Homeಮುಖಪುಟಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

- Advertisement -
- Advertisement -

ಬಡವರು ಅಥವಾ ಆರ್ಥಿಕವಾಗಿ ದುರ್ಬಲ ವಿಭಾಗ (EWS)ಗಳಿಗೆ ಕಾಲೇಜು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ನೀಡಿರುವ 10% ಮೀಸಲಾತಿಯನ್ನು ಸುಪ್ರೀಂಕೋರ್ಟ್ ಸೋಮವಾರ ಬೆಂಬಲಿಸಿದೆ. ಇದು ತಾರತಮ್ಯವಲ್ಲ ಮತ್ತು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ ಎಂದು ಅದು ತೀರ್ಪಿನಲ್ಲಿ ಹೇಳಿದೆ.

50% ಸೀಲಿಂಗ್ ಮಿತಿಯ ನಿಯಮವನ್ನು EWS ಮೀಸಲಾತಿ ಉಲ್ಲಂಘಿಸುವುದಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

EWS ಮೀಸಲಾತಿಯನ್ನು 2019 ರ ಸಾರ್ವತ್ರಿಕ ಚುನಾವಣೆಯ ಮೊದಲು ಪ್ರಾರಂಭಿಸಲಾಯಿತು ಮತ್ತು ಭಾರತೀಯ ಸಮಾಜದಲ್ಲಿ ಸಾಂಪ್ರದಾಯಿಕವಾಗಿ ಅಂಚಿನಲ್ಲಿರುವ ಸಮುದಾಯಗಳಿಗೆ ಪ್ರಯೋಜನಕಾರಿಯಾಗಲು ಇದನ್ನು ತರಲಾಗಿದೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು! 

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ಚುನಾವಣೆಗಳಲ್ಲಿ ಆಡಳಿತಾರೂಢ ಬಿಜೆಪಿ ಸೋತ ಕೂಡಲೇ 103 ನೇ ಸಾಂವಿಧಾನಿಕ ತಿದ್ದುಪಡಿಯನ್ನು ಮಾಡಿದ ಒಕ್ಕೂಟ ಸರ್ಕಾರವು ಜನವರಿ 2019 ರಲ್ಲಿ ಈ ಕಾನೂನು ಅಂಗೀಕರಿಸಿತ್ತು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದ ಈ ಕಾನೂನನ್ನು ಪ್ರಶ್ನಿಸಿ ತಕ್ಷಣವೇ ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಲಾಗಿತ್ತು.

1992 ರಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮೀಸಲಾತಿಯ 50% ದ ರಾಷ್ಟ್ರೀಯ ಮಿತಿಯನ್ನು ಈ ಮೀಸಲಾತಿ ದಾಟಬಹುದೆ ಮತ್ತು ಸಂವಿಧಾನದ “ಮೂಲ ರಚನೆ” ಯನ್ನು ಬದಲಾಯಿಸಿದ್ದು ಸರಿಯೆ ಎಂದು ಅರ್ಜಿಗಳು ಪ್ರಶ್ನಿಸಿದ್ದವು.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಐವರು ನ್ಯಾಯಮೂರ್ತಿಗಳಲ್ಲಿ ನಾಳೆ ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್‌‌ ಮಾತ್ರ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಆರ್ಥಿಕ ದುರ್ಬಲತೆ, ಆರ್ಥಿಕ ಹಿಂದುಳಿದಿರುವಿಕೆ ಸಂವಿಧಾನ ಈ ತಿದ್ದುಪಡಿಯ ಬೆನ್ನೆಲುಬಾಗಿದೆ. ಆದರೆ ಈ ತಿದ್ದುಪಡಿಯು ಸಾಂವಿಧಾನಿಕವಾಗಿ ಅಸಮರ್ಥನೀಯವಾಗಿದೆ. ಜೊತೆಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಯಂತಹ ವರ್ಗಗಳನ್ನು ಈ ಮೀಸಲಾತಿಯಿಂದ ಹೊರತುಪಡಿಸಿರುವುದು ಸಂವಿಧಾನಾತ್ಮಕವಾಗಿ ಅನುಮತಿಸಲಾಗುವುದಿಲ್ಲ” ಎಂದು ರವೀಂದ್ರ ಭಟ್‌‌ ಹೇಳಿದರು.

ಇದರ ಜೊತೆಗೆ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ತ್ರಿವೇದಿ ಅವರುಗಳು 75 ವರ್ಷಗಳು ಕಳೆದರೂ ಮೀಸಲಾತಿ ವ್ಯವಸ್ಥೆ ಮುಂದುವರೆದಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳು ಈ ಕಾನೂನನ್ನು ವಿರೋಧಿಸಲಿಲ್ಲ. ಆದರೆ ದೇಶದಲ್ಲೇ ಅತಿ ಹೆಚ್ಚು ಮೀಸಲಾತಿ ಹೊಂದಿರುವ ತಮಿಳುನಾಡು ಸೇರಿದಂತೆ ಒಟ್ಟು 40 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಆಲಿಸಿದೆ.

ಇದನ್ನೂ ಓದಿ: ಮುಂದಿನ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಇಡಬ್ಲ್ಯೂಎಸ್‌ ಮೀಸಲಾತಿ ಮಾನದಂಡ ಬದಲು: ಕೇಂದ್ರ

ಈ ಪ್ರಕರಣವನ್ನು ಮೊದಲು ಮೂವರು ನ್ಯಾಯಾಧೀಶರ ಮುಂದೆ ತರಲಾಗಿತ್ತು. ಆದರೆ ಅವರು ಅದನ್ನು 2019 ರಲ್ಲಿ ಐದು ನ್ಯಾಯಾಧೀಶರ ದೊಡ್ಡ ಪೀಠಕ್ಕೆ ವರ್ಗಾಯಿಸಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ನ್ಯಾಯಾಲಯವು ಈ ಪ್ರಕರಣವನ್ನು ನಿರಂತರವಾಗಿ ಆರೂವರೆ ದಿನಗಳ ವಿಚಾರಣೆಯನ್ನು ನಡೆಸಿತು ಮತ್ತು ಅದರ ತೀರ್ಪನ್ನು ಕಾಯ್ದಿರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಟ್ಟಿನಲ್ಲಿ, ಸಂವಿಧಾನದ ರಕ್ಷಣೆ ಮಾಡ್ತಾಇದ್ದೇವೆ ಎಂದು ಹೇಳಿಕೊಂಡು ಬಂದ ನ್ಯಾಯಲಯಾಗಳೇ ಸಂವಿಧಾನದ ಅಶಯಗಳನ್ನ ಗಾಳಿಗೆ ತೂರಿ ಅಸಂವಿಧಾನಕ ತೀರ್ಪು ನೀಡಿದೆ.

  2. EWS ಮೀಸಲಾತಿ, ಸುಪ್ರೀಂ ಕೋರ್ಟ್ 1992 ರಲ್ಲಿ ನಿಗದಿಪಡಿಸಿದ 50% ಮಿತಿ ಮೀರುವುದಿಲ್ಲ ಎಂಬುದು ಹೇಗೆ ಎಂದು ನನ್ನಂಥ ಪಾಮರರಿಗೆ ಅರ್ಥ ಆಗಲೇ ಇಲ್ಲ!

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...