Homeಮುಖಪುಟತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

ತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

- Advertisement -
- Advertisement -

ತಮಿಳುನಾಡಿನ ನಾಡಗೀತೆಯಾದ ‘ತಮಿಳು ತಾಯ್‌ ವಾಳ್ತ್‌‌’ ಕೇವಲ ಪ್ರಾರ್ಥನಾ ಗೀತೆಯಾಗಿದ್ದು, ಅದು ರಾಷ್ಟ್ರಗೀತೆಯಲ್ಲ, ಆದ್ದರಿಂದ ಅದನ್ನು ಹಾಡುವಾಗ ಪ್ರತಿಯೊಬ್ಬರೂ ಎದ್ದು ನಿಲ್ಲಬೇಕಾದ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಪೀಠವು ತೀರ್ಪು ನೀಡಿದೆ. 2018 ರಲ್ಲಿ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ಪೊಲೀಸರು ‘ನಾಮ್ ತಮಿಳರ್ ಕಚ್ಚಿ’ (NTK) ಪದಾಧಿಕಾರಿಗಳ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸುವಾಗ ಮದ್ರಾಸ್‌ ನ್ಯಾಯಮೂರ್ತಿ ಜಿ. ಆರ್. ಸ್ವಾಮಿನಾಥನ್ ಅವರು ಈ ತೀರ್ಪು ನೀಡಿದ್ದಾರೆ.

2018 ರ ಜನವರಿ 24 ರಂದು ಕಂಚಿ ಕಾಮಕೋಟಿ ಪೀಠದ ಮಠಾಧೀಶ ವಿಜಯೇಂದ್ರ ಸರಸ್ವತಿಯವರ ಉಪಸ್ಥಿತಿಯಲ್ಲಿ ಚೆನ್ನೈನ ಸಂಗೀತ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ಅಂದಿನ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ತಮಿಳು-ಸಂಸ್ಕೃತ ನಿಘಂಟನ್ನು ಬಿಡುಗಡೆ ಮಾಡಿದ್ದರು. ಈ ವೇಳೆ ನಾಡಗೀತೆ ‘ತಮಿಳು ತಾಯ್ ವಾಳ್ತ್‌‌’ ನುಡಿಸುವಾಗ, ವಿಜಯೇಂದ್ರ ಸರಸ್ವತಿಯವರು ಕುಳಿತಿದ್ದರು. ಇದರ ವಿರುದ್ದ ಆಕ್ರೋಶ ವ್ಯಕ್ತವಾಗಿ ಸಾಕಷ್ಟು ಚರ್ಚೆಯು ನಡೆದಿತ್ತು.

ಇದರ ವಿರುದ್ದ ಪ್ರಸ್ತುತ NTK ಯ ನಾಯನಾಗಿರುವ, ಈ ಹಿಂದೆ ‘ತಮಿಳರ್ ದೇಸಿಯ ಮುನ್ನನಿ’ ಯ ಭಾಗವಾಗಿದ್ದ ಕಾನ್ ಇಲಂಗೋ ಮತ್ತು ಅವರ ಸಂಗಡಿಗರು ರಾಮೇಶ್ವರಂನಲ್ಲಿರುವ ಕಂಚಿ ಮಠದ ಶಾಖೆಯನ್ನು ಪ್ರವೇಶಿಸಿ, ಶಂಕರಾಚಾರ್ಯರ ವಿರುದ್ದ ಘೋಷಣೆಗಳನ್ನು ಕೂಗಿದ್ದರು.

ಇದನ್ನೂ ಓದಿ:ನಾಡ ಧ್ವಜ, ನಾಡಗೀತೆಗೆ ಅವಮಾನ ಮಾಡಿದವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನ: ತೀವ್ರ ತರಾಟೆ

ಈ ವೇಳೆ ಅವರು ಪಾದರಕ್ಷೆ ಧರಿಸಿ ಮಠದ ಆವರಣ ಪ್ರವೇಶಿಸಿದ್ದಾರೆ, ಜೊತೆಗೆ ಅವರು ಮಠವನ್ನು ಪ್ರವೇಶಿಸಿದ್ದರ ವಿರುದ್ದ ವ್ಯವಸ್ಥಾಪಕರು ಪ್ರತಿಭಟಿಸಿದಾಗ ಅವರಿಗೆ ಬೆದರಿಕೆ ಕೂಡಾ ಹಾಕಿದ್ದರು ಎಂದು ಆರೋಪಿಸಲಾಗಿದೆ. ಇದರಿಂದಾಗಿ, ಅವರ ವಿರುದ್ಧ ಗಲಭೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಎಫ್‌ಐಆರ್‌ ಅನ್ನು ಪ್ರಶ್ನಿಸಿ ಇಳಂಗೋ ಅವರು ಅರ್ಜಿ ದಾಖಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆಗೆ ಅನುಮತಿಸಿದ ಮದ್ರಾಸ್ ಹೈಕೋರ್ಟ್, ತಮಿಳು ತಾಯ್ ವಾಳ್ತ್‌‌ ರಾಷ್ಟ್ರಗೀತೆ ಅಲ್ಲವಾದ್ದರಿಂದ ಅದನ್ನು ಹಾಡಿದಾಗ ಅಲ್ಲಿರುವವರು ಎದ್ದು ನಿಲ್ಲುವ ಯಾವುದೇ ಶಾಸನಬದ್ಧ ಅಥವಾ ಕಾರ್ಯಕಾರಿ ಆದೇಶವಿಲ್ಲ ಎಂದು ಸೂಚಿಸಿದ್ದಾರೆ.

