Homeಮುಖಪುಟತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

ತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

- Advertisement -
- Advertisement -

ತಮಿಳುನಾಡಿನ ನಾಡಗೀತೆಯಾದ ‘ತಮಿಳು ತಾಯ್‌ ವಾಳ್ತ್‌‌’ ಕೇವಲ ಪ್ರಾರ್ಥನಾ ಗೀತೆಯಾಗಿದ್ದು, ಅದು ರಾಷ್ಟ್ರಗೀತೆಯಲ್ಲ, ಆದ್ದರಿಂದ ಅದನ್ನು ಹಾಡುವಾಗ ಪ್ರತಿಯೊಬ್ಬರೂ ಎದ್ದು ನಿಲ್ಲಬೇಕಾದ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಪೀಠವು ತೀರ್ಪು ನೀಡಿದೆ. 2018 ರಲ್ಲಿ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ಪೊಲೀಸರು ‘ನಾಮ್ ತಮಿಳರ್ ಕಚ್ಚಿ’ (NTK) ಪದಾಧಿಕಾರಿಗಳ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸುವಾಗ ಮದ್ರಾಸ್‌ ನ್ಯಾಯಮೂರ್ತಿ ಜಿ. ಆರ್. ಸ್ವಾಮಿನಾಥನ್ ಅವರು ಈ ತೀರ್ಪು ನೀಡಿದ್ದಾರೆ.

2018 ರ ಜನವರಿ 24 ರಂದು ಕಂಚಿ ಕಾಮಕೋಟಿ ಪೀಠದ ಮಠಾಧೀಶ ವಿಜಯೇಂದ್ರ ಸರಸ್ವತಿಯವರ ಉಪಸ್ಥಿತಿಯಲ್ಲಿ ಚೆನ್ನೈನ ಸಂಗೀತ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ಅಂದಿನ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ತಮಿಳು-ಸಂಸ್ಕೃತ ನಿಘಂಟನ್ನು ಬಿಡುಗಡೆ ಮಾಡಿದ್ದರು. ಈ ವೇಳೆ ನಾಡಗೀತೆ ‘ತಮಿಳು ತಾಯ್ ವಾಳ್ತ್‌‌’ ನುಡಿಸುವಾಗ, ವಿಜಯೇಂದ್ರ ಸರಸ್ವತಿಯವರು ಕುಳಿತಿದ್ದರು. ಇದರ ವಿರುದ್ದ ಆಕ್ರೋಶ ವ್ಯಕ್ತವಾಗಿ ಸಾಕಷ್ಟು ಚರ್ಚೆಯು ನಡೆದಿತ್ತು.

ಇದರ ವಿರುದ್ದ ಪ್ರಸ್ತುತ NTK ಯ ನಾಯನಾಗಿರುವ, ಈ ಹಿಂದೆ ‘ತಮಿಳರ್ ದೇಸಿಯ ಮುನ್ನನಿ’ ಯ ಭಾಗವಾಗಿದ್ದ ಕಾನ್ ಇಲಂಗೋ ಮತ್ತು ಅವರ ಸಂಗಡಿಗರು ರಾಮೇಶ್ವರಂನಲ್ಲಿರುವ ಕಂಚಿ ಮಠದ ಶಾಖೆಯನ್ನು ಪ್ರವೇಶಿಸಿ, ಶಂಕರಾಚಾರ್ಯರ ವಿರುದ್ದ ಘೋಷಣೆಗಳನ್ನು ಕೂಗಿದ್ದರು.

ಇದನ್ನೂ ಓದಿ:ನಾಡ ಧ್ವಜ, ನಾಡಗೀತೆಗೆ ಅವಮಾನ ಮಾಡಿದವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನ: ತೀವ್ರ ತರಾಟೆ

ಈ ವೇಳೆ ಅವರು ಪಾದರಕ್ಷೆ ಧರಿಸಿ ಮಠದ ಆವರಣ ಪ್ರವೇಶಿಸಿದ್ದಾರೆ, ಜೊತೆಗೆ ಅವರು ಮಠವನ್ನು ಪ್ರವೇಶಿಸಿದ್ದರ ವಿರುದ್ದ ವ್ಯವಸ್ಥಾಪಕರು ಪ್ರತಿಭಟಿಸಿದಾಗ ಅವರಿಗೆ ಬೆದರಿಕೆ ಕೂಡಾ ಹಾಕಿದ್ದರು ಎಂದು ಆರೋಪಿಸಲಾಗಿದೆ. ಇದರಿಂದಾಗಿ, ಅವರ ವಿರುದ್ಧ ಗಲಭೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಎಫ್‌ಐಆರ್‌ ಅನ್ನು ಪ್ರಶ್ನಿಸಿ ಇಳಂಗೋ ಅವರು ಅರ್ಜಿ ದಾಖಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆಗೆ ಅನುಮತಿಸಿದ ಮದ್ರಾಸ್ ಹೈಕೋರ್ಟ್, ತಮಿಳು ತಾಯ್ ವಾಳ್ತ್‌‌ ರಾಷ್ಟ್ರಗೀತೆ ಅಲ್ಲವಾದ್ದರಿಂದ ಅದನ್ನು ಹಾಡಿದಾಗ ಅಲ್ಲಿರುವವರು ಎದ್ದು ನಿಲ್ಲುವ ಯಾವುದೇ ಶಾಸನಬದ್ಧ ಅಥವಾ ಕಾರ್ಯಕಾರಿ ಆದೇಶವಿಲ್ಲ ಎಂದು ಸೂಚಿಸಿದ್ದಾರೆ.

