Homeಮುಖಪುಟಕಾವೇರಿ ನೀರು ಬಿಡುಗಡೆಗೆ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ಆದೇಶ ನೀಡಲು ನಿರಾಕರಿಸಿದ ಸುಪ್ರೀಂ

ಕಾವೇರಿ ನೀರು ಬಿಡುಗಡೆಗೆ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ಆದೇಶ ನೀಡಲು ನಿರಾಕರಿಸಿದ ಸುಪ್ರೀಂ

- Advertisement -
- Advertisement -

ಪ್ರತಿ ದಿನ 24,000 ಕ್ಯೂಸೆಕ್‌ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ಯಾವುದೇ ಆದೇಶ ನೀಡದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.

ಈವರೆಗೂ ಕರ್ನಾಟಕ ಬಿಡುಗಡೆ ಮಾಡಿರುವ ನೀರಿನ ಪ್ರಮಾಣದ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ವರದಿ ಪಡೆಯಲು ಸುಪ್ರೀಂ ಕೋರ್ಟ್ ಆದ್ಯತೆ ನೀಡಿದೆ.

ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠವು ತಮಿಳುನಾಡು ಪರ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಕರ್ನಾಟಕದ ಪರ ಶ್ಯಾಮ್ ದಿವಾನ್ ಅವರ ವಾದವನ್ನು ಆಲಿಸಿದೆ. ಪ್ರಾಧಿಕಾರವು ಆದೇಶ ಹೊರಡಿಸಿದ್ದರೂ ಕರ್ನಾಟಕದಿಂದ ನೀರು ಹರಿಸಿಲ್ಲ ಎಂಬುದು ತಮಿಳುನಾಡು ರಾಜ್ಯದ ವಾದವಾಗಿದೆ.

ಸಿಡಬ್ಲ್ಯುಎಂಎ ನಿಗದಿಪಡಿಸಿದ ನೀರನ್ನು ಬಿಡುಗಡೆ ಮಾಡಲಾಗಿದೆ ಆದರೆ ಅದು ತಮಿಳುನಾಡಿಗೆ ತಲುಪಲು ಮೂರು ದಿನಗಳ ಸಮಯ ತೆಗೆದುಕೊಳ್ಳುತ್ತದೆ ಎಂದು ಕರ್ನಾಟಕವನ್ನು ಗಮನಿಸಿದೆ.

”ಈ ವಿಷಯದ ಬಗ್ಗೆ ನಮಗೆ ಹೆಚ್ಚಿನ ವಿಚಾರ ಗೊತ್ತಿಲ್ಲ” ಎಂದು ಪೀಠ ಹೇಳಿದೆ.

ಮುಂದಿನ 15 ದಿನಗಳ ಕಾಲ ನೀರು ಬಿಡಲು ನಿರ್ಧರಿಸಲು ಪ್ರಾಧಿಕಾರವು ಸೋಮವಾರ ಸಭೆ ನಡೆಸಲಿದೆ ಎಂದು ಕೇಂದ್ರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಹೇಳಿದರು.

”ನೀರು ಬಿಡಲು ನೀಡಲಾದ ನಿರ್ದೇಶನಗಳನ್ನು ಅನುಸರಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು CWMA ತನ್ನ ವರದಿಯನ್ನು ಸಲ್ಲಿಸುವುದು ಸೂಕ್ತ, ಮುಂದಿನ ಶುಕ್ರವಾರದೊಳಗೆ ವರದಿಯನ್ನು ನಮಗೆ ಸಲ್ಲಿಸಬೇಕು” ಎಂದು ಪೀಠ ಹೇಳಿದೆ.

ಅಧಿಕಾರಿಗಳ ಆದೇಶಗಳು ಕರ್ನಾಟಕದ ಹಿತಾಸಕ್ತಿಗೆ ವ್ಯತಿರಿಕ್ತವಾಗಿದೆ ಹಾಗಾಗಿ ಹಂಚಿಕೆಯಾಗಿರುವ ನೀರಿನ ಪ್ರಮಾಣವನ್ನು ಕಡಿಮೆ ಮಾಡಬೇಕು ಎಂದು ಕರ್ನಾಟಕ ಅರ್ಜಿ ಸಲ್ಲಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ ತಮಿಳುನಾಡು ಹೆಚ್ಚಿನ ಪಾಲು ಕೋರಿ ಅರ್ಜಿ ಸಲ್ಲಿಸಿದೆ. ಇವೆಲ್ಲವನ್ನು ಅಧಿಕಾರಿಗಳು ನಿರ್ಧರಿಸಲಿ ಎಂದು ಹೇಳಿದ ಪೀಠವು ಮುಂದಿನ ಶುಕ್ರವಾರ ಪ್ರಕರಣವನ್ನು ಪಟ್ಟಿ ಮಾಡಲಾಗುವುದು ಎಂದು ತನ್ನ ಆದೇಶದಲ್ಲಿ ತಿಳಿಸಿದೆ.

ಕಾವೇರಿ ನದಿ ನೀರನ್ನು ದಿನಕ್ಕೆ 24,000 ಕ್ಯೂಸೆಕ್ಸ್ ನಷ್ಟು ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ಮಾಡಿದ ಮನವಿಯನ್ನು ಕರ್ನಾಟಕವು ನ್ಯಾಯಾಲಯದಲ್ಲಿ ವಿರೋಧಿಸಿದೆ.

ಆಗಸ್ಟ್ 12ರಿಂದ ಮುಂದಿನ 15 ದಿನಗಳವರೆಗೆ ಅಂತರರಾಜ್ಯ ಗಡಿಯಾದ ಬಿಳಿಗುಂಡ್ಲುವಿನಲ್ಲಿ ದಿನಕ್ಕೆ 10,000 ಕ್ಯೂಸೆಕ್ ಅನ್ನು ಬಿಡುಗಡೆ ಮಾಡಲು ಆಗಸ್ಟ್ 11ರಂದು ನಿರ್ಧಾರ ತೆಗೆದುಕೊಡಿದೆ. ಈ ನಿರ್ಧಾರವನ್ನು ಪರಿಶೀಲಿಸಬೇಕು ಎಂದು ಕರ್ನಾಟಕವು CWMA ಗೆ ಕೇಳಿದೆ.

ಇದನ್ನೂ ಓದಿ: ಮತ್ತೆ ಭುಗಿಲೆದ್ದ ಕಾವೇರಿ ನದಿ ವಿವಾದ; ಮಳೆ ಮತ್ತು ಮಾತುಕತೆಯೇ ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...