1971 ರ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯಿದೆಯ ಸೆಕ್ಷನ್ 3 ರ ಪ್ರಕಾರ ರಾಷ್ಟ್ರಗೀತೆ ಹಾಡುವುದನ್ನು ಉದ್ದೇಶಪೂರ್ವಕವಾಗಿ ತಡೆಯುವುದು ಅಥವಾ ಅಂತಹ ಹಾಡುಗಾರಿಕೆಯಲ್ಲಿ ತೊಡಗಿರುವ ಸಭೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ನೀಡಬಹುದಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ

“ಸಂವಿಧಾನದ ಅನುಚ್ಛೇದ 51A(a) ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು ಭಾರತದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಆದೇಶಿಸುತ್ತದೆ. ರಾಷ್ಟ್ರಗೀತೆಯನ್ನು ಹಾಡುವಾಗ ಗೌರವಯುತವಾಗಿ ಎದ್ದುನಿಂತು ಹಾಡುವವರೊಂದಿಗೆ ಸೇರಿ ಹಾಡದಿದ್ದರೆ ಅದು ರಾಷ್ಟ್ರಗೀತೆಗೆ ಅಗೌರವವಾಗಿದೆ ಎಂದು ಹೇಳಲಾಗುವುದಿಲ್ಲ ಸುಪ್ರೀಂ ಕೋರ್ಟ್ ಹೇಳಿದೆ”.

“ಆದರೆ ತಮಿಳಿನ ತಾಯ್ ವಾಳ್ತ್‌‌ಗೆ ಅತ್ಯುನ್ನತ ಗೌರವ ನೀಡಬೇಕು. ತಮಿಳು ತಾಯ್ ವಾಳ್ತ್‌‌ ಹಾಡಿದಾಗ ಪ್ರೇಕ್ಷಕರು ಸಾಂಪ್ರದಾಯಿಕವಾಗಿ ಎದ್ದು ನಿಲ್ಲುತ್ತಾರೆ ಎಂಬುದು ನಿಜ. ಆದರೆ ಗೌರವವನ್ನು ತೋರಿಸಬಹುದಾದ ಏಕೈಕ ವಿಧಾನ ಎದ್ದು ನಿಲ್ಲುವುದೆ ಆಗಿದೆಯೆ ಎಂಬುದು ಪ್ರಶ್ನೆ. ನಾವು ಬಹುತ್ವ ಮತ್ತು ವೈವಿಧ್ಯತೆಯನ್ನು ಆಚರಿಸಿದಾಗ, ಗೌರವವನ್ನು ತೋರಿಸಲು ಒಂದೇ ಒಂದು ಮಾರ್ಗವಿದೆ ಎಂದು ಒತ್ತಾಯಿಸುವುದು ಬೂಟಾಟಿಕೆಯಿಂದ ಕೂಡಿದೆ” ಎಂದು ಅವರು ಹೇಳಿದ್ದಾರೆ.

“ಸನ್ಯಾಸಿಯು ಮುಖ್ಯವಾಗಿ ಧರ್ಮನಿಷ್ಠೆಯ ಜೀವನವನ್ನು ನಡೆಸುತ್ತಾನೆ. ಪ್ರಾರ್ಥನೆಯಲ್ಲಿದ್ದಾಗ, ಅವನು ಧ್ಯಾನ ಭಂಗಿಯಲ್ಲಿ ಏಕರೂಪವಾಗಿ ಕಂಡುಬರುತ್ತಾನೆ. ತಮಿಳು ನಾಡಗೀತೆಯು ಪ್ರಾರ್ಥನಾ ಗೀತೆಯಾಗಿರುವುದರಿಂದ, ಸನ್ಯಾಸಿಯು ಧ್ಯಾನದ ಸ್ಥಿತಿಯಲ್ಲಿ ಕುಳಿತುಕೊಂಡಿದ್ದಾನೆ. ತತ್ಕ್ಷಣದ ಸಂದರ್ಭದಲ್ಲಿ, ಮಠಾಧೀಶರು ಧ್ಯಾನ ಭಂಗಿಯಲ್ಲಿ ಕಣ್ಣು ಮುಚ್ಚಿ ಕುಳಿತಿರುವುದು ಕಂಡುಬರುತ್ತದೆ. ಇದು ತಮಿಳು ತಾಯಿಯ ಬಗ್ಗೆ ಅವರ ಗೌರವವನ್ನು ವ್ಯಕ್ತಪಡಿಸುವ ಮಾರ್ಗವಾಗಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಗೀತೆ ಹಾಡುತ್ತಿರುವಾಗ ಎದ್ದು ನಿಲ್ಲದಿರುವುದು ಅಪರಾಧವಲ್ಲ: ಹೈಕೋರ್ಟ್‌

ತಮಿಳು ನಾಡಗೀತೆಯನ್ನು ಇಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....