Homeಮುಖಪುಟಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

ಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

- Advertisement -
- Advertisement -

ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡಲು ಸ್ಪೀಕರ್‌ಗೆ ಸೂಚಿಸುವ ನಿರ್ಣಯವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಂಡಿಸಿದ ನಂತರ ತಮಿಳುನಾಡು ರಾಜ್ಯಪಾಲ ಆರ್‌.ಎನ್.ರವಿ ಅವರು ಇಂದು (ಜ.9) ವಿಧಾನಸಭೆಯಿಂದ ಹೊರನಡೆದಿದ್ದಾರೆ.

ರಾಜ್ಯ ಸರ್ಕಾರ ಸಿದ್ಧಪಡಿಸಿದ ಮತ್ತು ಸ್ಪೀಕರ್ ಅನುವಾದಿಸಿದ ರಾಜ್ಯಪಾಲರ ಮೂಲ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡುವ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ರಾಜ್ಯಪಾಲರು ತಮ್ಮ ಭಾಷಣಕ್ಕೆ ಸರ್ಕಾರ ಸಿದ್ಧಪಡಿಸದ ಕೆಲವು ಭಾಗಗಳನ್ನು ಸೇರಿಸಿದ್ದಾರೆ ಎಂದು ವರದಿಯಾಗಿದೆ.

ಜಾತ್ಯತೀತತೆಯ ಬಗ್ಗೆ ಉಲ್ಲೇಖಗಳನ್ನು ಒಳಗೊಂಡಿರುವ, ತಮಿಳುನಾಡು ಶಾಂತಿಯ ಸ್ವರ್ಗ ಎಂದು ಬಣ್ಣಿಸಲಾದ ಮತ್ತು ಪೆರಿಯಾರ್, ಬಿ.ಆರ್.ಅಂಬೇಡ್ಕರ್, ಕೆ.ಕಾಮರಾಜ್, ಸಿ.ಎನ್.ಅಣ್ಣಾದೊರೈ, ಕರುಣಾನಿಧಿ ಅವರಂತಹ ನಾಯಕರನ್ನು ಸ್ಮರಿಸಿ ರಾಜ್ಯ ಸರ್ಕಾರವು ಸಿದ್ಧಪಡಿಸಿದ ಭಾಷಣದ ಭಾಗಗಳನ್ನು ರಾಜ್ಯಪಾಲರು ಬಿಟ್ಟಿಬಿಟ್ಟರು. ಆನಂತರ ಮುಖ್ಯಮಂತ್ರಿ ನಿರ್ಣಯ ಮಂಡಿಸಿದರು. ಆಡಳಿತಾರೂಢ ಡಿಎಂಕೆ ಪ್ರತಿಪಾದಿಸುವ ‘ದ್ರಾವಿಡ ಮಾದರಿ’ಯ ಉಲ್ಲೇಖವನ್ನೂ ಅವರು ಓದಲಿಲ್ಲ.

ರಾಜ್ಯಪಾಲರ ಕ್ರಮವು ವಿಧಾನಸಭೆ ಸದನದ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ತಮ್ಮ ನಿರ್ಣಯದಲ್ಲಿ ಎಂ.ಕೆ. ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷಗಳಾದ ಕಾಂಗ್ರೆಸ್, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ಈ ಹಿಂದೆ ರಾಜ್ಯಪಾಲರ ಭಾಷಣವನ್ನು ಬಹಿಷ್ಕರಿಸಿದ್ದವು. ಪ್ರತಿಭಟನೆಯ ನಂತರ, ಘೋಷಣೆಗಳನ್ನು ಕೂಗಲಾಗಿದೆ.

ರಾಜ್ಯಪಾಲ ರವಿ ವಿರುದ್ಧ ವಿಧಾನಸಭೆಯಲ್ಲಿ ‘ತಮಿಳುನಾಡು ಬಿಟ್ಟು ತೊಲಗಿ’ ಘೋಷಣೆಗಳು ಪ್ರತಿಧ್ವನಿಸಿದವು. ಆಡಳಿತಾರೂಢ ಡಿಎಂಕೆ ಶಾಸಕರು, “ಬಿಜೆಪಿ, ಆರೆಸ್ಸೆಸ್ ಸಿದ್ಧಾಂತವನ್ನು ಹೇರಬೇಡಿ” ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸಂಸದ ಕಾರ್ತಿ ಪಿ.ಚಿದಂಬರಂ ಅವರು ರಾಜ್ಯಪಾಲರನ್ನು ಪದಚ್ಯುತಗೊಳಿಸುವಂತೆ ಕರೆ ನೀಡಿದ್ದಾರೆ.

“ತಮಿಳಗಂ ತಮಿಳುನಾಡಿಗೆ ಹೆಚ್ಚು ಸೂಕ್ತವಾದ ಹೆಸರು” ಎಂದು ರಾಜ್ಯಪಾಲರು ಇತ್ತೀಚೆಗೆ ಹೇಳಿಕೆ ನೀಡಿದ ಬಳಿಕ ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವೆ ವಿವಾದ ಉಂಟಾಗಿದೆ. ಡಿಎಂಕೆ ಶಾಸಕರು ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದಾರೆ.

