Homeಅಂತರಾಷ್ಟ್ರೀಯಕೆಲವೆ ಗಂಟೆಗಳಲ್ಲಿ ಹೊಸ ಸರ್ಕಾರ ರಚಿಸಲಿರುವ ತಾಲಿಬಾನ್‌

ಕೆಲವೆ ಗಂಟೆಗಳಲ್ಲಿ ಹೊಸ ಸರ್ಕಾರ ರಚಿಸಲಿರುವ ತಾಲಿಬಾನ್‌

- Advertisement -
- Advertisement -

ತಾಲಿಬಾನ್‌‌‌ ಇಂದು ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರವನ್ನು ಘೋಷಿಸಲು ಸಜ್ಜಾಗಿದೆ ಎಂದು ವರದಿಗಳು ಹೇಳಿವೆ. ಅಷ್ಟೇ ಅಲ್ಲದೆ ದೇಶದಲ್ಲಿ ಆಹಾರ ಪೂರೈಕೆಯ ಅಭಾವ ಕಾಡುತ್ತಿದ್ದು, ದೇಶವು ಬಡತನಕ್ಕೆ ಜಾರುತ್ತಿದೆ ಎಂದು ವರದಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಅಂತರ್‌ರಾಷ್ಟ್ರೀಯ ಮಾನವೀಯ ನೆರವು ಪಡೆಯಲು ಸಹಿಷ್ಣು ಸರ್ಕಾರವನ್ನು ಸ್ಥಾಪಿಸಲು ತಾಲಿಬಾನ್‌ಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಒತ್ತಡವಿದೆ.

ಪ್ರಸ್ತಾಪಿತ ತಾಲಿಬಾನ್‌ ಸರ್ಕಾರವು ಇರಾನಿನ ನಾಯಕತ್ವದ ಮಾದರಿಯಲ್ಲಿರುತ್ತದೆ ಎಂದು ವರದಿಯಾಗಿದ್ದು, ತಾಲಿಬಾನ್‌‌ನ ಉನ್ನತ ಧಾರ್ಮಿಕ ನಾಯಕ ಮುಲ್ಲಾ ಹಿಬಾತುಲ್ಲಾ ಅಖುಂನ್‌ಜಾದ ಅಫ್ಘಾನಿಸ್ತಾನದ ಸರ್ವೋಚ್ಚ ಅಧಿಕಾರದ ಪಟ್ಟವನ್ನು ಏರಲಿದ್ದಾರೆ. ಈ ಎಲ್ಲಾ ಬೆಳವಣಿಗೆಯನ್ನು ತಿಳಿದಿರುವ ತಾಲಿಬಾನ್‌ ಅಧಿಕಾರಿಗಳ ಪ್ರಕಾರ, ಇಂದಿನ ಶುಕ್ರವಾರದ ಪ್ರಾರ್ಥನೆಯ ನಂತರ ಹೊಸ ಆಡಳಿತವನ್ನು ಘೋಷಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಫ್ಘಾನ್‌ನ ಹೊಸ ನಾಯಕರಾಗಲಿರುವ ತಾಲಿಬಾನ್‌‌ ಮುಖಂಡರಿವರು

ಸರ್ಕಾರದ ರಚನೆಯನ್ನು ಅಂತಿಮಗೊಳಿಸಲು, ಹೊಸ ಸರ್ಕಾರದ ಕುರಿತು ಸಮಾಲೋಚನೆ ಮತ್ತು ಚರ್ಚೆಯನ್ನು ಈಗಾಗಲೇ ಮಾಡಲಾಗಿದೆ. ಹೊಸ ರಚನೆಯ ಪ್ರಕಾರ, ದೇಶದ ಅಧ್ಯಕ್ಷರು ಸರ್ವೋಚ್ಚ ನಾಯಕನ ಕೆಳಗೆ ಇರುತ್ತಾರೆ.

ಹೊಸ ಸರ್ಕಾರದಲ್ಲಿ 60 ವರ್ಷದ ಮುಲ್ಲಾ ಅಖುಂನ್‌ಜಾದ ತಾಲಿಬಾನ್ ಸರ್ಕಾರದ ಸರ್ವೋಚ್ಚ ನಾಯಕರಾಗಿರುತ್ತಾರೆ. ಇದು ಇರಾನ್‌ ನಾಯಕತ್ವದ ಮಾದರಿಯಾಗಿದೆ. ಅಲ್ಲಿ ಸರ್ವೋಚ್ಚ ನಾಯಕನೆ ದೇಶದ ಅತ್ಯುನ್ನತ ನಾಯಕನಾಗಿದ್ದು, ರಾಜಕೀಯ ಮತ್ತು ಧಾರ್ಮಿಕ ನೀತಿಗಳ ಮುಖ್ಯಸ್ಥನಾಗಿ ಕಾರ್ಯ ನಿರ್ವಹಿಸುತ್ತಾರೆ. ಅವರು ದೇಶದ ಅಧ್ಯಕ್ಷರಿಗಿಂತ ಉನ್ನತ ಸ್ಥಾನದಲ್ಲಿದ್ದು, ದೇಶದ ಮಿಲಿಟರಿ, ಸರ್ಕಾರ ಮತ್ತು ನ್ಯಾಯಾಂಗದ ಮುಖ್ಯಸ್ಥರನ್ನು ನೇಮಿಸುತ್ತಾರೆ. ದೇಶದ ರಾಜಕೀಯ, ಧಾರ್ಮಿಕ ಮತ್ತು ಸೇನಾ ವ್ಯವಹಾರಗಳಲ್ಲಿ ಸರ್ವೋಚ್ಚ ನಾಯಕನ ತೀರ್ಮಾನವೆ ಅಂತಿಮ.

