Homeಮುಖಪುಟ"ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ": ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

- Advertisement -
- Advertisement -

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ ‘ಐತಿಹಾಸಿಕ ಅನ್ಯಾಯ’ ಎಂದು ಕರೆದಿದ್ದಾರೆ ಮತ್ತು ಗುರುವಾರ (ಏ16) ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ ನೀಡಿದ್ದಾರೆ.

“ಭಾರತದ ಪ್ರಗತಿಗೆ ಕೊಡುಗೆ ನೀಡಿದ್ದಕ್ಕಾಗಿ ದಕ್ಷಿಣ ರಾಜ್ಯಗಳನ್ನು ಶಿಕ್ಷಿಸಲಾಗುತ್ತಿದೆಯೇ” ಎಂದು ಸ್ಟಾಲಿನ್ ಪ್ರಶ್ನಿಸಿದ್ದು, ಈ ಕ್ರಮವು ದಕ್ಷಿಣದಾದ್ಯಂತ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದೆ ಎಂದು ಎಚ್ಚರಿಸಿದ್ದಾರೆ.

ಪ್ರಸ್ತಾವಿತ ತಿದ್ದುಪಡಿಯನ್ನು ‘ಗಂಭೀರ ಅಪಾಯ’ ಎಂದು ಕರೆದಿರುವ ಸ್ಟಾಲಿನ್, ಕ್ಷೇತ್ರ ಮರುವಿಂಗಡನೆ ವಿರುದ್ಧ ಹೋರಾಟ ರೂಪಿಸಲು ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ನಡೆಸಿದರು.

“ನಮ್ಮ ತಲೆಯ ಮೇಲೆ ನೇತಾಡುತ್ತಿದ್ದ ಕತ್ತಿ ಈಗ ನಮ್ಮ ಮೇಲೆ ಇಳಿದಿದೆ… ಇದು ಬರೀ ಪಕ್ಷಗಳು ಅಥವಾ ವ್ಯಕ್ತಿಗಳಿಗೆ ಸಂಬಂಧಿಸಿದ ವಿಷಯವಲ್ಲ. ಇದು ನಮ್ಮ ಜನರ ಹಕ್ಕುಗಳನ್ನು ರಕ್ಷಿಸುವ ವಿಷಯ. ನಮ್ಮ ಪ್ರಜಾಪ್ರಭುತ್ವವನ್ನು ಕಾಪಾಡಲು ಭಾರತದಾದ್ಯಂತ ಎಲ್ಲಾ ಪಕ್ಷಗಳು ಮತ್ತು ಸಂಸದರು ಒಂದಾಗಬೇಕೆಂದು ನಾನು ಮನವಿ ಮಾಡುತ್ತೇನೆ” ಎಂದು ಸ್ಟಾಲಿನ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

2011ರ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ನಡೆಸಿದ ನಂತರ, ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ. ಈ ಕ್ರಮವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು (ಮೂರನೇ ಒಂದು ಭಾಗದಷ್ಟು) ಮೀಸಲಾತಿಯನ್ನು ಜಾರಿಗೆ ತರುವುದರೊಂದಿಗೆ ಸಂಬಂಧ ಹೊಂದಿದೆ.

ಎಕ್ಸ್‌ನ ಮತ್ತೊಂದು ಪೋಸ್ಟ್‌ನಲ್ಲಿ ಸ್ಟಾಲಿನ್ ಅವರು, “ಕ್ಷೇತ್ರ ಮರುವಿಂಗಡನೆ ಭಾರತದ ಪ್ರಗತಿಗೆ ಕೊಡುಗೆ ನೀಡಿದ್ದಕ್ಕಾಗಿ ನಮಗೆ ವಿಧಿಸುತ್ತಿರುವ ಶಿಕ್ಷೆಯೇ” ಎಂದು ಪ್ರಶ್ನಿಸಿದ್ದಾರೆ. “ತಮಿಳುನಾಡು ಮತ್ತು ದಕ್ಷಿಣ ರಾಜ್ಯಗಳಿಗೆ ಮರುಪಾವತಿ ಮಾಡುವ ವಿಧಾನ ಇದುವೇ?” ಎಂದು ಕೇಳಿದ್ದಾರೆ.

“ಕೇಂದ್ರ ಬಿಜೆಪಿ ಸರ್ಕಾರ ನಾಳೆ ಸಂಸತ್ತಿನಲ್ಲಿ ಮಂಡಿಸಲು ಯೋಜಿಸಿರುವ ಕ್ಷೇತ್ರ ಮರುವಿಂಗಡನೆ ತಿದ್ದುಪಡಿಯು ತಮಿಳುನಾಡು ಮತ್ತು ದಕ್ಷಿಣ ರಾಜ್ಯಗಳ ವಿರುದ್ಧದ ಬೃಹತ್ ಐತಿಹಾಸಿಕ ಅನ್ಯಾಯವಾಗಿದೆ. ವಿಂಧ್ಯ ಪರ್ವತಗಳ ದಕ್ಷಿಣದಲ್ಲಿರುವ ಪ್ರತಿಯೊಬ್ಬ ದಕ್ಷಿಣ ಭಾರತೀಯರು ಕೋಪದಿಂದ ಕುದಿಯುತ್ತಿದ್ದಾರೆ” ಎಂದು ಸ್ಟಾಲಿನ್ ಬರೆದುಕೊಂಡಿದ್ದಾರೆ.

