Homeರಾಜಕೀಯಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್; ‘ಬಾಳಾಸಾಹೇಬರ ಹಿಂದುತ್ವದ ವಿಜಯ’ ಎಂದ ಏಕನಾಥ್ ಶಿಂಧೆ

ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್; ‘ಬಾಳಾಸಾಹೇಬರ ಹಿಂದುತ್ವದ ವಿಜಯ’ ಎಂದ ಏಕನಾಥ್ ಶಿಂಧೆ

- Advertisement -
- Advertisement -

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ನಡುವೆ, ಅನರ್ಹತೆ ನೋಟಿಸ್‌ನ ವಿರುದ್ಧ ಶಿವಸೇನೆಯ ಬಂಡಾಯ ಶಾಸಕರು ಸಲ್ಲಿಸಿರುವ ಮನವಿಯ ಮೇರೆಗೆ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್, ಮಹಾರಾಷ್ಟ್ರ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಇದನ್ನು “ಬಾಳಾಸಾಹೇಬರ ಹಿಂದುತ್ವದ ವಿಜಯ” ಎಂದು ಬಣ್ಣಿಸಿದ್ದಾರೆ.

ವಿವಾದದ ಮುಂದಿನ ವಿಚಾರಣೆಯನ್ನು ಜುಲೈ 11 ರಂದು ನ್ಯಾಯಾಲಯ ಪಟ್ಟಿ ಮಾಡಿದೆ. ಶಿಂಧೆ ಬದಲಿಗೆ ಅಜಯ್ ಚೌಧರಿ ಅವರನ್ನು ಶಿವಸೇನಾ ಶಾಸಕಾಂಗ ಪಕ್ಷದ (ಎಸ್‌ಎಸ್‌ಎಲ್‌ಪಿ) ನಾಯಕ ಎಂದು ಗುರುತಿಸಿರುವ ಡೆಪ್ಯುಟಿ ಸ್ಪೀಕರ್ ನರಹರಿ ಜಿರ್ವಾಲ್ ಅವರ ನಿರ್ಧಾರವನ್ನು ಪ್ರಶ್ನಿಸಿ ಮತ್ತು ಶಿಂಧೆ ಹಾಗೂ 15 ಶಾಸಕರ ಅನರ್ಹತೆಯ ಬಗ್ಗೆಗಿನ ಎರಡು ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಸೇನೆ ಸಂಸದ ಸಂಜಯ್‌ ರಾವತ್ ಅವರಿಗೆ ಸೋಮವಾರದಂದು ಜಾರಿ ನಿರ್ದೇಶನಾಲಯ ಸಮನ್ಸ್‌‌ ಜಾರಿ ಮಾಡಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ರಾಜಕೀಯ ಬಿಕ್ಕಟ್ಟಿನ ಸಮಯದಲ್ಲಿ ತಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಡುವುದನ್ನು ತಡೆಯಲು ಮಾಡಿರುವ ‘ಪಿತೂರಿ’ ಇದಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಪಕ್ಷದ ಬಂಡಾಯಗಾರರ ವಿರುದ್ಧ ಬೀದಿಗಿಳಿದ ಶಿವಸೇನಾ ಕಾರ್ಯಕರ್ತರು

“ಜಾರಿ ನಿರ್ದೇಶನಾಲಯ ಉಲ್ಲೇಖಿಸಿರುವ ಯಾವುದೇ ಕಂಪನಿಗಳೊಂದಿಗೆ ನಾನು ಸಂಪರ್ಕ ಹೊಂದಿಲ್ಲ. ನಾಳೆ, ಅಲಿಬಾಗ್‌ನಲ್ಲಿ ನಾನು ಮಾತನಾಡಬೇಕಾದ ರ್‍ಯಾಲಿ ಇರುವುದರಿಂದ ನಾನು ಜಾರಿ ನಿರ್ದೇಶನಾಲಯಕ್ಕೆ ಹೋಗಲು ಸಾಧ್ಯವಾಗುವುದಿಲ್ಲ. ಅದೊಂದು ಕಾನೂನು ಹೋರಾಟ. ನನ್ನನ್ನು ಬಂಧಿಸುವಂತೆ ಬಿಜೆಪಿಯಿಂದ ನಿಮಗೆ ಆದೇಶವಿದ್ದರೆ ನನ್ನನ್ನು ಬಂಧಿಸಿ” ಎಂದು ರಾವತ್ ಹೇಳಿದ್ದಾರೆ.

“ನಮ್ಮಲ್ಲಿ ಕೆಲವರ ವಿರುದ್ಧ ಇಂತಹ ಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ನಮಗೆಲ್ಲರಿಗೂ ತಿಳಿದಿತ್ತು. ಇಂತಹ ಬೋಗಸ್ ಪ್ರಕರಣಗಳಿಗೆ ನಾನು ಹೆದರುವುದಿಲ್ಲ ಮತ್ತು ಗುವಾಹಟಿಗೆ ಹೋಗುವುದಿಲ್ಲ” ಎಂದು ಹೇಳಿದ್ದಾರೆ.

ಶಾಸಕರ ಅನರ್ಹತೆ ಮತ್ತು ಅಜಯ್ ಚೌಧರಿ ಅವರನ್ನು ಶಿವಸೇನಾ ಪಕ್ಷದ ನಾಯಕರನ್ನಾಗಿ ನೇಮಿಸುವುದರ ವಿರುದ್ಧ ಬಂಡಾಯ ಶಾಸಕರು ಬಾಂಬೆ ಹೈಕೋರ್ಟ್‌ಗೆ ಯಾಕೆ ಅರ್ಜಿ ಸಲ್ಲಿಸಿಲ್ಲ ಎಂಬ ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಉದ್ಧವ್ ಠಾಕ್ರೆ ಸಂಪರ್ಕದಲ್ಲಿ 20 ಬಂಡಾಯ ಶಾಸಕರು-ಮೂಲಗಳು

ಈ ಪ್ರಶ್ನೆಗೆ ಉತ್ತರಿಸಿರುವ ಏಕನಾಥ್ ಶಿಂಧೆ ಅವರ ವಕೀಲರು,“ಶಾಸಕಾಂಗ ಪಕ್ಷದ ಅಲ್ಪಸಂಖ್ಯಾತ ಸದಸ್ಯರು ರಾಜ್ಯ ಯಂತ್ರವನ್ನು ಬುಡಮೇಲು ಮಾಡುತ್ತಾ ನಮ್ಮ ಮನೆಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಅಸ್ಸಾಂನಿಂದ ನಮ್ಮ ಮೃತ ದೇಹಗಳು ಹಿಂತಿರುಗುತ್ತವೆ ಎಂದು ಅವರು ಹೇಳುತ್ತಿದ್ದಾರೆ. ಮುಂಬೈನಲ್ಲಿ ನಮ್ಮ ಹಕ್ಕುಗಳನ್ನು ಚಲಾಯಿಸುವಷ್ಟು ವಾತಾವರಣವು ಅನುಕೂಲಕರವಾಗಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...