Homeಮುಖಪುಟತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

ತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

- Advertisement -
- Advertisement -

ತಮಿಳುನಾಡಿನ ನಾಡಗೀತೆಯಾದ ‘ತಮಿಳು ತಾಯ್‌ ವಾಳ್ತ್‌‌’ ಕೇವಲ ಪ್ರಾರ್ಥನಾ ಗೀತೆಯಾಗಿದ್ದು, ಅದು ರಾಷ್ಟ್ರಗೀತೆಯಲ್ಲ, ಆದ್ದರಿಂದ ಅದನ್ನು ಹಾಡುವಾಗ ಪ್ರತಿಯೊಬ್ಬರೂ ಎದ್ದು ನಿಲ್ಲಬೇಕಾದ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಪೀಠವು ತೀರ್ಪು ನೀಡಿದೆ. 2018 ರಲ್ಲಿ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ಪೊಲೀಸರು ‘ನಾಮ್ ತಮಿಳರ್ ಕಚ್ಚಿ’ (NTK) ಪದಾಧಿಕಾರಿಗಳ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸುವಾಗ ಮದ್ರಾಸ್‌ ನ್ಯಾಯಮೂರ್ತಿ ಜಿ. ಆರ್. ಸ್ವಾಮಿನಾಥನ್ ಅವರು ಈ ತೀರ್ಪು ನೀಡಿದ್ದಾರೆ.

2018 ರ ಜನವರಿ 24 ರಂದು ಕಂಚಿ ಕಾಮಕೋಟಿ ಪೀಠದ ಮಠಾಧೀಶ ವಿಜಯೇಂದ್ರ ಸರಸ್ವತಿಯವರ ಉಪಸ್ಥಿತಿಯಲ್ಲಿ ಚೆನ್ನೈನ ಸಂಗೀತ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ಅಂದಿನ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ತಮಿಳು-ಸಂಸ್ಕೃತ ನಿಘಂಟನ್ನು ಬಿಡುಗಡೆ ಮಾಡಿದ್ದರು. ಈ ವೇಳೆ ನಾಡಗೀತೆ ‘ತಮಿಳು ತಾಯ್ ವಾಳ್ತ್‌‌’ ನುಡಿಸುವಾಗ, ವಿಜಯೇಂದ್ರ ಸರಸ್ವತಿಯವರು ಕುಳಿತಿದ್ದರು. ಇದರ ವಿರುದ್ದ ಆಕ್ರೋಶ ವ್ಯಕ್ತವಾಗಿ ಸಾಕಷ್ಟು ಚರ್ಚೆಯು ನಡೆದಿತ್ತು.

ಇದರ ವಿರುದ್ದ ಪ್ರಸ್ತುತ NTK ಯ ನಾಯನಾಗಿರುವ, ಈ ಹಿಂದೆ ‘ತಮಿಳರ್ ದೇಸಿಯ ಮುನ್ನನಿ’ ಯ ಭಾಗವಾಗಿದ್ದ ಕಾನ್ ಇಲಂಗೋ ಮತ್ತು ಅವರ ಸಂಗಡಿಗರು ರಾಮೇಶ್ವರಂನಲ್ಲಿರುವ ಕಂಚಿ ಮಠದ ಶಾಖೆಯನ್ನು ಪ್ರವೇಶಿಸಿ, ಶಂಕರಾಚಾರ್ಯರ ವಿರುದ್ದ ಘೋಷಣೆಗಳನ್ನು ಕೂಗಿದ್ದರು.

ಇದನ್ನೂ ಓದಿ:ನಾಡ ಧ್ವಜ, ನಾಡಗೀತೆಗೆ ಅವಮಾನ ಮಾಡಿದವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನ: ತೀವ್ರ ತರಾಟೆ

ಈ ವೇಳೆ ಅವರು ಪಾದರಕ್ಷೆ ಧರಿಸಿ ಮಠದ ಆವರಣ ಪ್ರವೇಶಿಸಿದ್ದಾರೆ, ಜೊತೆಗೆ ಅವರು ಮಠವನ್ನು ಪ್ರವೇಶಿಸಿದ್ದರ ವಿರುದ್ದ ವ್ಯವಸ್ಥಾಪಕರು ಪ್ರತಿಭಟಿಸಿದಾಗ ಅವರಿಗೆ ಬೆದರಿಕೆ ಕೂಡಾ ಹಾಕಿದ್ದರು ಎಂದು ಆರೋಪಿಸಲಾಗಿದೆ. ಇದರಿಂದಾಗಿ, ಅವರ ವಿರುದ್ಧ ಗಲಭೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಎಫ್‌ಐಆರ್‌ ಅನ್ನು ಪ್ರಶ್ನಿಸಿ ಇಳಂಗೋ ಅವರು ಅರ್ಜಿ ದಾಖಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆಗೆ ಅನುಮತಿಸಿದ ಮದ್ರಾಸ್ ಹೈಕೋರ್ಟ್, ತಮಿಳು ತಾಯ್ ವಾಳ್ತ್‌‌ ರಾಷ್ಟ್ರಗೀತೆ ಅಲ್ಲವಾದ್ದರಿಂದ ಅದನ್ನು ಹಾಡಿದಾಗ ಅಲ್ಲಿರುವವರು ಎದ್ದು ನಿಲ್ಲುವ ಯಾವುದೇ ಶಾಸನಬದ್ಧ ಅಥವಾ ಕಾರ್ಯಕಾರಿ ಆದೇಶವಿಲ್ಲ ಎಂದು ಸೂಚಿಸಿದ್ದಾರೆ.

