Homeಮುಖಪುಟತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

ತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

- Advertisement -
- Advertisement -

ತಮಿಳುನಾಡಿನ ನಾಡಗೀತೆಯಾದ ‘ತಮಿಳು ತಾಯ್‌ ವಾಳ್ತ್‌‌’ ಕೇವಲ ಪ್ರಾರ್ಥನಾ ಗೀತೆಯಾಗಿದ್ದು, ಅದು ರಾಷ್ಟ್ರಗೀತೆಯಲ್ಲ, ಆದ್ದರಿಂದ ಅದನ್ನು ಹಾಡುವಾಗ ಪ್ರತಿಯೊಬ್ಬರೂ ಎದ್ದು ನಿಲ್ಲಬೇಕಾದ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಪೀಠವು ತೀರ್ಪು ನೀಡಿದೆ. 2018 ರಲ್ಲಿ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ಪೊಲೀಸರು ‘ನಾಮ್ ತಮಿಳರ್ ಕಚ್ಚಿ’ (NTK) ಪದಾಧಿಕಾರಿಗಳ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸುವಾಗ ಮದ್ರಾಸ್‌ ನ್ಯಾಯಮೂರ್ತಿ ಜಿ. ಆರ್. ಸ್ವಾಮಿನಾಥನ್ ಅವರು ಈ ತೀರ್ಪು ನೀಡಿದ್ದಾರೆ.

2018 ರ ಜನವರಿ 24 ರಂದು ಕಂಚಿ ಕಾಮಕೋಟಿ ಪೀಠದ ಮಠಾಧೀಶ ವಿಜಯೇಂದ್ರ ಸರಸ್ವತಿಯವರ ಉಪಸ್ಥಿತಿಯಲ್ಲಿ ಚೆನ್ನೈನ ಸಂಗೀತ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ಅಂದಿನ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ತಮಿಳು-ಸಂಸ್ಕೃತ ನಿಘಂಟನ್ನು ಬಿಡುಗಡೆ ಮಾಡಿದ್ದರು. ಈ ವೇಳೆ ನಾಡಗೀತೆ ‘ತಮಿಳು ತಾಯ್ ವಾಳ್ತ್‌‌’ ನುಡಿಸುವಾಗ, ವಿಜಯೇಂದ್ರ ಸರಸ್ವತಿಯವರು ಕುಳಿತಿದ್ದರು. ಇದರ ವಿರುದ್ದ ಆಕ್ರೋಶ ವ್ಯಕ್ತವಾಗಿ ಸಾಕಷ್ಟು ಚರ್ಚೆಯು ನಡೆದಿತ್ತು.

ಇದರ ವಿರುದ್ದ ಪ್ರಸ್ತುತ NTK ಯ ನಾಯನಾಗಿರುವ, ಈ ಹಿಂದೆ ‘ತಮಿಳರ್ ದೇಸಿಯ ಮುನ್ನನಿ’ ಯ ಭಾಗವಾಗಿದ್ದ ಕಾನ್ ಇಲಂಗೋ ಮತ್ತು ಅವರ ಸಂಗಡಿಗರು ರಾಮೇಶ್ವರಂನಲ್ಲಿರುವ ಕಂಚಿ ಮಠದ ಶಾಖೆಯನ್ನು ಪ್ರವೇಶಿಸಿ, ಶಂಕರಾಚಾರ್ಯರ ವಿರುದ್ದ ಘೋಷಣೆಗಳನ್ನು ಕೂಗಿದ್ದರು.

ಇದನ್ನೂ ಓದಿ:ನಾಡ ಧ್ವಜ, ನಾಡಗೀತೆಗೆ ಅವಮಾನ ಮಾಡಿದವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನ: ತೀವ್ರ ತರಾಟೆ

ಈ ವೇಳೆ ಅವರು ಪಾದರಕ್ಷೆ ಧರಿಸಿ ಮಠದ ಆವರಣ ಪ್ರವೇಶಿಸಿದ್ದಾರೆ, ಜೊತೆಗೆ ಅವರು ಮಠವನ್ನು ಪ್ರವೇಶಿಸಿದ್ದರ ವಿರುದ್ದ ವ್ಯವಸ್ಥಾಪಕರು ಪ್ರತಿಭಟಿಸಿದಾಗ ಅವರಿಗೆ ಬೆದರಿಕೆ ಕೂಡಾ ಹಾಕಿದ್ದರು ಎಂದು ಆರೋಪಿಸಲಾಗಿದೆ. ಇದರಿಂದಾಗಿ, ಅವರ ವಿರುದ್ಧ ಗಲಭೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಎಫ್‌ಐಆರ್‌ ಅನ್ನು ಪ್ರಶ್ನಿಸಿ ಇಳಂಗೋ ಅವರು ಅರ್ಜಿ ದಾಖಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆಗೆ ಅನುಮತಿಸಿದ ಮದ್ರಾಸ್ ಹೈಕೋರ್ಟ್, ತಮಿಳು ತಾಯ್ ವಾಳ್ತ್‌‌ ರಾಷ್ಟ್ರಗೀತೆ ಅಲ್ಲವಾದ್ದರಿಂದ ಅದನ್ನು ಹಾಡಿದಾಗ ಅಲ್ಲಿರುವವರು ಎದ್ದು ನಿಲ್ಲುವ ಯಾವುದೇ ಶಾಸನಬದ್ಧ ಅಥವಾ ಕಾರ್ಯಕಾರಿ ಆದೇಶವಿಲ್ಲ ಎಂದು ಸೂಚಿಸಿದ್ದಾರೆ.

