Homeಮುಖಪುಟತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

ತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

- Advertisement -
- Advertisement -

ತಮಿಳುನಾಡಿನ ನಾಡಗೀತೆಯಾದ ‘ತಮಿಳು ತಾಯ್‌ ವಾಳ್ತ್‌‌’ ಕೇವಲ ಪ್ರಾರ್ಥನಾ ಗೀತೆಯಾಗಿದ್ದು, ಅದು ರಾಷ್ಟ್ರಗೀತೆಯಲ್ಲ, ಆದ್ದರಿಂದ ಅದನ್ನು ಹಾಡುವಾಗ ಪ್ರತಿಯೊಬ್ಬರೂ ಎದ್ದು ನಿಲ್ಲಬೇಕಾದ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಪೀಠವು ತೀರ್ಪು ನೀಡಿದೆ. 2018 ರಲ್ಲಿ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ಪೊಲೀಸರು ‘ನಾಮ್ ತಮಿಳರ್ ಕಚ್ಚಿ’ (NTK) ಪದಾಧಿಕಾರಿಗಳ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸುವಾಗ ಮದ್ರಾಸ್‌ ನ್ಯಾಯಮೂರ್ತಿ ಜಿ. ಆರ್. ಸ್ವಾಮಿನಾಥನ್ ಅವರು ಈ ತೀರ್ಪು ನೀಡಿದ್ದಾರೆ.

2018 ರ ಜನವರಿ 24 ರಂದು ಕಂಚಿ ಕಾಮಕೋಟಿ ಪೀಠದ ಮಠಾಧೀಶ ವಿಜಯೇಂದ್ರ ಸರಸ್ವತಿಯವರ ಉಪಸ್ಥಿತಿಯಲ್ಲಿ ಚೆನ್ನೈನ ಸಂಗೀತ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ಅಂದಿನ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ತಮಿಳು-ಸಂಸ್ಕೃತ ನಿಘಂಟನ್ನು ಬಿಡುಗಡೆ ಮಾಡಿದ್ದರು. ಈ ವೇಳೆ ನಾಡಗೀತೆ ‘ತಮಿಳು ತಾಯ್ ವಾಳ್ತ್‌‌’ ನುಡಿಸುವಾಗ, ವಿಜಯೇಂದ್ರ ಸರಸ್ವತಿಯವರು ಕುಳಿತಿದ್ದರು. ಇದರ ವಿರುದ್ದ ಆಕ್ರೋಶ ವ್ಯಕ್ತವಾಗಿ ಸಾಕಷ್ಟು ಚರ್ಚೆಯು ನಡೆದಿತ್ತು.

ಇದರ ವಿರುದ್ದ ಪ್ರಸ್ತುತ NTK ಯ ನಾಯನಾಗಿರುವ, ಈ ಹಿಂದೆ ‘ತಮಿಳರ್ ದೇಸಿಯ ಮುನ್ನನಿ’ ಯ ಭಾಗವಾಗಿದ್ದ ಕಾನ್ ಇಲಂಗೋ ಮತ್ತು ಅವರ ಸಂಗಡಿಗರು ರಾಮೇಶ್ವರಂನಲ್ಲಿರುವ ಕಂಚಿ ಮಠದ ಶಾಖೆಯನ್ನು ಪ್ರವೇಶಿಸಿ, ಶಂಕರಾಚಾರ್ಯರ ವಿರುದ್ದ ಘೋಷಣೆಗಳನ್ನು ಕೂಗಿದ್ದರು.

ಇದನ್ನೂ ಓದಿ:ನಾಡ ಧ್ವಜ, ನಾಡಗೀತೆಗೆ ಅವಮಾನ ಮಾಡಿದವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನ: ತೀವ್ರ ತರಾಟೆ

ಈ ವೇಳೆ ಅವರು ಪಾದರಕ್ಷೆ ಧರಿಸಿ ಮಠದ ಆವರಣ ಪ್ರವೇಶಿಸಿದ್ದಾರೆ, ಜೊತೆಗೆ ಅವರು ಮಠವನ್ನು ಪ್ರವೇಶಿಸಿದ್ದರ ವಿರುದ್ದ ವ್ಯವಸ್ಥಾಪಕರು ಪ್ರತಿಭಟಿಸಿದಾಗ ಅವರಿಗೆ ಬೆದರಿಕೆ ಕೂಡಾ ಹಾಕಿದ್ದರು ಎಂದು ಆರೋಪಿಸಲಾಗಿದೆ. ಇದರಿಂದಾಗಿ, ಅವರ ವಿರುದ್ಧ ಗಲಭೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಎಫ್‌ಐಆರ್‌ ಅನ್ನು ಪ್ರಶ್ನಿಸಿ ಇಳಂಗೋ ಅವರು ಅರ್ಜಿ ದಾಖಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆಗೆ ಅನುಮತಿಸಿದ ಮದ್ರಾಸ್ ಹೈಕೋರ್ಟ್, ತಮಿಳು ತಾಯ್ ವಾಳ್ತ್‌‌ ರಾಷ್ಟ್ರಗೀತೆ ಅಲ್ಲವಾದ್ದರಿಂದ ಅದನ್ನು ಹಾಡಿದಾಗ ಅಲ್ಲಿರುವವರು ಎದ್ದು ನಿಲ್ಲುವ ಯಾವುದೇ ಶಾಸನಬದ್ಧ ಅಥವಾ ಕಾರ್ಯಕಾರಿ ಆದೇಶವಿಲ್ಲ ಎಂದು ಸೂಚಿಸಿದ್ದಾರೆ.