1971 ರ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯಿದೆಯ ಸೆಕ್ಷನ್ 3 ರ ಪ್ರಕಾರ ರಾಷ್ಟ್ರಗೀತೆ ಹಾಡುವುದನ್ನು ಉದ್ದೇಶಪೂರ್ವಕವಾಗಿ ತಡೆಯುವುದು ಅಥವಾ ಅಂತಹ ಹಾಡುಗಾರಿಕೆಯಲ್ಲಿ ತೊಡಗಿರುವ ಸಭೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ನೀಡಬಹುದಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ

“ಸಂವಿಧಾನದ ಅನುಚ್ಛೇದ 51A(a) ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು ಭಾರತದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಆದೇಶಿಸುತ್ತದೆ. ರಾಷ್ಟ್ರಗೀತೆಯನ್ನು ಹಾಡುವಾಗ ಗೌರವಯುತವಾಗಿ ಎದ್ದುನಿಂತು ಹಾಡುವವರೊಂದಿಗೆ ಸೇರಿ ಹಾಡದಿದ್ದರೆ ಅದು ರಾಷ್ಟ್ರಗೀತೆಗೆ ಅಗೌರವವಾಗಿದೆ ಎಂದು ಹೇಳಲಾಗುವುದಿಲ್ಲ ಸುಪ್ರೀಂ ಕೋರ್ಟ್ ಹೇಳಿದೆ”.

“ಆದರೆ ತಮಿಳಿನ ತಾಯ್ ವಾಳ್ತ್‌‌ಗೆ ಅತ್ಯುನ್ನತ ಗೌರವ ನೀಡಬೇಕು. ತಮಿಳು ತಾಯ್ ವಾಳ್ತ್‌‌ ಹಾಡಿದಾಗ ಪ್ರೇಕ್ಷಕರು ಸಾಂಪ್ರದಾಯಿಕವಾಗಿ ಎದ್ದು ನಿಲ್ಲುತ್ತಾರೆ ಎಂಬುದು ನಿಜ. ಆದರೆ ಗೌರವವನ್ನು ತೋರಿಸಬಹುದಾದ ಏಕೈಕ ವಿಧಾನ ಎದ್ದು ನಿಲ್ಲುವುದೆ ಆಗಿದೆಯೆ ಎಂಬುದು ಪ್ರಶ್ನೆ. ನಾವು ಬಹುತ್ವ ಮತ್ತು ವೈವಿಧ್ಯತೆಯನ್ನು ಆಚರಿಸಿದಾಗ, ಗೌರವವನ್ನು ತೋರಿಸಲು ಒಂದೇ ಒಂದು ಮಾರ್ಗವಿದೆ ಎಂದು ಒತ್ತಾಯಿಸುವುದು ಬೂಟಾಟಿಕೆಯಿಂದ ಕೂಡಿದೆ” ಎಂದು ಅವರು ಹೇಳಿದ್ದಾರೆ.

“ಸನ್ಯಾಸಿಯು ಮುಖ್ಯವಾಗಿ ಧರ್ಮನಿಷ್ಠೆಯ ಜೀವನವನ್ನು ನಡೆಸುತ್ತಾನೆ. ಪ್ರಾರ್ಥನೆಯಲ್ಲಿದ್ದಾಗ, ಅವನು ಧ್ಯಾನ ಭಂಗಿಯಲ್ಲಿ ಏಕರೂಪವಾಗಿ ಕಂಡುಬರುತ್ತಾನೆ. ತಮಿಳು ನಾಡಗೀತೆಯು ಪ್ರಾರ್ಥನಾ ಗೀತೆಯಾಗಿರುವುದರಿಂದ, ಸನ್ಯಾಸಿಯು ಧ್ಯಾನದ ಸ್ಥಿತಿಯಲ್ಲಿ ಕುಳಿತುಕೊಂಡಿದ್ದಾನೆ. ತತ್ಕ್ಷಣದ ಸಂದರ್ಭದಲ್ಲಿ, ಮಠಾಧೀಶರು ಧ್ಯಾನ ಭಂಗಿಯಲ್ಲಿ ಕಣ್ಣು ಮುಚ್ಚಿ ಕುಳಿತಿರುವುದು ಕಂಡುಬರುತ್ತದೆ. ಇದು ತಮಿಳು ತಾಯಿಯ ಬಗ್ಗೆ ಅವರ ಗೌರವವನ್ನು ವ್ಯಕ್ತಪಡಿಸುವ ಮಾರ್ಗವಾಗಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಗೀತೆ ಹಾಡುತ್ತಿರುವಾಗ ಎದ್ದು ನಿಲ್ಲದಿರುವುದು ಅಪರಾಧವಲ್ಲ: ಹೈಕೋರ್ಟ್‌

ತಮಿಳು ನಾಡಗೀತೆಯನ್ನು ಇಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...