Homeಅಂತರಾಷ್ಟ್ರೀಯಕೆಲವೆ ಗಂಟೆಗಳಲ್ಲಿ ಹೊಸ ಸರ್ಕಾರ ರಚಿಸಲಿರುವ ತಾಲಿಬಾನ್‌

ಕೆಲವೆ ಗಂಟೆಗಳಲ್ಲಿ ಹೊಸ ಸರ್ಕಾರ ರಚಿಸಲಿರುವ ತಾಲಿಬಾನ್‌

- Advertisement -
- Advertisement -

ತಾಲಿಬಾನ್‌‌‌ ಇಂದು ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರವನ್ನು ಘೋಷಿಸಲು ಸಜ್ಜಾಗಿದೆ ಎಂದು ವರದಿಗಳು ಹೇಳಿವೆ. ಅಷ್ಟೇ ಅಲ್ಲದೆ ದೇಶದಲ್ಲಿ ಆಹಾರ ಪೂರೈಕೆಯ ಅಭಾವ ಕಾಡುತ್ತಿದ್ದು, ದೇಶವು ಬಡತನಕ್ಕೆ ಜಾರುತ್ತಿದೆ ಎಂದು ವರದಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಅಂತರ್‌ರಾಷ್ಟ್ರೀಯ ಮಾನವೀಯ ನೆರವು ಪಡೆಯಲು ಸಹಿಷ್ಣು ಸರ್ಕಾರವನ್ನು ಸ್ಥಾಪಿಸಲು ತಾಲಿಬಾನ್‌ಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಒತ್ತಡವಿದೆ.

ಪ್ರಸ್ತಾಪಿತ ತಾಲಿಬಾನ್‌ ಸರ್ಕಾರವು ಇರಾನಿನ ನಾಯಕತ್ವದ ಮಾದರಿಯಲ್ಲಿರುತ್ತದೆ ಎಂದು ವರದಿಯಾಗಿದ್ದು, ತಾಲಿಬಾನ್‌‌ನ ಉನ್ನತ ಧಾರ್ಮಿಕ ನಾಯಕ ಮುಲ್ಲಾ ಹಿಬಾತುಲ್ಲಾ ಅಖುಂನ್‌ಜಾದ ಅಫ್ಘಾನಿಸ್ತಾನದ ಸರ್ವೋಚ್ಚ ಅಧಿಕಾರದ ಪಟ್ಟವನ್ನು ಏರಲಿದ್ದಾರೆ. ಈ ಎಲ್ಲಾ ಬೆಳವಣಿಗೆಯನ್ನು ತಿಳಿದಿರುವ ತಾಲಿಬಾನ್‌ ಅಧಿಕಾರಿಗಳ ಪ್ರಕಾರ, ಇಂದಿನ ಶುಕ್ರವಾರದ ಪ್ರಾರ್ಥನೆಯ ನಂತರ ಹೊಸ ಆಡಳಿತವನ್ನು ಘೋಷಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಫ್ಘಾನ್‌ನ ಹೊಸ ನಾಯಕರಾಗಲಿರುವ ತಾಲಿಬಾನ್‌‌ ಮುಖಂಡರಿವರು

ಸರ್ಕಾರದ ರಚನೆಯನ್ನು ಅಂತಿಮಗೊಳಿಸಲು, ಹೊಸ ಸರ್ಕಾರದ ಕುರಿತು ಸಮಾಲೋಚನೆ ಮತ್ತು ಚರ್ಚೆಯನ್ನು ಈಗಾಗಲೇ ಮಾಡಲಾಗಿದೆ. ಹೊಸ ರಚನೆಯ ಪ್ರಕಾರ, ದೇಶದ ಅಧ್ಯಕ್ಷರು ಸರ್ವೋಚ್ಚ ನಾಯಕನ ಕೆಳಗೆ ಇರುತ್ತಾರೆ.

ಹೊಸ ಸರ್ಕಾರದಲ್ಲಿ 60 ವರ್ಷದ ಮುಲ್ಲಾ ಅಖುಂನ್‌ಜಾದ ತಾಲಿಬಾನ್ ಸರ್ಕಾರದ ಸರ್ವೋಚ್ಚ ನಾಯಕರಾಗಿರುತ್ತಾರೆ. ಇದು ಇರಾನ್‌ ನಾಯಕತ್ವದ ಮಾದರಿಯಾಗಿದೆ. ಅಲ್ಲಿ ಸರ್ವೋಚ್ಚ ನಾಯಕನೆ ದೇಶದ ಅತ್ಯುನ್ನತ ನಾಯಕನಾಗಿದ್ದು, ರಾಜಕೀಯ ಮತ್ತು ಧಾರ್ಮಿಕ ನೀತಿಗಳ ಮುಖ್ಯಸ್ಥನಾಗಿ ಕಾರ್ಯ ನಿರ್ವಹಿಸುತ್ತಾರೆ. ಅವರು ದೇಶದ ಅಧ್ಯಕ್ಷರಿಗಿಂತ ಉನ್ನತ ಸ್ಥಾನದಲ್ಲಿದ್ದು, ದೇಶದ ಮಿಲಿಟರಿ, ಸರ್ಕಾರ ಮತ್ತು ನ್ಯಾಯಾಂಗದ ಮುಖ್ಯಸ್ಥರನ್ನು ನೇಮಿಸುತ್ತಾರೆ. ದೇಶದ ರಾಜಕೀಯ, ಧಾರ್ಮಿಕ ಮತ್ತು ಸೇನಾ ವ್ಯವಹಾರಗಳಲ್ಲಿ ಸರ್ವೋಚ್ಚ ನಾಯಕನ ತೀರ್ಮಾನವೆ ಅಂತಿಮ.

