Homeಮುಖಪುಟಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

ಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

- Advertisement -
- Advertisement -

ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡಲು ಸ್ಪೀಕರ್‌ಗೆ ಸೂಚಿಸುವ ನಿರ್ಣಯವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಂಡಿಸಿದ ನಂತರ ತಮಿಳುನಾಡು ರಾಜ್ಯಪಾಲ ಆರ್‌.ಎನ್.ರವಿ ಅವರು ಇಂದು (ಜ.9) ವಿಧಾನಸಭೆಯಿಂದ ಹೊರನಡೆದಿದ್ದಾರೆ.

ರಾಜ್ಯ ಸರ್ಕಾರ ಸಿದ್ಧಪಡಿಸಿದ ಮತ್ತು ಸ್ಪೀಕರ್ ಅನುವಾದಿಸಿದ ರಾಜ್ಯಪಾಲರ ಮೂಲ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡುವ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ರಾಜ್ಯಪಾಲರು ತಮ್ಮ ಭಾಷಣಕ್ಕೆ ಸರ್ಕಾರ ಸಿದ್ಧಪಡಿಸದ ಕೆಲವು ಭಾಗಗಳನ್ನು ಸೇರಿಸಿದ್ದಾರೆ ಎಂದು ವರದಿಯಾಗಿದೆ.

ಜಾತ್ಯತೀತತೆಯ ಬಗ್ಗೆ ಉಲ್ಲೇಖಗಳನ್ನು ಒಳಗೊಂಡಿರುವ, ತಮಿಳುನಾಡು ಶಾಂತಿಯ ಸ್ವರ್ಗ ಎಂದು ಬಣ್ಣಿಸಲಾದ ಮತ್ತು ಪೆರಿಯಾರ್, ಬಿ.ಆರ್.ಅಂಬೇಡ್ಕರ್, ಕೆ.ಕಾಮರಾಜ್, ಸಿ.ಎನ್.ಅಣ್ಣಾದೊರೈ, ಕರುಣಾನಿಧಿ ಅವರಂತಹ ನಾಯಕರನ್ನು ಸ್ಮರಿಸಿ ರಾಜ್ಯ ಸರ್ಕಾರವು ಸಿದ್ಧಪಡಿಸಿದ ಭಾಷಣದ ಭಾಗಗಳನ್ನು ರಾಜ್ಯಪಾಲರು ಬಿಟ್ಟಿಬಿಟ್ಟರು. ಆನಂತರ ಮುಖ್ಯಮಂತ್ರಿ ನಿರ್ಣಯ ಮಂಡಿಸಿದರು. ಆಡಳಿತಾರೂಢ ಡಿಎಂಕೆ ಪ್ರತಿಪಾದಿಸುವ ‘ದ್ರಾವಿಡ ಮಾದರಿ’ಯ ಉಲ್ಲೇಖವನ್ನೂ ಅವರು ಓದಲಿಲ್ಲ.

ರಾಜ್ಯಪಾಲರ ಕ್ರಮವು ವಿಧಾನಸಭೆ ಸದನದ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ತಮ್ಮ ನಿರ್ಣಯದಲ್ಲಿ ಎಂ.ಕೆ. ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷಗಳಾದ ಕಾಂಗ್ರೆಸ್, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ಈ ಹಿಂದೆ ರಾಜ್ಯಪಾಲರ ಭಾಷಣವನ್ನು ಬಹಿಷ್ಕರಿಸಿದ್ದವು. ಪ್ರತಿಭಟನೆಯ ನಂತರ, ಘೋಷಣೆಗಳನ್ನು ಕೂಗಲಾಗಿದೆ.

ರಾಜ್ಯಪಾಲ ರವಿ ವಿರುದ್ಧ ವಿಧಾನಸಭೆಯಲ್ಲಿ ‘ತಮಿಳುನಾಡು ಬಿಟ್ಟು ತೊಲಗಿ’ ಘೋಷಣೆಗಳು ಪ್ರತಿಧ್ವನಿಸಿದವು. ಆಡಳಿತಾರೂಢ ಡಿಎಂಕೆ ಶಾಸಕರು, “ಬಿಜೆಪಿ, ಆರೆಸ್ಸೆಸ್ ಸಿದ್ಧಾಂತವನ್ನು ಹೇರಬೇಡಿ” ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸಂಸದ ಕಾರ್ತಿ ಪಿ.ಚಿದಂಬರಂ ಅವರು ರಾಜ್ಯಪಾಲರನ್ನು ಪದಚ್ಯುತಗೊಳಿಸುವಂತೆ ಕರೆ ನೀಡಿದ್ದಾರೆ.

“ತಮಿಳಗಂ ತಮಿಳುನಾಡಿಗೆ ಹೆಚ್ಚು ಸೂಕ್ತವಾದ ಹೆಸರು” ಎಂದು ರಾಜ್ಯಪಾಲರು ಇತ್ತೀಚೆಗೆ ಹೇಳಿಕೆ ನೀಡಿದ ಬಳಿಕ ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವೆ ವಿವಾದ ಉಂಟಾಗಿದೆ. ಡಿಎಂಕೆ ಶಾಸಕರು ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದಾರೆ.

