Homeಮುಖಪುಟದಲಿತ ಬಾಲಕನಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕರು

ದಲಿತ ಬಾಲಕನಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕರು

- Advertisement -
- Advertisement -

ಕೆಲವು ಶಿಕ್ಷಕರು ಶೌಚಾಲಯವನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿದ ಆರು ವರ್ಷದ ದಲಿತ ಮಗುವನ್ನು, ಜನಸತ್ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿಯಲ್ಲಿ ಕೂಡಿಹಾಕಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಈ ಘಟನೆ ನಡೆದಿದ್ದು, ಪ್ರಾಥಮಿಕ ಶಿಕ್ಷಣ ಇಲಾಖೆ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರ ವಿರುದ್ಧ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಪ್ರಾಂಶುಪಾಲರಾದ ಸಂಧ್ಯಾ ಜೈನ್ ಮತ್ತು ತರಗತಿ ಶಿಕ್ಷಕಿ ರವಿತಾ ರಾಣಿ ಅವರ ನಿರ್ಲಕ್ಷ್ಯದ ಕಾರಣಕ್ಕಾಗಿ ಒಂದನೇ ತರಗತಿಯ ಆರು ವರ್ಷದ ವಿದ್ಯಾರ್ಥಿಯೊಬ್ಬ ಶಾಲೆಯ ತರಗತಿಯಲ್ಲಿ ಕೂಡಿಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮಗುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದು, “ದಲಿತ ಮಕ್ಕಳ ಮೇಲೆ ದ್ವೇಷ ಹೊಂದಿದ್ದರಿಂದ ಇಬ್ಬರು ಶಿಕ್ಷಕರು ನನ್ನ ಮಗನಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸುತ್ತಿದ್ದರು” ಎಂದು ಆರೋಪಿಸಿದ್ದಾರೆ.

ಶಿಕ್ಷಕರ ನಿರ್ಲಕ್ಷ್ಯದಿಂದ ಶಾಲೆ ಮುಚ್ಚಿದ ಒಂದು ಗಂಟೆಗೂ ಹೆಚ್ಚು ಕಾಲ ತನ್ನ ಮಗ ಬೀಗ ಹಾಕಿದ್ದ ತರಗತಿ ಕೋಣೆಯಲ್ಲಿ ಸಿಲುಕಿದ್ದ ಎಂದು ಆರೋಪಿಸಿದರು. ಶಾಲೆಯನ್ನು ಮುಚ್ಚಿದ ನಂತರ ತನ್ನ ಮಗ ಮನೆಗೆ ಬಾರದಿದ್ದಾಗ, ಅವರು ಇತರ ವಿದ್ಯಾರ್ಥಿಗಳೊಂದಿಗೆ ಅವನ ಬಗ್ಗೆ ವಿಚಾರಿಸಿದ್ದಾರೆ. ಆದರೆ, ಅವರು ಆ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಶಾಲೆ ಬಳಿಗೆ ಹೋದಾಗ ಬೀಗ ಹಾಕಿರುವುದು ಕಂಡು ತನ್ನ ಮಗುವಿನ ಅಳಲು ಕೇಳಿದ ನಂತರ ಗ್ರಾಮಸ್ಥರು ಮತ್ತು ಆಕೆಯ ಕುಟುಂಬಸ್ಥರು ಪ್ರಾಂಶುಪಾಲರಿಗೆ ಕರೆ ಮಾಡಿದ್ದಾರೆ. ಬಳಿಕ ಶಿಕ್ಷಕಿ ರವಿತಾ ರಾಣಿ ಅವರ ಪತಿ ಕೀ ಸಮೇತ ಶಾಲೆಗೆ ಆಗಮಿಸಿ ತೆರೆದರು. ಮಗು ತರಗತಿಯಲ್ಲಿ ಮಲಗಿರಬಹುದು ಎಂದು ರಾಣಿಯ ಪತಿ ಜನರಿಗೆ ಹೇಳಿದ್ದಾರೆ.

ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದ್ದು, ಶಿಕ್ಷಕಿ ರಾಣಿ ಅವರಿಗೆ ವರ್ಗಾವಣೆ ನೀಡಲಾಗಿದೆ ಎಂದು ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಸಂದೀಪ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ಬ್ಲಾಕ್ ಶಿಕ್ಷ ಣಾಧಿಕಾರಿ ಜನಸತ್ ಮತ್ತು ಶಹಪುರ ನೇತೃತ್ವದ ದ್ವಿಸದಸ್ಯ ಸಮಿತಿ ಪರಿಶೀಲನೆ ನಡೆಸಿ ಮೂರು ದಿನಗಳಲ್ಲಿ ವರದಿ ಸಲ್ಲಿಸಲಿದೆ.

ಶಾಲೆ ಮುಚ್ಚುವ ಮುನ್ನ ತರಗತಿ ಕೊಠಡಿಗಳನ್ನು ಪರಿಶೀಲಿಸುವಂತೆ ಎಲ್ಲ ಸಿಬ್ಬಂದಿಗೆ ತಿಳಿಸಲಾಗಿದೆ ಎಂದು ಕುಮಾರ್ ಹೇಳಿದರು.

ಇದಕ್ಕೆ ತರಗತಿ ಶಿಕ್ಷಕಿಯೇ ಕಾರಣ ಎಂಬ ಕಾರಣಕ್ಕೆ ಆಕೆಗೆ ಅನ್ಯಾಯವಾಗಿದೆ ಎಂದು ಪ್ರಾಂಶುಪಾಲ ಜೈನ್ ಹೇಳಿದ್ದಾರೆ. “ಮಗು ಮಲಗಿದ್ದರೂ ತರಗತಿಗೆ ಬೀಗ ಹಾಕುವ ಮುನ್ನ ತಪಾಸಣೆ ನಡೆಸಬೇಕಿತ್ತು” ಎಂದು ಹೇಳಿದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ; “ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ಬಂಧಿಸುವಿರಾ..?’; ಜಾರಿ ನಿರ್ದೇಶನಾಲಯವನ್ನು ಪ್ರಶ್ನಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...