ಮುಲ್ಲಾ ಅಖುಂನ್‌ಜಾದ ಅವರು ಸರ್ಕಾರದ ನಾಯಕರಾಗಿರುತ್ತಾರೆ ಮತ್ತು ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ತಾಲಿಬಾನ್‌ನ ಮಾಹಿತಿ ಮತ್ತು ಸಂಸ್ಕೃತಿ ಆಯೋಗದ ಹಿರಿಯ ಅಧಿಕಾರಿ ಮುಫ್ತಿ ಇನಾಮುಲ್ಲಾ ಸಮಂಗಾನಿ ಹೇಳಿದ್ದು, ಅಧ್ಯಕ್ಷರು ಅವರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡುತ್ತಾರೆ ಎಂದು ಅವರು ಸೂಚಿಸಿದ್ದಾರೆ. ಮುಲ್ಲಾ ಅಖುಂನ್‌ಜಾದ ಅವರು ತಾಲಿಬಾನ್‌ನ ಉನ್ನತ ಧಾರ್ಮಿಕ ನಾಯಕರಾಗಿದ್ದು, 15 ವರ್ಷಗಳಿಂದ ಬಲೂಚಿಸ್ತಾನ ಪ್ರಾಂತ್ಯದ ಕಚ್ಲಾಕ್ ಪ್ರದೇಶದ ಮಸೀದಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ಪಾಕಿಸ್ತಾನದ ಸೆರೆಮನೆಯಲ್ಲಿದ್ದ ತಾಲಿಬಾನ್‌ನ ಸಹ-ಸಂಸ್ಥಾಪಕ ಮತ್ತು ಉಪ ನಾಯಕರಾಗಿರುವ ಮುಲ್ಲಾ ಅಬ್ದುಲ್ ಘನಿ ಬರದಾರ್ ಅವರು ಕೂಡಾ ಸರ್ಕಾರದ ಮುಖ್ಯಸ್ಥರಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ.

2013 ರಲ್ಲಿ ನಿಧನರಾದ ತಾಲಿಬಾನ್‌ ಸಂಸ್ಥಾಪಕ ಮುಲ್ಲಾ ಮುಹಮ್ಮದ್ ಒಮರ್ ಅವರ ಪುತ್ರ ಮೊಹಮ್ಮದ್ ಯಾಕೂಬ್ ಮತ್ತು ಇನ್ನೊಬ್ಬ ಉಪನಾಯಕ ಸಿರಾಜುದ್ದೀನ್ ಹಕ್ಕಾನಿ ಸೇರಿದಂತೆ ತಾಲಿಬಾನ್‌‌ನ ಹಿರಿಯ ನಾಯಕರು ಸರ್ಕಾರದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಹೊಸ ಸರ್ಕಾರದ ಅಡಿಯಲ್ಲಿ, ಗವರ್ನರ್‌ಗಳು ಪ್ರಾಂತ್ಯಗಳನ್ನು ನಿಯಂತ್ರಿಸುತ್ತಾರೆ, ಜಿಲ್ಲಾ ಗವರ್ನರ್‌ಗಳು ತಮ್ಮ ಜಿಲ್ಲೆಗಳ ಉಸ್ತುವಾರಿ ವಹಿಸುತ್ತಾರೆ ಎಂದು ಸಮಂಗಾನಿ ಹೇಳಿದ್ದಾರೆ.

ತಾಲಿಬಾನ್‌ ಈಗಾಗಲೇ ಪ್ರಾಂತ್ಯಗಳು ಮತ್ತು ಜಿಲ್ಲೆಗಳಿಗೆ ರಾಜ್ಯಪಾಲರು, ಪೊಲೀಸ್ ಮುಖ್ಯಸ್ಥರು ಮತ್ತು ಪೊಲೀಸ್ ಕಮಾಂಡರ್‌ಗಳನ್ನು ನೇಮಿಸಿದೆ. ಹೊಸ ಆಡಳಿತ ವ್ಯವಸ್ಥೆಯ ಹೆಸರು, ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆ ಇನ್ನೂ ಅಂತಿಮಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....