(‘ನಾಡು’ ಎಂಬ ಪದವು ಭೂಮಿ ಎಂದರ್ಥವನ್ನು ಹೊಂದಿದೆ. ಕೆಲವೊಮ್ಮೆ ದೇಶ ಅಥವಾ ರಾಷ್ಟ್ರ-ರಾಜ್ಯ ಎಂದು ಅರ್ಥೈಸಲಾಗುತ್ತದೆ. ‘ತಮಿಳಗಂ’ ಎಂದರೆ ತಮಿಳರು ವಾಸಿಸುವ ಪ್ರದೇಶ ಎಂಬುದಾಗಿದೆ.)

“ದುರದೃಷ್ಟವಶಾತ್ ತಮಿಳುನಾಡಿನಲ್ಲಿ ನಾವು ದ್ರಾವಿಡರು ಎಂಬ ಹಿಂಜರಿಕೆಯ ರಾಜಕಾರಣವಿದೆ. ಸಂವಿಧಾನದ ಬಲದಿಂದ ನಮ್ಮನ್ನು ಒಟ್ಟುಗೂಡಿಸಲಾಗಿದೆ. ನಾವು ದೇಶದ ಭಾಗವಲ್ಲ ಎಂಬ ವಿಚಾರವನ್ನು ಬಲಪಡಿಸಲು ಅರ್ಧಶತಮಾನ ಕಾಲ ಪ್ರಯತ್ನಿಸಲಾಗಿದೆ. ಇಡೀ ದೇಶಕ್ಕೆ ಅನ್ವಯಿಸುವ ಎಲ್ಲವನ್ನೂ ತಮಿಳುನಾಡು ವಿರೋಧಿಸುತ್ತಿದೆ”ಎಂದು ರಾಜ್ಯಪಾಲರು ಬುಧವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ  ಹೇಳಿದ್ದರು. ಕಾಶಿ-ತಮಿಳು ಸಂಗಮದ ಸಂಘಟಕರು ಮತ್ತು ಸ್ವಯಂಸೇವಕರನ್ನು ಅಭಿನಂದಿಸುವ ಕಾರ್ಯಕ್ರಮ ಅದಾಗಿತ್ತು.

“ಇದೊಂದು ಅಭ್ಯಾಸವಾಗಿದೆ. ಅನೇಕ ಪ್ರಬಂಧಗಳನ್ನು ಸುಳ್ಳು ಮತ್ತು ಕಳಪೆ ಕಾಲ್ಪನಿಕ ಸಂಗತಿಗಳಿಂದ ಬರೆಯಲಾಗಿದೆ. ಇದನ್ನು ಹೋಗಲಾಡಿಸಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ವಾಸ್ತವವಾಗಿ, ತಮಿಳುನಾಡು ಭಾರತದ ಆತ್ಮವನ್ನು ಹಿಡಿದಿಟ್ಟುಕೊಂಡಿರುವ ನಾಡು. ಆದರೆ ತಮಿಳಗಂ ಎಂಬುದು ಸೂಕ್ತ ಪದವಾಗಿ ಹೋಗಿದೆ” ಎಂದಿದ್ದರು ರಾಜ್ಯಪಾಲರು.

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ವಾಗ್ವಾದ ನಡೆದಿದ್ದು, ಬಿಜೆಪಿಯ ಆಶಯದಂತೆ ರಾಜ್ಯಪಾಲ ರವಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಡಳಿತರೂಢ ಪಕ್ಷ ಆರೋಪಿಸಿದೆ.

“ರಾಜ್ಯಪಾಲ ಆರ್.ಎನ್.ರವಿ ಅವರು ದಿನನಿತ್ಯ ಒಂದಷ್ಟು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಗೊಂದಲ, ಪ್ರತ್ಯೇಕತೆ ಮತ್ತು ಸಂಘರ್ಷ ಸೃಷ್ಟಿಸುತ್ತಿದ್ದಾರೆ. 50 ವರ್ಷಗಳ ದ್ರಾವಿಡ ರಾಜಕಾರಣದಲ್ಲಿ ಜನರಿಗೆ ಮೋಸ ಮಾಡಲಾಗಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ.

ಡಿಎಂಕೆ ವಕ್ತಾರ ಸೇಲಂ ಧರಣೀಧರನ್ ಪ್ರತಿಕ್ರಿಯಿಸಿದ್ದು, “ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಇಂದು ತಮಿಳುನಾಡು ವಿಧಾನಸಭೆಯಲ್ಲಿ ತಮ್ಮ ಭಾಷಣದ ವೇಳೆ ಕೆಲವು ಪ್ರಮುಖ ವಿಷಯಗಳನ್ನು ಬಿಟ್ಟು ಸಾಂವಿಧಾನಿಕ ನಿಯಮಗಳಿಂದ ಉಲ್ಲಂಘಿಸಿದ್ದಾರೆ. ಈ ರಾಜ್ಯಪಾಲರು ರಾಜಕೀಯ ಅಜೆಂಡಾವನ್ನು ಹೊಂದಿದ್ದಾರೆ. ಅವರು ತಮಿಳುನಾಡಿನ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...