Homeಕ್ರೀಡೆಒಲಂಪಿಕ್‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ಒಲಿಂಪಿಕ್ಸ್‌‌ ಕ್ರೀಡಾ ಕೂಟದಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಮೊದಲ ಬಾರಿ ಸಮಿಫೈನಲ್‌ಗೆ ತಲುಪಿ ಇತಿಹಾಸ ನಿರ್ಮಿಸಿತ್ತು

- Advertisement -
- Advertisement -

ಒಲಿಂಪಿಕ್ಸ್‌ ಕ್ರೀಡಾ ಕೂಟದ ಇತಿಹಾಸದಲ್ಲೇ ಭಾರತೀಯ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ ಸಮಿಫೈನಲ್ ತಲುಪಿದ್ದು, ಸೆಮಿಫೈನಲ್‌‌ನಲ್ಲಿ ಅರ್ಜೆಂಟೀನಾ ವಿರುದ್ದ 1-2 ಗೋಲ್ ಅಂತರದಲ್ಲಿ ಸೋತಿತ್ತು. ಶುಕ್ರವಾರ (ನಾಳೆ) ಗ್ರೇಟ್‌ ಬ್ರಿಟನ್‌ ತಂಡದ ವಿರುದ್ದ ಕಂಚಿಗಾಗಿ ಆಡಲಿದೆ. ಆದರೆ ಈ ಮಧ್ಯೆ ಭಾರತ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಸೆಮಿಫೈನಲ್‌ನಲ್ಲಿ ಸೋತ ಕೆಲವೆ ಗಂಟೆಗಳ ಅಂತರದಲ್ಲಿ ಮಹಿಳಾ ತಂಡದ ಪ್ರಮುಖ ಆಟಗಾರ್ತಿ ‘ವಂದನಾ ಕಟಾರಿಯಾ’ ಅವರು ದಲಿತೆ ಎನ್ನುವ ಕಾರಣಕ್ಕೆ ಜಾತಿ ನಿಂದನೆಗೆ ಒಳಗಾಗಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ವಂದನಾ ಕಟಾರಿಯಾ ಒಲಿಂಪಿಕ್ಸ್‌ನಲ್ಲಿ ಹ್ಯಾಟ್ರಿಕ್ ಗೋಲ್‌ ಸಾಧಿಸಿದ ಭಾರತದ ಮೊದಲ ಮಹಿಳಾ ಹಾಕಿ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಭಾರತೀಯ ಮಹಿಳಾ ತಂಡ ಸೋತ ಕೆಲವೆ ಗಂಟೆಗಲ್ಲಿ ಹರಿದ್ವಾರದ ರೋಷನಾಬಾದ್ ಹಳ್ಳಿಯಲ್ಲಿರುವ ಹಾಕಿ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಹತ್ತಿರ ಇಬ್ಬರು ಮೇಲ್ಜಾತಿಯ ವ್ಯಕ್ತಿಗಳು ಆಗಮಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ

ದುಷ್ಕರ್ಮಿಗಳು ಪಟಾಕಿ ಸಿಡಿಸಿ, ಅಣಕು ಸಂಭ್ರಮಾಚರಣೆ ಮಾಡಿ ನೃತ್ಯ ಮಾಡಿದ್ದು, “ತಂಡದಲ್ಲಿ ಹೆಚ್ಚು ದಲಿತ ಆಟಗಾರರು ಇರುವುದರಿಂದಲೇ ಆಟ ಸೋತಿದೆ” ಎಂದು ಜಾತಿ ನಿಂದನೆ ಮಾಡಿದ್ದಾರೆ ಎಂದು ವಂದನಾ ಅವರ ಕುಟುಂಬವು ಆರೋಪಿಸಿದೆ ಎಂದು ಪತ್ರಿಕೆ ತಿಳಿಸಿದೆ.

“ಪಂದ್ಯವು ಸೋತಿದ್ದರ ಬಗ್ಗೆ ನಮಗೆ ಬೇಸರವಿದೆ. ಆದರೆ ತಂಡವು ಹೋರಾಟ ನಡೆಸಿಯೆ ಪಂದ್ಯದಲ್ಲಿ ಸೋತಿದೆ. ಅದರ ಬಗ್ಗೆ ನಮಗೆ ಹೆಮ್ಮೆಯಿದೆ” ಎಂದು ವಂದನಾ ಅವರ ಸಹೋದರ ಶೇಖರ್‌ ಅವರು ತಿಳಿಸಿದ್ದಾರೆ ಎಂದು TOI ಉಲ್ಲೇಖ ಮಾಡಿದೆ.

