Homeಅಂತರಾಷ್ಟ್ರೀಯಕೆಲವೆ ಗಂಟೆಗಳಲ್ಲಿ ಹೊಸ ಸರ್ಕಾರ ರಚಿಸಲಿರುವ ತಾಲಿಬಾನ್‌

ಕೆಲವೆ ಗಂಟೆಗಳಲ್ಲಿ ಹೊಸ ಸರ್ಕಾರ ರಚಿಸಲಿರುವ ತಾಲಿಬಾನ್‌

- Advertisement -
- Advertisement -

ತಾಲಿಬಾನ್‌‌‌ ಇಂದು ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರವನ್ನು ಘೋಷಿಸಲು ಸಜ್ಜಾಗಿದೆ ಎಂದು ವರದಿಗಳು ಹೇಳಿವೆ. ಅಷ್ಟೇ ಅಲ್ಲದೆ ದೇಶದಲ್ಲಿ ಆಹಾರ ಪೂರೈಕೆಯ ಅಭಾವ ಕಾಡುತ್ತಿದ್ದು, ದೇಶವು ಬಡತನಕ್ಕೆ ಜಾರುತ್ತಿದೆ ಎಂದು ವರದಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಅಂತರ್‌ರಾಷ್ಟ್ರೀಯ ಮಾನವೀಯ ನೆರವು ಪಡೆಯಲು ಸಹಿಷ್ಣು ಸರ್ಕಾರವನ್ನು ಸ್ಥಾಪಿಸಲು ತಾಲಿಬಾನ್‌ಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಒತ್ತಡವಿದೆ.

ಪ್ರಸ್ತಾಪಿತ ತಾಲಿಬಾನ್‌ ಸರ್ಕಾರವು ಇರಾನಿನ ನಾಯಕತ್ವದ ಮಾದರಿಯಲ್ಲಿರುತ್ತದೆ ಎಂದು ವರದಿಯಾಗಿದ್ದು, ತಾಲಿಬಾನ್‌‌ನ ಉನ್ನತ ಧಾರ್ಮಿಕ ನಾಯಕ ಮುಲ್ಲಾ ಹಿಬಾತುಲ್ಲಾ ಅಖುಂನ್‌ಜಾದ ಅಫ್ಘಾನಿಸ್ತಾನದ ಸರ್ವೋಚ್ಚ ಅಧಿಕಾರದ ಪಟ್ಟವನ್ನು ಏರಲಿದ್ದಾರೆ. ಈ ಎಲ್ಲಾ ಬೆಳವಣಿಗೆಯನ್ನು ತಿಳಿದಿರುವ ತಾಲಿಬಾನ್‌ ಅಧಿಕಾರಿಗಳ ಪ್ರಕಾರ, ಇಂದಿನ ಶುಕ್ರವಾರದ ಪ್ರಾರ್ಥನೆಯ ನಂತರ ಹೊಸ ಆಡಳಿತವನ್ನು ಘೋಷಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಫ್ಘಾನ್‌ನ ಹೊಸ ನಾಯಕರಾಗಲಿರುವ ತಾಲಿಬಾನ್‌‌ ಮುಖಂಡರಿವರು

ಸರ್ಕಾರದ ರಚನೆಯನ್ನು ಅಂತಿಮಗೊಳಿಸಲು, ಹೊಸ ಸರ್ಕಾರದ ಕುರಿತು ಸಮಾಲೋಚನೆ ಮತ್ತು ಚರ್ಚೆಯನ್ನು ಈಗಾಗಲೇ ಮಾಡಲಾಗಿದೆ. ಹೊಸ ರಚನೆಯ ಪ್ರಕಾರ, ದೇಶದ ಅಧ್ಯಕ್ಷರು ಸರ್ವೋಚ್ಚ ನಾಯಕನ ಕೆಳಗೆ ಇರುತ್ತಾರೆ.

ಹೊಸ ಸರ್ಕಾರದಲ್ಲಿ 60 ವರ್ಷದ ಮುಲ್ಲಾ ಅಖುಂನ್‌ಜಾದ ತಾಲಿಬಾನ್ ಸರ್ಕಾರದ ಸರ್ವೋಚ್ಚ ನಾಯಕರಾಗಿರುತ್ತಾರೆ. ಇದು ಇರಾನ್‌ ನಾಯಕತ್ವದ ಮಾದರಿಯಾಗಿದೆ. ಅಲ್ಲಿ ಸರ್ವೋಚ್ಚ ನಾಯಕನೆ ದೇಶದ ಅತ್ಯುನ್ನತ ನಾಯಕನಾಗಿದ್ದು, ರಾಜಕೀಯ ಮತ್ತು ಧಾರ್ಮಿಕ ನೀತಿಗಳ ಮುಖ್ಯಸ್ಥನಾಗಿ ಕಾರ್ಯ ನಿರ್ವಹಿಸುತ್ತಾರೆ. ಅವರು ದೇಶದ ಅಧ್ಯಕ್ಷರಿಗಿಂತ ಉನ್ನತ ಸ್ಥಾನದಲ್ಲಿದ್ದು, ದೇಶದ ಮಿಲಿಟರಿ, ಸರ್ಕಾರ ಮತ್ತು ನ್ಯಾಯಾಂಗದ ಮುಖ್ಯಸ್ಥರನ್ನು ನೇಮಿಸುತ್ತಾರೆ. ದೇಶದ ರಾಜಕೀಯ, ಧಾರ್ಮಿಕ ಮತ್ತು ಸೇನಾ ವ್ಯವಹಾರಗಳಲ್ಲಿ ಸರ್ವೋಚ್ಚ ನಾಯಕನ ತೀರ್ಮಾನವೆ ಅಂತಿಮ.

