Homeಮುಖಪುಟಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

- Advertisement -
- Advertisement -

ಬಡವರು ಅಥವಾ ಆರ್ಥಿಕವಾಗಿ ದುರ್ಬಲ ವಿಭಾಗ (EWS)ಗಳಿಗೆ ಕಾಲೇಜು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ನೀಡಿರುವ 10% ಮೀಸಲಾತಿಯನ್ನು ಸುಪ್ರೀಂಕೋರ್ಟ್ ಸೋಮವಾರ ಬೆಂಬಲಿಸಿದೆ. ಇದು ತಾರತಮ್ಯವಲ್ಲ ಮತ್ತು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ ಎಂದು ಅದು ತೀರ್ಪಿನಲ್ಲಿ ಹೇಳಿದೆ.

50% ಸೀಲಿಂಗ್ ಮಿತಿಯ ನಿಯಮವನ್ನು EWS ಮೀಸಲಾತಿ ಉಲ್ಲಂಘಿಸುವುದಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

EWS ಮೀಸಲಾತಿಯನ್ನು 2019 ರ ಸಾರ್ವತ್ರಿಕ ಚುನಾವಣೆಯ ಮೊದಲು ಪ್ರಾರಂಭಿಸಲಾಯಿತು ಮತ್ತು ಭಾರತೀಯ ಸಮಾಜದಲ್ಲಿ ಸಾಂಪ್ರದಾಯಿಕವಾಗಿ ಅಂಚಿನಲ್ಲಿರುವ ಸಮುದಾಯಗಳಿಗೆ ಪ್ರಯೋಜನಕಾರಿಯಾಗಲು ಇದನ್ನು ತರಲಾಗಿದೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು! 

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ಚುನಾವಣೆಗಳಲ್ಲಿ ಆಡಳಿತಾರೂಢ ಬಿಜೆಪಿ ಸೋತ ಕೂಡಲೇ 103 ನೇ ಸಾಂವಿಧಾನಿಕ ತಿದ್ದುಪಡಿಯನ್ನು ಮಾಡಿದ ಒಕ್ಕೂಟ ಸರ್ಕಾರವು ಜನವರಿ 2019 ರಲ್ಲಿ ಈ ಕಾನೂನು ಅಂಗೀಕರಿಸಿತ್ತು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದ ಈ ಕಾನೂನನ್ನು ಪ್ರಶ್ನಿಸಿ ತಕ್ಷಣವೇ ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಲಾಗಿತ್ತು.

1992 ರಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮೀಸಲಾತಿಯ 50% ದ ರಾಷ್ಟ್ರೀಯ ಮಿತಿಯನ್ನು ಈ ಮೀಸಲಾತಿ ದಾಟಬಹುದೆ ಮತ್ತು ಸಂವಿಧಾನದ “ಮೂಲ ರಚನೆ” ಯನ್ನು ಬದಲಾಯಿಸಿದ್ದು ಸರಿಯೆ ಎಂದು ಅರ್ಜಿಗಳು ಪ್ರಶ್ನಿಸಿದ್ದವು.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಐವರು ನ್ಯಾಯಮೂರ್ತಿಗಳಲ್ಲಿ ನಾಳೆ ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್‌‌ ಮಾತ್ರ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಆರ್ಥಿಕ ದುರ್ಬಲತೆ, ಆರ್ಥಿಕ ಹಿಂದುಳಿದಿರುವಿಕೆ ಸಂವಿಧಾನ ಈ ತಿದ್ದುಪಡಿಯ ಬೆನ್ನೆಲುಬಾಗಿದೆ. ಆದರೆ ಈ ತಿದ್ದುಪಡಿಯು ಸಾಂವಿಧಾನಿಕವಾಗಿ ಅಸಮರ್ಥನೀಯವಾಗಿದೆ. ಜೊತೆಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಯಂತಹ ವರ್ಗಗಳನ್ನು ಈ ಮೀಸಲಾತಿಯಿಂದ ಹೊರತುಪಡಿಸಿರುವುದು ಸಂವಿಧಾನಾತ್ಮಕವಾಗಿ ಅನುಮತಿಸಲಾಗುವುದಿಲ್ಲ” ಎಂದು ರವೀಂದ್ರ ಭಟ್‌‌ ಹೇಳಿದರು.

ಇದರ ಜೊತೆಗೆ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ತ್ರಿವೇದಿ ಅವರುಗಳು 75 ವರ್ಷಗಳು ಕಳೆದರೂ ಮೀಸಲಾತಿ ವ್ಯವಸ್ಥೆ ಮುಂದುವರೆದಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳು ಈ ಕಾನೂನನ್ನು ವಿರೋಧಿಸಲಿಲ್ಲ. ಆದರೆ ದೇಶದಲ್ಲೇ ಅತಿ ಹೆಚ್ಚು ಮೀಸಲಾತಿ ಹೊಂದಿರುವ ತಮಿಳುನಾಡು ಸೇರಿದಂತೆ ಒಟ್ಟು 40 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಆಲಿಸಿದೆ.

ಇದನ್ನೂ ಓದಿ: ಮುಂದಿನ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಇಡಬ್ಲ್ಯೂಎಸ್‌ ಮೀಸಲಾತಿ ಮಾನದಂಡ ಬದಲು: ಕೇಂದ್ರ

ಈ ಪ್ರಕರಣವನ್ನು ಮೊದಲು ಮೂವರು ನ್ಯಾಯಾಧೀಶರ ಮುಂದೆ ತರಲಾಗಿತ್ತು. ಆದರೆ ಅವರು ಅದನ್ನು 2019 ರಲ್ಲಿ ಐದು ನ್ಯಾಯಾಧೀಶರ ದೊಡ್ಡ ಪೀಠಕ್ಕೆ ವರ್ಗಾಯಿಸಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ನ್ಯಾಯಾಲಯವು ಈ ಪ್ರಕರಣವನ್ನು ನಿರಂತರವಾಗಿ ಆರೂವರೆ ದಿನಗಳ ವಿಚಾರಣೆಯನ್ನು ನಡೆಸಿತು ಮತ್ತು ಅದರ ತೀರ್ಪನ್ನು ಕಾಯ್ದಿರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಟ್ಟಿನಲ್ಲಿ, ಸಂವಿಧಾನದ ರಕ್ಷಣೆ ಮಾಡ್ತಾಇದ್ದೇವೆ ಎಂದು ಹೇಳಿಕೊಂಡು ಬಂದ ನ್ಯಾಯಲಯಾಗಳೇ ಸಂವಿಧಾನದ ಅಶಯಗಳನ್ನ ಗಾಳಿಗೆ ತೂರಿ ಅಸಂವಿಧಾನಕ ತೀರ್ಪು ನೀಡಿದೆ.

  2. EWS ಮೀಸಲಾತಿ, ಸುಪ್ರೀಂ ಕೋರ್ಟ್ 1992 ರಲ್ಲಿ ನಿಗದಿಪಡಿಸಿದ 50% ಮಿತಿ ಮೀರುವುದಿಲ್ಲ ಎಂಬುದು ಹೇಗೆ ಎಂದು ನನ್ನಂಥ ಪಾಮರರಿಗೆ ಅರ್ಥ ಆಗಲೇ ಇಲ್ಲ!

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...