1971 ರ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯಿದೆಯ ಸೆಕ್ಷನ್ 3 ರ ಪ್ರಕಾರ ರಾಷ್ಟ್ರಗೀತೆ ಹಾಡುವುದನ್ನು ಉದ್ದೇಶಪೂರ್ವಕವಾಗಿ ತಡೆಯುವುದು ಅಥವಾ ಅಂತಹ ಹಾಡುಗಾರಿಕೆಯಲ್ಲಿ ತೊಡಗಿರುವ ಸಭೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ನೀಡಬಹುದಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ

“ಸಂವಿಧಾನದ ಅನುಚ್ಛೇದ 51A(a) ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು ಭಾರತದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಆದೇಶಿಸುತ್ತದೆ. ರಾಷ್ಟ್ರಗೀತೆಯನ್ನು ಹಾಡುವಾಗ ಗೌರವಯುತವಾಗಿ ಎದ್ದುನಿಂತು ಹಾಡುವವರೊಂದಿಗೆ ಸೇರಿ ಹಾಡದಿದ್ದರೆ ಅದು ರಾಷ್ಟ್ರಗೀತೆಗೆ ಅಗೌರವವಾಗಿದೆ ಎಂದು ಹೇಳಲಾಗುವುದಿಲ್ಲ ಸುಪ್ರೀಂ ಕೋರ್ಟ್ ಹೇಳಿದೆ”.

“ಆದರೆ ತಮಿಳಿನ ತಾಯ್ ವಾಳ್ತ್‌‌ಗೆ ಅತ್ಯುನ್ನತ ಗೌರವ ನೀಡಬೇಕು. ತಮಿಳು ತಾಯ್ ವಾಳ್ತ್‌‌ ಹಾಡಿದಾಗ ಪ್ರೇಕ್ಷಕರು ಸಾಂಪ್ರದಾಯಿಕವಾಗಿ ಎದ್ದು ನಿಲ್ಲುತ್ತಾರೆ ಎಂಬುದು ನಿಜ. ಆದರೆ ಗೌರವವನ್ನು ತೋರಿಸಬಹುದಾದ ಏಕೈಕ ವಿಧಾನ ಎದ್ದು ನಿಲ್ಲುವುದೆ ಆಗಿದೆಯೆ ಎಂಬುದು ಪ್ರಶ್ನೆ. ನಾವು ಬಹುತ್ವ ಮತ್ತು ವೈವಿಧ್ಯತೆಯನ್ನು ಆಚರಿಸಿದಾಗ, ಗೌರವವನ್ನು ತೋರಿಸಲು ಒಂದೇ ಒಂದು ಮಾರ್ಗವಿದೆ ಎಂದು ಒತ್ತಾಯಿಸುವುದು ಬೂಟಾಟಿಕೆಯಿಂದ ಕೂಡಿದೆ” ಎಂದು ಅವರು ಹೇಳಿದ್ದಾರೆ.

“ಸನ್ಯಾಸಿಯು ಮುಖ್ಯವಾಗಿ ಧರ್ಮನಿಷ್ಠೆಯ ಜೀವನವನ್ನು ನಡೆಸುತ್ತಾನೆ. ಪ್ರಾರ್ಥನೆಯಲ್ಲಿದ್ದಾಗ, ಅವನು ಧ್ಯಾನ ಭಂಗಿಯಲ್ಲಿ ಏಕರೂಪವಾಗಿ ಕಂಡುಬರುತ್ತಾನೆ. ತಮಿಳು ನಾಡಗೀತೆಯು ಪ್ರಾರ್ಥನಾ ಗೀತೆಯಾಗಿರುವುದರಿಂದ, ಸನ್ಯಾಸಿಯು ಧ್ಯಾನದ ಸ್ಥಿತಿಯಲ್ಲಿ ಕುಳಿತುಕೊಂಡಿದ್ದಾನೆ. ತತ್ಕ್ಷಣದ ಸಂದರ್ಭದಲ್ಲಿ, ಮಠಾಧೀಶರು ಧ್ಯಾನ ಭಂಗಿಯಲ್ಲಿ ಕಣ್ಣು ಮುಚ್ಚಿ ಕುಳಿತಿರುವುದು ಕಂಡುಬರುತ್ತದೆ. ಇದು ತಮಿಳು ತಾಯಿಯ ಬಗ್ಗೆ ಅವರ ಗೌರವವನ್ನು ವ್ಯಕ್ತಪಡಿಸುವ ಮಾರ್ಗವಾಗಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಗೀತೆ ಹಾಡುತ್ತಿರುವಾಗ ಎದ್ದು ನಿಲ್ಲದಿರುವುದು ಅಪರಾಧವಲ್ಲ: ಹೈಕೋರ್ಟ್‌

ತಮಿಳು ನಾಡಗೀತೆಯನ್ನು ಇಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...