ಮುಲ್ಲಾ ಅಖುಂನ್‌ಜಾದ ಅವರು ಸರ್ಕಾರದ ನಾಯಕರಾಗಿರುತ್ತಾರೆ ಮತ್ತು ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ತಾಲಿಬಾನ್‌ನ ಮಾಹಿತಿ ಮತ್ತು ಸಂಸ್ಕೃತಿ ಆಯೋಗದ ಹಿರಿಯ ಅಧಿಕಾರಿ ಮುಫ್ತಿ ಇನಾಮುಲ್ಲಾ ಸಮಂಗಾನಿ ಹೇಳಿದ್ದು, ಅಧ್ಯಕ್ಷರು ಅವರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡುತ್ತಾರೆ ಎಂದು ಅವರು ಸೂಚಿಸಿದ್ದಾರೆ. ಮುಲ್ಲಾ ಅಖುಂನ್‌ಜಾದ ಅವರು ತಾಲಿಬಾನ್‌ನ ಉನ್ನತ ಧಾರ್ಮಿಕ ನಾಯಕರಾಗಿದ್ದು, 15 ವರ್ಷಗಳಿಂದ ಬಲೂಚಿಸ್ತಾನ ಪ್ರಾಂತ್ಯದ ಕಚ್ಲಾಕ್ ಪ್ರದೇಶದ ಮಸೀದಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ಪಾಕಿಸ್ತಾನದ ಸೆರೆಮನೆಯಲ್ಲಿದ್ದ ತಾಲಿಬಾನ್‌ನ ಸಹ-ಸಂಸ್ಥಾಪಕ ಮತ್ತು ಉಪ ನಾಯಕರಾಗಿರುವ ಮುಲ್ಲಾ ಅಬ್ದುಲ್ ಘನಿ ಬರದಾರ್ ಅವರು ಕೂಡಾ ಸರ್ಕಾರದ ಮುಖ್ಯಸ್ಥರಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ.

2013 ರಲ್ಲಿ ನಿಧನರಾದ ತಾಲಿಬಾನ್‌ ಸಂಸ್ಥಾಪಕ ಮುಲ್ಲಾ ಮುಹಮ್ಮದ್ ಒಮರ್ ಅವರ ಪುತ್ರ ಮೊಹಮ್ಮದ್ ಯಾಕೂಬ್ ಮತ್ತು ಇನ್ನೊಬ್ಬ ಉಪನಾಯಕ ಸಿರಾಜುದ್ದೀನ್ ಹಕ್ಕಾನಿ ಸೇರಿದಂತೆ ತಾಲಿಬಾನ್‌‌ನ ಹಿರಿಯ ನಾಯಕರು ಸರ್ಕಾರದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಹೊಸ ಸರ್ಕಾರದ ಅಡಿಯಲ್ಲಿ, ಗವರ್ನರ್‌ಗಳು ಪ್ರಾಂತ್ಯಗಳನ್ನು ನಿಯಂತ್ರಿಸುತ್ತಾರೆ, ಜಿಲ್ಲಾ ಗವರ್ನರ್‌ಗಳು ತಮ್ಮ ಜಿಲ್ಲೆಗಳ ಉಸ್ತುವಾರಿ ವಹಿಸುತ್ತಾರೆ ಎಂದು ಸಮಂಗಾನಿ ಹೇಳಿದ್ದಾರೆ.

ತಾಲಿಬಾನ್‌ ಈಗಾಗಲೇ ಪ್ರಾಂತ್ಯಗಳು ಮತ್ತು ಜಿಲ್ಲೆಗಳಿಗೆ ರಾಜ್ಯಪಾಲರು, ಪೊಲೀಸ್ ಮುಖ್ಯಸ್ಥರು ಮತ್ತು ಪೊಲೀಸ್ ಕಮಾಂಡರ್‌ಗಳನ್ನು ನೇಮಿಸಿದೆ. ಹೊಸ ಆಡಳಿತ ವ್ಯವಸ್ಥೆಯ ಹೆಸರು, ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆ ಇನ್ನೂ ಅಂತಿಮಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...