Homeಮುಖಪುಟಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

ಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

- Advertisement -
- Advertisement -

ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡಲು ಸ್ಪೀಕರ್‌ಗೆ ಸೂಚಿಸುವ ನಿರ್ಣಯವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಂಡಿಸಿದ ನಂತರ ತಮಿಳುನಾಡು ರಾಜ್ಯಪಾಲ ಆರ್‌.ಎನ್.ರವಿ ಅವರು ಇಂದು (ಜ.9) ವಿಧಾನಸಭೆಯಿಂದ ಹೊರನಡೆದಿದ್ದಾರೆ.

ರಾಜ್ಯ ಸರ್ಕಾರ ಸಿದ್ಧಪಡಿಸಿದ ಮತ್ತು ಸ್ಪೀಕರ್ ಅನುವಾದಿಸಿದ ರಾಜ್ಯಪಾಲರ ಮೂಲ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡುವ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ರಾಜ್ಯಪಾಲರು ತಮ್ಮ ಭಾಷಣಕ್ಕೆ ಸರ್ಕಾರ ಸಿದ್ಧಪಡಿಸದ ಕೆಲವು ಭಾಗಗಳನ್ನು ಸೇರಿಸಿದ್ದಾರೆ ಎಂದು ವರದಿಯಾಗಿದೆ.

ಜಾತ್ಯತೀತತೆಯ ಬಗ್ಗೆ ಉಲ್ಲೇಖಗಳನ್ನು ಒಳಗೊಂಡಿರುವ, ತಮಿಳುನಾಡು ಶಾಂತಿಯ ಸ್ವರ್ಗ ಎಂದು ಬಣ್ಣಿಸಲಾದ ಮತ್ತು ಪೆರಿಯಾರ್, ಬಿ.ಆರ್.ಅಂಬೇಡ್ಕರ್, ಕೆ.ಕಾಮರಾಜ್, ಸಿ.ಎನ್.ಅಣ್ಣಾದೊರೈ, ಕರುಣಾನಿಧಿ ಅವರಂತಹ ನಾಯಕರನ್ನು ಸ್ಮರಿಸಿ ರಾಜ್ಯ ಸರ್ಕಾರವು ಸಿದ್ಧಪಡಿಸಿದ ಭಾಷಣದ ಭಾಗಗಳನ್ನು ರಾಜ್ಯಪಾಲರು ಬಿಟ್ಟಿಬಿಟ್ಟರು. ಆನಂತರ ಮುಖ್ಯಮಂತ್ರಿ ನಿರ್ಣಯ ಮಂಡಿಸಿದರು. ಆಡಳಿತಾರೂಢ ಡಿಎಂಕೆ ಪ್ರತಿಪಾದಿಸುವ ‘ದ್ರಾವಿಡ ಮಾದರಿ’ಯ ಉಲ್ಲೇಖವನ್ನೂ ಅವರು ಓದಲಿಲ್ಲ.

ರಾಜ್ಯಪಾಲರ ಕ್ರಮವು ವಿಧಾನಸಭೆ ಸದನದ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ತಮ್ಮ ನಿರ್ಣಯದಲ್ಲಿ ಎಂ.ಕೆ. ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷಗಳಾದ ಕಾಂಗ್ರೆಸ್, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ಈ ಹಿಂದೆ ರಾಜ್ಯಪಾಲರ ಭಾಷಣವನ್ನು ಬಹಿಷ್ಕರಿಸಿದ್ದವು. ಪ್ರತಿಭಟನೆಯ ನಂತರ, ಘೋಷಣೆಗಳನ್ನು ಕೂಗಲಾಗಿದೆ.

ರಾಜ್ಯಪಾಲ ರವಿ ವಿರುದ್ಧ ವಿಧಾನಸಭೆಯಲ್ಲಿ ‘ತಮಿಳುನಾಡು ಬಿಟ್ಟು ತೊಲಗಿ’ ಘೋಷಣೆಗಳು ಪ್ರತಿಧ್ವನಿಸಿದವು. ಆಡಳಿತಾರೂಢ ಡಿಎಂಕೆ ಶಾಸಕರು, “ಬಿಜೆಪಿ, ಆರೆಸ್ಸೆಸ್ ಸಿದ್ಧಾಂತವನ್ನು ಹೇರಬೇಡಿ” ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸಂಸದ ಕಾರ್ತಿ ಪಿ.ಚಿದಂಬರಂ ಅವರು ರಾಜ್ಯಪಾಲರನ್ನು ಪದಚ್ಯುತಗೊಳಿಸುವಂತೆ ಕರೆ ನೀಡಿದ್ದಾರೆ.

“ತಮಿಳಗಂ ತಮಿಳುನಾಡಿಗೆ ಹೆಚ್ಚು ಸೂಕ್ತವಾದ ಹೆಸರು” ಎಂದು ರಾಜ್ಯಪಾಲರು ಇತ್ತೀಚೆಗೆ ಹೇಳಿಕೆ ನೀಡಿದ ಬಳಿಕ ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವೆ ವಿವಾದ ಉಂಟಾಗಿದೆ. ಡಿಎಂಕೆ ಶಾಸಕರು ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದಾರೆ.