“ಪಂದ್ಯ ಸೋತ ದುಃಖದಲ್ಲಿದಾಗ, ಇದ್ದಕ್ಕಿದ್ದಂತೆ ದೊಡ್ಡ ಶಬ್ದಗಳು ಕೇಳಿ ಬಂದವು. ನಮ್ಮ ಮನೆಯ ಹೊರಗೆ ಪಟಾಕಿ ಸಿಡಿಸಲಾಗಿತ್ತು. ನಾವು ಹೊರಗೆ ತೆರಳಿ ನೋಡಿದಾಗ ನಮಗೆ ತಿಳಿದಿರುವ ನಮ್ಮದೆ ಹಳ್ಳಿಯ ಮೇಲ್ಜಾತಿಯ ಇಬ್ಬರು ವ್ಯಕ್ತಿಗಳು ಮನೆಯ ಮುಂದೆ ನೃತ್ಯ ಮಾಡುತ್ತಿದ್ದರು” ಎಂದು ಶೇಖರ್‌ ಹೇಳಿದ್ದಾರೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ 

ಮನೆಯ ಹೊರಗಿನ ಗಲಾಟೆಯನ್ನು ತಡೆಯಲು ವಂದನಾ ಅವರ ಕುಟುಂಬವು ಪ್ರಯತ್ನಿಸಿದಾಗ ಆರೋಪಿಗಳು ಮತ್ತಷ್ಟು ಆಕ್ರೋಶಗೊಂಡು, ಜಾತಿ ನಿಂದನೆ ಮಾಡಿ ಕುಟುಂಬವನ್ನು ಅವಮಾನಿಸಿದ್ದಾರೆ ಎನ್ನಲಾಗಿದೆ.

“ತಂಡದಲ್ಲಿ ಹಲವಾರು ದಲಿತ ಆಟಗಾರರನ್ನು ಸೇರಿಸಿದ್ದರಿಂದಲೇ ಪಂದ್ಯ ಸೋತಿದೆ. ಕೇವಲ ಹಾಕಿ ಮಾತ್ರವಲ್ಲ, ಪ್ರತಿ ಕ್ರೀಡೆಯಲ್ಲೂ ದಲಿತರನ್ನು ಹೊರಗಿಡಬೇಕು ಎಂದು ಅವರು ಹೇಳಿದ್ದಾರೆ. ಇದು ಖಂಡತವಾಗಿಯೂ ಜನಾಂಗೀಯ ನಿಂದನೆಯಾಗಿದೆ” ಎಂದು ಶೇಖರ್ ಅವರು ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ಇನ್ನೂ ಎಫ್‌ಐಆರ್‌ ದಾಖಲಿಸಿಲ್ಲ ಎಂದು ವರದಿ ಹೇಳಿದೆ. ದೂರಿನ ಆಧಾರಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. “ನಾವು ದೂರು ಸ್ವೀಕರಿಸಿದ್ದೇವೆ ಮತ್ತು ವಿಚಾರಣೆ ನಡೆಯುತ್ತಿದೆ, ನಂತರ ಪ್ರಕರಣ ದಾಖಲಿಸಲಾಗುವುದು” ಎಂದು ಸಿಡ್ಕಲ್‌ ಪೊಲೀಸ್ ಠಾಣೆಯ ಅಧಿಕಾರಿ  ಹೇಳಿದ್ದಾರೆಂದು TOI ವರದಿ ಮಾಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದರೂ ವಂದನಾ ಕಟಾರಿಯ ದಲಿತೆ ಎಂಬ ಕಾರಣಕ್ಕೆ ಹಂಗಿಸಲ್ಪಡುವುದು ಕೊಳೆತ ಮನಸ್ಥಿತಿಯ ದ್ಯೋತಕ. ವಂದನಾ, ಚಿಂತಿಸಬೇಡ, ನೀನು ನಮ್ಮೆಲ್ಲರ ಹೆಮ್ಮೆ!

  2. ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದರೂ ವಂದನಾ ಕಟಾರಿಯ ದಲಿತೆ ಎಂಬ ಕಾರಣಕ್ಕೆ ಹಂಗಿಸಲ್ಪಡುವುದು ದುರದ್ರಷ್ಟಕರ ಎದೆಗುಂದದೆ ಮುನ್ನಡೆಯಿರಿ ಎಂತಹಾ ವಿಪರ್ಯಾಸ ನೋಡಿ ಈ ಕಾಲಘಟ್ಟದಲ್ಲಿ ಈ ಕೆಟ್ಟ ಮನಸ್ಸು/ ಕೊಳಕು ಮನಸ್ಸಿರುವ ಜನರಿಂದಲೇ ಈ ದೇಶ ಈಗೆ.ತಾವು ಧೃತಿಗೆಡದೆ ಮುನ್ನೂಗ್ಗಿ ನಿಮ್ಮ ಜೊತೆಗೆ ನಾವಿದ್ದೇವೆ ವಂದನಾ ನಮ್ಮೆಲ್ಲರ ಆಸ್ತಿ, ನಮ್ಮ ಹೆಮ್ಮೆಯ ಪುತ್ರಿ ಚಂತೆಬೇಡ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...