Homeಅಂತರಾಷ್ಟ್ರೀಯಕೆಲವೆ ಗಂಟೆಗಳಲ್ಲಿ ಹೊಸ ಸರ್ಕಾರ ರಚಿಸಲಿರುವ ತಾಲಿಬಾನ್‌

ಕೆಲವೆ ಗಂಟೆಗಳಲ್ಲಿ ಹೊಸ ಸರ್ಕಾರ ರಚಿಸಲಿರುವ ತಾಲಿಬಾನ್‌

- Advertisement -
- Advertisement -

ತಾಲಿಬಾನ್‌‌‌ ಇಂದು ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರವನ್ನು ಘೋಷಿಸಲು ಸಜ್ಜಾಗಿದೆ ಎಂದು ವರದಿಗಳು ಹೇಳಿವೆ. ಅಷ್ಟೇ ಅಲ್ಲದೆ ದೇಶದಲ್ಲಿ ಆಹಾರ ಪೂರೈಕೆಯ ಅಭಾವ ಕಾಡುತ್ತಿದ್ದು, ದೇಶವು ಬಡತನಕ್ಕೆ ಜಾರುತ್ತಿದೆ ಎಂದು ವರದಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಅಂತರ್‌ರಾಷ್ಟ್ರೀಯ ಮಾನವೀಯ ನೆರವು ಪಡೆಯಲು ಸಹಿಷ್ಣು ಸರ್ಕಾರವನ್ನು ಸ್ಥಾಪಿಸಲು ತಾಲಿಬಾನ್‌ಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಒತ್ತಡವಿದೆ.

ಪ್ರಸ್ತಾಪಿತ ತಾಲಿಬಾನ್‌ ಸರ್ಕಾರವು ಇರಾನಿನ ನಾಯಕತ್ವದ ಮಾದರಿಯಲ್ಲಿರುತ್ತದೆ ಎಂದು ವರದಿಯಾಗಿದ್ದು, ತಾಲಿಬಾನ್‌‌ನ ಉನ್ನತ ಧಾರ್ಮಿಕ ನಾಯಕ ಮುಲ್ಲಾ ಹಿಬಾತುಲ್ಲಾ ಅಖುಂನ್‌ಜಾದ ಅಫ್ಘಾನಿಸ್ತಾನದ ಸರ್ವೋಚ್ಚ ಅಧಿಕಾರದ ಪಟ್ಟವನ್ನು ಏರಲಿದ್ದಾರೆ. ಈ ಎಲ್ಲಾ ಬೆಳವಣಿಗೆಯನ್ನು ತಿಳಿದಿರುವ ತಾಲಿಬಾನ್‌ ಅಧಿಕಾರಿಗಳ ಪ್ರಕಾರ, ಇಂದಿನ ಶುಕ್ರವಾರದ ಪ್ರಾರ್ಥನೆಯ ನಂತರ ಹೊಸ ಆಡಳಿತವನ್ನು ಘೋಷಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಫ್ಘಾನ್‌ನ ಹೊಸ ನಾಯಕರಾಗಲಿರುವ ತಾಲಿಬಾನ್‌‌ ಮುಖಂಡರಿವರು

ಸರ್ಕಾರದ ರಚನೆಯನ್ನು ಅಂತಿಮಗೊಳಿಸಲು, ಹೊಸ ಸರ್ಕಾರದ ಕುರಿತು ಸಮಾಲೋಚನೆ ಮತ್ತು ಚರ್ಚೆಯನ್ನು ಈಗಾಗಲೇ ಮಾಡಲಾಗಿದೆ. ಹೊಸ ರಚನೆಯ ಪ್ರಕಾರ, ದೇಶದ ಅಧ್ಯಕ್ಷರು ಸರ್ವೋಚ್ಚ ನಾಯಕನ ಕೆಳಗೆ ಇರುತ್ತಾರೆ.

ಹೊಸ ಸರ್ಕಾರದಲ್ಲಿ 60 ವರ್ಷದ ಮುಲ್ಲಾ ಅಖುಂನ್‌ಜಾದ ತಾಲಿಬಾನ್ ಸರ್ಕಾರದ ಸರ್ವೋಚ್ಚ ನಾಯಕರಾಗಿರುತ್ತಾರೆ. ಇದು ಇರಾನ್‌ ನಾಯಕತ್ವದ ಮಾದರಿಯಾಗಿದೆ. ಅಲ್ಲಿ ಸರ್ವೋಚ್ಚ ನಾಯಕನೆ ದೇಶದ ಅತ್ಯುನ್ನತ ನಾಯಕನಾಗಿದ್ದು, ರಾಜಕೀಯ ಮತ್ತು ಧಾರ್ಮಿಕ ನೀತಿಗಳ ಮುಖ್ಯಸ್ಥನಾಗಿ ಕಾರ್ಯ ನಿರ್ವಹಿಸುತ್ತಾರೆ. ಅವರು ದೇಶದ ಅಧ್ಯಕ್ಷರಿಗಿಂತ ಉನ್ನತ ಸ್ಥಾನದಲ್ಲಿದ್ದು, ದೇಶದ ಮಿಲಿಟರಿ, ಸರ್ಕಾರ ಮತ್ತು ನ್ಯಾಯಾಂಗದ ಮುಖ್ಯಸ್ಥರನ್ನು ನೇಮಿಸುತ್ತಾರೆ. ದೇಶದ ರಾಜಕೀಯ, ಧಾರ್ಮಿಕ ಮತ್ತು ಸೇನಾ ವ್ಯವಹಾರಗಳಲ್ಲಿ ಸರ್ವೋಚ್ಚ ನಾಯಕನ ತೀರ್ಮಾನವೆ ಅಂತಿಮ.

