Homeಕ್ರೀಡೆಒಲಂಪಿಕ್‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ಒಲಿಂಪಿಕ್ಸ್‌‌ ಕ್ರೀಡಾ ಕೂಟದಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಮೊದಲ ಬಾರಿ ಸಮಿಫೈನಲ್‌ಗೆ ತಲುಪಿ ಇತಿಹಾಸ ನಿರ್ಮಿಸಿತ್ತು

- Advertisement -
- Advertisement -

ಒಲಿಂಪಿಕ್ಸ್‌ ಕ್ರೀಡಾ ಕೂಟದ ಇತಿಹಾಸದಲ್ಲೇ ಭಾರತೀಯ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ ಸಮಿಫೈನಲ್ ತಲುಪಿದ್ದು, ಸೆಮಿಫೈನಲ್‌‌ನಲ್ಲಿ ಅರ್ಜೆಂಟೀನಾ ವಿರುದ್ದ 1-2 ಗೋಲ್ ಅಂತರದಲ್ಲಿ ಸೋತಿತ್ತು. ಶುಕ್ರವಾರ (ನಾಳೆ) ಗ್ರೇಟ್‌ ಬ್ರಿಟನ್‌ ತಂಡದ ವಿರುದ್ದ ಕಂಚಿಗಾಗಿ ಆಡಲಿದೆ. ಆದರೆ ಈ ಮಧ್ಯೆ ಭಾರತ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಸೆಮಿಫೈನಲ್‌ನಲ್ಲಿ ಸೋತ ಕೆಲವೆ ಗಂಟೆಗಳ ಅಂತರದಲ್ಲಿ ಮಹಿಳಾ ತಂಡದ ಪ್ರಮುಖ ಆಟಗಾರ್ತಿ ‘ವಂದನಾ ಕಟಾರಿಯಾ’ ಅವರು ದಲಿತೆ ಎನ್ನುವ ಕಾರಣಕ್ಕೆ ಜಾತಿ ನಿಂದನೆಗೆ ಒಳಗಾಗಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ವಂದನಾ ಕಟಾರಿಯಾ ಒಲಿಂಪಿಕ್ಸ್‌ನಲ್ಲಿ ಹ್ಯಾಟ್ರಿಕ್ ಗೋಲ್‌ ಸಾಧಿಸಿದ ಭಾರತದ ಮೊದಲ ಮಹಿಳಾ ಹಾಕಿ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಭಾರತೀಯ ಮಹಿಳಾ ತಂಡ ಸೋತ ಕೆಲವೆ ಗಂಟೆಗಲ್ಲಿ ಹರಿದ್ವಾರದ ರೋಷನಾಬಾದ್ ಹಳ್ಳಿಯಲ್ಲಿರುವ ಹಾಕಿ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಹತ್ತಿರ ಇಬ್ಬರು ಮೇಲ್ಜಾತಿಯ ವ್ಯಕ್ತಿಗಳು ಆಗಮಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ

ದುಷ್ಕರ್ಮಿಗಳು ಪಟಾಕಿ ಸಿಡಿಸಿ, ಅಣಕು ಸಂಭ್ರಮಾಚರಣೆ ಮಾಡಿ ನೃತ್ಯ ಮಾಡಿದ್ದು, “ತಂಡದಲ್ಲಿ ಹೆಚ್ಚು ದಲಿತ ಆಟಗಾರರು ಇರುವುದರಿಂದಲೇ ಆಟ ಸೋತಿದೆ” ಎಂದು ಜಾತಿ ನಿಂದನೆ ಮಾಡಿದ್ದಾರೆ ಎಂದು ವಂದನಾ ಅವರ ಕುಟುಂಬವು ಆರೋಪಿಸಿದೆ ಎಂದು ಪತ್ರಿಕೆ ತಿಳಿಸಿದೆ.

“ಪಂದ್ಯವು ಸೋತಿದ್ದರ ಬಗ್ಗೆ ನಮಗೆ ಬೇಸರವಿದೆ. ಆದರೆ ತಂಡವು ಹೋರಾಟ ನಡೆಸಿಯೆ ಪಂದ್ಯದಲ್ಲಿ ಸೋತಿದೆ. ಅದರ ಬಗ್ಗೆ ನಮಗೆ ಹೆಮ್ಮೆಯಿದೆ” ಎಂದು ವಂದನಾ ಅವರ ಸಹೋದರ ಶೇಖರ್‌ ಅವರು ತಿಳಿಸಿದ್ದಾರೆ ಎಂದು TOI ಉಲ್ಲೇಖ ಮಾಡಿದೆ.