ಮುಲ್ಲಾ ಅಖುಂನ್‌ಜಾದ ಅವರು ಸರ್ಕಾರದ ನಾಯಕರಾಗಿರುತ್ತಾರೆ ಮತ್ತು ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ತಾಲಿಬಾನ್‌ನ ಮಾಹಿತಿ ಮತ್ತು ಸಂಸ್ಕೃತಿ ಆಯೋಗದ ಹಿರಿಯ ಅಧಿಕಾರಿ ಮುಫ್ತಿ ಇನಾಮುಲ್ಲಾ ಸಮಂಗಾನಿ ಹೇಳಿದ್ದು, ಅಧ್ಯಕ್ಷರು ಅವರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡುತ್ತಾರೆ ಎಂದು ಅವರು ಸೂಚಿಸಿದ್ದಾರೆ. ಮುಲ್ಲಾ ಅಖುಂನ್‌ಜಾದ ಅವರು ತಾಲಿಬಾನ್‌ನ ಉನ್ನತ ಧಾರ್ಮಿಕ ನಾಯಕರಾಗಿದ್ದು, 15 ವರ್ಷಗಳಿಂದ ಬಲೂಚಿಸ್ತಾನ ಪ್ರಾಂತ್ಯದ ಕಚ್ಲಾಕ್ ಪ್ರದೇಶದ ಮಸೀದಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ಪಾಕಿಸ್ತಾನದ ಸೆರೆಮನೆಯಲ್ಲಿದ್ದ ತಾಲಿಬಾನ್‌ನ ಸಹ-ಸಂಸ್ಥಾಪಕ ಮತ್ತು ಉಪ ನಾಯಕರಾಗಿರುವ ಮುಲ್ಲಾ ಅಬ್ದುಲ್ ಘನಿ ಬರದಾರ್ ಅವರು ಕೂಡಾ ಸರ್ಕಾರದ ಮುಖ್ಯಸ್ಥರಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ.

2013 ರಲ್ಲಿ ನಿಧನರಾದ ತಾಲಿಬಾನ್‌ ಸಂಸ್ಥಾಪಕ ಮುಲ್ಲಾ ಮುಹಮ್ಮದ್ ಒಮರ್ ಅವರ ಪುತ್ರ ಮೊಹಮ್ಮದ್ ಯಾಕೂಬ್ ಮತ್ತು ಇನ್ನೊಬ್ಬ ಉಪನಾಯಕ ಸಿರಾಜುದ್ದೀನ್ ಹಕ್ಕಾನಿ ಸೇರಿದಂತೆ ತಾಲಿಬಾನ್‌‌ನ ಹಿರಿಯ ನಾಯಕರು ಸರ್ಕಾರದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಹೊಸ ಸರ್ಕಾರದ ಅಡಿಯಲ್ಲಿ, ಗವರ್ನರ್‌ಗಳು ಪ್ರಾಂತ್ಯಗಳನ್ನು ನಿಯಂತ್ರಿಸುತ್ತಾರೆ, ಜಿಲ್ಲಾ ಗವರ್ನರ್‌ಗಳು ತಮ್ಮ ಜಿಲ್ಲೆಗಳ ಉಸ್ತುವಾರಿ ವಹಿಸುತ್ತಾರೆ ಎಂದು ಸಮಂಗಾನಿ ಹೇಳಿದ್ದಾರೆ.

ತಾಲಿಬಾನ್‌ ಈಗಾಗಲೇ ಪ್ರಾಂತ್ಯಗಳು ಮತ್ತು ಜಿಲ್ಲೆಗಳಿಗೆ ರಾಜ್ಯಪಾಲರು, ಪೊಲೀಸ್ ಮುಖ್ಯಸ್ಥರು ಮತ್ತು ಪೊಲೀಸ್ ಕಮಾಂಡರ್‌ಗಳನ್ನು ನೇಮಿಸಿದೆ. ಹೊಸ ಆಡಳಿತ ವ್ಯವಸ್ಥೆಯ ಹೆಸರು, ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆ ಇನ್ನೂ ಅಂತಿಮಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...