ಮುಲ್ಲಾ ಅಖುಂನ್‌ಜಾದ ಅವರು ಸರ್ಕಾರದ ನಾಯಕರಾಗಿರುತ್ತಾರೆ ಮತ್ತು ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ತಾಲಿಬಾನ್‌ನ ಮಾಹಿತಿ ಮತ್ತು ಸಂಸ್ಕೃತಿ ಆಯೋಗದ ಹಿರಿಯ ಅಧಿಕಾರಿ ಮುಫ್ತಿ ಇನಾಮುಲ್ಲಾ ಸಮಂಗಾನಿ ಹೇಳಿದ್ದು, ಅಧ್ಯಕ್ಷರು ಅವರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡುತ್ತಾರೆ ಎಂದು ಅವರು ಸೂಚಿಸಿದ್ದಾರೆ. ಮುಲ್ಲಾ ಅಖುಂನ್‌ಜಾದ ಅವರು ತಾಲಿಬಾನ್‌ನ ಉನ್ನತ ಧಾರ್ಮಿಕ ನಾಯಕರಾಗಿದ್ದು, 15 ವರ್ಷಗಳಿಂದ ಬಲೂಚಿಸ್ತಾನ ಪ್ರಾಂತ್ಯದ ಕಚ್ಲಾಕ್ ಪ್ರದೇಶದ ಮಸೀದಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ಪಾಕಿಸ್ತಾನದ ಸೆರೆಮನೆಯಲ್ಲಿದ್ದ ತಾಲಿಬಾನ್‌ನ ಸಹ-ಸಂಸ್ಥಾಪಕ ಮತ್ತು ಉಪ ನಾಯಕರಾಗಿರುವ ಮುಲ್ಲಾ ಅಬ್ದುಲ್ ಘನಿ ಬರದಾರ್ ಅವರು ಕೂಡಾ ಸರ್ಕಾರದ ಮುಖ್ಯಸ್ಥರಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ.

2013 ರಲ್ಲಿ ನಿಧನರಾದ ತಾಲಿಬಾನ್‌ ಸಂಸ್ಥಾಪಕ ಮುಲ್ಲಾ ಮುಹಮ್ಮದ್ ಒಮರ್ ಅವರ ಪುತ್ರ ಮೊಹಮ್ಮದ್ ಯಾಕೂಬ್ ಮತ್ತು ಇನ್ನೊಬ್ಬ ಉಪನಾಯಕ ಸಿರಾಜುದ್ದೀನ್ ಹಕ್ಕಾನಿ ಸೇರಿದಂತೆ ತಾಲಿಬಾನ್‌‌ನ ಹಿರಿಯ ನಾಯಕರು ಸರ್ಕಾರದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಹೊಸ ಸರ್ಕಾರದ ಅಡಿಯಲ್ಲಿ, ಗವರ್ನರ್‌ಗಳು ಪ್ರಾಂತ್ಯಗಳನ್ನು ನಿಯಂತ್ರಿಸುತ್ತಾರೆ, ಜಿಲ್ಲಾ ಗವರ್ನರ್‌ಗಳು ತಮ್ಮ ಜಿಲ್ಲೆಗಳ ಉಸ್ತುವಾರಿ ವಹಿಸುತ್ತಾರೆ ಎಂದು ಸಮಂಗಾನಿ ಹೇಳಿದ್ದಾರೆ.

ತಾಲಿಬಾನ್‌ ಈಗಾಗಲೇ ಪ್ರಾಂತ್ಯಗಳು ಮತ್ತು ಜಿಲ್ಲೆಗಳಿಗೆ ರಾಜ್ಯಪಾಲರು, ಪೊಲೀಸ್ ಮುಖ್ಯಸ್ಥರು ಮತ್ತು ಪೊಲೀಸ್ ಕಮಾಂಡರ್‌ಗಳನ್ನು ನೇಮಿಸಿದೆ. ಹೊಸ ಆಡಳಿತ ವ್ಯವಸ್ಥೆಯ ಹೆಸರು, ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆ ಇನ್ನೂ ಅಂತಿಮಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...