1971 ರ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯಿದೆಯ ಸೆಕ್ಷನ್ 3 ರ ಪ್ರಕಾರ ರಾಷ್ಟ್ರಗೀತೆ ಹಾಡುವುದನ್ನು ಉದ್ದೇಶಪೂರ್ವಕವಾಗಿ ತಡೆಯುವುದು ಅಥವಾ ಅಂತಹ ಹಾಡುಗಾರಿಕೆಯಲ್ಲಿ ತೊಡಗಿರುವ ಸಭೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ನೀಡಬಹುದಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ

“ಸಂವಿಧಾನದ ಅನುಚ್ಛೇದ 51A(a) ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು ಭಾರತದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಆದೇಶಿಸುತ್ತದೆ. ರಾಷ್ಟ್ರಗೀತೆಯನ್ನು ಹಾಡುವಾಗ ಗೌರವಯುತವಾಗಿ ಎದ್ದುನಿಂತು ಹಾಡುವವರೊಂದಿಗೆ ಸೇರಿ ಹಾಡದಿದ್ದರೆ ಅದು ರಾಷ್ಟ್ರಗೀತೆಗೆ ಅಗೌರವವಾಗಿದೆ ಎಂದು ಹೇಳಲಾಗುವುದಿಲ್ಲ ಸುಪ್ರೀಂ ಕೋರ್ಟ್ ಹೇಳಿದೆ”.

“ಆದರೆ ತಮಿಳಿನ ತಾಯ್ ವಾಳ್ತ್‌‌ಗೆ ಅತ್ಯುನ್ನತ ಗೌರವ ನೀಡಬೇಕು. ತಮಿಳು ತಾಯ್ ವಾಳ್ತ್‌‌ ಹಾಡಿದಾಗ ಪ್ರೇಕ್ಷಕರು ಸಾಂಪ್ರದಾಯಿಕವಾಗಿ ಎದ್ದು ನಿಲ್ಲುತ್ತಾರೆ ಎಂಬುದು ನಿಜ. ಆದರೆ ಗೌರವವನ್ನು ತೋರಿಸಬಹುದಾದ ಏಕೈಕ ವಿಧಾನ ಎದ್ದು ನಿಲ್ಲುವುದೆ ಆಗಿದೆಯೆ ಎಂಬುದು ಪ್ರಶ್ನೆ. ನಾವು ಬಹುತ್ವ ಮತ್ತು ವೈವಿಧ್ಯತೆಯನ್ನು ಆಚರಿಸಿದಾಗ, ಗೌರವವನ್ನು ತೋರಿಸಲು ಒಂದೇ ಒಂದು ಮಾರ್ಗವಿದೆ ಎಂದು ಒತ್ತಾಯಿಸುವುದು ಬೂಟಾಟಿಕೆಯಿಂದ ಕೂಡಿದೆ” ಎಂದು ಅವರು ಹೇಳಿದ್ದಾರೆ.

“ಸನ್ಯಾಸಿಯು ಮುಖ್ಯವಾಗಿ ಧರ್ಮನಿಷ್ಠೆಯ ಜೀವನವನ್ನು ನಡೆಸುತ್ತಾನೆ. ಪ್ರಾರ್ಥನೆಯಲ್ಲಿದ್ದಾಗ, ಅವನು ಧ್ಯಾನ ಭಂಗಿಯಲ್ಲಿ ಏಕರೂಪವಾಗಿ ಕಂಡುಬರುತ್ತಾನೆ. ತಮಿಳು ನಾಡಗೀತೆಯು ಪ್ರಾರ್ಥನಾ ಗೀತೆಯಾಗಿರುವುದರಿಂದ, ಸನ್ಯಾಸಿಯು ಧ್ಯಾನದ ಸ್ಥಿತಿಯಲ್ಲಿ ಕುಳಿತುಕೊಂಡಿದ್ದಾನೆ. ತತ್ಕ್ಷಣದ ಸಂದರ್ಭದಲ್ಲಿ, ಮಠಾಧೀಶರು ಧ್ಯಾನ ಭಂಗಿಯಲ್ಲಿ ಕಣ್ಣು ಮುಚ್ಚಿ ಕುಳಿತಿರುವುದು ಕಂಡುಬರುತ್ತದೆ. ಇದು ತಮಿಳು ತಾಯಿಯ ಬಗ್ಗೆ ಅವರ ಗೌರವವನ್ನು ವ್ಯಕ್ತಪಡಿಸುವ ಮಾರ್ಗವಾಗಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಗೀತೆ ಹಾಡುತ್ತಿರುವಾಗ ಎದ್ದು ನಿಲ್ಲದಿರುವುದು ಅಪರಾಧವಲ್ಲ: ಹೈಕೋರ್ಟ್‌

ತಮಿಳು ನಾಡಗೀತೆಯನ್ನು ಇಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...