ಬಡವರು ಅಥವಾ ಆರ್ಥಿಕವಾಗಿ ದುರ್ಬಲ ವಿಭಾಗ (EWS)ಗಳಿಗೆ ಕಾಲೇಜು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ನೀಡಿರುವ 10% ಮೀಸಲಾತಿಯನ್ನು ಸುಪ್ರೀಂಕೋರ್ಟ್ ಸೋಮವಾರ ಬೆಂಬಲಿಸಿದೆ. ಇದು ತಾರತಮ್ಯವಲ್ಲ ಮತ್ತು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ ಎಂದು ಅದು ತೀರ್ಪಿನಲ್ಲಿ ಹೇಳಿದೆ.
50% ಸೀಲಿಂಗ್ ಮಿತಿಯ ನಿಯಮವನ್ನು EWS ಮೀಸಲಾತಿ ಉಲ್ಲಂಘಿಸುವುದಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
EWS ಮೀಸಲಾತಿಯನ್ನು 2019 ರ ಸಾರ್ವತ್ರಿಕ ಚುನಾವಣೆಯ ಮೊದಲು ಪ್ರಾರಂಭಿಸಲಾಯಿತು ಮತ್ತು ಭಾರತೀಯ ಸಮಾಜದಲ್ಲಿ ಸಾಂಪ್ರದಾಯಿಕವಾಗಿ ಅಂಚಿನಲ್ಲಿರುವ ಸಮುದಾಯಗಳಿಗೆ ಪ್ರಯೋಜನಕಾರಿಯಾಗಲು ಇದನ್ನು ತರಲಾಗಿದೆ.
ಇದನ್ನೂ ಓದಿ: 10% ಮೀಸಲಾತಿ: ಆರ್ಎಸ್ಎಸ್ ಮಂದಿ ಹಬ್ಬಿಸಿರುವ 100% ಸುಳ್ಳುಗಳು!
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢ ಚುನಾವಣೆಗಳಲ್ಲಿ ಆಡಳಿತಾರೂಢ ಬಿಜೆಪಿ ಸೋತ ಕೂಡಲೇ 103 ನೇ ಸಾಂವಿಧಾನಿಕ ತಿದ್ದುಪಡಿಯನ್ನು ಮಾಡಿದ ಒಕ್ಕೂಟ ಸರ್ಕಾರವು ಜನವರಿ 2019 ರಲ್ಲಿ ಈ ಕಾನೂನು ಅಂಗೀಕರಿಸಿತ್ತು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದ ಈ ಕಾನೂನನ್ನು ಪ್ರಶ್ನಿಸಿ ತಕ್ಷಣವೇ ಸುಪ್ರೀಂಕೋರ್ಟ್ನಲ್ಲಿ ದಾವೆ ಹೂಡಲಾಗಿತ್ತು.
1992 ರಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮೀಸಲಾತಿಯ 50% ದ ರಾಷ್ಟ್ರೀಯ ಮಿತಿಯನ್ನು ಈ ಮೀಸಲಾತಿ ದಾಟಬಹುದೆ ಮತ್ತು ಸಂವಿಧಾನದ “ಮೂಲ ರಚನೆ” ಯನ್ನು ಬದಲಾಯಿಸಿದ್ದು ಸರಿಯೆ ಎಂದು ಅರ್ಜಿಗಳು ಪ್ರಶ್ನಿಸಿದ್ದವು.
ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ
ಐವರು ನ್ಯಾಯಮೂರ್ತಿಗಳಲ್ಲಿ ನಾಳೆ ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್ ಮಾತ್ರ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಆರ್ಥಿಕ ದುರ್ಬಲತೆ, ಆರ್ಥಿಕ ಹಿಂದುಳಿದಿರುವಿಕೆ ಸಂವಿಧಾನ ಈ ತಿದ್ದುಪಡಿಯ ಬೆನ್ನೆಲುಬಾಗಿದೆ. ಆದರೆ ಈ ತಿದ್ದುಪಡಿಯು ಸಾಂವಿಧಾನಿಕವಾಗಿ ಅಸಮರ್ಥನೀಯವಾಗಿದೆ. ಜೊತೆಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಯಂತಹ ವರ್ಗಗಳನ್ನು ಈ ಮೀಸಲಾತಿಯಿಂದ ಹೊರತುಪಡಿಸಿರುವುದು ಸಂವಿಧಾನಾತ್ಮಕವಾಗಿ ಅನುಮತಿಸಲಾಗುವುದಿಲ್ಲ” ಎಂದು ರವೀಂದ್ರ ಭಟ್ ಹೇಳಿದರು.