(‘ನಾಡು’ ಎಂಬ ಪದವು ಭೂಮಿ ಎಂದರ್ಥವನ್ನು ಹೊಂದಿದೆ. ಕೆಲವೊಮ್ಮೆ ದೇಶ ಅಥವಾ ರಾಷ್ಟ್ರ-ರಾಜ್ಯ ಎಂದು ಅರ್ಥೈಸಲಾಗುತ್ತದೆ. ‘ತಮಿಳಗಂ’ ಎಂದರೆ ತಮಿಳರು ವಾಸಿಸುವ ಪ್ರದೇಶ ಎಂಬುದಾಗಿದೆ.)

“ದುರದೃಷ್ಟವಶಾತ್ ತಮಿಳುನಾಡಿನಲ್ಲಿ ನಾವು ದ್ರಾವಿಡರು ಎಂಬ ಹಿಂಜರಿಕೆಯ ರಾಜಕಾರಣವಿದೆ. ಸಂವಿಧಾನದ ಬಲದಿಂದ ನಮ್ಮನ್ನು ಒಟ್ಟುಗೂಡಿಸಲಾಗಿದೆ. ನಾವು ದೇಶದ ಭಾಗವಲ್ಲ ಎಂಬ ವಿಚಾರವನ್ನು ಬಲಪಡಿಸಲು ಅರ್ಧಶತಮಾನ ಕಾಲ ಪ್ರಯತ್ನಿಸಲಾಗಿದೆ. ಇಡೀ ದೇಶಕ್ಕೆ ಅನ್ವಯಿಸುವ ಎಲ್ಲವನ್ನೂ ತಮಿಳುನಾಡು ವಿರೋಧಿಸುತ್ತಿದೆ”ಎಂದು ರಾಜ್ಯಪಾಲರು ಬುಧವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ  ಹೇಳಿದ್ದರು. ಕಾಶಿ-ತಮಿಳು ಸಂಗಮದ ಸಂಘಟಕರು ಮತ್ತು ಸ್ವಯಂಸೇವಕರನ್ನು ಅಭಿನಂದಿಸುವ ಕಾರ್ಯಕ್ರಮ ಅದಾಗಿತ್ತು.

“ಇದೊಂದು ಅಭ್ಯಾಸವಾಗಿದೆ. ಅನೇಕ ಪ್ರಬಂಧಗಳನ್ನು ಸುಳ್ಳು ಮತ್ತು ಕಳಪೆ ಕಾಲ್ಪನಿಕ ಸಂಗತಿಗಳಿಂದ ಬರೆಯಲಾಗಿದೆ. ಇದನ್ನು ಹೋಗಲಾಡಿಸಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ವಾಸ್ತವವಾಗಿ, ತಮಿಳುನಾಡು ಭಾರತದ ಆತ್ಮವನ್ನು ಹಿಡಿದಿಟ್ಟುಕೊಂಡಿರುವ ನಾಡು. ಆದರೆ ತಮಿಳಗಂ ಎಂಬುದು ಸೂಕ್ತ ಪದವಾಗಿ ಹೋಗಿದೆ” ಎಂದಿದ್ದರು ರಾಜ್ಯಪಾಲರು.

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ವಾಗ್ವಾದ ನಡೆದಿದ್ದು, ಬಿಜೆಪಿಯ ಆಶಯದಂತೆ ರಾಜ್ಯಪಾಲ ರವಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಡಳಿತರೂಢ ಪಕ್ಷ ಆರೋಪಿಸಿದೆ.

“ರಾಜ್ಯಪಾಲ ಆರ್.ಎನ್.ರವಿ ಅವರು ದಿನನಿತ್ಯ ಒಂದಷ್ಟು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಗೊಂದಲ, ಪ್ರತ್ಯೇಕತೆ ಮತ್ತು ಸಂಘರ್ಷ ಸೃಷ್ಟಿಸುತ್ತಿದ್ದಾರೆ. 50 ವರ್ಷಗಳ ದ್ರಾವಿಡ ರಾಜಕಾರಣದಲ್ಲಿ ಜನರಿಗೆ ಮೋಸ ಮಾಡಲಾಗಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ.

ಡಿಎಂಕೆ ವಕ್ತಾರ ಸೇಲಂ ಧರಣೀಧರನ್ ಪ್ರತಿಕ್ರಿಯಿಸಿದ್ದು, “ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಇಂದು ತಮಿಳುನಾಡು ವಿಧಾನಸಭೆಯಲ್ಲಿ ತಮ್ಮ ಭಾಷಣದ ವೇಳೆ ಕೆಲವು ಪ್ರಮುಖ ವಿಷಯಗಳನ್ನು ಬಿಟ್ಟು ಸಾಂವಿಧಾನಿಕ ನಿಯಮಗಳಿಂದ ಉಲ್ಲಂಘಿಸಿದ್ದಾರೆ. ಈ ರಾಜ್ಯಪಾಲರು ರಾಜಕೀಯ ಅಜೆಂಡಾವನ್ನು ಹೊಂದಿದ್ದಾರೆ. ಅವರು ತಮಿಳುನಾಡಿನ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...