(‘ನಾಡು’ ಎಂಬ ಪದವು ಭೂಮಿ ಎಂದರ್ಥವನ್ನು ಹೊಂದಿದೆ. ಕೆಲವೊಮ್ಮೆ ದೇಶ ಅಥವಾ ರಾಷ್ಟ್ರ-ರಾಜ್ಯ ಎಂದು ಅರ್ಥೈಸಲಾಗುತ್ತದೆ. ‘ತಮಿಳಗಂ’ ಎಂದರೆ ತಮಿಳರು ವಾಸಿಸುವ ಪ್ರದೇಶ ಎಂಬುದಾಗಿದೆ.)

“ದುರದೃಷ್ಟವಶಾತ್ ತಮಿಳುನಾಡಿನಲ್ಲಿ ನಾವು ದ್ರಾವಿಡರು ಎಂಬ ಹಿಂಜರಿಕೆಯ ರಾಜಕಾರಣವಿದೆ. ಸಂವಿಧಾನದ ಬಲದಿಂದ ನಮ್ಮನ್ನು ಒಟ್ಟುಗೂಡಿಸಲಾಗಿದೆ. ನಾವು ದೇಶದ ಭಾಗವಲ್ಲ ಎಂಬ ವಿಚಾರವನ್ನು ಬಲಪಡಿಸಲು ಅರ್ಧಶತಮಾನ ಕಾಲ ಪ್ರಯತ್ನಿಸಲಾಗಿದೆ. ಇಡೀ ದೇಶಕ್ಕೆ ಅನ್ವಯಿಸುವ ಎಲ್ಲವನ್ನೂ ತಮಿಳುನಾಡು ವಿರೋಧಿಸುತ್ತಿದೆ”ಎಂದು ರಾಜ್ಯಪಾಲರು ಬುಧವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ  ಹೇಳಿದ್ದರು. ಕಾಶಿ-ತಮಿಳು ಸಂಗಮದ ಸಂಘಟಕರು ಮತ್ತು ಸ್ವಯಂಸೇವಕರನ್ನು ಅಭಿನಂದಿಸುವ ಕಾರ್ಯಕ್ರಮ ಅದಾಗಿತ್ತು.

“ಇದೊಂದು ಅಭ್ಯಾಸವಾಗಿದೆ. ಅನೇಕ ಪ್ರಬಂಧಗಳನ್ನು ಸುಳ್ಳು ಮತ್ತು ಕಳಪೆ ಕಾಲ್ಪನಿಕ ಸಂಗತಿಗಳಿಂದ ಬರೆಯಲಾಗಿದೆ. ಇದನ್ನು ಹೋಗಲಾಡಿಸಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ವಾಸ್ತವವಾಗಿ, ತಮಿಳುನಾಡು ಭಾರತದ ಆತ್ಮವನ್ನು ಹಿಡಿದಿಟ್ಟುಕೊಂಡಿರುವ ನಾಡು. ಆದರೆ ತಮಿಳಗಂ ಎಂಬುದು ಸೂಕ್ತ ಪದವಾಗಿ ಹೋಗಿದೆ” ಎಂದಿದ್ದರು ರಾಜ್ಯಪಾಲರು.

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ವಾಗ್ವಾದ ನಡೆದಿದ್ದು, ಬಿಜೆಪಿಯ ಆಶಯದಂತೆ ರಾಜ್ಯಪಾಲ ರವಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಡಳಿತರೂಢ ಪಕ್ಷ ಆರೋಪಿಸಿದೆ.

“ರಾಜ್ಯಪಾಲ ಆರ್.ಎನ್.ರವಿ ಅವರು ದಿನನಿತ್ಯ ಒಂದಷ್ಟು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಗೊಂದಲ, ಪ್ರತ್ಯೇಕತೆ ಮತ್ತು ಸಂಘರ್ಷ ಸೃಷ್ಟಿಸುತ್ತಿದ್ದಾರೆ. 50 ವರ್ಷಗಳ ದ್ರಾವಿಡ ರಾಜಕಾರಣದಲ್ಲಿ ಜನರಿಗೆ ಮೋಸ ಮಾಡಲಾಗಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ.

ಡಿಎಂಕೆ ವಕ್ತಾರ ಸೇಲಂ ಧರಣೀಧರನ್ ಪ್ರತಿಕ್ರಿಯಿಸಿದ್ದು, “ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಇಂದು ತಮಿಳುನಾಡು ವಿಧಾನಸಭೆಯಲ್ಲಿ ತಮ್ಮ ಭಾಷಣದ ವೇಳೆ ಕೆಲವು ಪ್ರಮುಖ ವಿಷಯಗಳನ್ನು ಬಿಟ್ಟು ಸಾಂವಿಧಾನಿಕ ನಿಯಮಗಳಿಂದ ಉಲ್ಲಂಘಿಸಿದ್ದಾರೆ. ಈ ರಾಜ್ಯಪಾಲರು ರಾಜಕೀಯ ಅಜೆಂಡಾವನ್ನು ಹೊಂದಿದ್ದಾರೆ. ಅವರು ತಮಿಳುನಾಡಿನ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...