“ಬಿಜೆಪಿ ಬೆಂಕಿಯೊಂದಿಗೆ ಆಟವಾಡುತ್ತಿದೆ. ತಮಿಳುನಾಡಿನಾದ್ಯಂತ, ಕ್ಷೇತ್ರ ಮರುವಿಂಗಡನೆ ವಿರೋಧಿಸಿ ನಾಳೆ ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳಿಂದ ಕಪ್ಪು ಬಾವುಟಗಳು ಮೇಲೇರಲಿವೆ… ಕೇಂದ್ರ ಸರ್ಕಾರ ತಮಿಳುನಾಡಿನ ಧ್ವನಿಯನ್ನು ಗೌರವಿಸಲು ಮತ್ತು ತನ್ನ ನಿರ್ಧಾರದಿಂದ ಹಿಂದೆ ಸರಿಯಲು ನಿರಾಕರಿಸಿದರೆ, ನೀವು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನೀವು ತೆರಬೇಕಾದ ಬೆಲೆ ಭಾರೀ ಪ್ರಮಾಣದಲ್ಲಿರುತ್ತದೆ. ಡಿಎಂಕೆ ಅಧ್ಯಕ್ಷನಾಗಿ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಸ್ವಾಭಿಮಾನಿ ತಮಿಳನಾಗಿ ಇದು ನನ್ನ ಕಠಿಣ ಎಚ್ಚರಿಕೆ” ಎಂದು ಸ್ಟಾಲಿನ್ ಖಾರವಾಗಿ ಹೇಳಿದ್ದಾರೆ.

ಈ ಪ್ರಕ್ರಿಯೆ ರಾಜ್ಯದ ಹಿತಾಸಕ್ತಿಗಳಿಗೆ ಹಾನಿ ಮಾಡಿದರೆ ಅಥವಾ ದಕ್ಷಿಣ ರಾಜ್ಯಗಳ ಮೇಲೆ ಅಸಮಾನವಾಗಿ ಪರಿಣಾಮ ಬೀರಿದರೆ ತಮಿಳುನಾಡು ದೊಡ್ಡ ಪ್ರಮಾಣದ ಪ್ರತಿಭಟನೆಯನ್ನು ಪ್ರಾರಂಭಿಸುತ್ತದೆ ಎಂದು ಸ್ಟಾಲಿನ್ ಮಂಗಳವಾರ (ಏ.14) ಎಚ್ಚರಿಸಿದ್ದರು. ಏಪ್ರಿಲ್ 16 ರಂದು ನಡೆಯುವ ಸಂಸತ್ತಿನ ವಿಶೇಷ ಅಧಿವೇಶನವನ್ನು ಉಲ್ಲೇಖಿಸಿರುವ ಅವರು, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳ ಮಧ್ಯೆ ಸಂಸತ್ತಿನ ವಿಶೇಷ ಅಧಿವೇಶನವನ್ನು ‘ಬಲವಂತವಾಗಿ ಕರೆಯಲಾಗಿದೆ’ ಎಂದು ಹೇಳಿದ್ದರು.

ವಿಶೇಷ ಅಧಿವೇಶನದಲ್ಲಿ, ಕೇಂದ್ರ ಸರ್ಕಾರವು ಕ್ಷೇತ್ರ ಮರುವಿಂಗಡನೆ ಕುರಿತು ಸಾಂವಿಧಾನಿಕ ತಿದ್ದುಪಡಿಯನ್ನು ಜಾರಿಗೆ ತರಲು ಉದ್ದೇಶಿಸಿದೆ. ತಮಿಳುನಾಡು ಸೇರಿದಂತೆ ದಕ್ಷಿಣ ರಾಜ್ಯಗಳ ಮೇಲೆ ಕೇಂದ್ರವು ತನ್ನ ನಿರ್ಧಾರವನ್ನು ಒತ್ತಾಯಿಸಲು ಉದ್ದೇಶಿಸಿದೆ ಎಂದಿದ್ದಾರೆ.

ಸೀಮಿತ ವಿಂಗಡಣೆಯನ್ನು ಜಾರಿಗೆ ತರುವ ಈ ಆತುರದ ಪ್ರಯತ್ನವು ಬಿಜೆಪಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಸ್ಪಷ್ಟ ದಾಳಿಯಾಗಿದೆ. ಅದಕ್ಕಿಂತ ಹೆಚ್ಚಾಗಿ, ಇದು ರಾಜ್ಯಗಳ ಹಕ್ಕುಗಳ ಮೇಲಿನ ನೇರ ದಾಳಿಯಾಗಿದೆ ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

ನೀವು ಈ ಹಿಂದೆಂದೂ ನೋಡಿರದ ತಮಿಳುನಾಡನ್ನು ಇನ್ನು ಮುಂದೆ ನೋಡಲಿದ್ದೀರಿ. 1950 ಮತ್ತು 1960ರ ದಶಕದ ಡಿಎಂಕೆ ಪಕ್ಷದ ಆವೇಶ ಮತ್ತು ಸ್ಫೂರ್ತಿಯನ್ನು ಭಾರತವು ಮತ್ತೊಮ್ಮೆ ಸಾಕ್ಷೀಕರಿಸಲಿದೆ. ಇದನ್ನು ಬೆದರಿಕೆ ಎಂದು ತಪ್ಪಾಗಿ ಭಾವಿಸಬೇಡಿ; ಇದೊಂದು ಎಚ್ಚರಿಕೆ. ನೀವು ಇದನ್ನು ಬೆದರಿಕೆ ಎಂದೇ ವ್ಯಾಖ್ಯಾನಿಸಲು ಬಯಸಿದರೂ ನಮಗೇನೂ ತೊಂದರೆಯಿಲ್ಲ. ಹೌದು, ಇದು ತಮಿಳುನಾಡಿನಿಂದ ನೀಡುತ್ತಿರುವ ಎಚ್ಚರಿಕೆ” ಸ್ಟಾಲಿನ್ ಖಾರವಾಗಿ ನುಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...