1971 ರ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯಿದೆಯ ಸೆಕ್ಷನ್ 3 ರ ಪ್ರಕಾರ ರಾಷ್ಟ್ರಗೀತೆ ಹಾಡುವುದನ್ನು ಉದ್ದೇಶಪೂರ್ವಕವಾಗಿ ತಡೆಯುವುದು ಅಥವಾ ಅಂತಹ ಹಾಡುಗಾರಿಕೆಯಲ್ಲಿ ತೊಡಗಿರುವ ಸಭೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ನೀಡಬಹುದಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ

“ಸಂವಿಧಾನದ ಅನುಚ್ಛೇದ 51A(a) ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು ಭಾರತದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಆದೇಶಿಸುತ್ತದೆ. ರಾಷ್ಟ್ರಗೀತೆಯನ್ನು ಹಾಡುವಾಗ ಗೌರವಯುತವಾಗಿ ಎದ್ದುನಿಂತು ಹಾಡುವವರೊಂದಿಗೆ ಸೇರಿ ಹಾಡದಿದ್ದರೆ ಅದು ರಾಷ್ಟ್ರಗೀತೆಗೆ ಅಗೌರವವಾಗಿದೆ ಎಂದು ಹೇಳಲಾಗುವುದಿಲ್ಲ ಸುಪ್ರೀಂ ಕೋರ್ಟ್ ಹೇಳಿದೆ”.

“ಆದರೆ ತಮಿಳಿನ ತಾಯ್ ವಾಳ್ತ್‌‌ಗೆ ಅತ್ಯುನ್ನತ ಗೌರವ ನೀಡಬೇಕು. ತಮಿಳು ತಾಯ್ ವಾಳ್ತ್‌‌ ಹಾಡಿದಾಗ ಪ್ರೇಕ್ಷಕರು ಸಾಂಪ್ರದಾಯಿಕವಾಗಿ ಎದ್ದು ನಿಲ್ಲುತ್ತಾರೆ ಎಂಬುದು ನಿಜ. ಆದರೆ ಗೌರವವನ್ನು ತೋರಿಸಬಹುದಾದ ಏಕೈಕ ವಿಧಾನ ಎದ್ದು ನಿಲ್ಲುವುದೆ ಆಗಿದೆಯೆ ಎಂಬುದು ಪ್ರಶ್ನೆ. ನಾವು ಬಹುತ್ವ ಮತ್ತು ವೈವಿಧ್ಯತೆಯನ್ನು ಆಚರಿಸಿದಾಗ, ಗೌರವವನ್ನು ತೋರಿಸಲು ಒಂದೇ ಒಂದು ಮಾರ್ಗವಿದೆ ಎಂದು ಒತ್ತಾಯಿಸುವುದು ಬೂಟಾಟಿಕೆಯಿಂದ ಕೂಡಿದೆ” ಎಂದು ಅವರು ಹೇಳಿದ್ದಾರೆ.

“ಸನ್ಯಾಸಿಯು ಮುಖ್ಯವಾಗಿ ಧರ್ಮನಿಷ್ಠೆಯ ಜೀವನವನ್ನು ನಡೆಸುತ್ತಾನೆ. ಪ್ರಾರ್ಥನೆಯಲ್ಲಿದ್ದಾಗ, ಅವನು ಧ್ಯಾನ ಭಂಗಿಯಲ್ಲಿ ಏಕರೂಪವಾಗಿ ಕಂಡುಬರುತ್ತಾನೆ. ತಮಿಳು ನಾಡಗೀತೆಯು ಪ್ರಾರ್ಥನಾ ಗೀತೆಯಾಗಿರುವುದರಿಂದ, ಸನ್ಯಾಸಿಯು ಧ್ಯಾನದ ಸ್ಥಿತಿಯಲ್ಲಿ ಕುಳಿತುಕೊಂಡಿದ್ದಾನೆ. ತತ್ಕ್ಷಣದ ಸಂದರ್ಭದಲ್ಲಿ, ಮಠಾಧೀಶರು ಧ್ಯಾನ ಭಂಗಿಯಲ್ಲಿ ಕಣ್ಣು ಮುಚ್ಚಿ ಕುಳಿತಿರುವುದು ಕಂಡುಬರುತ್ತದೆ. ಇದು ತಮಿಳು ತಾಯಿಯ ಬಗ್ಗೆ ಅವರ ಗೌರವವನ್ನು ವ್ಯಕ್ತಪಡಿಸುವ ಮಾರ್ಗವಾಗಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಗೀತೆ ಹಾಡುತ್ತಿರುವಾಗ ಎದ್ದು ನಿಲ್ಲದಿರುವುದು ಅಪರಾಧವಲ್ಲ: ಹೈಕೋರ್ಟ್‌

ತಮಿಳು ನಾಡಗೀತೆಯನ್ನು ಇಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...