Homeರಾಜಕೀಯಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್; ‘ಬಾಳಾಸಾಹೇಬರ ಹಿಂದುತ್ವದ ವಿಜಯ’ ಎಂದ ಏಕನಾಥ್ ಶಿಂಧೆ

ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್; ‘ಬಾಳಾಸಾಹೇಬರ ಹಿಂದುತ್ವದ ವಿಜಯ’ ಎಂದ ಏಕನಾಥ್ ಶಿಂಧೆ

- Advertisement -
- Advertisement -

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ನಡುವೆ, ಅನರ್ಹತೆ ನೋಟಿಸ್‌ನ ವಿರುದ್ಧ ಶಿವಸೇನೆಯ ಬಂಡಾಯ ಶಾಸಕರು ಸಲ್ಲಿಸಿರುವ ಮನವಿಯ ಮೇರೆಗೆ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್, ಮಹಾರಾಷ್ಟ್ರ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಇದನ್ನು “ಬಾಳಾಸಾಹೇಬರ ಹಿಂದುತ್ವದ ವಿಜಯ” ಎಂದು ಬಣ್ಣಿಸಿದ್ದಾರೆ.

ವಿವಾದದ ಮುಂದಿನ ವಿಚಾರಣೆಯನ್ನು ಜುಲೈ 11 ರಂದು ನ್ಯಾಯಾಲಯ ಪಟ್ಟಿ ಮಾಡಿದೆ. ಶಿಂಧೆ ಬದಲಿಗೆ ಅಜಯ್ ಚೌಧರಿ ಅವರನ್ನು ಶಿವಸೇನಾ ಶಾಸಕಾಂಗ ಪಕ್ಷದ (ಎಸ್‌ಎಸ್‌ಎಲ್‌ಪಿ) ನಾಯಕ ಎಂದು ಗುರುತಿಸಿರುವ ಡೆಪ್ಯುಟಿ ಸ್ಪೀಕರ್ ನರಹರಿ ಜಿರ್ವಾಲ್ ಅವರ ನಿರ್ಧಾರವನ್ನು ಪ್ರಶ್ನಿಸಿ ಮತ್ತು ಶಿಂಧೆ ಹಾಗೂ 15 ಶಾಸಕರ ಅನರ್ಹತೆಯ ಬಗ್ಗೆಗಿನ ಎರಡು ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಸೇನೆ ಸಂಸದ ಸಂಜಯ್‌ ರಾವತ್ ಅವರಿಗೆ ಸೋಮವಾರದಂದು ಜಾರಿ ನಿರ್ದೇಶನಾಲಯ ಸಮನ್ಸ್‌‌ ಜಾರಿ ಮಾಡಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ರಾಜಕೀಯ ಬಿಕ್ಕಟ್ಟಿನ ಸಮಯದಲ್ಲಿ ತಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಡುವುದನ್ನು ತಡೆಯಲು ಮಾಡಿರುವ ‘ಪಿತೂರಿ’ ಇದಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಪಕ್ಷದ ಬಂಡಾಯಗಾರರ ವಿರುದ್ಧ ಬೀದಿಗಿಳಿದ ಶಿವಸೇನಾ ಕಾರ್ಯಕರ್ತರು

“ಜಾರಿ ನಿರ್ದೇಶನಾಲಯ ಉಲ್ಲೇಖಿಸಿರುವ ಯಾವುದೇ ಕಂಪನಿಗಳೊಂದಿಗೆ ನಾನು ಸಂಪರ್ಕ ಹೊಂದಿಲ್ಲ. ನಾಳೆ, ಅಲಿಬಾಗ್‌ನಲ್ಲಿ ನಾನು ಮಾತನಾಡಬೇಕಾದ ರ್‍ಯಾಲಿ ಇರುವುದರಿಂದ ನಾನು ಜಾರಿ ನಿರ್ದೇಶನಾಲಯಕ್ಕೆ ಹೋಗಲು ಸಾಧ್ಯವಾಗುವುದಿಲ್ಲ. ಅದೊಂದು ಕಾನೂನು ಹೋರಾಟ. ನನ್ನನ್ನು ಬಂಧಿಸುವಂತೆ ಬಿಜೆಪಿಯಿಂದ ನಿಮಗೆ ಆದೇಶವಿದ್ದರೆ ನನ್ನನ್ನು ಬಂಧಿಸಿ” ಎಂದು ರಾವತ್ ಹೇಳಿದ್ದಾರೆ.

“ನಮ್ಮಲ್ಲಿ ಕೆಲವರ ವಿರುದ್ಧ ಇಂತಹ ಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ನಮಗೆಲ್ಲರಿಗೂ ತಿಳಿದಿತ್ತು. ಇಂತಹ ಬೋಗಸ್ ಪ್ರಕರಣಗಳಿಗೆ ನಾನು ಹೆದರುವುದಿಲ್ಲ ಮತ್ತು ಗುವಾಹಟಿಗೆ ಹೋಗುವುದಿಲ್ಲ” ಎಂದು ಹೇಳಿದ್ದಾರೆ.

ಶಾಸಕರ ಅನರ್ಹತೆ ಮತ್ತು ಅಜಯ್ ಚೌಧರಿ ಅವರನ್ನು ಶಿವಸೇನಾ ಪಕ್ಷದ ನಾಯಕರನ್ನಾಗಿ ನೇಮಿಸುವುದರ ವಿರುದ್ಧ ಬಂಡಾಯ ಶಾಸಕರು ಬಾಂಬೆ ಹೈಕೋರ್ಟ್‌ಗೆ ಯಾಕೆ ಅರ್ಜಿ ಸಲ್ಲಿಸಿಲ್ಲ ಎಂಬ ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಉದ್ಧವ್ ಠಾಕ್ರೆ ಸಂಪರ್ಕದಲ್ಲಿ 20 ಬಂಡಾಯ ಶಾಸಕರು-ಮೂಲಗಳು

ಈ ಪ್ರಶ್ನೆಗೆ ಉತ್ತರಿಸಿರುವ ಏಕನಾಥ್ ಶಿಂಧೆ ಅವರ ವಕೀಲರು,“ಶಾಸಕಾಂಗ ಪಕ್ಷದ ಅಲ್ಪಸಂಖ್ಯಾತ ಸದಸ್ಯರು ರಾಜ್ಯ ಯಂತ್ರವನ್ನು ಬುಡಮೇಲು ಮಾಡುತ್ತಾ ನಮ್ಮ ಮನೆಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಅಸ್ಸಾಂನಿಂದ ನಮ್ಮ ಮೃತ ದೇಹಗಳು ಹಿಂತಿರುಗುತ್ತವೆ ಎಂದು ಅವರು ಹೇಳುತ್ತಿದ್ದಾರೆ. ಮುಂಬೈನಲ್ಲಿ ನಮ್ಮ ಹಕ್ಕುಗಳನ್ನು ಚಲಾಯಿಸುವಷ್ಟು ವಾತಾವರಣವು ಅನುಕೂಲಕರವಾಗಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...