Homeಮುಖಪುಟಜ್ಞಾನವಾಪಿ ಶಿವಲಿಂಗದ ಕಾರ್ಬನ್‌ ಡೇಟಿಂಗ್‌ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಮುಂದೂಡಿದ ಸುಪ್ರೀಂ

ಜ್ಞಾನವಾಪಿ ಶಿವಲಿಂಗದ ಕಾರ್ಬನ್‌ ಡೇಟಿಂಗ್‌ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಮುಂದೂಡಿದ ಸುಪ್ರೀಂ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದಿರುವ ‘ಶಿವಲಿಂಗ’ ಎಷ್ಟು ವರ್ಷಗಳ ಹಿಂದಿನದ್ದು ಎನ್ನುವುದನ್ನು ನಿರ್ಧರಿಸಲು ಕಾರ್ಬನ್ ಡೇಟಿಂಗ್ ಸೇರಿದಂತೆ ”ವೈಜ್ಞಾನಿಕ ಸಮೀಕ್ಷೆ”ಗೆ ಅವಕಾಶ ನೀಡುವ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮುಂದೂಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪರ್ದಿವಾಲಾ ಅವರ ಪೀಠವು ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯನ್ನು ಪ್ರತಿನಿಧಿಸುವ ಹಿರಿಯ ವಕೀಲ ಹುಜೆಫಾ ಅಹ್ಮದಿ ಅವರ ಸಲ್ಲಿಕೆಗಳನ್ನು ಗಮನಿಸಿದ ನಂತರ ಅರ್ಜಿಯನ್ನು  ಆಲಿಸಿತು.

ಹೈಕೋರ್ಟ್ ಆದೇಶದ ವಿರುದ್ಧ ಮಸೀದಿ ಸಮಿತಿಯ ಮನವಿಗೆ ಸುಪ್ರೀಂ ಕೋರ್ಟ್ ಕೇಂದ್ರ, ಉತ್ತರ ಪ್ರದೇಶ ಸರ್ಕಾರ ಮತ್ತು ಹಿಂದೂ ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿದೆ. “ಆಕ್ಷೇಪಿಸಲಾದ ಆದೇಶದ ಪರಿಣಾಮಗಳು ನಿಕಟ ಪರಿಶೀಲನೆಗೆ ಅರ್ಹವಾದ ಕಾರಣ, ಆದೇಶಸ ಅನುಷ್ಟಾನವನ್ನು ಮುಂದಿನ ದಿನಾಂಕದವರೆಗೆ  ಮುಂದೂಡಲಾಗುವುದು” ಎಂದು ಪೀಠವು ಹೇಳಿದೆ.

”ಶಿವಲಿಂಗ್”ದ ವೈಜ್ಞಾನಿಕ ಸಮೀಕ್ಷೆಯನ್ನು ಸದ್ಯಕ್ಕೆ ಮುಂದೂಡುವ ಮನವಿಗೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರ ಎರಡೂ ಒಪ್ಪಿಕೊಂಡಿವೆ.

ಇದನ್ನೂ ಓದಿ: ರಿಶಿಷ್ಟ ಪಂಗಡಕ್ಕೆ ಮೈತಿ ಸಮುದಾಯ ಸೇರಿಸುವ ವಿಚಾರ; ಮಣಿಪುರ ಹೈಕೋರ್ಟ್ ಆದೇಶ ವಾಸ್ತವವಾಗಿ ತಪ್ಪು ಎಂದ ಸುಪ್ರೀಂ

ಕೆಳ ನ್ಯಾಯಾಲಯದ ಆದೇಶವನ್ನು ತಳ್ಳಿಹಾಕಿದ ಅಲಹಾಬಾದ್ ಹೈಕೋರ್ಟ್, ಕಳೆದ ವರ್ಷ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಳೆದ ವರ್ಷ ವಿಡಿಯೋಗ್ರಾಫಿಕ್ ಸಮೀಕ್ಷೆಯ ವೇಳೆ ಕಂಡುಬಂದಿದೆ ಎಂದು ಹೇಳಲಾದ “ಶಿವಲಿಂಗ” ಕಾರ್ಬನ್ ಡೇಟಿಂಗ್ ಸೇರಿದಂತೆ “ವೈಜ್ಞಾನಿಕ ಸಮೀಕ್ಷೆ” ಗೆ ಮೇ 12 ರಂದು ನಿರ್ದೇಶನ ನೀಡಿತ್ತು.

ಕಳೆದ ವರ್ಷ ಮೇ 16ರಂದು ಮಸೀದಿ ಆವರಣದಲ್ಲಿ ಸಮೀಕ್ಷೆಯ ನಡೆಸುವಾಗ ಒಂದು ರಚನೆ ಕಂಡುಬಂದಿದ್ದು, ಅದನ್ನು ಹಿಂದೂಗಳ ಕಡೆಯವರು “ಶಿವಲಿಂಗ” ಮತ್ತು ಮುಸ್ಲಿಂ ಕಡೆಯವರು ”ಕಾರಂಜಿ” ಎಂದು ಹೇಳಿಕೊಂಡಿದ್ದರು.

ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಅಕ್ಟೋಬರ್ 14, 2022 ರಂದು ”ಶಿವಲಿಂಗ” ದ ವೈಜ್ಞಾನಿಕ ಸಮೀಕ್ಷೆ ಮತ್ತು ಕಾರ್ಬನ್ ಡೇಟಿಂಗ್‌ಗಾಗಿ ಅವರ ಅರ್ಜಿಯನ್ನು ತಿರಸ್ಕರಿಸಿದ ನಂತರ, ಅರ್ಜಿದಾರರಾದ ಲಕ್ಷ್ಮಿ ದೇವಿ ಮತ್ತು ಇತರ ಮೂವರು ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...