Homeಮುಖಪುಟಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

ಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

- Advertisement -
- Advertisement -

ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡಲು ಸ್ಪೀಕರ್‌ಗೆ ಸೂಚಿಸುವ ನಿರ್ಣಯವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಂಡಿಸಿದ ನಂತರ ತಮಿಳುನಾಡು ರಾಜ್ಯಪಾಲ ಆರ್‌.ಎನ್.ರವಿ ಅವರು ಇಂದು (ಜ.9) ವಿಧಾನಸಭೆಯಿಂದ ಹೊರನಡೆದಿದ್ದಾರೆ.

ರಾಜ್ಯ ಸರ್ಕಾರ ಸಿದ್ಧಪಡಿಸಿದ ಮತ್ತು ಸ್ಪೀಕರ್ ಅನುವಾದಿಸಿದ ರಾಜ್ಯಪಾಲರ ಮೂಲ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡುವ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ರಾಜ್ಯಪಾಲರು ತಮ್ಮ ಭಾಷಣಕ್ಕೆ ಸರ್ಕಾರ ಸಿದ್ಧಪಡಿಸದ ಕೆಲವು ಭಾಗಗಳನ್ನು ಸೇರಿಸಿದ್ದಾರೆ ಎಂದು ವರದಿಯಾಗಿದೆ.

ಜಾತ್ಯತೀತತೆಯ ಬಗ್ಗೆ ಉಲ್ಲೇಖಗಳನ್ನು ಒಳಗೊಂಡಿರುವ, ತಮಿಳುನಾಡು ಶಾಂತಿಯ ಸ್ವರ್ಗ ಎಂದು ಬಣ್ಣಿಸಲಾದ ಮತ್ತು ಪೆರಿಯಾರ್, ಬಿ.ಆರ್.ಅಂಬೇಡ್ಕರ್, ಕೆ.ಕಾಮರಾಜ್, ಸಿ.ಎನ್.ಅಣ್ಣಾದೊರೈ, ಕರುಣಾನಿಧಿ ಅವರಂತಹ ನಾಯಕರನ್ನು ಸ್ಮರಿಸಿ ರಾಜ್ಯ ಸರ್ಕಾರವು ಸಿದ್ಧಪಡಿಸಿದ ಭಾಷಣದ ಭಾಗಗಳನ್ನು ರಾಜ್ಯಪಾಲರು ಬಿಟ್ಟಿಬಿಟ್ಟರು. ಆನಂತರ ಮುಖ್ಯಮಂತ್ರಿ ನಿರ್ಣಯ ಮಂಡಿಸಿದರು. ಆಡಳಿತಾರೂಢ ಡಿಎಂಕೆ ಪ್ರತಿಪಾದಿಸುವ ‘ದ್ರಾವಿಡ ಮಾದರಿ’ಯ ಉಲ್ಲೇಖವನ್ನೂ ಅವರು ಓದಲಿಲ್ಲ.

ರಾಜ್ಯಪಾಲರ ಕ್ರಮವು ವಿಧಾನಸಭೆ ಸದನದ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ತಮ್ಮ ನಿರ್ಣಯದಲ್ಲಿ ಎಂ.ಕೆ. ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷಗಳಾದ ಕಾಂಗ್ರೆಸ್, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ಈ ಹಿಂದೆ ರಾಜ್ಯಪಾಲರ ಭಾಷಣವನ್ನು ಬಹಿಷ್ಕರಿಸಿದ್ದವು. ಪ್ರತಿಭಟನೆಯ ನಂತರ, ಘೋಷಣೆಗಳನ್ನು ಕೂಗಲಾಗಿದೆ.

ರಾಜ್ಯಪಾಲ ರವಿ ವಿರುದ್ಧ ವಿಧಾನಸಭೆಯಲ್ಲಿ ‘ತಮಿಳುನಾಡು ಬಿಟ್ಟು ತೊಲಗಿ’ ಘೋಷಣೆಗಳು ಪ್ರತಿಧ್ವನಿಸಿದವು. ಆಡಳಿತಾರೂಢ ಡಿಎಂಕೆ ಶಾಸಕರು, “ಬಿಜೆಪಿ, ಆರೆಸ್ಸೆಸ್ ಸಿದ್ಧಾಂತವನ್ನು ಹೇರಬೇಡಿ” ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸಂಸದ ಕಾರ್ತಿ ಪಿ.ಚಿದಂಬರಂ ಅವರು ರಾಜ್ಯಪಾಲರನ್ನು ಪದಚ್ಯುತಗೊಳಿಸುವಂತೆ ಕರೆ ನೀಡಿದ್ದಾರೆ.

“ತಮಿಳಗಂ ತಮಿಳುನಾಡಿಗೆ ಹೆಚ್ಚು ಸೂಕ್ತವಾದ ಹೆಸರು” ಎಂದು ರಾಜ್ಯಪಾಲರು ಇತ್ತೀಚೆಗೆ ಹೇಳಿಕೆ ನೀಡಿದ ಬಳಿಕ ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವೆ ವಿವಾದ ಉಂಟಾಗಿದೆ. ಡಿಎಂಕೆ ಶಾಸಕರು ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದಾರೆ.

