿಷಯವನ್ನು ಬುಧವಾರ ವಿಚಾರಣೆ ನಡೆಸಲಿದೆ.

ಪ್ರಶಾಂತ್ ಭೂಷಣ್ ನ್ಯಾಯಾಂಗಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಬಹಳ ಹಿಂದಿನಿಂದಲೂ ಧ್ವನಿ ಎತ್ತುತ್ತಿದ್ದಾರೆ. ಇತ್ತೀಚೆಗೆ ಕೊರೊನಾ ಸಾಂಕ್ರಾಮಿಕದ ಮಧ್ಯೆ ವಲಸೆ ಕಾರ್ಮಿಕರಿಗೆ ಸಂಬಂಧಿಸಿದ ವಿಷಯಗಳನ್ನು ಸರ್ವೋಚ್ಚ ನ್ಯಾಯಾಲಯವು ನಿಭಾಯಿಸಿದ ರೀತಿಯ ಬಗ್ಗೆ ವಿರೋಧ ವ್ಯಕ್ತಪಡಿಸಿ ಧ್ವನಿ ಎತ್ತಿದ್ದರು.

ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಗಳಾದ ವರವಾರ ರಾವ್ ಮತ್ತು ಸುಧಾ ಭಾರದ್ವಾಜ್ ಅವರಿಗೆ ಚಿಕಿತ್ಸೆ ನೀಡುವುದಕ್ಕೆ ಸಂಬಂಧಿಸಿದ ಹೇಳಿಕೆಗಳನ್ನು ಸಹ ಅವರು ನೀಡಿದ್ದರು.

ಕಳೆದ ಒಂದು ದಶಕದಲ್ಲಿ, 2 ಜಿ ಹಗರಣದಿಂದ ಹಿಡಿದು, ರಫೇಲ್, ವೈದ್ಯಕೀಯ ಕಾಲೇಜು ಹಗರಣ ಮತ್ತು ಬಿರ್ಲಾ-ಸಹಾರಾ ಡೈರಿಗಳವರೆಗೆ ಉನ್ನತ ವ್ಯಕ್ತಿಗಳ ಭ್ರಷ್ಟಾಚಾರದ ಕುರಿತು ಹಲವಾರು ಸಮಸ್ಯೆಗಳನ್ನು ಎತ್ತಿತೋರಿಸಿ ಪ್ರಶ್ನಿಸುವಲ್ಲಿ ಪ್ರಶಾಂತ್ ಭೂಷಣ್ ಪ್ರಮುಖ ಪಾತ್ರ ವಹಿಸಿದ್ದರು.

ಆದರೆ ಈಗ ಭೂಷಣ್ ಅವರ ಯಾವ ಟ್ವೀಟ್‌ಗಳ ಕುರಿತು ವಿಚಾರಣೆಯನ್ನು ಪ್ರಾರಂಭಿಸಿದೆ ಎಂಬುದು ಸ್ಪಷ್ಟವಾಗಿಲ್ಲ.

ಮುಖ್ಯ ನ್ಯಾಯಮೂರ್ತಿಗಳಾಗಿರುವ ಎಸ್. ಎ. ಬಾಬ್ಡೆ, ರಂಜನ್ ಗೊಗೊಯ್, ದೀಪಕ್ ಮಿಶ್ರಾ ಮತ್ತು ಜೆ. ಎಸ್. ಖೇಹರ್ ಸೇರಿ ದೇಶದಲ್ಲಿ ಅಘೋಷಿತ ತುರ್ತುಸ್ಥಿತಿ ಇದೆ ಪ್ರಜಾಪ್ರಭುತ್ವ ನಾಶದಲ್ಲಿದೆ ಎಂದು ಹೇಳಿದ್ದರ ಕುರಿತು, ಸುಪ್ರೀಂ ಕೋರ್ಟ್ ಪಾತ್ರವನ್ನು ಟೀಕಿಸಿ ಭೂಷಣ್ ಅವರು ಟ್ವೀಟ್ ಮಾಡಿದ್ದರು.

ಮುಖ್ಯನ್ಯಾಯಮೂರ್ತಿ ಹೆಲ್ಮೆಟ್ ಮತ್ತು ಮಾಸ್ಕ್ ಇಲ್ಲದೇ ಬಿಜೆಪಿ ನಾಯಕರೊಬ್ಬರ ಹಾಡ್ಲಿ ಡೇವಿಡ್ಸನ್ ಗಾಡಿಯಲ್ಲಿ ಕುಳಿತಿದ್ದಾರೆ ಎಂದು ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದರು.

ಆದಾಗ್ಯೂ, ಹೆಚ್ಚಿನ ಕಾನೂನು ತಜ್ಞರು ಈ ಟ್ವೀಟ್‌ಗಳು ಪದಗಳನ್ನು ಔಪಚಾರಿಕವಾಗಿ ಅರ್ಥೈಸಿಕೊಳ್ಳುವುದರಿಂದ ನ್ಯಾಯಾಲಯದ ನಿಂದನೆಗೆ ಕಾರಣವಾಗುವುದಿಲ್ಲ ಎಂದಿದ್ದಾರೆ.

ಗೌತಮ್ ಭಾಟಿಯಾ ಹೀಗೆ ಟ್ವೀಟ್ ಮಾಡಿದ್ದಾರೆ;


ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮುಗಿಸಿ ಹಾಕಿ ಫ್ಯಾಸಿಸಂ ತರಲಾಗಿದೆ : ಪ್ರಶಾಂತ್ ಭೂಷಣ್ ಭಾಷಣದ ಬರಹ ರೂಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...