Homeಮುಖಪುಟಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

ಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

- Advertisement -
- Advertisement -

ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡಲು ಸ್ಪೀಕರ್‌ಗೆ ಸೂಚಿಸುವ ನಿರ್ಣಯವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಂಡಿಸಿದ ನಂತರ ತಮಿಳುನಾಡು ರಾಜ್ಯಪಾಲ ಆರ್‌.ಎನ್.ರವಿ ಅವರು ಇಂದು (ಜ.9) ವಿಧಾನಸಭೆಯಿಂದ ಹೊರನಡೆದಿದ್ದಾರೆ.

ರಾಜ್ಯ ಸರ್ಕಾರ ಸಿದ್ಧಪಡಿಸಿದ ಮತ್ತು ಸ್ಪೀಕರ್ ಅನುವಾದಿಸಿದ ರಾಜ್ಯಪಾಲರ ಮೂಲ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡುವ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ರಾಜ್ಯಪಾಲರು ತಮ್ಮ ಭಾಷಣಕ್ಕೆ ಸರ್ಕಾರ ಸಿದ್ಧಪಡಿಸದ ಕೆಲವು ಭಾಗಗಳನ್ನು ಸೇರಿಸಿದ್ದಾರೆ ಎಂದು ವರದಿಯಾಗಿದೆ.

ಜಾತ್ಯತೀತತೆಯ ಬಗ್ಗೆ ಉಲ್ಲೇಖಗಳನ್ನು ಒಳಗೊಂಡಿರುವ, ತಮಿಳುನಾಡು ಶಾಂತಿಯ ಸ್ವರ್ಗ ಎಂದು ಬಣ್ಣಿಸಲಾದ ಮತ್ತು ಪೆರಿಯಾರ್, ಬಿ.ಆರ್.ಅಂಬೇಡ್ಕರ್, ಕೆ.ಕಾಮರಾಜ್, ಸಿ.ಎನ್.ಅಣ್ಣಾದೊರೈ, ಕರುಣಾನಿಧಿ ಅವರಂತಹ ನಾಯಕರನ್ನು ಸ್ಮರಿಸಿ ರಾಜ್ಯ ಸರ್ಕಾರವು ಸಿದ್ಧಪಡಿಸಿದ ಭಾಷಣದ ಭಾಗಗಳನ್ನು ರಾಜ್ಯಪಾಲರು ಬಿಟ್ಟಿಬಿಟ್ಟರು. ಆನಂತರ ಮುಖ್ಯಮಂತ್ರಿ ನಿರ್ಣಯ ಮಂಡಿಸಿದರು. ಆಡಳಿತಾರೂಢ ಡಿಎಂಕೆ ಪ್ರತಿಪಾದಿಸುವ ‘ದ್ರಾವಿಡ ಮಾದರಿ’ಯ ಉಲ್ಲೇಖವನ್ನೂ ಅವರು ಓದಲಿಲ್ಲ.

ರಾಜ್ಯಪಾಲರ ಕ್ರಮವು ವಿಧಾನಸಭೆ ಸದನದ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ತಮ್ಮ ನಿರ್ಣಯದಲ್ಲಿ ಎಂ.ಕೆ. ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷಗಳಾದ ಕಾಂಗ್ರೆಸ್, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ಈ ಹಿಂದೆ ರಾಜ್ಯಪಾಲರ ಭಾಷಣವನ್ನು ಬಹಿಷ್ಕರಿಸಿದ್ದವು. ಪ್ರತಿಭಟನೆಯ ನಂತರ, ಘೋಷಣೆಗಳನ್ನು ಕೂಗಲಾಗಿದೆ.

ರಾಜ್ಯಪಾಲ ರವಿ ವಿರುದ್ಧ ವಿಧಾನಸಭೆಯಲ್ಲಿ ‘ತಮಿಳುನಾಡು ಬಿಟ್ಟು ತೊಲಗಿ’ ಘೋಷಣೆಗಳು ಪ್ರತಿಧ್ವನಿಸಿದವು. ಆಡಳಿತಾರೂಢ ಡಿಎಂಕೆ ಶಾಸಕರು, “ಬಿಜೆಪಿ, ಆರೆಸ್ಸೆಸ್ ಸಿದ್ಧಾಂತವನ್ನು ಹೇರಬೇಡಿ” ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸಂಸದ ಕಾರ್ತಿ ಪಿ.ಚಿದಂಬರಂ ಅವರು ರಾಜ್ಯಪಾಲರನ್ನು ಪದಚ್ಯುತಗೊಳಿಸುವಂತೆ ಕರೆ ನೀಡಿದ್ದಾರೆ.

“ತಮಿಳಗಂ ತಮಿಳುನಾಡಿಗೆ ಹೆಚ್ಚು ಸೂಕ್ತವಾದ ಹೆಸರು” ಎಂದು ರಾಜ್ಯಪಾಲರು ಇತ್ತೀಚೆಗೆ ಹೇಳಿಕೆ ನೀಡಿದ ಬಳಿಕ ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವೆ ವಿವಾದ ಉಂಟಾಗಿದೆ. ಡಿಎಂಕೆ ಶಾಸಕರು ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದಾರೆ.

