ಕೃಷಿ ಮಸೂದೆಯನ್ನು ವಿರೋಧಿಸಿ ಸಂಸತ್ತಿನಲ್ಲಿ ಗದ್ದಲ ಎಬ್ಬಿಸಿದ್ದಾರೆಂದು ಆರೋಪಿಸಿ ಅಮಾನತುಗೊಂಡಿರುವ ಸಂಸದರು ತಮ್ಮ ಪ್ರತಿಭಟನೆಯನ್ನು ರಾತ್ರಿಯಿಡಿ ಮುಂದುವರೆಸಿದರು. ಇವರ ಪ್ರತಿಭಟನೆಗೆ ಹೆಚ್ಚಿನ ವಿರೋಧ ಪಕ್ಷಗಳ ಸಂಸದರು ಬೆಂಬಲ ವ್ಯಕ್ತಪಡಿಸಿದರು.
ಅಮಾನತುಗೊಂಡಿರುವ ಸಂಸದರಲ್ಲಿ ಕಾಂಗ್ರೆಸ್ ರಿಪುನ್ ಬೋರಾ ಮತ್ತು ಸಿಪಿಐಎಂ ಎಲರಾಮಂ ಕರೀಮ್ 65 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದು, ಅವರ ಆರೋಗ್ಯದ ಕಾಳಜಿಗಾಗಿ ಸ್ಥಳದಲ್ಲಿ ಆಂಬ್ಯುಲೆನ್ಸ್ ಒಂದನ್ನು ನಿಯೋಜಿಸಲಾಗಿತ್ತು.
ಇದನ್ನೂ ಓದಿ: ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್
ಪ್ರತಿಭಟನಾ ನಿರತ ತಮ್ಮ ಸಹೋದ್ಯೋಗಿಗಳ ಪರ ಒಗ್ಗಟ್ಟು ಪ್ರದರ್ಶಿಸಿಸಿ ಜೆಡಿಎಸ್ ನಾಯಕ ಹೆಚ್.ಡಿ. ದೇವೇಗೌಡ, ನ್ಯಾಷನಲ್ ಕಾನ್ಫರೆನ್ಸ್ನ ನಾಯಕ ಫಾರೂಖ್ ಅಬ್ದುಲ್ಲಾ, ಸಮಾಜವಾದಿ ಪಕ್ಷದ ಜಯಾ ಬಚ್ಚನ್, ಕಾಂಗ್ರೆಸ್ನ ಅಹ್ಮದ್ ಪಟೇಲ್ ಮತ್ತು ಎನ್ಸಿಪಿಯ ಪ್ರಫುಲ್ ಪಟೇಲ್ ಸ್ಥಳದಲ್ಲಿ ಹಾಜರಿದ್ದು ಪ್ರತಿಭಟನೆ ಬೆಂಬಲಿಸಿದರು.
#WATCH: Suspended Trinamool Congress MP Dola Sen sings a song in the Parliament premises.
8 suspended Rajya Sabha MPs are protesting at Gandhi statue against their suspension from the House. pic.twitter.com/o1LXmni7Sp
— ANI (@ANI) September 21, 2020
ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!