Homeಕರ್ನಾಟಕಜಾರ್ಖಂಡ್ ಸಿಎಂ ವಿರುದ್ಧ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್‌‌ಗೆ ಸುಪ್ರೀಂಕೋರ್ಟ್ ತಡೆ

ಜಾರ್ಖಂಡ್ ಸಿಎಂ ವಿರುದ್ಧ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್‌‌ಗೆ ಸುಪ್ರೀಂಕೋರ್ಟ್ ತಡೆ

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌) ಪ್ರಶ್ನಿಸಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ಅಂಗೀಕರಿಸಿದೆ.

ಗಣಿಗಾರಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸೋರೆನ್ ವಿರುದ್ಧ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಹೈಕೋರ್ಟ್ ನಡೆಸಿತ್ತು. ಸೊರೆನ್ ಮನವಿಯನ್ನು ಅಂಗೀಕರಿಸಿರುವ ಸರ್ವೋಚ್ಚ ನ್ಯಾಯಾಲಯ, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೇಮಂತ್ ಸೊರೆನ್ ಅವರು ಟ್ವಿಟರ್‌ನಲ್ಲಿ “ಸತ್ಯಮೇವ ಜಯತೇ!” ಎಂಬ ಸಂದೇಶದೊಂದಿಗೆ ಸುಪ್ರೀಂ ಕೋರ್ಟ್‌ನ ಆದೇಶವನ್ನು ಹಂಚಿಕೊಂಡಿದ್ದಾರೆ.

2021ರಲ್ಲಿ ತಮಗೆ ತಾವೇ ಗಣಿ ಗುತ್ತಿಗೆ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ದೂರು ನೀಡಿತ್ತು. ಸೋರೆನ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಲಾಗಿತ್ತು. ಚುನಾವಣಾ ಆಯೋಗವು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ರಮೇಶ್ ಬೈಸ್‌ಗೆ ಶಿಫಾರಸು ಮಾಡಿತ್ತು.

ಜುಲೈನಲ್ಲಿ ದಾಳಿ ನಡೆಸಿದ ಜಾರಿ ನಿರ್ದೇಶನಾಲಯವು ಗಣಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋರೆನ್‌ ಅವರ ಸಹಾಯಕ ಪಂಕಜ್ ಮಿಶ್ರಾ ಮತ್ತು ಇತರ ಇಬ್ಬರನ್ನು ಬಂಧಿಸಿತ್ತು. ಮಿಶ್ರಾ ಅವರ ಬ್ಯಾಂಕ್ ಖಾತೆಗಳಿಂದ ₹ 11.88 ಕೋಟಿ ವಶಪಡಿಸಿಕೊಂಡ ನಂತರ, ಮಿಶ್ರಾ ಅವರ ಮನೆಯಿಂದ ₹ 5.34 ಕೋಟಿ “ಲೆಕ್ಕ ರಹಿತ” ನಗದು ಪತ್ತೆಯಾಗಿದೆ ಎಂದು ಸಂಸ್ಥೆ ಹೇಳಿಕೊಂಡಿತ್ತು. ಮೂರು ತಿಂಗಳ ಹಿಂದೆ ಸೋರೆನ್ ಅವರ ಪತ್ರಿಕಾ ಸಲಹೆಗಾರ ಅಭಿಷೇಕ್ ಪ್ರಸಾದ್ ಅವರನ್ನೂ ಇ.ಡಿ. ಪ್ರಶ್ನಿಸಿತ್ತು.

ಮುಖ್ಯ ಆರೋಪಿ ಮಿಶ್ರಾ ಅವರ ಮನೆಯಿಂದ ಹೇಮಂತ್ ಸೊರೆನ್ ಅವರ ಪಾಸ್‌ಬುಕ್ ಮತ್ತು ಅವರು ಸಹಿ ಮಾಡಿದ ಕೆಲವು ಚೆಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇ.ಡಿ. ಹೇಳಿರುವುದಾಗಿ ವರದಿಯಾಗಿತ್ತು.

ಹೇಮಂತ್ ಸೊರೆನ್ ಅವರ ರಾಜಕೀಯ ಪ್ರತಿನಿಧಿಯಾಗಿರುವ ಪಂಕಜ್ ಮಿಶ್ರಾ ಅವರು ತಮ್ಮ ಸಹಚರರ ಮೂಲಕ ಮುಖ್ಯಮಂತ್ರಿಗಳ ವಿಧಾನಸಭಾ ಕ್ಷೇತ್ರವಾದ ಬರ್ಹೈತ್‌ನಲ್ಲಿ ಅಕ್ರಮ ಗಣಿಗಾರಿಕೆ ವ್ಯವಹಾರವನ್ನು “ನಿಯಂತ್ರಿಸುತ್ತಾರೆ” ಎಂದು ಇಡಿ ತನ್ನ ಚಾರ್ಜ್‌ಶೀಟ್‌ನಲ್ಲಿ ಹೇಳಿಕೊಂಡಿದೆ.

ಇದನ್ನೂ ಓದಿರಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಸೊರೆನ್ ಅವರು ಆರೋಪಗಳನ್ನು ತಳ್ಳಿಹಾಕಿದ್ದಾರೆ ಮತ್ತು ಇತ್ತೀಚಿನ ಇಡಿ ಸಮನ್ಸ್ ಅನ್ನು “ಬುಡಕಟ್ಟು ಮುಖ್ಯಮಂತ್ರಿಗೆ ಕಿರುಕುಳ ನೀಡುವ ಸಂಚಿನ ಭಾಗ” ಎಂದು ಕರೆದಿದ್ದಾರೆ.

“ನಾನು ತಪ್ಪಿತಸ್ಥನಾಗಿದ್ದರೆ, ನೀವು ನನ್ನನ್ನು ಏಕೆ ಪ್ರಶ್ನಿಸುತ್ತಿದ್ದೀರಿ? ನಿಮಗೆ ಸಾಧ್ಯವಾದರೆ ಬಂದು ನನ್ನನ್ನು ಬಂಧಿಸಿ” ಎಂದು ಅವರು ಕೇಂದ್ರ ತನಿಖಾ ಸಂಸ್ಥೆಗೆ ತಿಳಿಸಿದ್ದರು.

“ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಜಾರ್ಖಂಡ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯು ಕೇಂದ್ರೀಯ ಸಂಸ್ಥೆಗಳನ್ನು ಕಳಹಿಸಿದೆ. ನಾನು ಇ.ಡಿ. ಮತ್ತು ಸಿಬಿಐಗೆ ಹೆದರುವುದಿಲ್ಲ. ಇದು ಸಾಂವಿಧಾನಿಕ ಸಂಸ್ಥೆಗಳನ್ನು ವಿರೋಧಿಸುವ ಯಾರೊಬ್ಬರ ಧ್ವನಿಯನ್ನು ಹತ್ತಿಕ್ಕಲು ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗವಾಗಿದೆ” ಎಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಕಳೆದ ವಾರ ಸೊರೆನ್ ಭಾಷಣ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...