Homeಮುಖಪುಟಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

- Advertisement -
- Advertisement -

ಕೊರೊನಾ ವಿರುದ್ದದ ಹೋರಾಟಕ್ಕೆ ನೆರೆಹೊರೆಯ ಸಣ್ಣ ದೇಶಗಳು ಭಾರತಕ್ಕೆ ಸಹಾಯ ನೀಡುತ್ತಿದೆ, ಆದರೆ ಕೇಂದ್ರದ ಮೋದಿ ಸರ್ಕಾರ ಮಾತ್ರ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಬಹುಕೋಟಿಯ ಸೆಂಟ್ರಲ್ ವಿಸ್ಟಾ ಯೋಜನೆಯ ಕೆಲಸವನ್ನು ನಿಲ್ಲಿಸಲು ಕೂಡಾ ಸಿದ್ಧವಾಗಿಲ್ಲ ಎಂದು ಶಿವಸೇನೆ ಶನಿವಾರ ಕೇಂದ್ರದ ವಿರುದ್ದ ಕಿಡಿ ಕಾರಿದೆ.

ಹಿಂದಿನ ಪ್ರಧಾನ ಮಂತ್ರಿಗಳಾದ ಪಂಡಿತ್ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ಮನಮೋಹನ್ ಸಿಂಗ್ ಸೇರಿದಂತೆ ಕಳೆದ 70 ವರ್ಷಗಳಲ್ಲಿ ನಿರ್ಮಿಸಲಾದ ವ್ಯವಸ್ಥೆಯೆ ಈ ಕಠಿಣ ಸಂದರ್ಭವನ್ನು ಎದುರಿಸಲು ದೇಶಕ್ಕೆ ಸಹಾಯ ಮಾಡಿದೆ ಎಂದು ಶಿವಸೇನೆ ಹೇಳಿದೆ.

ಇದನ್ನೂ ಓದಿ: ನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

“ದೇಶದಲ್ಲಿ ಕೊರೊನಾ ವೈರಸ್ ಹರಡುವ ವೇಗದಿಂದಾಗಿ ಭಾರತವು ಜಗತ್ತಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಯುನಿಸೆಫ್ ಆತಂಕ ವ್ಯಕ್ತಪಡಿಸಿದೆ. ಅದು ಕೊರೊನಾ ವಿರುದ್ಧದ ಹೋರಾಟದಲ್ಲಿ ಗರಿಷ್ಠ ಸಂಖ್ಯೆಯ ದೇಶಗಳು ಭಾರತಕ್ಕೆ ಸಹಾಯ ಮಾಡಬೇಕೆಂದು ಮನವಿ ಮಾಡಿದೆ. ಬಾಂಗ್ಲಾದೇಶ 10,000 ರೆಮ್‌ಡೆಸಿವಿರ್ ಬಾಟಲುಗಳನ್ನು ಕಳುಹಿಸಿದರೆ, ಭೂತಾನ್ ವೈದ್ಯಕೀಯ ಆಮ್ಲಜನಕವನ್ನು ಕಳುಹಿಸಿದೆ. ನೇಪಾಳ, ಮ್ಯಾನ್ಮಾರ್ ಮತ್ತು ಶ್ರೀಲಂಕಾ ಸಹ ‘ಆತ್ಮನಿರ್ಭರ್’ ಭಾರತಕ್ಕೆ ಸಹಾಯವನ್ನು ನೀಡಿವೆ” ಎಂದು ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿನ ಸಂಪಾದಕೀಯದಲ್ಲಿ ಪಕ್ಷವು ತಿಳಿಸಿದೆ.

“ಸ್ಪಷ್ಟವಾಗಿ ಹೇಳುವುದಾದರೆ, ನೆಹರೂ-ಗಾಂಧಿ ನಿರ್ಮಿಸಿದ ವ್ಯವಸ್ಥೆಯಲ್ಲಿ ಭಾರತ ಉಳಿದುಕೊಂಡಿದೆ. ಅನೇಕ ಬಡ ದೇಶಗಳು ಭಾರತಕ್ಕೆ ಸಹಾಯವನ್ನು ನೀಡುತ್ತಿವೆ. ಈ ಹಿಂದೆ ಪಾಕಿಸ್ತಾನ, ರುವಾಂಡಾ ಮತ್ತು ಕಾಂಗೋ ಮುಂತಾದ ದೇಶಗಳು ಇತರರಿಂದ ಸಹಾಯ ಪಡೆಯುತ್ತಿದ್ದವು. ಆದರೆ ಇಂದಿನ ಆಡಳಿತಗಾರರ ತಪ್ಪು ನೀತಿಗಳಿಂದಾಗಿ ಭಾರತವು ಈಗ ಆ ಪರಿಸ್ಥಿತಿಯನ್ನು ಎದುರಿಸುತ್ತಿದೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ಆದರೆ ಈ ಬಡ ದೇಶಗಳು ಭಾರತಕ್ಕೆ ತಮ್ಮದೇ ಆದ ರೀತಿಯಲ್ಲಿ ಸಹಾಯ ಮಾಡುತ್ತಿದ್ದರೆ, ದೆಹಲಿಯಲ್ಲಿನ 20,000 ಕೋಟಿ ಮೌಲ್ಯದ ಸೆಂಟ್ರಲ್ ವಿಸ್ಟಾದ ಯೋಜನೆಯನ್ನು ನಿಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಸಿದ್ಧರಿಲ್ಲ ಎಂದು ಶಿವಸೇನೆ ಹೇಳಿದೆ.

ಒಂದು ಕಡೆ ಭಾರತವು ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಭೂತಾನ್ ಮುಂತಾದ ದೇಶಗಳ ಸಹಾಯವನ್ನು ಸ್ವೀಕರಿಸುತ್ತಿದೆ, ಮತ್ತೊಂದೆಡೆ ಬಹು ಕೋಟಿಯ ಸೆಂಟ್ರಲ್ ವಿಸ್ಟಾ ಯೋಜನೆಯ ಕೆಲಸವನ್ನು ನಿಲ್ಲಿಸಲು ಪ್ರಧಾನಿ ಮೋದಿ ಸಿದ್ಧರಿಲ್ಲ ಎಂಬ ಬಗ್ಗೆ ಯಾರೂ ವಿಷಾದ ವ್ಯಕ್ತಪಡಿಸುತ್ತಿಲ್ಲ ಎಂದು ಪಕ್ಷವು ಆಶ್ಚರ್ಯ ವ್ಯಕ್ತಪಡಿಸಿದೆ.

ಕೊರೊನಾ ಎರಡನೇ ಅಲೆಯ ವಿರುದ್ದ ಜಗತ್ತು ಹೋರಾಡುತ್ತಿದ್ದರೆ, ಮೂರನೇ ಅಲೆವು ಇದಕ್ಕಿಂತ ಹೆಚ್ಚು ತೀವ್ರವಾಗಿರುತ್ತದೆ ಎಂದು ತಜ್ಞರು ಊಹಿಸಿದ್ದಾರೆ ಎಂದು ಶಿವಸೇನೆ ಹೇಳಿದೆ. ಆದರೆ ಆಡಳಿತಾರೂಢ ಬಿಜೆಪಿ ಇಂದಿಗೂ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿಯನ್ನು ಮೂಲೆಗುಂಪು ಮಾಡಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...