“ಪಂದ್ಯ ಸೋತ ದುಃಖದಲ್ಲಿದಾಗ, ಇದ್ದಕ್ಕಿದ್ದಂತೆ ದೊಡ್ಡ ಶಬ್ದಗಳು ಕೇಳಿ ಬಂದವು. ನಮ್ಮ ಮನೆಯ ಹೊರಗೆ ಪಟಾಕಿ ಸಿಡಿಸಲಾಗಿತ್ತು. ನಾವು ಹೊರಗೆ ತೆರಳಿ ನೋಡಿದಾಗ ನಮಗೆ ತಿಳಿದಿರುವ ನಮ್ಮದೆ ಹಳ್ಳಿಯ ಮೇಲ್ಜಾತಿಯ ಇಬ್ಬರು ವ್ಯಕ್ತಿಗಳು ಮನೆಯ ಮುಂದೆ ನೃತ್ಯ ಮಾಡುತ್ತಿದ್ದರು” ಎಂದು ಶೇಖರ್‌ ಹೇಳಿದ್ದಾರೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ 

ಮನೆಯ ಹೊರಗಿನ ಗಲಾಟೆಯನ್ನು ತಡೆಯಲು ವಂದನಾ ಅವರ ಕುಟುಂಬವು ಪ್ರಯತ್ನಿಸಿದಾಗ ಆರೋಪಿಗಳು ಮತ್ತಷ್ಟು ಆಕ್ರೋಶಗೊಂಡು, ಜಾತಿ ನಿಂದನೆ ಮಾಡಿ ಕುಟುಂಬವನ್ನು ಅವಮಾನಿಸಿದ್ದಾರೆ ಎನ್ನಲಾಗಿದೆ.

“ತಂಡದಲ್ಲಿ ಹಲವಾರು ದಲಿತ ಆಟಗಾರರನ್ನು ಸೇರಿಸಿದ್ದರಿಂದಲೇ ಪಂದ್ಯ ಸೋತಿದೆ. ಕೇವಲ ಹಾಕಿ ಮಾತ್ರವಲ್ಲ, ಪ್ರತಿ ಕ್ರೀಡೆಯಲ್ಲೂ ದಲಿತರನ್ನು ಹೊರಗಿಡಬೇಕು ಎಂದು ಅವರು ಹೇಳಿದ್ದಾರೆ. ಇದು ಖಂಡತವಾಗಿಯೂ ಜನಾಂಗೀಯ ನಿಂದನೆಯಾಗಿದೆ” ಎಂದು ಶೇಖರ್ ಅವರು ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ಇನ್ನೂ ಎಫ್‌ಐಆರ್‌ ದಾಖಲಿಸಿಲ್ಲ ಎಂದು ವರದಿ ಹೇಳಿದೆ. ದೂರಿನ ಆಧಾರಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. “ನಾವು ದೂರು ಸ್ವೀಕರಿಸಿದ್ದೇವೆ ಮತ್ತು ವಿಚಾರಣೆ ನಡೆಯುತ್ತಿದೆ, ನಂತರ ಪ್ರಕರಣ ದಾಖಲಿಸಲಾಗುವುದು” ಎಂದು ಸಿಡ್ಕಲ್‌ ಪೊಲೀಸ್ ಠಾಣೆಯ ಅಧಿಕಾರಿ  ಹೇಳಿದ್ದಾರೆಂದು TOI ವರದಿ ಮಾಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದರೂ ವಂದನಾ ಕಟಾರಿಯ ದಲಿತೆ ಎಂಬ ಕಾರಣಕ್ಕೆ ಹಂಗಿಸಲ್ಪಡುವುದು ಕೊಳೆತ ಮನಸ್ಥಿತಿಯ ದ್ಯೋತಕ. ವಂದನಾ, ಚಿಂತಿಸಬೇಡ, ನೀನು ನಮ್ಮೆಲ್ಲರ ಹೆಮ್ಮೆ!

  2. ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದರೂ ವಂದನಾ ಕಟಾರಿಯ ದಲಿತೆ ಎಂಬ ಕಾರಣಕ್ಕೆ ಹಂಗಿಸಲ್ಪಡುವುದು ದುರದ್ರಷ್ಟಕರ ಎದೆಗುಂದದೆ ಮುನ್ನಡೆಯಿರಿ ಎಂತಹಾ ವಿಪರ್ಯಾಸ ನೋಡಿ ಈ ಕಾಲಘಟ್ಟದಲ್ಲಿ ಈ ಕೆಟ್ಟ ಮನಸ್ಸು/ ಕೊಳಕು ಮನಸ್ಸಿರುವ ಜನರಿಂದಲೇ ಈ ದೇಶ ಈಗೆ.ತಾವು ಧೃತಿಗೆಡದೆ ಮುನ್ನೂಗ್ಗಿ ನಿಮ್ಮ ಜೊತೆಗೆ ನಾವಿದ್ದೇವೆ ವಂದನಾ ನಮ್ಮೆಲ್ಲರ ಆಸ್ತಿ, ನಮ್ಮ ಹೆಮ್ಮೆಯ ಪುತ್ರಿ ಚಂತೆಬೇಡ.

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...