Homeಮುಖಪುಟಪ್ರೊ.ಜಿ.ಎನ್. ಸಾಯಿಬಾಬಾ ಬಿಡುಗಡೆಯ ಆದೇಶ ಅಮಾನತು ಮಾಡಿದ ಸುಪ್ರೀಂಕೋರ್ಟ್‌

ಪ್ರೊ.ಜಿ.ಎನ್. ಸಾಯಿಬಾಬಾ ಬಿಡುಗಡೆಯ ಆದೇಶ ಅಮಾನತು ಮಾಡಿದ ಸುಪ್ರೀಂಕೋರ್ಟ್‌

- Advertisement -
- Advertisement -

ಮಾವೋವಾದಿ ಸಂಪರ್ಕಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರೊಫೆಸರ್ ಜಿಎನ್ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ ಬಾಂಬೆ ಉಚ್ಚ ನ್ಯಾಯಾಲಯದ ತೀರ್ಪನ್ನು ಸುಪ್ರೀಂ ಕೋರ್ಟ್ ಶನಿವಾರ ಅಮಾನತುಗೊಳಿಸಿದೆ. ಈ ಅಮಾನತಿನಿಂದಾಗಿ ಸಾಯಿಬಾಬಾ ಸೇರಿದಂತೆ ಐವರ ಬಿಡುಗಡೆಗೆ ತಡೆ ಆಗಲಿದೆ ಎಂದು ಲೈವ್ ಲಾ ವರದಿ ಮಾಡಿದೆ.

ತಮ್ಮ ಬಂಧನದ ಎಂಟು ವರ್ಷಗಳ ನಂತರ, ಬಾಂಬೆ ಹೈಕೋರ್ಟ್ ಶುಕ್ರವಾರ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿ, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಆದೇಶಿಸಿತ್ತು. ಆದರೆ ಬಾಂಬೆ ಹೈಕೋರ್ಟ್‌‌ನ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಮಹಾರಾಷ್ಟ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ತುರ್ತು ಮನವಿಯನ್ನು ಸಲ್ಲಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಾರಾಷ್ಟ್ರ ಸರ್ಕಾರದ ಮನವಿಯನ್ನು ಆಲಿಸಲು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಬೇಲಾ ತ್ರಿವೇದಿ ಅವರ ಪೀಠದ ವಿಶೇಷ ವಿಚಾರಣೆಯನ್ನು ನಿಗದಿಪಡಿಸಿತ್ತು ಮತ್ತು ಹೈಕೋರ್ಟ್‌ ನೀಡಿದ್ದ ತೀರ್ಪಗೆ ತಡೆ ನೀಡಬೇಕು ಎಂಬ ಸರ್ಕಾರದ ಮನವಿಯನ್ನು ಶುಕ್ರವಾರ ಸುಪ್ರೀಂಕೋರ್ಟ್‌ ನಿರಾಕರಿಸಿತ್ತು.

ಇದನ್ನೂ ಓದಿ: ಸಾಯಿಬಾಬಾ ಸೇರಿ ಆರು ಜನರ ವಿರುದ್ಧದ ಶಿಕ್ಷೆ ರದ್ದು: ಪ್ರಕರಣದ ಪೂರ್ಣ ವಿವರ ಇಲ್ಲಿದೆ

ಬಂಧನಕ್ಕೊಳಗಾದ ಎಂಟು ವರ್ಷಗಳ ನಂತರ, ಬಾಂಬೆ ಹೈಕೋರ್ಟ್ ಶುಕ್ರವಾರ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಶುಕ್ರವಾರ ಆದೇಶಿಸಿತ್ತು.

2017 ರಲ್ಲಿ ವಿಚಾರಣಾ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಾಯಿಬಾಬಾ ಅವರು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದರು. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿರಲಿಲ್ಲ.

ಇದನ್ನೂ ಓದಿ: ಮಾನವ ಹಕ್ಕು ಹೋರಾಟಗಾರರಾದ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತ: ಕೂಡಲೇ ಬಿಡುಗಡೆಗೆ ಕೋರ್ಟ್ ಆದೇಶ

ಪ್ರಕರಣದಲ್ಲಿ ಅವರ ಜೊತೆಗೆ ಇತರ ಐವರು ಆರೋಪಿಗಳನ್ನು ಸಹ ಪೀಠ ಖುಲಾಸೆಗೊಳಿಸಿತ್ತು. ಆದರೆ ಅವರಲ್ಲಿ ಒಬ್ಬರು ಜೈಲಿನಲ್ಲಿಯೇ ಮೃತಪಟ್ಟಿದ್ದರು. ಉಳಿದವರು ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಗಳಾಗಿರದಿದ್ದರೆ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಪೀಠವು ಸೂಚಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....