ಇದರ ಜೊತೆಗೆ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ತ್ರಿವೇದಿ ಅವರುಗಳು 75 ವರ್ಷಗಳು ಕಳೆದರೂ ಮೀಸಲಾತಿ ವ್ಯವಸ್ಥೆ ಮುಂದುವರೆದಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳು ಈ ಕಾನೂನನ್ನು ವಿರೋಧಿಸಲಿಲ್ಲ. ಆದರೆ ದೇಶದಲ್ಲೇ ಅತಿ ಹೆಚ್ಚು ಮೀಸಲಾತಿ ಹೊಂದಿರುವ ತಮಿಳುನಾಡು ಸೇರಿದಂತೆ ಒಟ್ಟು 40 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಆಲಿಸಿದೆ.
ಇದನ್ನೂ ಓದಿ: ಮುಂದಿನ ವರ್ಷದಿಂದ ವೈದ್ಯಕೀಯ ಕೋರ್ಸ್ಗಳ ಇಡಬ್ಲ್ಯೂಎಸ್ ಮೀಸಲಾತಿ ಮಾನದಂಡ ಬದಲು: ಕೇಂದ್ರ
ಈ ಪ್ರಕರಣವನ್ನು ಮೊದಲು ಮೂವರು ನ್ಯಾಯಾಧೀಶರ ಮುಂದೆ ತರಲಾಗಿತ್ತು. ಆದರೆ ಅವರು ಅದನ್ನು 2019 ರಲ್ಲಿ ಐದು ನ್ಯಾಯಾಧೀಶರ ದೊಡ್ಡ ಪೀಠಕ್ಕೆ ವರ್ಗಾಯಿಸಿದ್ದರು. ಕಳೆದ ಸೆಪ್ಟೆಂಬರ್ನಲ್ಲಿ ನ್ಯಾಯಾಲಯವು ಈ ಪ್ರಕರಣವನ್ನು ನಿರಂತರವಾಗಿ ಆರೂವರೆ ದಿನಗಳ ವಿಚಾರಣೆಯನ್ನು ನಡೆಸಿತು ಮತ್ತು ಅದರ ತೀರ್ಪನ್ನು ಕಾಯ್ದಿರಿಸಿತ್ತು.
ಒಟ್ಟಿನಲ್ಲಿ, ಸಂವಿಧಾನದ ರಕ್ಷಣೆ ಮಾಡ್ತಾಇದ್ದೇವೆ ಎಂದು ಹೇಳಿಕೊಂಡು ಬಂದ ನ್ಯಾಯಲಯಾಗಳೇ ಸಂವಿಧಾನದ ಅಶಯಗಳನ್ನ ಗಾಳಿಗೆ ತೂರಿ ಅಸಂವಿಧಾನಕ ತೀರ್ಪು ನೀಡಿದೆ.
EWS ಮೀಸಲಾತಿ, ಸುಪ್ರೀಂ ಕೋರ್ಟ್ 1992 ರಲ್ಲಿ ನಿಗದಿಪಡಿಸಿದ 50% ಮಿತಿ ಮೀರುವುದಿಲ್ಲ ಎಂಬುದು ಹೇಗೆ ಎಂದು ನನ್ನಂಥ ಪಾಮರರಿಗೆ ಅರ್ಥ ಆಗಲೇ ಇಲ್ಲ!
ನನಗೂ ಅರ್ಥ ಆಗಿಲ್ಲಾ