HomeಮುಖಪುಟCAA ವಿರುದ್ಧದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರಿಂಕೋರ್ಟ್‌

CAA ವಿರುದ್ಧದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರಿಂಕೋರ್ಟ್‌

- Advertisement -
- Advertisement -

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ (ಇಂದು) ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ತ್ರಿಸದಸ್ಯ ಪೀಠವು ಈ ಕಾಯಿದೆಯು ಭಾರತೀಯ ಸಂವಿಧಾನದ 14 ನೇ ವಿಧಿಯನ್ನು ಉಲ್ಲಂಘಿಸುತ್ತದೆಯೇ ಎಂದು ವಿಚಾರಣೆ ನಡೆಸಲಿದೆ.

ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿದ್ದು, ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ವಲಸಿಗರಿಗೆ, ವಿಶೇಷವಾಗಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಂತಹ ದೇಶಗಳಲ್ಲಿ ಕಿರುಕುಳಕ್ಕೊಳಗಾದವರಿಗೆ ಭಾರತೀಯ ಪೌರತ್ವವನ್ನು ಖಾತರಿಪಡಿಸುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರವು ತಿದ್ದುಪಡಿಯನ್ನು ‘ಸಹಾನುಭೂತಿ ಮತ್ತು ಸೇರ್ಪಡೆ’ ಎಂದು ವಿವರಿಸಿದ್ದರೂ, ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳು, ತಿದ್ದುಪಡಿಯಿಂದ ಮುಸ್ಲಿಂ ಸಮುದಾಯವನ್ನು ಪಟ್ಟಿಯಿಂದ ಹೊರಗಿಟ್ಟಿದ್ದು ‘ತಾರತಮ್ಯ’ ಎಂದು ಕರೆದಿದೆ.

ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

ಅಸಾದುದ್ದೀನ್ ಓವೈಸಿ, ಜೈರಾಮ್ ರಮೇಶ್, ರಮೇಶ್ ಚೆನ್ನಿತಲ ಮತ್ತು ಮಹುವಾ ಮೊಯಿತ್ರಾ ಅವರಂತಹ ರಾಜಕಾರಣಿಗಳು ಮತ್ತು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ, ದ್ರಾವಿಡ ಮುನ್ನೇತ್ರ ಕಳಗಂ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮತ್ತು ಅಸೋಮ್ ಗಣ ಪರಿಷತ್‌ನಂತಹ ರಾಜಕೀಯ ಪಕ್ಷಗಳು ಕೂಡಾ ಕಾಯ್ದೆಯ ವಿರುದ್ಧ ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.

ಪ್ರಕರಣ ಈಗ ಎಲ್ಲಿ ನಿಂತಿದೆ?

ವಲಸಿಗರ ಸಾಂದ್ರತೆ ಹೆಚ್ಚಿರುವ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪೌರತ್ವ ಅರ್ಜಿಗಳನ್ನು ಸ್ವೀಕರಿಸಲು ಅಧಿಕಾರ ನೀಡುವ 2021ರ ಮೇ 28 ರಂದು ಒಕ್ಕೂಟ ಸರ್ಕಾರದ ನಿರ್ದೇಶನದ ವಿರುದ್ಧ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ ಕೋರಿದೆ. ಒಕ್ಕೂಟ ಸರ್ಕಾರವು ಪ್ರತಿ ಪ್ರತಿಕ್ರಿಯೆ ಸಲ್ಲಿಸಿದಾಗಿನಿಂದ ನ್ಯಾಯಾಲಯವು ಪ್ರಕರಣವನ್ನು ಕೈಗೆತ್ತಿಕೊಂಡಿಲ್ಲ.

ಕಾಯ್ದೆಯ ಸವಾಲುಗಳೇನು?

ನ್ಯಾಯಾಲಯವು ಪ್ರಾಥಮಿಕವಾಗಿ ಆರ್ಟಿಕಲ್ 14 ರ ವಿರುದ್ಧವಾಗಿ ಕಾಯಿದೆಯ ಸಿಂಧುತ್ವವನ್ನು ಪರಿಶೀಲಿಸುತ್ತಿದೆ ಎಂದು ಹೇಳಲಾಗುತ್ತದೆ. ಭಾರತೀಯ ಭೂಪ್ರದೇಶದಲ್ಲಿ ಜಾತಿ, ನಂಬಿಕೆ ಮತ್ತು ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ರಕ್ಷಣೆ ನೀಡುವ ವಿಷಯದಲ್ಲಿ ಈ ಕಾಯ್ದೆ ಸಂವಿಧಾನದ ಉಲ್ಲಂಘನೆ ಮಾಡುತ್ತದೆಯೇ ಅಥವಾ ಕಾನೂನಿನ ಮುಂದೆ ಸಮಾನತೆಯ ಹಕ್ಕನ್ನು ನಿರಾಕರಿಸುತ್ತದೆಯೇ ಎಂಬುದನ್ನು ಸುಪ್ರೀಂಕೋರ್ಟ್‌ ಪರಿಶೀಲನೆ ಮಾಡಲಿದೆ.

ಇದನ್ನೂ ಓದಿ: ದ್ವೇಷ ಪ್ರಚೋದನೆ; ಕನ್ನಡ ಸುದ್ದಿವಾಹಿನಿಗಳ ವಿರುದ್ಧ 17 ದೂರು ನೀಡಿದರೂ ಪೊಲೀಸರಿಂದ ಸಿಗದ ಪ್ರತಿಕ್ರಿಯೆ- ಸಿಎಎಚ್‌ಎಸ್‌

ಕೆಲವು ಧರ್ಮಗಳನ್ನು ಹೆಸರಿಸಿ, ಮುಸ್ಲಿಂ ಸಮುದಾಯವನ್ನು ಹೊರತುಪಡಿಸುವ ವಿಷಯದಲ್ಲಿ ಈ ಕಾಯಿದೆ ತಾರತಮ್ಯ ಮಾಡಿದೆಯೇ ಎಂಬುದು ಸಿಎಎಗೆ ಪ್ರಾಥಮಿಕ ಸವಾಲಾಗಿದೆ. ಮುಖ್ಯವಾಗಿ ನೆರೆಯ ಮೂರು ರಾಷ್ಟ್ರಗಳಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರ ರಕ್ಷಣೆ ಮಾತ್ರ ಕಾನೂನಿನ ಗುರಿಯಾಗಿದ್ದರೆ, ಇತರ ನೆರೆಯ ದೇಶಗಳನ್ನು ಮತ್ತು ಮುಸ್ಲಿಂ ಸಮುದಾಯವನ್ನು ಹೊರಗಿಡುವುದು ಕಾನೂನಿಗೆ ಸವಾಲಾಗಿ ಪರಿಣಮಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...