Homeಮುಖಪುಟಸಿಜೆಐ ಕಛೇರಿ ಕೂಡ ಆರ್‌ಟಿಐ ವ್ಯಾಪ್ತಿಗೆ ಒಳಪಡುತ್ತದೆ: ಸುಪ್ರೀಂಕೋರ್ಟ್‌ ತೀರ್ಪು

ಸಿಜೆಐ ಕಛೇರಿ ಕೂಡ ಆರ್‌ಟಿಐ ವ್ಯಾಪ್ತಿಗೆ ಒಳಪಡುತ್ತದೆ: ಸುಪ್ರೀಂಕೋರ್ಟ್‌ ತೀರ್ಪು

- Advertisement -
- Advertisement -

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಾಧೀಶರ ಕಚೇರಿ ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಒಳಪಡುತ್ತದೆ ಎಂದು ಸುಪ್ರೀಂಕೋರ್ಟ್‌ ಸಾಂವಿಧಾನಿಕ ಪೀಠ ತೀರ್ಪು ನೀಡಿದೆ. ಈ ಮೂಲಕ 2010ರಲ್ಲಿ ದೆಹಲಿ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌, ನ್ಯಾಯಮೂರ್ತಿ ಸಂಜೀವ್‌ ಖನ್ನಾ, ದೀಪಕ್‌ ಗುಪ್ತಾ, ಎನ್‌ವಿ ರಮಣ ಮತ್ತು ಡಿ.ವೈ.ಚಂದ್ರಚೂಡ ಇದ್ದ ಪಂಚ ಪೀಠ ತೀರ್ಪು ನೀಡಿದೆ. ದೆಹಲಿ ಹೈಕೋರ್ಟ್ ಮತ್ತು ಕೇಂದ್ರ ಮಾಹಿತಿ ಆಯೋಗದ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಪ್ರಧಾನ ಕಾರ್ಯದರ್ಶಿ ಮತ್ತು ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಗಳು 2010ರಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್‌ ಪಂಚಪೀಠ ಏಪ್ರಿಲ್ 04 ರಂದು ತೀರ್ಪು ಕಾಯ್ದಿರಿಸಿತ್ತು.

ಇನ್ನು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿಗಳು ಒಂದೇ ಅಭಿಪ್ರಾಯ ವ್ಯಕ್ತಪಡಿಸಿದರು. ಭಿನ್ನ ಅಭಿಪ್ರಾಯ ವ್ಯಕ್ತವಾಗದೇ ಪ್ರಕಟವಾದ ಬಹುಮತದ ತೀರ್ಪು ಇದಾಗಿದೆ. ಇನ್ನು ಪಾದರರ್ಶಕತೆ ಕಾಪಾಡಿಕೊಂಡು ಹೋಗಲು ತೀರ್ಪು ಅನುಕೂಲ ಮಾಡಿಕೊಡುತ್ತದೆ. ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಇದು ಧಕ್ಕೆ ತರುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಾರ್ವಜನಿಕ ಪ್ರಾಧಿಕಾರದ ವ್ಯಾಪ್ತಿಯೊಳಗೆ ಬರಲಿದ್ದಾರೆ. ಮಾಹಿತಿ ಹಕ್ಕು ಮತ್ತು ಖಾಸಗಿ ಹಕ್ಕುಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ ಎಂದು ಪಂಚ ಪೀಠ ಹೇಳಿದೆ. .

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...