Homeಮುಖಪುಟತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

ತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

- Advertisement -
- Advertisement -

ತಮಿಳುನಾಡಿನ ನಾಡಗೀತೆಯಾದ ‘ತಮಿಳು ತಾಯ್‌ ವಾಳ್ತ್‌‌’ ಕೇವಲ ಪ್ರಾರ್ಥನಾ ಗೀತೆಯಾಗಿದ್ದು, ಅದು ರಾಷ್ಟ್ರಗೀತೆಯಲ್ಲ, ಆದ್ದರಿಂದ ಅದನ್ನು ಹಾಡುವಾಗ ಪ್ರತಿಯೊಬ್ಬರೂ ಎದ್ದು ನಿಲ್ಲಬೇಕಾದ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಪೀಠವು ತೀರ್ಪು ನೀಡಿದೆ. 2018 ರಲ್ಲಿ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ಪೊಲೀಸರು ‘ನಾಮ್ ತಮಿಳರ್ ಕಚ್ಚಿ’ (NTK) ಪದಾಧಿಕಾರಿಗಳ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸುವಾಗ ಮದ್ರಾಸ್‌ ನ್ಯಾಯಮೂರ್ತಿ ಜಿ. ಆರ್. ಸ್ವಾಮಿನಾಥನ್ ಅವರು ಈ ತೀರ್ಪು ನೀಡಿದ್ದಾರೆ.

2018 ರ ಜನವರಿ 24 ರಂದು ಕಂಚಿ ಕಾಮಕೋಟಿ ಪೀಠದ ಮಠಾಧೀಶ ವಿಜಯೇಂದ್ರ ಸರಸ್ವತಿಯವರ ಉಪಸ್ಥಿತಿಯಲ್ಲಿ ಚೆನ್ನೈನ ಸಂಗೀತ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ಅಂದಿನ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ತಮಿಳು-ಸಂಸ್ಕೃತ ನಿಘಂಟನ್ನು ಬಿಡುಗಡೆ ಮಾಡಿದ್ದರು. ಈ ವೇಳೆ ನಾಡಗೀತೆ ‘ತಮಿಳು ತಾಯ್ ವಾಳ್ತ್‌‌’ ನುಡಿಸುವಾಗ, ವಿಜಯೇಂದ್ರ ಸರಸ್ವತಿಯವರು ಕುಳಿತಿದ್ದರು. ಇದರ ವಿರುದ್ದ ಆಕ್ರೋಶ ವ್ಯಕ್ತವಾಗಿ ಸಾಕಷ್ಟು ಚರ್ಚೆಯು ನಡೆದಿತ್ತು.

ಇದರ ವಿರುದ್ದ ಪ್ರಸ್ತುತ NTK ಯ ನಾಯನಾಗಿರುವ, ಈ ಹಿಂದೆ ‘ತಮಿಳರ್ ದೇಸಿಯ ಮುನ್ನನಿ’ ಯ ಭಾಗವಾಗಿದ್ದ ಕಾನ್ ಇಲಂಗೋ ಮತ್ತು ಅವರ ಸಂಗಡಿಗರು ರಾಮೇಶ್ವರಂನಲ್ಲಿರುವ ಕಂಚಿ ಮಠದ ಶಾಖೆಯನ್ನು ಪ್ರವೇಶಿಸಿ, ಶಂಕರಾಚಾರ್ಯರ ವಿರುದ್ದ ಘೋಷಣೆಗಳನ್ನು ಕೂಗಿದ್ದರು.

ಇದನ್ನೂ ಓದಿ:ನಾಡ ಧ್ವಜ, ನಾಡಗೀತೆಗೆ ಅವಮಾನ ಮಾಡಿದವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನ: ತೀವ್ರ ತರಾಟೆ

ಈ ವೇಳೆ ಅವರು ಪಾದರಕ್ಷೆ ಧರಿಸಿ ಮಠದ ಆವರಣ ಪ್ರವೇಶಿಸಿದ್ದಾರೆ, ಜೊತೆಗೆ ಅವರು ಮಠವನ್ನು ಪ್ರವೇಶಿಸಿದ್ದರ ವಿರುದ್ದ ವ್ಯವಸ್ಥಾಪಕರು ಪ್ರತಿಭಟಿಸಿದಾಗ ಅವರಿಗೆ ಬೆದರಿಕೆ ಕೂಡಾ ಹಾಕಿದ್ದರು ಎಂದು ಆರೋಪಿಸಲಾಗಿದೆ. ಇದರಿಂದಾಗಿ, ಅವರ ವಿರುದ್ಧ ಗಲಭೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಎಫ್‌ಐಆರ್‌ ಅನ್ನು ಪ್ರಶ್ನಿಸಿ ಇಳಂಗೋ ಅವರು ಅರ್ಜಿ ದಾಖಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆಗೆ ಅನುಮತಿಸಿದ ಮದ್ರಾಸ್ ಹೈಕೋರ್ಟ್, ತಮಿಳು ತಾಯ್ ವಾಳ್ತ್‌‌ ರಾಷ್ಟ್ರಗೀತೆ ಅಲ್ಲವಾದ್ದರಿಂದ ಅದನ್ನು ಹಾಡಿದಾಗ ಅಲ್ಲಿರುವವರು ಎದ್ದು ನಿಲ್ಲುವ ಯಾವುದೇ ಶಾಸನಬದ್ಧ ಅಥವಾ ಕಾರ್ಯಕಾರಿ ಆದೇಶವಿಲ್ಲ ಎಂದು ಸೂಚಿಸಿದ್ದಾರೆ.

