Homeಮುಖಪುಟದಲಿತ ಬಾಲಕನಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕರು

ದಲಿತ ಬಾಲಕನಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕರು

- Advertisement -
- Advertisement -

ಕೆಲವು ಶಿಕ್ಷಕರು ಶೌಚಾಲಯವನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿದ ಆರು ವರ್ಷದ ದಲಿತ ಮಗುವನ್ನು, ಜನಸತ್ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿಯಲ್ಲಿ ಕೂಡಿಹಾಕಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಈ ಘಟನೆ ನಡೆದಿದ್ದು, ಪ್ರಾಥಮಿಕ ಶಿಕ್ಷಣ ಇಲಾಖೆ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರ ವಿರುದ್ಧ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಪ್ರಾಂಶುಪಾಲರಾದ ಸಂಧ್ಯಾ ಜೈನ್ ಮತ್ತು ತರಗತಿ ಶಿಕ್ಷಕಿ ರವಿತಾ ರಾಣಿ ಅವರ ನಿರ್ಲಕ್ಷ್ಯದ ಕಾರಣಕ್ಕಾಗಿ ಒಂದನೇ ತರಗತಿಯ ಆರು ವರ್ಷದ ವಿದ್ಯಾರ್ಥಿಯೊಬ್ಬ ಶಾಲೆಯ ತರಗತಿಯಲ್ಲಿ ಕೂಡಿಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮಗುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದು, “ದಲಿತ ಮಕ್ಕಳ ಮೇಲೆ ದ್ವೇಷ ಹೊಂದಿದ್ದರಿಂದ ಇಬ್ಬರು ಶಿಕ್ಷಕರು ನನ್ನ ಮಗನಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸುತ್ತಿದ್ದರು” ಎಂದು ಆರೋಪಿಸಿದ್ದಾರೆ.

ಶಿಕ್ಷಕರ ನಿರ್ಲಕ್ಷ್ಯದಿಂದ ಶಾಲೆ ಮುಚ್ಚಿದ ಒಂದು ಗಂಟೆಗೂ ಹೆಚ್ಚು ಕಾಲ ತನ್ನ ಮಗ ಬೀಗ ಹಾಕಿದ್ದ ತರಗತಿ ಕೋಣೆಯಲ್ಲಿ ಸಿಲುಕಿದ್ದ ಎಂದು ಆರೋಪಿಸಿದರು. ಶಾಲೆಯನ್ನು ಮುಚ್ಚಿದ ನಂತರ ತನ್ನ ಮಗ ಮನೆಗೆ ಬಾರದಿದ್ದಾಗ, ಅವರು ಇತರ ವಿದ್ಯಾರ್ಥಿಗಳೊಂದಿಗೆ ಅವನ ಬಗ್ಗೆ ವಿಚಾರಿಸಿದ್ದಾರೆ. ಆದರೆ, ಅವರು ಆ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಶಾಲೆ ಬಳಿಗೆ ಹೋದಾಗ ಬೀಗ ಹಾಕಿರುವುದು ಕಂಡು ತನ್ನ ಮಗುವಿನ ಅಳಲು ಕೇಳಿದ ನಂತರ ಗ್ರಾಮಸ್ಥರು ಮತ್ತು ಆಕೆಯ ಕುಟುಂಬಸ್ಥರು ಪ್ರಾಂಶುಪಾಲರಿಗೆ ಕರೆ ಮಾಡಿದ್ದಾರೆ. ಬಳಿಕ ಶಿಕ್ಷಕಿ ರವಿತಾ ರಾಣಿ ಅವರ ಪತಿ ಕೀ ಸಮೇತ ಶಾಲೆಗೆ ಆಗಮಿಸಿ ತೆರೆದರು. ಮಗು ತರಗತಿಯಲ್ಲಿ ಮಲಗಿರಬಹುದು ಎಂದು ರಾಣಿಯ ಪತಿ ಜನರಿಗೆ ಹೇಳಿದ್ದಾರೆ.

ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದ್ದು, ಶಿಕ್ಷಕಿ ರಾಣಿ ಅವರಿಗೆ ವರ್ಗಾವಣೆ ನೀಡಲಾಗಿದೆ ಎಂದು ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಸಂದೀಪ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ಬ್ಲಾಕ್ ಶಿಕ್ಷ ಣಾಧಿಕಾರಿ ಜನಸತ್ ಮತ್ತು ಶಹಪುರ ನೇತೃತ್ವದ ದ್ವಿಸದಸ್ಯ ಸಮಿತಿ ಪರಿಶೀಲನೆ ನಡೆಸಿ ಮೂರು ದಿನಗಳಲ್ಲಿ ವರದಿ ಸಲ್ಲಿಸಲಿದೆ.

ಶಾಲೆ ಮುಚ್ಚುವ ಮುನ್ನ ತರಗತಿ ಕೊಠಡಿಗಳನ್ನು ಪರಿಶೀಲಿಸುವಂತೆ ಎಲ್ಲ ಸಿಬ್ಬಂದಿಗೆ ತಿಳಿಸಲಾಗಿದೆ ಎಂದು ಕುಮಾರ್ ಹೇಳಿದರು.

ಇದಕ್ಕೆ ತರಗತಿ ಶಿಕ್ಷಕಿಯೇ ಕಾರಣ ಎಂಬ ಕಾರಣಕ್ಕೆ ಆಕೆಗೆ ಅನ್ಯಾಯವಾಗಿದೆ ಎಂದು ಪ್ರಾಂಶುಪಾಲ ಜೈನ್ ಹೇಳಿದ್ದಾರೆ. “ಮಗು ಮಲಗಿದ್ದರೂ ತರಗತಿಗೆ ಬೀಗ ಹಾಕುವ ಮುನ್ನ ತಪಾಸಣೆ ನಡೆಸಬೇಕಿತ್ತು” ಎಂದು ಹೇಳಿದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ; “ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ಬಂಧಿಸುವಿರಾ..?’; ಜಾರಿ ನಿರ್ದೇಶನಾಲಯವನ್ನು ಪ್ರಶ್ನಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...