Homeಅಂತರಾಷ್ಟ್ರೀಯಕೆಲವೆ ಗಂಟೆಗಳಲ್ಲಿ ಹೊಸ ಸರ್ಕಾರ ರಚಿಸಲಿರುವ ತಾಲಿಬಾನ್‌

ಕೆಲವೆ ಗಂಟೆಗಳಲ್ಲಿ ಹೊಸ ಸರ್ಕಾರ ರಚಿಸಲಿರುವ ತಾಲಿಬಾನ್‌

- Advertisement -
- Advertisement -

ತಾಲಿಬಾನ್‌‌‌ ಇಂದು ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರವನ್ನು ಘೋಷಿಸಲು ಸಜ್ಜಾಗಿದೆ ಎಂದು ವರದಿಗಳು ಹೇಳಿವೆ. ಅಷ್ಟೇ ಅಲ್ಲದೆ ದೇಶದಲ್ಲಿ ಆಹಾರ ಪೂರೈಕೆಯ ಅಭಾವ ಕಾಡುತ್ತಿದ್ದು, ದೇಶವು ಬಡತನಕ್ಕೆ ಜಾರುತ್ತಿದೆ ಎಂದು ವರದಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಅಂತರ್‌ರಾಷ್ಟ್ರೀಯ ಮಾನವೀಯ ನೆರವು ಪಡೆಯಲು ಸಹಿಷ್ಣು ಸರ್ಕಾರವನ್ನು ಸ್ಥಾಪಿಸಲು ತಾಲಿಬಾನ್‌ಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಒತ್ತಡವಿದೆ.

ಪ್ರಸ್ತಾಪಿತ ತಾಲಿಬಾನ್‌ ಸರ್ಕಾರವು ಇರಾನಿನ ನಾಯಕತ್ವದ ಮಾದರಿಯಲ್ಲಿರುತ್ತದೆ ಎಂದು ವರದಿಯಾಗಿದ್ದು, ತಾಲಿಬಾನ್‌‌ನ ಉನ್ನತ ಧಾರ್ಮಿಕ ನಾಯಕ ಮುಲ್ಲಾ ಹಿಬಾತುಲ್ಲಾ ಅಖುಂನ್‌ಜಾದ ಅಫ್ಘಾನಿಸ್ತಾನದ ಸರ್ವೋಚ್ಚ ಅಧಿಕಾರದ ಪಟ್ಟವನ್ನು ಏರಲಿದ್ದಾರೆ. ಈ ಎಲ್ಲಾ ಬೆಳವಣಿಗೆಯನ್ನು ತಿಳಿದಿರುವ ತಾಲಿಬಾನ್‌ ಅಧಿಕಾರಿಗಳ ಪ್ರಕಾರ, ಇಂದಿನ ಶುಕ್ರವಾರದ ಪ್ರಾರ್ಥನೆಯ ನಂತರ ಹೊಸ ಆಡಳಿತವನ್ನು ಘೋಷಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಫ್ಘಾನ್‌ನ ಹೊಸ ನಾಯಕರಾಗಲಿರುವ ತಾಲಿಬಾನ್‌‌ ಮುಖಂಡರಿವರು

ಸರ್ಕಾರದ ರಚನೆಯನ್ನು ಅಂತಿಮಗೊಳಿಸಲು, ಹೊಸ ಸರ್ಕಾರದ ಕುರಿತು ಸಮಾಲೋಚನೆ ಮತ್ತು ಚರ್ಚೆಯನ್ನು ಈಗಾಗಲೇ ಮಾಡಲಾಗಿದೆ. ಹೊಸ ರಚನೆಯ ಪ್ರಕಾರ, ದೇಶದ ಅಧ್ಯಕ್ಷರು ಸರ್ವೋಚ್ಚ ನಾಯಕನ ಕೆಳಗೆ ಇರುತ್ತಾರೆ.

ಹೊಸ ಸರ್ಕಾರದಲ್ಲಿ 60 ವರ್ಷದ ಮುಲ್ಲಾ ಅಖುಂನ್‌ಜಾದ ತಾಲಿಬಾನ್ ಸರ್ಕಾರದ ಸರ್ವೋಚ್ಚ ನಾಯಕರಾಗಿರುತ್ತಾರೆ. ಇದು ಇರಾನ್‌ ನಾಯಕತ್ವದ ಮಾದರಿಯಾಗಿದೆ. ಅಲ್ಲಿ ಸರ್ವೋಚ್ಚ ನಾಯಕನೆ ದೇಶದ ಅತ್ಯುನ್ನತ ನಾಯಕನಾಗಿದ್ದು, ರಾಜಕೀಯ ಮತ್ತು ಧಾರ್ಮಿಕ ನೀತಿಗಳ ಮುಖ್ಯಸ್ಥನಾಗಿ ಕಾರ್ಯ ನಿರ್ವಹಿಸುತ್ತಾರೆ. ಅವರು ದೇಶದ ಅಧ್ಯಕ್ಷರಿಗಿಂತ ಉನ್ನತ ಸ್ಥಾನದಲ್ಲಿದ್ದು, ದೇಶದ ಮಿಲಿಟರಿ, ಸರ್ಕಾರ ಮತ್ತು ನ್ಯಾಯಾಂಗದ ಮುಖ್ಯಸ್ಥರನ್ನು ನೇಮಿಸುತ್ತಾರೆ. ದೇಶದ ರಾಜಕೀಯ, ಧಾರ್ಮಿಕ ಮತ್ತು ಸೇನಾ ವ್ಯವಹಾರಗಳಲ್ಲಿ ಸರ್ವೋಚ್ಚ ನಾಯಕನ ತೀರ್ಮಾನವೆ ಅಂತಿಮ.