1971 ರ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯಿದೆಯ ಸೆಕ್ಷನ್ 3 ರ ಪ್ರಕಾರ ರಾಷ್ಟ್ರಗೀತೆ ಹಾಡುವುದನ್ನು ಉದ್ದೇಶಪೂರ್ವಕವಾಗಿ ತಡೆಯುವುದು ಅಥವಾ ಅಂತಹ ಹಾಡುಗಾರಿಕೆಯಲ್ಲಿ ತೊಡಗಿರುವ ಸಭೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ನೀಡಬಹುದಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ

“ಸಂವಿಧಾನದ ಅನುಚ್ಛೇದ 51A(a) ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು ಭಾರತದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಆದೇಶಿಸುತ್ತದೆ. ರಾಷ್ಟ್ರಗೀತೆಯನ್ನು ಹಾಡುವಾಗ ಗೌರವಯುತವಾಗಿ ಎದ್ದುನಿಂತು ಹಾಡುವವರೊಂದಿಗೆ ಸೇರಿ ಹಾಡದಿದ್ದರೆ ಅದು ರಾಷ್ಟ್ರಗೀತೆಗೆ ಅಗೌರವವಾಗಿದೆ ಎಂದು ಹೇಳಲಾಗುವುದಿಲ್ಲ ಸುಪ್ರೀಂ ಕೋರ್ಟ್ ಹೇಳಿದೆ”.

“ಆದರೆ ತಮಿಳಿನ ತಾಯ್ ವಾಳ್ತ್‌‌ಗೆ ಅತ್ಯುನ್ನತ ಗೌರವ ನೀಡಬೇಕು. ತಮಿಳು ತಾಯ್ ವಾಳ್ತ್‌‌ ಹಾಡಿದಾಗ ಪ್ರೇಕ್ಷಕರು ಸಾಂಪ್ರದಾಯಿಕವಾಗಿ ಎದ್ದು ನಿಲ್ಲುತ್ತಾರೆ ಎಂಬುದು ನಿಜ. ಆದರೆ ಗೌರವವನ್ನು ತೋರಿಸಬಹುದಾದ ಏಕೈಕ ವಿಧಾನ ಎದ್ದು ನಿಲ್ಲುವುದೆ ಆಗಿದೆಯೆ ಎಂಬುದು ಪ್ರಶ್ನೆ. ನಾವು ಬಹುತ್ವ ಮತ್ತು ವೈವಿಧ್ಯತೆಯನ್ನು ಆಚರಿಸಿದಾಗ, ಗೌರವವನ್ನು ತೋರಿಸಲು ಒಂದೇ ಒಂದು ಮಾರ್ಗವಿದೆ ಎಂದು ಒತ್ತಾಯಿಸುವುದು ಬೂಟಾಟಿಕೆಯಿಂದ ಕೂಡಿದೆ” ಎಂದು ಅವರು ಹೇಳಿದ್ದಾರೆ.

“ಸನ್ಯಾಸಿಯು ಮುಖ್ಯವಾಗಿ ಧರ್ಮನಿಷ್ಠೆಯ ಜೀವನವನ್ನು ನಡೆಸುತ್ತಾನೆ. ಪ್ರಾರ್ಥನೆಯಲ್ಲಿದ್ದಾಗ, ಅವನು ಧ್ಯಾನ ಭಂಗಿಯಲ್ಲಿ ಏಕರೂಪವಾಗಿ ಕಂಡುಬರುತ್ತಾನೆ. ತಮಿಳು ನಾಡಗೀತೆಯು ಪ್ರಾರ್ಥನಾ ಗೀತೆಯಾಗಿರುವುದರಿಂದ, ಸನ್ಯಾಸಿಯು ಧ್ಯಾನದ ಸ್ಥಿತಿಯಲ್ಲಿ ಕುಳಿತುಕೊಂಡಿದ್ದಾನೆ. ತತ್ಕ್ಷಣದ ಸಂದರ್ಭದಲ್ಲಿ, ಮಠಾಧೀಶರು ಧ್ಯಾನ ಭಂಗಿಯಲ್ಲಿ ಕಣ್ಣು ಮುಚ್ಚಿ ಕುಳಿತಿರುವುದು ಕಂಡುಬರುತ್ತದೆ. ಇದು ತಮಿಳು ತಾಯಿಯ ಬಗ್ಗೆ ಅವರ ಗೌರವವನ್ನು ವ್ಯಕ್ತಪಡಿಸುವ ಮಾರ್ಗವಾಗಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಗೀತೆ ಹಾಡುತ್ತಿರುವಾಗ ಎದ್ದು ನಿಲ್ಲದಿರುವುದು ಅಪರಾಧವಲ್ಲ: ಹೈಕೋರ್ಟ್‌

ತಮಿಳು ನಾಡಗೀತೆಯನ್ನು ಇಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...