(‘ನಾಡು’ ಎಂಬ ಪದವು ಭೂಮಿ ಎಂದರ್ಥವನ್ನು ಹೊಂದಿದೆ. ಕೆಲವೊಮ್ಮೆ ದೇಶ ಅಥವಾ ರಾಷ್ಟ್ರ-ರಾಜ್ಯ ಎಂದು ಅರ್ಥೈಸಲಾಗುತ್ತದೆ. ‘ತಮಿಳಗಂ’ ಎಂದರೆ ತಮಿಳರು ವಾಸಿಸುವ ಪ್ರದೇಶ ಎಂಬುದಾಗಿದೆ.)

“ದುರದೃಷ್ಟವಶಾತ್ ತಮಿಳುನಾಡಿನಲ್ಲಿ ನಾವು ದ್ರಾವಿಡರು ಎಂಬ ಹಿಂಜರಿಕೆಯ ರಾಜಕಾರಣವಿದೆ. ಸಂವಿಧಾನದ ಬಲದಿಂದ ನಮ್ಮನ್ನು ಒಟ್ಟುಗೂಡಿಸಲಾಗಿದೆ. ನಾವು ದೇಶದ ಭಾಗವಲ್ಲ ಎಂಬ ವಿಚಾರವನ್ನು ಬಲಪಡಿಸಲು ಅರ್ಧಶತಮಾನ ಕಾಲ ಪ್ರಯತ್ನಿಸಲಾಗಿದೆ. ಇಡೀ ದೇಶಕ್ಕೆ ಅನ್ವಯಿಸುವ ಎಲ್ಲವನ್ನೂ ತಮಿಳುನಾಡು ವಿರೋಧಿಸುತ್ತಿದೆ”ಎಂದು ರಾಜ್ಯಪಾಲರು ಬುಧವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ  ಹೇಳಿದ್ದರು. ಕಾಶಿ-ತಮಿಳು ಸಂಗಮದ ಸಂಘಟಕರು ಮತ್ತು ಸ್ವಯಂಸೇವಕರನ್ನು ಅಭಿನಂದಿಸುವ ಕಾರ್ಯಕ್ರಮ ಅದಾಗಿತ್ತು.

“ಇದೊಂದು ಅಭ್ಯಾಸವಾಗಿದೆ. ಅನೇಕ ಪ್ರಬಂಧಗಳನ್ನು ಸುಳ್ಳು ಮತ್ತು ಕಳಪೆ ಕಾಲ್ಪನಿಕ ಸಂಗತಿಗಳಿಂದ ಬರೆಯಲಾಗಿದೆ. ಇದನ್ನು ಹೋಗಲಾಡಿಸಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ವಾಸ್ತವವಾಗಿ, ತಮಿಳುನಾಡು ಭಾರತದ ಆತ್ಮವನ್ನು ಹಿಡಿದಿಟ್ಟುಕೊಂಡಿರುವ ನಾಡು. ಆದರೆ ತಮಿಳಗಂ ಎಂಬುದು ಸೂಕ್ತ ಪದವಾಗಿ ಹೋಗಿದೆ” ಎಂದಿದ್ದರು ರಾಜ್ಯಪಾಲರು.

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ವಾಗ್ವಾದ ನಡೆದಿದ್ದು, ಬಿಜೆಪಿಯ ಆಶಯದಂತೆ ರಾಜ್ಯಪಾಲ ರವಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಡಳಿತರೂಢ ಪಕ್ಷ ಆರೋಪಿಸಿದೆ.

“ರಾಜ್ಯಪಾಲ ಆರ್.ಎನ್.ರವಿ ಅವರು ದಿನನಿತ್ಯ ಒಂದಷ್ಟು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಗೊಂದಲ, ಪ್ರತ್ಯೇಕತೆ ಮತ್ತು ಸಂಘರ್ಷ ಸೃಷ್ಟಿಸುತ್ತಿದ್ದಾರೆ. 50 ವರ್ಷಗಳ ದ್ರಾವಿಡ ರಾಜಕಾರಣದಲ್ಲಿ ಜನರಿಗೆ ಮೋಸ ಮಾಡಲಾಗಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ.

ಡಿಎಂಕೆ ವಕ್ತಾರ ಸೇಲಂ ಧರಣೀಧರನ್ ಪ್ರತಿಕ್ರಿಯಿಸಿದ್ದು, “ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಇಂದು ತಮಿಳುನಾಡು ವಿಧಾನಸಭೆಯಲ್ಲಿ ತಮ್ಮ ಭಾಷಣದ ವೇಳೆ ಕೆಲವು ಪ್ರಮುಖ ವಿಷಯಗಳನ್ನು ಬಿಟ್ಟು ಸಾಂವಿಧಾನಿಕ ನಿಯಮಗಳಿಂದ ಉಲ್ಲಂಘಿಸಿದ್ದಾರೆ. ಈ ರಾಜ್ಯಪಾಲರು ರಾಜಕೀಯ ಅಜೆಂಡಾವನ್ನು ಹೊಂದಿದ್ದಾರೆ. ಅವರು ತಮಿಳುನಾಡಿನ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...