(‘ನಾಡು’ ಎಂಬ ಪದವು ಭೂಮಿ ಎಂದರ್ಥವನ್ನು ಹೊಂದಿದೆ. ಕೆಲವೊಮ್ಮೆ ದೇಶ ಅಥವಾ ರಾಷ್ಟ್ರ-ರಾಜ್ಯ ಎಂದು ಅರ್ಥೈಸಲಾಗುತ್ತದೆ. ‘ತಮಿಳಗಂ’ ಎಂದರೆ ತಮಿಳರು ವಾಸಿಸುವ ಪ್ರದೇಶ ಎಂಬುದಾಗಿದೆ.)

“ದುರದೃಷ್ಟವಶಾತ್ ತಮಿಳುನಾಡಿನಲ್ಲಿ ನಾವು ದ್ರಾವಿಡರು ಎಂಬ ಹಿಂಜರಿಕೆಯ ರಾಜಕಾರಣವಿದೆ. ಸಂವಿಧಾನದ ಬಲದಿಂದ ನಮ್ಮನ್ನು ಒಟ್ಟುಗೂಡಿಸಲಾಗಿದೆ. ನಾವು ದೇಶದ ಭಾಗವಲ್ಲ ಎಂಬ ವಿಚಾರವನ್ನು ಬಲಪಡಿಸಲು ಅರ್ಧಶತಮಾನ ಕಾಲ ಪ್ರಯತ್ನಿಸಲಾಗಿದೆ. ಇಡೀ ದೇಶಕ್ಕೆ ಅನ್ವಯಿಸುವ ಎಲ್ಲವನ್ನೂ ತಮಿಳುನಾಡು ವಿರೋಧಿಸುತ್ತಿದೆ”ಎಂದು ರಾಜ್ಯಪಾಲರು ಬುಧವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ  ಹೇಳಿದ್ದರು. ಕಾಶಿ-ತಮಿಳು ಸಂಗಮದ ಸಂಘಟಕರು ಮತ್ತು ಸ್ವಯಂಸೇವಕರನ್ನು ಅಭಿನಂದಿಸುವ ಕಾರ್ಯಕ್ರಮ ಅದಾಗಿತ್ತು.

“ಇದೊಂದು ಅಭ್ಯಾಸವಾಗಿದೆ. ಅನೇಕ ಪ್ರಬಂಧಗಳನ್ನು ಸುಳ್ಳು ಮತ್ತು ಕಳಪೆ ಕಾಲ್ಪನಿಕ ಸಂಗತಿಗಳಿಂದ ಬರೆಯಲಾಗಿದೆ. ಇದನ್ನು ಹೋಗಲಾಡಿಸಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ವಾಸ್ತವವಾಗಿ, ತಮಿಳುನಾಡು ಭಾರತದ ಆತ್ಮವನ್ನು ಹಿಡಿದಿಟ್ಟುಕೊಂಡಿರುವ ನಾಡು. ಆದರೆ ತಮಿಳಗಂ ಎಂಬುದು ಸೂಕ್ತ ಪದವಾಗಿ ಹೋಗಿದೆ” ಎಂದಿದ್ದರು ರಾಜ್ಯಪಾಲರು.

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ವಾಗ್ವಾದ ನಡೆದಿದ್ದು, ಬಿಜೆಪಿಯ ಆಶಯದಂತೆ ರಾಜ್ಯಪಾಲ ರವಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಡಳಿತರೂಢ ಪಕ್ಷ ಆರೋಪಿಸಿದೆ.

“ರಾಜ್ಯಪಾಲ ಆರ್.ಎನ್.ರವಿ ಅವರು ದಿನನಿತ್ಯ ಒಂದಷ್ಟು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಗೊಂದಲ, ಪ್ರತ್ಯೇಕತೆ ಮತ್ತು ಸಂಘರ್ಷ ಸೃಷ್ಟಿಸುತ್ತಿದ್ದಾರೆ. 50 ವರ್ಷಗಳ ದ್ರಾವಿಡ ರಾಜಕಾರಣದಲ್ಲಿ ಜನರಿಗೆ ಮೋಸ ಮಾಡಲಾಗಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ.

ಡಿಎಂಕೆ ವಕ್ತಾರ ಸೇಲಂ ಧರಣೀಧರನ್ ಪ್ರತಿಕ್ರಿಯಿಸಿದ್ದು, “ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಇಂದು ತಮಿಳುನಾಡು ವಿಧಾನಸಭೆಯಲ್ಲಿ ತಮ್ಮ ಭಾಷಣದ ವೇಳೆ ಕೆಲವು ಪ್ರಮುಖ ವಿಷಯಗಳನ್ನು ಬಿಟ್ಟು ಸಾಂವಿಧಾನಿಕ ನಿಯಮಗಳಿಂದ ಉಲ್ಲಂಘಿಸಿದ್ದಾರೆ. ಈ ರಾಜ್ಯಪಾಲರು ರಾಜಕೀಯ ಅಜೆಂಡಾವನ್ನು ಹೊಂದಿದ್ದಾರೆ. ಅವರು ತಮಿಳುನಾಡಿನ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...