ಮುಲ್ಲಾ ಅಖುಂನ್‌ಜಾದ ಅವರು ಸರ್ಕಾರದ ನಾಯಕರಾಗಿರುತ್ತಾರೆ ಮತ್ತು ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ತಾಲಿಬಾನ್‌ನ ಮಾಹಿತಿ ಮತ್ತು ಸಂಸ್ಕೃತಿ ಆಯೋಗದ ಹಿರಿಯ ಅಧಿಕಾರಿ ಮುಫ್ತಿ ಇನಾಮುಲ್ಲಾ ಸಮಂಗಾನಿ ಹೇಳಿದ್ದು, ಅಧ್ಯಕ್ಷರು ಅವರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡುತ್ತಾರೆ ಎಂದು ಅವರು ಸೂಚಿಸಿದ್ದಾರೆ. ಮುಲ್ಲಾ ಅಖುಂನ್‌ಜಾದ ಅವರು ತಾಲಿಬಾನ್‌ನ ಉನ್ನತ ಧಾರ್ಮಿಕ ನಾಯಕರಾಗಿದ್ದು, 15 ವರ್ಷಗಳಿಂದ ಬಲೂಚಿಸ್ತಾನ ಪ್ರಾಂತ್ಯದ ಕಚ್ಲಾಕ್ ಪ್ರದೇಶದ ಮಸೀದಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ಪಾಕಿಸ್ತಾನದ ಸೆರೆಮನೆಯಲ್ಲಿದ್ದ ತಾಲಿಬಾನ್‌ನ ಸಹ-ಸಂಸ್ಥಾಪಕ ಮತ್ತು ಉಪ ನಾಯಕರಾಗಿರುವ ಮುಲ್ಲಾ ಅಬ್ದುಲ್ ಘನಿ ಬರದಾರ್ ಅವರು ಕೂಡಾ ಸರ್ಕಾರದ ಮುಖ್ಯಸ್ಥರಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ.

2013 ರಲ್ಲಿ ನಿಧನರಾದ ತಾಲಿಬಾನ್‌ ಸಂಸ್ಥಾಪಕ ಮುಲ್ಲಾ ಮುಹಮ್ಮದ್ ಒಮರ್ ಅವರ ಪುತ್ರ ಮೊಹಮ್ಮದ್ ಯಾಕೂಬ್ ಮತ್ತು ಇನ್ನೊಬ್ಬ ಉಪನಾಯಕ ಸಿರಾಜುದ್ದೀನ್ ಹಕ್ಕಾನಿ ಸೇರಿದಂತೆ ತಾಲಿಬಾನ್‌‌ನ ಹಿರಿಯ ನಾಯಕರು ಸರ್ಕಾರದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಹೊಸ ಸರ್ಕಾರದ ಅಡಿಯಲ್ಲಿ, ಗವರ್ನರ್‌ಗಳು ಪ್ರಾಂತ್ಯಗಳನ್ನು ನಿಯಂತ್ರಿಸುತ್ತಾರೆ, ಜಿಲ್ಲಾ ಗವರ್ನರ್‌ಗಳು ತಮ್ಮ ಜಿಲ್ಲೆಗಳ ಉಸ್ತುವಾರಿ ವಹಿಸುತ್ತಾರೆ ಎಂದು ಸಮಂಗಾನಿ ಹೇಳಿದ್ದಾರೆ.

ತಾಲಿಬಾನ್‌ ಈಗಾಗಲೇ ಪ್ರಾಂತ್ಯಗಳು ಮತ್ತು ಜಿಲ್ಲೆಗಳಿಗೆ ರಾಜ್ಯಪಾಲರು, ಪೊಲೀಸ್ ಮುಖ್ಯಸ್ಥರು ಮತ್ತು ಪೊಲೀಸ್ ಕಮಾಂಡರ್‌ಗಳನ್ನು ನೇಮಿಸಿದೆ. ಹೊಸ ಆಡಳಿತ ವ್ಯವಸ್ಥೆಯ ಹೆಸರು, ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆ ಇನ್ನೂ ಅಂತಿಮಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...